Homeಮುಖಪುಟ55ನೇ ಜಿಎಸ್‌ಟಿ ಮಂಡಳಿ ಸಭೆ : ವಿಮೆ ಕಂತಿಗೆ ತೆರಿಗೆ ಕಡಿತ ಮುಂದೂಡಿಕೆ

55ನೇ ಜಿಎಸ್‌ಟಿ ಮಂಡಳಿ ಸಭೆ : ವಿಮೆ ಕಂತಿಗೆ ತೆರಿಗೆ ಕಡಿತ ಮುಂದೂಡಿಕೆ

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ (ಡಿ.21) ನಡೆದ 55ನೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯ ಸಭೆಯಲ್ಲಿ ಆರೋಗ್ಯ ಮತ್ತು ಜೀವ ವಿಮೆ ಕಂತಿನ ಮೇಲಿನ ಜಿಎಸ್‌ಟಿ ಕಡಿತಗೊಳಿಸುವ ನಿರ್ಧಾರವನ್ನು ಮುಂದೂಡಲಾಗಿದೆ.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಹಣಕಾಸು ಮಂತ್ರಿಗಳ ಉಪಸ್ಥಿತಿಯಲ್ಲಿ ರಾಜಸ್ಥಾನದಲ್ಲಿ ನಡೆದ ಸಭೆಯಲ್ಲಿ ವಿಮಾ ಕಂತಿನ ಮೇಲಿನ ತೆರಿಗೆ ಪರಿಷ್ಕರಣೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಮೊದಲು ಹೆಚ್ಚಿನ ಚರ್ಚೆ ಹಾಗೂ ಪರಾಮರ್ಶೆ ನಡೆಸುವ ಅಗತ್ಯವಿದೆ ಎಂದು ಮಂಡಳಿ ಹೇಳಿದೆ.

ಸ್ವಿಗ್ಗಿ ಮತ್ತು ಝೊಮ್ಯಾಟೋದ ಆಹಾರ ವಿತರಣೆ ಮೇಲೆ ಪ್ರಸ್ತುತ ಶೇ.18ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ. ಇದನ್ನು ಶೇ.5ಕ್ಕೆ ಇಳಿಸಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿತ್ತು. ಆದರೆ, ಸದ್ಯಕ್ಕೆ ಇದನ್ನೂ ಮುಂದೂಡಲಾಗಿದೆ.

ಏವಿಯೇಷನ್ ​​ಟರ್ಬೈನ್ ಫ್ಯೂಯಲ್ (ಎಟಿಎಫ್) ಅಥವಾ ವಿಮಾನ ಇಂಧನವನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸುವ ಕುರಿತ ಸಭೆಯ ಕಾರ್ಯಸೂಚಿಯಲ್ಲಿನ (ಸಭೆಯ ಅಜೆಂಡಾದ) ಮತ್ತೊಂದು ಮಹತ್ವದ ಅಂಶವನ್ನು ಮಂಡಳಿಯು ತಿರಸ್ಕರಿಸಿದೆ. ಪ್ರಸ್ತುತ, ಎಟಿಎಫ್ ಅಬಕಾರಿ ಸುಂಕ ಮತ್ತು ಮೌಲ್ಯವರ್ಧಿತ ತೆರಿಗೆಗೆ (ವ್ಯಾಟ್) ಒಳಪಟ್ಟಿದೆ. ಇದು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿದೆ. ಹೆಚ್ಚಿನ ವೆಚ್ಚಗಳು ಅಂತಿಮವಾಗಿ ಟಿಕೆಟ್ ದರಗಳ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ಜಿಎಸ್‌ಟಿ ಅಡಿಯಲ್ಲಿ ತರಲು ಕೋರಲಾಗಿದೆ.

ರಾಜ್ಯಗಳ ಸಹಕಾರ ಬೇಕಿದೆ : ನಿರ್ಮಲಾ ಸೀತಾರಾಮನ್

ವಿಮಾನ ಇಂಧನವನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ರಾಜ್ಯಗಳು ಒಪ್ಪಲು ಸಿದ್ದವಿಲ್ಲ. ಕೇಂದ್ರ ಸರ್ಕಾರವೊಂದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇವಿ ಮಾರಾಟ ತೆರಿಗೆ ಪರಿಷ್ಕರಣೆ

