Homeರಾಜಕೀಯ56 ಇಂಚು ಎದೆ ಮಾಡಿದ 59 ನಿಮಿಷದ ಹಗರಣ

56 ಇಂಚು ಎದೆ ಮಾಡಿದ 59 ನಿಮಿಷದ ಹಗರಣ

- Advertisement -
- Advertisement -

ಸೋಮಶೇಖರ್ ಚಲ್ಯ |

ಭಾರತದ ಪ್ರಧಾನ ಸೇವಕ ನರೇಂದ್ರ ಮೋದಿಯವರು ಸಾಮಾನ್ಯರ ಸೇವೆಯನ್ನು ಬದಿಗಿಟ್ಟು ಕಾರ್ಪೊರೇಟ್ ಖದೀಮರ ಸೇವೆಯಲ್ಲಿ ನಿರತರಾಗಿದ್ದಾರೆಂಬ ಆರೋಪಕ್ಕೆ ಕಾರಣಗಳಿದ್ದವು. ಆದರೆ ನಿರ್ದಿಷ್ಟ ಹಗರಣಗಳಾಗಿ ಹೊರಬಿದ್ದಿರಲಿಲ್ಲ. ಆದರೆ ಅವು ಈಗ ವಾರಕ್ಕೊಂದರಂತೆ ಎಕ್ಸ್ಪೋಸ್ ಆಗುತ್ತಿವೆ. ಮೋದಿಯವರ ಹಗರಣ ಖಾತೆಗಳಲ್ಲಿರುವ ರಫೇಲ್ ಹಗರಣ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನಾ ಹಗರಣಗಳಂತಹವುಗಳ ಜೊತೆಗೆ ಹೊಸದೊಂದು ಹಗರಣ ಸೇರ್ಪಡೆಯಾಗಿದೆ. ಅದೂ ನಿಮಿಷದ ಲೆಕ್ಕದ್ದು.

ಕೆಲವು ಕಂಪನಿಗಳು ವಿಶೇಷ ಆಫರ್‌ಗಳ ಸ್ಕ್ರಾಚ್‌ ಕಾರ್ಡ್ಗಳನ್ನು ನೀಡುತ್ತವೆ. ಸ್ಕ್ರಾಚ್ ಮಾಡಿ ನೋಡಿದರೆ, ಕೆಲವು ಕಾರ್ಡ್ಗಳಲ್ಲಿ ಬೆಟರ್ ಲಕ್ ನೆಕ್ಸ್ಟ್ ಟೈಮ್ ಎಂದಿರುತ್ತವೆ. ಇದೂ ಸಹಾ ಅಂತಹದೊಂದು ‘ಭರ್ಜರಿ ಆಫರ್’. ಮೋದಿ ಸಾಹೇಬರು ಪ್ರಜೆಗಳಿಗೆ ನವೆಂಬರ್ 2ರಂದು ದೀಪಾವಳಿಯ ಭರ್ಜರಿ ಆಫರ್ ಘೋಷಿಸಿದ್ದಾರೆಂದು ಕೆಲವು ಮಾಧ್ಯಮಗಳು ತಮ್ಮ ಸ್ವಾಮಿನಿಷ್ಟೆಯನ್ನು ಪ್ರದರ್ಶಿಸಿದ್ದವು. ಆದರೆ ಅದೀಗ ಜನರ ಪಾಲಿಗೆ ದೀಪಾವಳಿಯ ಟುಸ್ ಪಟಾಕಿಯಾದಂತಿದ್ದರೂ ಕಾರ್ಪೊರೇಟ್‌ಗಳ ಖಾತೆ ತುಂಬಿ ತುಳುಕುವಂತಾಗಿದೆ.

