Homeರಾಜಕೀಯ56 ಇಂಚು ಎದೆ ಮಾಡಿದ 59 ನಿಮಿಷದ ಹಗರಣ

56 ಇಂಚು ಎದೆ ಮಾಡಿದ 59 ನಿಮಿಷದ ಹಗರಣ

- Advertisement -
- Advertisement -

ಸೋಮಶೇಖರ್ ಚಲ್ಯ |

ಭಾರತದ ಪ್ರಧಾನ ಸೇವಕ ನರೇಂದ್ರ ಮೋದಿಯವರು ಸಾಮಾನ್ಯರ ಸೇವೆಯನ್ನು ಬದಿಗಿಟ್ಟು ಕಾರ್ಪೊರೇಟ್ ಖದೀಮರ ಸೇವೆಯಲ್ಲಿ ನಿರತರಾಗಿದ್ದಾರೆಂಬ ಆರೋಪಕ್ಕೆ ಕಾರಣಗಳಿದ್ದವು. ಆದರೆ ನಿರ್ದಿಷ್ಟ ಹಗರಣಗಳಾಗಿ ಹೊರಬಿದ್ದಿರಲಿಲ್ಲ. ಆದರೆ ಅವು ಈಗ ವಾರಕ್ಕೊಂದರಂತೆ ಎಕ್ಸ್ಪೋಸ್ ಆಗುತ್ತಿವೆ. ಮೋದಿಯವರ ಹಗರಣ ಖಾತೆಗಳಲ್ಲಿರುವ ರಫೇಲ್ ಹಗರಣ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನಾ ಹಗರಣಗಳಂತಹವುಗಳ ಜೊತೆಗೆ ಹೊಸದೊಂದು ಹಗರಣ ಸೇರ್ಪಡೆಯಾಗಿದೆ. ಅದೂ ನಿಮಿಷದ ಲೆಕ್ಕದ್ದು.

ಕೆಲವು ಕಂಪನಿಗಳು ವಿಶೇಷ ಆಫರ್‌ಗಳ ಸ್ಕ್ರಾಚ್‌ ಕಾರ್ಡ್ಗಳನ್ನು ನೀಡುತ್ತವೆ. ಸ್ಕ್ರಾಚ್ ಮಾಡಿ ನೋಡಿದರೆ, ಕೆಲವು ಕಾರ್ಡ್ಗಳಲ್ಲಿ ಬೆಟರ್ ಲಕ್ ನೆಕ್ಸ್ಟ್ ಟೈಮ್ ಎಂದಿರುತ್ತವೆ. ಇದೂ ಸಹಾ ಅಂತಹದೊಂದು ‘ಭರ್ಜರಿ ಆಫರ್’. ಮೋದಿ ಸಾಹೇಬರು ಪ್ರಜೆಗಳಿಗೆ ನವೆಂಬರ್ 2ರಂದು ದೀಪಾವಳಿಯ ಭರ್ಜರಿ ಆಫರ್ ಘೋಷಿಸಿದ್ದಾರೆಂದು ಕೆಲವು ಮಾಧ್ಯಮಗಳು ತಮ್ಮ ಸ್ವಾಮಿನಿಷ್ಟೆಯನ್ನು ಪ್ರದರ್ಶಿಸಿದ್ದವು. ಆದರೆ ಅದೀಗ ಜನರ ಪಾಲಿಗೆ ದೀಪಾವಳಿಯ ಟುಸ್ ಪಟಾಕಿಯಾದಂತಿದ್ದರೂ ಕಾರ್ಪೊರೇಟ್‌ಗಳ ಖಾತೆ ತುಂಬಿ ತುಳುಕುವಂತಾಗಿದೆ.