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಎಲೆಕ್ಟ್ರಾನಿಕ್ ವಾಹನಗಳ (ಇವಿ) ಮಾರಾಟ ತೆರಿಗೆಯನ್ನು ಪರಿಷ್ಕರಣೆ ಮಾಡಲಾಗಿದೆ. ವಿದ್ಯುತ್ ಚಾಲಿತ ಹೊಸ ಕಾರುಗಳಿಗೆ ಶೇ.5ರಷ್ಟು ಜಿಎಸ್‌ಟಿ ವಿಧಿಸಲು ನಿರ್ಧರಿಸಲಾಗಿದೆ. ಆದರೆ, ಸೆಕೆಂಡ್ ಹ್ಯಾಂಡ್ ಇವಿ ಕಾರನ್ನು ಅದರ ಮಾಲೀಕ ನೇರವಾಗಿ ಮಾರಾಟ ಮಾಡಿದರೆ ಜಿಎಸ್‌ಟಿ ಅನ್ವಯಿಸುವುದಿಲ್ಲ. ಯಾವುದಾದರು ಕಂಪನಿಯು ಸೆಕೆಂಡ್ ಹ್ಯಾಂಡ್ ಇವಿ ಮಾರಿದರೆ ಅಥವಾ ಮಾರಾಟಗಾರರು ಸೆಕೆಂಡ್ ಹ್ಯಾಂಡ್ ಇವಿ ಕಾರನ್ನು ಮಾರ್ಪಡಿಸಿ ಮಾರಿದರೆ ಶೇ.18ರಷ್ಟು ಜಿಎಸ್‌ಟಿ ಅನ್ವಯವಾಗಲಿದೆ.

55ನೇ ಜಿಎಸ್‌ಟಿ ಸಭೆಯ ಇತರ ನಿರ್ಣಯಗಳು :

  • ಅಂತಿಮ ಬಳಕೆಯ ಹೊರತಾಗಿಯೂ, ಬಲವರ್ಧಿತ ಅಕ್ಕಿ ಕಾಳುಗಳ ಜಿಎಸ್‌ಟಿ ದರವನ್ನು ಶೇ. 18ರಿಂದ ರಿಂದ ಶೇ.5ಕ್ಕೆ ಇಳಿಸಲಾಗಿದೆ. ಆಹಾರ ಪದಾರ್ಥವನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (ಪಿಡಿಎಸ್) ತಂದಿರುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ.
  • ಸರ್ಕಾರದ ಯೋಜನೆಯಡಿಯಲ್ಲಿ ಆರ್ಥಿಕ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್‌) ಉಚಿತ ವಿತರಣೆಗಾಗಿ ಉದ್ದೇಶಿಸಲಾದ ಆಹಾರ ತಯಾರಿಕೆಯ ಮೇಲಿನ ರಿಯಾಯಿತಿಯ ಶೇ. 5 ಜಿಎಸ್‌ಟಿ ವಿನಾಯಿತಿ ಇರುತ್ತದೆ.
  • ಉಪ್ಪು ಮತ್ತು ಮಸಾಲೆಗಳೊಂದಿಗೆ ಅನ್ಪ್ಯಾಕ್ ಮಾಡಲಾದ ಪಾಪ್‌ಕಾರ್ನ್ ಶೇ. 5 ಜಿಎಸ್‌ಟಿಗೆ ಒಳಪಡಲಿದೆ. ಆದರೆ, ಪ್ರಿ-ಪ್ಯಾಕ್ ಮಾಡಿದ ಪಾಪ್‌ಕಾರ್ನ್‌ಗೆ ಶೇ.12 ಮತ್ತು ಕ್ಯಾರಮೆಲ್ ಲೇಪಿತ ಪಾಪ್‌ಕಾರ್ನ್‌ಗೆ ಶೇ. 18 ಜಿಎಸ್‌ಟಿ ಅನ್ವಯವಾಗಲಿದೆ.
  • ಸಾಲದ ಷರತ್ತುಗಳನ್ನು ಅನುಸರಿಸಲು ವಿಫಲವಾದಾಗ ಸಾಲಗಾರರಿಂದ ಬ್ಯಾಂಕ್‌ಗಳು ಮತ್ತು ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳು (NBFC) ವಿಧಿಸುವ ಮತ್ತು ಸಂಗ್ರಹಿಸುವ ದಂಡದ ಶುಲ್ಕಗಳ ಮೇಲೆ ಯಾವುದೇ ಜಿಎಸ್‌ಟಿ ಇರುವುದಿಲ್ಲ.
  • ವಹಿವಾಟುಗಳಲ್ಲಿ 2,000 ರೂ.ಗಿಂತ ಕಡಿಮೆ ಮೊತ್ತವನ್ನು ಪ್ರಕ್ರಿಯೆಗೊಳಿಸುವ ಪಾವತಿ ಸಂಗ್ರಾಹಕರು ಜಿಎಸ್‌ಟಿ ವಿನಾಯಿತಿಗೆ ಅರ್ಹರಾಗಿರುತ್ತಾರೆ. ಆದರೆ, ಪಾವತಿ ಗೇಟ್‌ವೇಗಳು ಮತ್ತು ಫಿನ್‌ಟೆಕ್ ಸೇವೆಗಳನ್ನು ಇದರಲ್ಲಿ ಒಳಗೊಂಡಿಲ್ಲ.
  • ಇದನ್ನೂ ಓದಿ : ಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...