‘ಕೇಂದ್ರ ಸರ್ಕಾರ ಕೈಗೊಂಡಿರುವ 12 ಪ್ರಮುಖ ಯೋಜನೆಗಳು ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ(ಎಂಎಸ್‌ಎಂಇ)ಗಳಿಗೆ ವರದಾನವಾಗಲಿದೆ. ಅದರಲ್ಲಿ ಪ್ರಮುಖವಾದದ್ದು 59 ನಿಮಿಷದಲ್ಲಿ ಒಂದು ಕೋಟಿಯವರೆಗಿನ ಲೋನ್ ಮೇಳದ ಸೌಲಭ್ಯ’ ಎಂದು ಮೋದಿ ಪುಂಗಿ ಊದಿದ್ದರು. ಈ ಯೋಜನೆಯಡಿಯಲ್ಲಿ ಸಾಲ ಪಡೆದವರಿಗೆ ಶೇ.3ರಿಂದ ಶೇ.5 ರಷ್ಟು ಬಡ್ಡಿ ರಿಯಾಯತಿ, ಮಹಿಳಾ ಉದ್ಯಮಿಗಳಿಂದ ಶೇ.3ರಷ್ಟು ಸರ್ಕಾರವೇ ಖರೀದಿಸುತ್ತದೆ. ಈ ಯೋಜನೆಗಾಗಿ 6,000ರೂ ಕೋಟಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಹೇಳಿಕೊಂಡಿದ್ದರು.

ಈ ಯೋಜನೆಯ ಫಲಾನುಭವಿಯಾಗಲು ಪ್ರತ್ಯೇಕ ವೆಬ್‌ಪೇಜ್‌ಯಿದ್ದು www.psbloansin59minutes.com ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿತ್ತು. ಈ ಸೂಚನೆಯಂತೆ ಒಬ್ಬ ವ್ಯಕ್ತಿ ಅಪ್ಲಿಕೇಷನ್ ಹಾಕಿದ್ದು 85 ಲಕ್ಷರೂಗಳ ಅಪ್ರೂವಲ್ ಕೂಡ ಪಡೆದು ವಿಜಯಾ ಬ್ಯಾಂಕಿನಲ್ಲಿ ಲೋನ್ ಕೇಳಲು ಹೋಗಿದ್ದಾರೆ. ಬ್ಯಾಂಕ್‌ನವರು ಹೇಳಿದ್ದು ಕೇಳಿ ಹೌಹಾರಿ ಹೋಗಿದ್ದಾರೆ. ಅಲ್ಲಿ ‘ನೀವೇ ಮೊದಲು 85 ಲಕ್ಷ ರೂ.ಗಳನ್ನು ಕಟ್ಟಬೇಕು. ಆನಂತರ ನಿಮಗೆ ಒಂದು ಕೋಟಿಯ ಲೋನ್ ಕೊಡುತ್ತೇವೆ’ ಎಂದು ಹೇಳಿದ್ದಾರೆ. ಆ ವ್ಯಕ್ತಿ ಬ್ಯಾಂಕಿನವರೊಂದಿಗೆ ಜಗಳ ಮಾಡಿಕೊಂಡು ಬಂದಿದ್ದಾರೆ. ಈ ವಿಚಾರ ತಿಳಿದ ಹೆಚ್‌ಡಬ್ಲ್ಯು ನ್ಯೂಸ್ ವರದಿಗಾರರು, ಇದರ ಅಸಲೀಯತ್ತೇನೆಂದು ತಿಳಿಯಲು ತಾವೇ ಒಬ್ಬರಿಂದ ಅಪ್ಲಿಕೇಶನ್ ಹಾಕಿಸಿದ್ದಾರೆ. ಈ ಅಪ್ಲಿಕೇಶನ್ ಮೋದಿ ಸಾಹೇಬರ 59 ನಿಮಿಷದ ಹಗರಣವನ್ನು ಬಯಲು ಮಾಡಿದೆ.

