Homeಮುಖಪುಟ55ನೇ ಜಿಎಸ್‌ಟಿ ಮಂಡಳಿ ಸಭೆ : ವಿಮೆ ಕಂತಿಗೆ ತೆರಿಗೆ ಕಡಿತ ಮುಂದೂಡಿಕೆ

55ನೇ ಜಿಎಸ್‌ಟಿ ಮಂಡಳಿ ಸಭೆ : ವಿಮೆ ಕಂತಿಗೆ ತೆರಿಗೆ ಕಡಿತ ಮುಂದೂಡಿಕೆ

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ (ಡಿ.21) ನಡೆದ 55ನೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯ ಸಭೆಯಲ್ಲಿ ಆರೋಗ್ಯ ಮತ್ತು ಜೀವ ವಿಮೆ ಕಂತಿನ ಮೇಲಿನ ಜಿಎಸ್‌ಟಿ ಕಡಿತಗೊಳಿಸುವ ನಿರ್ಧಾರವನ್ನು ಮುಂದೂಡಲಾಗಿದೆ.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಹಣಕಾಸು ಮಂತ್ರಿಗಳ ಉಪಸ್ಥಿತಿಯಲ್ಲಿ ರಾಜಸ್ಥಾನದಲ್ಲಿ ನಡೆದ ಸಭೆಯಲ್ಲಿ ವಿಮಾ ಕಂತಿನ ಮೇಲಿನ ತೆರಿಗೆ ಪರಿಷ್ಕರಣೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಮೊದಲು ಹೆಚ್ಚಿನ ಚರ್ಚೆ ಹಾಗೂ ಪರಾಮರ್ಶೆ ನಡೆಸುವ ಅಗತ್ಯವಿದೆ ಎಂದು ಮಂಡಳಿ ಹೇಳಿದೆ.

ಸ್ವಿಗ್ಗಿ ಮತ್ತು ಝೊಮ್ಯಾಟೋದ ಆಹಾರ ವಿತರಣೆ ಮೇಲೆ ಪ್ರಸ್ತುತ ಶೇ.18ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ. ಇದನ್ನು ಶೇ.5ಕ್ಕೆ ಇಳಿಸಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿತ್ತು. ಆದರೆ, ಸದ್ಯಕ್ಕೆ ಇದನ್ನೂ ಮುಂದೂಡಲಾಗಿದೆ.

ಏವಿಯೇಷನ್ ​​ಟರ್ಬೈನ್ ಫ್ಯೂಯಲ್ (ಎಟಿಎಫ್) ಅಥವಾ ವಿಮಾನ ಇಂಧನವನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸುವ ಕುರಿತ ಸಭೆಯ ಕಾರ್ಯಸೂಚಿಯಲ್ಲಿನ (ಸಭೆಯ ಅಜೆಂಡಾದ) ಮತ್ತೊಂದು ಮಹತ್ವದ ಅಂಶವನ್ನು ಮಂಡಳಿಯು ತಿರಸ್ಕರಿಸಿದೆ. ಪ್ರಸ್ತುತ, ಎಟಿಎಫ್ ಅಬಕಾರಿ ಸುಂಕ ಮತ್ತು ಮೌಲ್ಯವರ್ಧಿತ ತೆರಿಗೆಗೆ (ವ್ಯಾಟ್) ಒಳಪಟ್ಟಿದೆ. ಇದು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿದೆ. ಹೆಚ್ಚಿನ ವೆಚ್ಚಗಳು ಅಂತಿಮವಾಗಿ ಟಿಕೆಟ್ ದರಗಳ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ಜಿಎಸ್‌ಟಿ ಅಡಿಯಲ್ಲಿ ತರಲು ಕೋರಲಾಗಿದೆ.

ರಾಜ್ಯಗಳ ಸಹಕಾರ ಬೇಕಿದೆ : ನಿರ್ಮಲಾ ಸೀತಾರಾಮನ್

ವಿಮಾನ ಇಂಧನವನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ರಾಜ್ಯಗಳು ಒಪ್ಪಲು ಸಿದ್ದವಿಲ್ಲ. ಕೇಂದ್ರ ಸರ್ಕಾರವೊಂದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇವಿ ಮಾರಾಟ ತೆರಿಗೆ ಪರಿಷ್ಕರಣೆ