‘ಕೇಂದ್ರ ಸರ್ಕಾರ ಕೈಗೊಂಡಿರುವ 12 ಪ್ರಮುಖ ಯೋಜನೆಗಳು ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ(ಎಂಎಸ್‌ಎಂಇ)ಗಳಿಗೆ ವರದಾನವಾಗಲಿದೆ. ಅದರಲ್ಲಿ ಪ್ರಮುಖವಾದದ್ದು 59 ನಿಮಿಷದಲ್ಲಿ ಒಂದು ಕೋಟಿಯವರೆಗಿನ ಲೋನ್ ಮೇಳದ ಸೌಲಭ್ಯ’ ಎಂದು ಮೋದಿ ಪುಂಗಿ ಊದಿದ್ದರು. ಈ ಯೋಜನೆಯಡಿಯಲ್ಲಿ ಸಾಲ ಪಡೆದವರಿಗೆ ಶೇ.3ರಿಂದ ಶೇ.5 ರಷ್ಟು ಬಡ್ಡಿ ರಿಯಾಯತಿ, ಮಹಿಳಾ ಉದ್ಯಮಿಗಳಿಂದ ಶೇ.3ರಷ್ಟು ಸರ್ಕಾರವೇ ಖರೀದಿಸುತ್ತದೆ. ಈ ಯೋಜನೆಗಾಗಿ 6,000ರೂ ಕೋಟಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಹೇಳಿಕೊಂಡಿದ್ದರು.

ಈ ಯೋಜನೆಯ ಫಲಾನುಭವಿಯಾಗಲು ಪ್ರತ್ಯೇಕ ವೆಬ್‌ಪೇಜ್‌ಯಿದ್ದು www.psbloansin59minutes.com ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿತ್ತು. ಈ ಸೂಚನೆಯಂತೆ ಒಬ್ಬ ವ್ಯಕ್ತಿ ಅಪ್ಲಿಕೇಷನ್ ಹಾಕಿದ್ದು 85 ಲಕ್ಷರೂಗಳ ಅಪ್ರೂವಲ್ ಕೂಡ ಪಡೆದು ವಿಜಯಾ ಬ್ಯಾಂಕಿನಲ್ಲಿ ಲೋನ್ ಕೇಳಲು ಹೋಗಿದ್ದಾರೆ. ಬ್ಯಾಂಕ್‌ನವರು ಹೇಳಿದ್ದು ಕೇಳಿ ಹೌಹಾರಿ ಹೋಗಿದ್ದಾರೆ. ಅಲ್ಲಿ ‘ನೀವೇ ಮೊದಲು 85 ಲಕ್ಷ ರೂ.ಗಳನ್ನು ಕಟ್ಟಬೇಕು. ಆನಂತರ ನಿಮಗೆ ಒಂದು ಕೋಟಿಯ ಲೋನ್ ಕೊಡುತ್ತೇವೆ’ ಎಂದು ಹೇಳಿದ್ದಾರೆ. ಆ ವ್ಯಕ್ತಿ ಬ್ಯಾಂಕಿನವರೊಂದಿಗೆ ಜಗಳ ಮಾಡಿಕೊಂಡು ಬಂದಿದ್ದಾರೆ. ಈ ವಿಚಾರ ತಿಳಿದ ಹೆಚ್‌ಡಬ್ಲ್ಯು ನ್ಯೂಸ್ ವರದಿಗಾರರು, ಇದರ ಅಸಲೀಯತ್ತೇನೆಂದು ತಿಳಿಯಲು ತಾವೇ ಒಬ್ಬರಿಂದ ಅಪ್ಲಿಕೇಶನ್ ಹಾಕಿಸಿದ್ದಾರೆ. ಈ ಅಪ್ಲಿಕೇಶನ್ ಮೋದಿ ಸಾಹೇಬರ 59 ನಿಮಿಷದ ಹಗರಣವನ್ನು ಬಯಲು ಮಾಡಿದೆ.