ಅಪ್ಲೇ ಮಾಡಿದ ವ್ಯಕ್ತಿಯಿಂದ ಪಾನ್ ನಂಬರ್, ಜಿಎಸ್‌ಟಿ ನಂಬರ್ ಅಷ್ಟೇ ಅಲ್ಲದೆ ಲಾಗಿನ್ ಐಡಿಯ ಪಾಸ್‌ರ‍್ಡ್ ಕೂಡ ಅಪ್ಲಿಕೇಷನ್‌ನಲ್ಲಿ ಪಡೆದುಕೊಂಡಿದ್ದಾರೆ. ಅಪ್ಲೇ ಮಾಡಿದ ಕೇವಲ 47 ನಿಮಿಷದಲ್ಲಿ ಲೋನ್‌ಗೆ 1,48,000ರೂ.ಗಳಿಗೆ ಅಪ್ರೂವಲ್ ಸಿಕ್ಕಿದೆ. ತಮಾಷೆಯೆಂದರೆ ಅಪ್ರುವಲ್‌ನಲ್ಲಿ ಇನ್ ಪ್ರಿನ್ಸಿಪಲ್ ಅಪ್ರೂವಲ್ (ತಾತ್ವಿಕ ಒಪ್ಪಿಗೆ) ಎಂದು ನೀಡಲಾಗಿದ್ದು, ಸಾಲವನ್ನು ಒರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಎಂಬ ಬ್ಯಾಂಕಿನಿಂದ ಪಡೆಯಬೇಕು ಎಂದು ಬ್ಯಾಂಕಿನ ವಿವರಗಳನ್ನೂ ಸಹ ಸೂಚಿಸಲಾಗಿತ್ತು. ಅಷ್ಟೇ ಅಲ್ಲದೆ ಈತ 1,180ರೂ ಗಳ ಡಿಡಿಯನ್ನು ಕ್ಯಾಪಿಟ ವರ್ಲ್ಡ್ ಪ್ಲಾಟ್‌ಫಾರ್ಮ ಪ್ರೈ. ಲಿ. ಎಂಬ ಖಾಸಗೀ ಕಂಪನಿಯ ಹೆಸರಿಗೆ ಕಟ್ಟಬೇಕೆಂದು ಸೂಚಿಸಲಾಗಿತ್ತು. ಸಾಮಾನ್ಯವಾಗಿ ಸರ್ಕಾರಿ ಸೌಲಭ್ಯಗಳನ್ನು ಪಡೆದರೆ ಸರ್ಕಾರಕ್ಕೆ ಡಿಡಿ ಕಟ್ಟುವುದು ಮಾಮೂಲಿ. ಆದರೆ ಈ ಸ್ಕೀಮ್‌ಗೆ ಮಾತ್ರ ಖಾಸಗಿ ಕಂಪನಿ ಹೆಸರಿನಲ್ಲಿ ಕಟ್ಟಬೇಕೆನ್ನುವುದೇ ಈ ಹಗರಣದ ಮೊದಲ ಹಂತ.

ಅಂದರೆ ಮೋದಿ ಸಾಹೇಬರು ಈ ಸ್ಕೀಮ್ ಮೂಲಕ ಖಾಸಗೀ ಕಂಪನಿಯ ಖಜಾನೆ ತುಂಬಿಸುವ ಪ್ಲಾನ್ ಮಾಡಿದ್ದಾರೆ ಎಂಬುದು ಕಣ್ಣೋಟಕ್ಕೆ ಕಾಣುವ ವಿಚಾರ. ಕೇವಲ ಒಂದು ಮಿಲಿಯನ್ ಅರ್ಜಿಗಳು ಬಂದರೂ 118 ಕೋಟಿ ರೂ.ಗಳು ಆ ಖಾಸಗಿ ಕಂಪೆನಿಗೆ ದಕ್ಕುತ್ತವೆ. ಪ್ರಧಾನಿ ಮೋದಿ ಈ ಸ್ಕೀಮ್ ಘೋಷಿಸಿದ ಮಾರನೆಯ ದಿನವೇ 23,582 ಕೋಟಿ ರೂ.ಗಳಷ್ಟು ಸಾಲ ನೀಡುವ 1.69 ಲಕ್ಷ ಅರ್ಜಿಗಳನ್ನು ಅಪ್ರೂವಲ್ ಮಾಡಲಾಗಿದೆ ಎಂದು ಘೋಷಿಸಲಾಗಿತ್ತು. ವಾಸ್ತವವೇನೆಂದರೆ ಅಲ್ಲಿಯವರೆಗೆ ಒಬ್ಬರಿಗೂ ಲೋನ್ ಹಣ ಸಿಕ್ಕಿರಲಿಲ್ಲ. ಈ ಲೆಕ್ಕವನ್ನು ಪ್ರಶ್ನಿಸಿದ ಕ್ಷಣಗಳಲ್ಲಿ ಮಾಹಿತಿಯನ್ನು ಅಳಿಸಿ ಹಾಕಿದ್ದು ಮತ್ತಷ್ಟು ಅನುಮಾನಗಳನ್ನು ಹುಟ್ಟು ಹಾಕಿತ್ತು.