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಎಲೆಕ್ಟ್ರಾನಿಕ್ ವಾಹನಗಳ (ಇವಿ) ಮಾರಾಟ ತೆರಿಗೆಯನ್ನು ಪರಿಷ್ಕರಣೆ ಮಾಡಲಾಗಿದೆ. ವಿದ್ಯುತ್ ಚಾಲಿತ ಹೊಸ ಕಾರುಗಳಿಗೆ ಶೇ.5ರಷ್ಟು ಜಿಎಸ್‌ಟಿ ವಿಧಿಸಲು ನಿರ್ಧರಿಸಲಾಗಿದೆ. ಆದರೆ, ಸೆಕೆಂಡ್ ಹ್ಯಾಂಡ್ ಇವಿ ಕಾರನ್ನು ಅದರ ಮಾಲೀಕ ನೇರವಾಗಿ ಮಾರಾಟ ಮಾಡಿದರೆ ಜಿಎಸ್‌ಟಿ ಅನ್ವಯಿಸುವುದಿಲ್ಲ. ಯಾವುದಾದರು ಕಂಪನಿಯು ಸೆಕೆಂಡ್ ಹ್ಯಾಂಡ್ ಇವಿ ಮಾರಿದರೆ ಅಥವಾ ಮಾರಾಟಗಾರರು ಸೆಕೆಂಡ್ ಹ್ಯಾಂಡ್ ಇವಿ ಕಾರನ್ನು ಮಾರ್ಪಡಿಸಿ ಮಾರಿದರೆ ಶೇ.18ರಷ್ಟು ಜಿಎಸ್‌ಟಿ ಅನ್ವಯವಾಗಲಿದೆ.

55ನೇ ಜಿಎಸ್‌ಟಿ ಸಭೆಯ ಇತರ ನಿರ್ಣಯಗಳು :

  • ಅಂತಿಮ ಬಳಕೆಯ ಹೊರತಾಗಿಯೂ, ಬಲವರ್ಧಿತ ಅಕ್ಕಿ ಕಾಳುಗಳ ಜಿಎಸ್‌ಟಿ ದರವನ್ನು ಶೇ. 18ರಿಂದ ರಿಂದ ಶೇ.5ಕ್ಕೆ ಇಳಿಸಲಾಗಿದೆ. ಆಹಾರ ಪದಾರ್ಥವನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (ಪಿಡಿಎಸ್) ತಂದಿರುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ.
  • ಸರ್ಕಾರದ ಯೋಜನೆಯಡಿಯಲ್ಲಿ ಆರ್ಥಿಕ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್‌) ಉಚಿತ ವಿತರಣೆಗಾಗಿ ಉದ್ದೇಶಿಸಲಾದ ಆಹಾರ ತಯಾರಿಕೆಯ ಮೇಲಿನ ರಿಯಾಯಿತಿಯ ಶೇ. 5 ಜಿಎಸ್‌ಟಿ ವಿನಾಯಿತಿ ಇರುತ್ತದೆ.
  • ಉಪ್ಪು ಮತ್ತು ಮಸಾಲೆಗಳೊಂದಿಗೆ ಅನ್ಪ್ಯಾಕ್ ಮಾಡಲಾದ ಪಾಪ್‌ಕಾರ್ನ್ ಶೇ. 5 ಜಿಎಸ್‌ಟಿಗೆ ಒಳಪಡಲಿದೆ. ಆದರೆ, ಪ್ರಿ-ಪ್ಯಾಕ್ ಮಾಡಿದ ಪಾಪ್‌ಕಾರ್ನ್‌ಗೆ ಶೇ.12 ಮತ್ತು ಕ್ಯಾರಮೆಲ್ ಲೇಪಿತ ಪಾಪ್‌ಕಾರ್ನ್‌ಗೆ ಶೇ. 18 ಜಿಎಸ್‌ಟಿ ಅನ್ವಯವಾಗಲಿದೆ.
  • ಸಾಲದ ಷರತ್ತುಗಳನ್ನು ಅನುಸರಿಸಲು ವಿಫಲವಾದಾಗ ಸಾಲಗಾರರಿಂದ ಬ್ಯಾಂಕ್‌ಗಳು ಮತ್ತು ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳು (NBFC) ವಿಧಿಸುವ ಮತ್ತು ಸಂಗ್ರಹಿಸುವ ದಂಡದ ಶುಲ್ಕಗಳ ಮೇಲೆ ಯಾವುದೇ ಜಿಎಸ್‌ಟಿ ಇರುವುದಿಲ್ಲ.
  • ವಹಿವಾಟುಗಳಲ್ಲಿ 2,000 ರೂ.ಗಿಂತ ಕಡಿಮೆ ಮೊತ್ತವನ್ನು ಪ್ರಕ್ರಿಯೆಗೊಳಿಸುವ ಪಾವತಿ ಸಂಗ್ರಾಹಕರು ಜಿಎಸ್‌ಟಿ ವಿನಾಯಿತಿಗೆ ಅರ್ಹರಾಗಿರುತ್ತಾರೆ. ಆದರೆ, ಪಾವತಿ ಗೇಟ್‌ವೇಗಳು ಮತ್ತು ಫಿನ್‌ಟೆಕ್ ಸೇವೆಗಳನ್ನು ಇದರಲ್ಲಿ ಒಳಗೊಂಡಿಲ್ಲ.
  • ಇದನ್ನೂ ಓದಿ : ಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...