ಅಪ್ಲೇ ಮಾಡಿದ ವ್ಯಕ್ತಿಯಿಂದ ಪಾನ್ ನಂಬರ್, ಜಿಎಸ್‌ಟಿ ನಂಬರ್ ಅಷ್ಟೇ ಅಲ್ಲದೆ ಲಾಗಿನ್ ಐಡಿಯ ಪಾಸ್‌ರ‍್ಡ್ ಕೂಡ ಅಪ್ಲಿಕೇಷನ್‌ನಲ್ಲಿ ಪಡೆದುಕೊಂಡಿದ್ದಾರೆ. ಅಪ್ಲೇ ಮಾಡಿದ ಕೇವಲ 47 ನಿಮಿಷದಲ್ಲಿ ಲೋನ್‌ಗೆ 1,48,000ರೂ.ಗಳಿಗೆ ಅಪ್ರೂವಲ್ ಸಿಕ್ಕಿದೆ. ತಮಾಷೆಯೆಂದರೆ ಅಪ್ರುವಲ್‌ನಲ್ಲಿ ಇನ್ ಪ್ರಿನ್ಸಿಪಲ್ ಅಪ್ರೂವಲ್ (ತಾತ್ವಿಕ ಒಪ್ಪಿಗೆ) ಎಂದು ನೀಡಲಾಗಿದ್ದು, ಸಾಲವನ್ನು ಒರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಎಂಬ ಬ್ಯಾಂಕಿನಿಂದ ಪಡೆಯಬೇಕು ಎಂದು ಬ್ಯಾಂಕಿನ ವಿವರಗಳನ್ನೂ ಸಹ ಸೂಚಿಸಲಾಗಿತ್ತು. ಅಷ್ಟೇ ಅಲ್ಲದೆ ಈತ 1,180ರೂ ಗಳ ಡಿಡಿಯನ್ನು ಕ್ಯಾಪಿಟ ವರ್ಲ್ಡ್ ಪ್ಲಾಟ್‌ಫಾರ್ಮ ಪ್ರೈ. ಲಿ. ಎಂಬ ಖಾಸಗೀ ಕಂಪನಿಯ ಹೆಸರಿಗೆ ಕಟ್ಟಬೇಕೆಂದು ಸೂಚಿಸಲಾಗಿತ್ತು. ಸಾಮಾನ್ಯವಾಗಿ ಸರ್ಕಾರಿ ಸೌಲಭ್ಯಗಳನ್ನು ಪಡೆದರೆ ಸರ್ಕಾರಕ್ಕೆ ಡಿಡಿ ಕಟ್ಟುವುದು ಮಾಮೂಲಿ. ಆದರೆ ಈ ಸ್ಕೀಮ್‌ಗೆ ಮಾತ್ರ ಖಾಸಗಿ ಕಂಪನಿ ಹೆಸರಿನಲ್ಲಿ ಕಟ್ಟಬೇಕೆನ್ನುವುದೇ ಈ ಹಗರಣದ ಮೊದಲ ಹಂತ.

ಅಂದರೆ ಮೋದಿ ಸಾಹೇಬರು ಈ ಸ್ಕೀಮ್ ಮೂಲಕ ಖಾಸಗೀ ಕಂಪನಿಯ ಖಜಾನೆ ತುಂಬಿಸುವ ಪ್ಲಾನ್ ಮಾಡಿದ್ದಾರೆ ಎಂಬುದು ಕಣ್ಣೋಟಕ್ಕೆ ಕಾಣುವ ವಿಚಾರ. ಕೇವಲ ಒಂದು ಮಿಲಿಯನ್ ಅರ್ಜಿಗಳು ಬಂದರೂ 118 ಕೋಟಿ ರೂ.ಗಳು ಆ ಖಾಸಗಿ ಕಂಪೆನಿಗೆ ದಕ್ಕುತ್ತವೆ. ಪ್ರಧಾನಿ ಮೋದಿ ಈ ಸ್ಕೀಮ್ ಘೋಷಿಸಿದ ಮಾರನೆಯ ದಿನವೇ 23,582 ಕೋಟಿ ರೂ.ಗಳಷ್ಟು ಸಾಲ ನೀಡುವ 1.69 ಲಕ್ಷ ಅರ್ಜಿಗಳನ್ನು ಅಪ್ರೂವಲ್ ಮಾಡಲಾಗಿದೆ ಎಂದು ಘೋಷಿಸಲಾಗಿತ್ತು. ವಾಸ್ತವವೇನೆಂದರೆ ಅಲ್ಲಿಯವರೆಗೆ ಒಬ್ಬರಿಗೂ ಲೋನ್ ಹಣ ಸಿಕ್ಕಿರಲಿಲ್ಲ. ಈ ಲೆಕ್ಕವನ್ನು ಪ್ರಶ್ನಿಸಿದ ಕ್ಷಣಗಳಲ್ಲಿ ಮಾಹಿತಿಯನ್ನು ಅಳಿಸಿ ಹಾಕಿದ್ದು ಮತ್ತಷ್ಟು ಅನುಮಾನಗಳನ್ನು ಹುಟ್ಟು ಹಾಕಿತ್ತು.