ಅಂದಹಾಗೆ ರಫೇಲ್ ಹಗರಣದ ಮೂಲಕ ಅಂಬಾನಿಯ ಖಜಾನೆ ತುಂಬಿಸಹೊರಟಿದ್ದ ಮೋದಿ ಈ ಸ್ಕೀಮ್‌ಗೆ ಕೈಜೋಡಿಸಿದ್ದು ಇದೇ ಅಂಬಾನಿಯ ಆಪ್ತಮಿತ್ರ ಅಹಮದಾಬಾದ್ ವಿನೋದ್ ಮೋದ, ಜಿನಂದ್ ಶಾ ಮತ್ತು ಚಕ್ರಬೋಟ್ರಿ ಪಾಲುದಾರಿಕೆಯ ಕ್ಯಾಪಿಟಾ ವರ್ಲ್ಡ್ ಕಂಪನಿಯೊಂದಿಗೆ. ಈ ಕಂಪನಿ ಉದ್ಭವವಾಗಿದ್ದು ಮೋದಿ ಅಧಿಕಾರಕ್ಕೇರಿದ ಒಂದು ವರ್ಷದ ನಂತರ 2015ರಲ್ಲಿ. ಈ ಕಂಪನಿ ಆರಂಭಗೊಂಡ ಮೊದಲ ವರ್ಷ ಅಂದರೆ 2016ರಲ್ಲಿ ಇದರ ಆದಾಯ ಸೊನ್ನೆ ಮಾತ್ರ. ನಂತರ 2017ರಲ್ಲಿ 15.680 ರೂ. ಲಾಭ ಗಳಿಸಿತ್ತು. ಇನ್ನೊಂದು ಗಮನಿಸಬೇಕಾದ ವಿಷಯವೆಂದರೆ ಈ ಕಂಪನಿಯ ಶೇರ್‌ನಲ್ಲಿ ಎಸ್‌ಐಡಿಬಿಐ ಬ್ಯಾಂಕ್ ಸೇರಿದಂತೆ 9 ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಒಂದು ಶೇರ್‌ಗೆ 119.39 ರೂ.ಗಳಂತೆ 17.43.371 ಶೇರ್‌ಗಳಿಗೆ 22.5 ಕೋಟಿ ರೂ.ಗಳನ್ನು ಹೂಡಿಕೆ ಮಾಡಿವೆ.

ಇಷ್ಟೆಲ್ಲಾ ಹೂಡಿಕೆ ಮಾಡಿರುವ ಈ ಕಂಪನಿಯ ಲಾಭ 15.680 ಇದ್ದುದರಿಂದ ಮೋದಿ ಸಾಹೇಬರು ಈ ಕಂಪನಿಯನ್ನು ಮೇಲೆತ್ತುವ ಉಸ್ತುವಾರಿ ತೆಗೆದುಕೊಂಡಿದ್ದಾರೆ. ಇನ್ನೊಂದು ವಿಚಾರವೆಂದರೆ ಈ ಕಂಪನಿ ಆರಂಭಗೊಂಡು 3 ವರ್ಷವಾಗಿದ್ದು ಇದರ ಸಿಇಓಗಳು ಮೂರು ಭಾರಿ ಬದಲಾಗಿದ್ದರೆ. ಜಿನಾಬ್ ವೈ ಶಾ, ವಿಕಾಸ್ ಮನಿಲಾಲ್ ಷಾ, ಅಖಿಲ್ ಹಂಡಾ ಈ ಮೂವರೂ ಕ್ಯಾಪಿಟಾವರ್ಲ್ಡ್ನ ಸಿಇಓಗಳಾಗಿದ್ದು, ಇವರು 2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಪರ ಪ್ರಚಾರದ ಬ್ಯಾಟಿಂಗ್ ಮಾಡಿದ್ದರು ಎಂಬುದು ವಿಶೇಷ.

ಹಾಗಾಗಿ ಮೋದಿ ಪರ ಬ್ಯಾಟಿಂಗ್ ಮಾಡಿದ್ದ ಸಿಇಓಗಳು, ಮಿತ್ರ ಅಂಬಾನಿಯ ಸ್ನೇಹಿತರ ಕಂಪನಿಯನ್ನು ಉಳಿಸುವ ಸಲುವಗಿ 59 ನಿಮಿಷದಲ್ಲಿ ಸಾಲ ಸೌಲಭ್ಯದ ಮೋದಿಯ ಸ್ಕೀಮ್‌ಗೆ ಲಕ್ಷಾಂತರ ಜನ ಅಪ್ಲಿಕೇಷನ್ ಹಾಕಿದ್ದು ತಲಾ 1.180ರೂ ಡಿಡಿಯಂತೆ ಬಿಲಿಯನ್‌ಗಟ್ಟಲೆ ಸಾರ್ವಜನಿಕರ ಹಣ ಕ್ಯಾಪಿಟಾವರ್ಲ್ಡ್ನ ಪಾಲಿಗೆ ದಯಪಾಲಿಸಿದೆ, ಅಷ್ಟೇ ಅಲ್ಲದೆ ಅಪ್ಲೇ ಮಾಡಿದವರ ವ್ಯವಹಾರದ ಎಲ್ಲಾ ಡಿಟೈಲ್ಸ್ಗಳನ್ನು ಈ ಕಂಪನಿ ಪಡೆದುಕೊಂಡಿದೆ. ಅಪ್ರುವಲ್‌ನಲ್ಲಿಯೇ ಇರುವಂತೆ ಅದು ತಾತ್ವಿಕ ಒಪ್ಪಿಗೆಯಾಗಿದ್ದು, ಸಾಲ ನೀಡಬಹುದೆಂದಷ್ಟೇ ಸೂಚಿಸಿದ್ದು ಸಾಲ ದೊರೆತೇಬಿಡುತ್ತದೆ ಎಂದೇನೂ ಇಲ್ಲವಾದ್ದರಿಂದ ಲೋನ್‌ನ ಆಸೆಯನ್ನು ಮರೆಯುವುದೇ ಸೂಕ್ತವೆಂಬಂತೆ ಪರೋಕ್ಷವಾಗಿ ಕಂಪನಿ ತಿಳಿಸಿದೆ. ಒಟ್ಟಿನಲ್ಲಿ ಇದುವರೆಗೂ ಸರ್ಕಾರದ ಹಣದಿಂದ ಕಾರ್ಪೊರೇಟ್‌ಗಳನ್ನು ಬೆಳೆಸುತ್ತಿದ್ದ ದಾರಿಗಿಂತ ಭಿನ್ನವಾಗಿ ನೇರವಾಗಿ ಸಾರ್ವಜನಿಕರ ಜೇಬಿನಿಂದ ಕಾರ್ಪೊರೇಟ್ ಖಜಾನೆ ತುಂಬಿಸಿರುವ ಮೊದಲ ಹಗರಣ ಪ್ರಧಾನ ಕಾರ್ಪೊರೇಟ್ ಸೇವಕ ಮೋದಿಯದ್ದು. ಮುದ್ರಾ, ಫಸಲ್ ಬಿಮಾ ಯೋಜನೆಗಳಿಂದ ಜನರನ್ನು ಯಾಮಾರಿಸಿದ್ದ ಮೋದಿ ಈ ಹಗರಣದಲ್ಲಿ ನೇರವಾಗಿ ಜನರ ಜೇಬಿಗೆ ಕತ್ತರಿಹಾಕಿ ಯಾಮಾರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...