ಅಂದಹಾಗೆ ರಫೇಲ್ ಹಗರಣದ ಮೂಲಕ ಅಂಬಾನಿಯ ಖಜಾನೆ ತುಂಬಿಸಹೊರಟಿದ್ದ ಮೋದಿ ಈ ಸ್ಕೀಮ್‌ಗೆ ಕೈಜೋಡಿಸಿದ್ದು ಇದೇ ಅಂಬಾನಿಯ ಆಪ್ತಮಿತ್ರ ಅಹಮದಾಬಾದ್ ವಿನೋದ್ ಮೋದ, ಜಿನಂದ್ ಶಾ ಮತ್ತು ಚಕ್ರಬೋಟ್ರಿ ಪಾಲುದಾರಿಕೆಯ ಕ್ಯಾಪಿಟಾ ವರ್ಲ್ಡ್ ಕಂಪನಿಯೊಂದಿಗೆ. ಈ ಕಂಪನಿ ಉದ್ಭವವಾಗಿದ್ದು ಮೋದಿ ಅಧಿಕಾರಕ್ಕೇರಿದ ಒಂದು ವರ್ಷದ ನಂತರ 2015ರಲ್ಲಿ. ಈ ಕಂಪನಿ ಆರಂಭಗೊಂಡ ಮೊದಲ ವರ್ಷ ಅಂದರೆ 2016ರಲ್ಲಿ ಇದರ ಆದಾಯ ಸೊನ್ನೆ ಮಾತ್ರ. ನಂತರ 2017ರಲ್ಲಿ 15.680 ರೂ. ಲಾಭ ಗಳಿಸಿತ್ತು. ಇನ್ನೊಂದು ಗಮನಿಸಬೇಕಾದ ವಿಷಯವೆಂದರೆ ಈ ಕಂಪನಿಯ ಶೇರ್‌ನಲ್ಲಿ ಎಸ್‌ಐಡಿಬಿಐ ಬ್ಯಾಂಕ್ ಸೇರಿದಂತೆ 9 ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಒಂದು ಶೇರ್‌ಗೆ 119.39 ರೂ.ಗಳಂತೆ 17.43.371 ಶೇರ್‌ಗಳಿಗೆ 22.5 ಕೋಟಿ ರೂ.ಗಳನ್ನು ಹೂಡಿಕೆ ಮಾಡಿವೆ.

ಇಷ್ಟೆಲ್ಲಾ ಹೂಡಿಕೆ ಮಾಡಿರುವ ಈ ಕಂಪನಿಯ ಲಾಭ 15.680 ಇದ್ದುದರಿಂದ ಮೋದಿ ಸಾಹೇಬರು ಈ ಕಂಪನಿಯನ್ನು ಮೇಲೆತ್ತುವ ಉಸ್ತುವಾರಿ ತೆಗೆದುಕೊಂಡಿದ್ದಾರೆ. ಇನ್ನೊಂದು ವಿಚಾರವೆಂದರೆ ಈ ಕಂಪನಿ ಆರಂಭಗೊಂಡು 3 ವರ್ಷವಾಗಿದ್ದು ಇದರ ಸಿಇಓಗಳು ಮೂರು ಭಾರಿ ಬದಲಾಗಿದ್ದರೆ. ಜಿನಾಬ್ ವೈ ಶಾ, ವಿಕಾಸ್ ಮನಿಲಾಲ್ ಷಾ, ಅಖಿಲ್ ಹಂಡಾ ಈ ಮೂವರೂ ಕ್ಯಾಪಿಟಾವರ್ಲ್ಡ್ನ ಸಿಇಓಗಳಾಗಿದ್ದು, ಇವರು 2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಪರ ಪ್ರಚಾರದ ಬ್ಯಾಟಿಂಗ್ ಮಾಡಿದ್ದರು ಎಂಬುದು ವಿಶೇಷ.

ಹಾಗಾಗಿ ಮೋದಿ ಪರ ಬ್ಯಾಟಿಂಗ್ ಮಾಡಿದ್ದ ಸಿಇಓಗಳು, ಮಿತ್ರ ಅಂಬಾನಿಯ ಸ್ನೇಹಿತರ ಕಂಪನಿಯನ್ನು ಉಳಿಸುವ ಸಲುವಗಿ 59 ನಿಮಿಷದಲ್ಲಿ ಸಾಲ ಸೌಲಭ್ಯದ ಮೋದಿಯ ಸ್ಕೀಮ್‌ಗೆ ಲಕ್ಷಾಂತರ ಜನ ಅಪ್ಲಿಕೇಷನ್ ಹಾಕಿದ್ದು ತಲಾ 1.180ರೂ ಡಿಡಿಯಂತೆ ಬಿಲಿಯನ್‌ಗಟ್ಟಲೆ ಸಾರ್ವಜನಿಕರ ಹಣ ಕ್ಯಾಪಿಟಾವರ್ಲ್ಡ್ನ ಪಾಲಿಗೆ ದಯಪಾಲಿಸಿದೆ, ಅಷ್ಟೇ ಅಲ್ಲದೆ ಅಪ್ಲೇ ಮಾಡಿದವರ ವ್ಯವಹಾರದ ಎಲ್ಲಾ ಡಿಟೈಲ್ಸ್ಗಳನ್ನು ಈ ಕಂಪನಿ ಪಡೆದುಕೊಂಡಿದೆ. ಅಪ್ರುವಲ್‌ನಲ್ಲಿಯೇ ಇರುವಂತೆ ಅದು ತಾತ್ವಿಕ ಒಪ್ಪಿಗೆಯಾಗಿದ್ದು, ಸಾಲ ನೀಡಬಹುದೆಂದಷ್ಟೇ ಸೂಚಿಸಿದ್ದು ಸಾಲ ದೊರೆತೇಬಿಡುತ್ತದೆ ಎಂದೇನೂ ಇಲ್ಲವಾದ್ದರಿಂದ ಲೋನ್‌ನ ಆಸೆಯನ್ನು ಮರೆಯುವುದೇ ಸೂಕ್ತವೆಂಬಂತೆ ಪರೋಕ್ಷವಾಗಿ ಕಂಪನಿ ತಿಳಿಸಿದೆ. ಒಟ್ಟಿನಲ್ಲಿ ಇದುವರೆಗೂ ಸರ್ಕಾರದ ಹಣದಿಂದ ಕಾರ್ಪೊರೇಟ್‌ಗಳನ್ನು ಬೆಳೆಸುತ್ತಿದ್ದ ದಾರಿಗಿಂತ ಭಿನ್ನವಾಗಿ ನೇರವಾಗಿ ಸಾರ್ವಜನಿಕರ ಜೇಬಿನಿಂದ ಕಾರ್ಪೊರೇಟ್ ಖಜಾನೆ ತುಂಬಿಸಿರುವ ಮೊದಲ ಹಗರಣ ಪ್ರಧಾನ ಕಾರ್ಪೊರೇಟ್ ಸೇವಕ ಮೋದಿಯದ್ದು. ಮುದ್ರಾ, ಫಸಲ್ ಬಿಮಾ ಯೋಜನೆಗಳಿಂದ ಜನರನ್ನು ಯಾಮಾರಿಸಿದ್ದ ಮೋದಿ ಈ ಹಗರಣದಲ್ಲಿ ನೇರವಾಗಿ ಜನರ ಜೇಬಿಗೆ ಕತ್ತರಿಹಾಕಿ ಯಾಮಾರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...