Homeರಾಜಕೀಯ56 ಇಂಚು ಎದೆ ಮಾಡಿದ 59 ನಿಮಿಷದ ಹಗರಣ

56 ಇಂಚು ಎದೆ ಮಾಡಿದ 59 ನಿಮಿಷದ ಹಗರಣ

- Advertisement -
- Advertisement -

ಸೋಮಶೇಖರ್ ಚಲ್ಯ |

ಭಾರತದ ಪ್ರಧಾನ ಸೇವಕ ನರೇಂದ್ರ ಮೋದಿಯವರು ಸಾಮಾನ್ಯರ ಸೇವೆಯನ್ನು ಬದಿಗಿಟ್ಟು ಕಾರ್ಪೊರೇಟ್ ಖದೀಮರ ಸೇವೆಯಲ್ಲಿ ನಿರತರಾಗಿದ್ದಾರೆಂಬ ಆರೋಪಕ್ಕೆ ಕಾರಣಗಳಿದ್ದವು. ಆದರೆ ನಿರ್ದಿಷ್ಟ ಹಗರಣಗಳಾಗಿ ಹೊರಬಿದ್ದಿರಲಿಲ್ಲ. ಆದರೆ ಅವು ಈಗ ವಾರಕ್ಕೊಂದರಂತೆ ಎಕ್ಸ್ಪೋಸ್ ಆಗುತ್ತಿವೆ. ಮೋದಿಯವರ ಹಗರಣ ಖಾತೆಗಳಲ್ಲಿರುವ ರಫೇಲ್ ಹಗರಣ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನಾ ಹಗರಣಗಳಂತಹವುಗಳ ಜೊತೆಗೆ ಹೊಸದೊಂದು ಹಗರಣ ಸೇರ್ಪಡೆಯಾಗಿದೆ. ಅದೂ ನಿಮಿಷದ ಲೆಕ್ಕದ್ದು.

ಕೆಲವು ಕಂಪನಿಗಳು ವಿಶೇಷ ಆಫರ್‌ಗಳ ಸ್ಕ್ರಾಚ್‌ ಕಾರ್ಡ್ಗಳನ್ನು ನೀಡುತ್ತವೆ. ಸ್ಕ್ರಾಚ್ ಮಾಡಿ ನೋಡಿದರೆ, ಕೆಲವು ಕಾರ್ಡ್ಗಳಲ್ಲಿ ಬೆಟರ್ ಲಕ್ ನೆಕ್ಸ್ಟ್ ಟೈಮ್ ಎಂದಿರುತ್ತವೆ. ಇದೂ ಸಹಾ ಅಂತಹದೊಂದು ‘ಭರ್ಜರಿ ಆಫರ್’. ಮೋದಿ ಸಾಹೇಬರು ಪ್ರಜೆಗಳಿಗೆ ನವೆಂಬರ್ 2ರಂದು ದೀಪಾವಳಿಯ ಭರ್ಜರಿ ಆಫರ್ ಘೋಷಿಸಿದ್ದಾರೆಂದು ಕೆಲವು ಮಾಧ್ಯಮಗಳು ತಮ್ಮ ಸ್ವಾಮಿನಿಷ್ಟೆಯನ್ನು ಪ್ರದರ್ಶಿಸಿದ್ದವು. ಆದರೆ ಅದೀಗ ಜನರ ಪಾಲಿಗೆ ದೀಪಾವಳಿಯ ಟುಸ್ ಪಟಾಕಿಯಾದಂತಿದ್ದರೂ ಕಾರ್ಪೊರೇಟ್‌ಗಳ ಖಾತೆ ತುಂಬಿ ತುಳುಕುವಂತಾಗಿದೆ.

‘ಕೇಂದ್ರ ಸರ್ಕಾರ ಕೈಗೊಂಡಿರುವ 12 ಪ್ರಮುಖ ಯೋಜನೆಗಳು ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ(ಎಂಎಸ್‌ಎಂಇ)ಗಳಿಗೆ ವರದಾನವಾಗಲಿದೆ. ಅದರಲ್ಲಿ ಪ್ರಮುಖವಾದದ್ದು 59 ನಿಮಿಷದಲ್ಲಿ ಒಂದು ಕೋಟಿಯವರೆಗಿನ ಲೋನ್ ಮೇಳದ ಸೌಲಭ್ಯ’ ಎಂದು ಮೋದಿ ಪುಂಗಿ ಊದಿದ್ದರು. ಈ ಯೋಜನೆಯಡಿಯಲ್ಲಿ ಸಾಲ ಪಡೆದವರಿಗೆ ಶೇ.3ರಿಂದ ಶೇ.5 ರಷ್ಟು ಬಡ್ಡಿ ರಿಯಾಯತಿ, ಮಹಿಳಾ ಉದ್ಯಮಿಗಳಿಂದ ಶೇ.3ರಷ್ಟು ಸರ್ಕಾರವೇ ಖರೀದಿಸುತ್ತದೆ. ಈ ಯೋಜನೆಗಾಗಿ 6,000ರೂ ಕೋಟಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಹೇಳಿಕೊಂಡಿದ್ದರು.

ಈ ಯೋಜನೆಯ ಫಲಾನುಭವಿಯಾಗಲು ಪ್ರತ್ಯೇಕ ವೆಬ್‌ಪೇಜ್‌ಯಿದ್ದು www.psbloansin59minutes.com ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿತ್ತು. ಈ ಸೂಚನೆಯಂತೆ ಒಬ್ಬ ವ್ಯಕ್ತಿ ಅಪ್ಲಿಕೇಷನ್ ಹಾಕಿದ್ದು 85 ಲಕ್ಷರೂಗಳ ಅಪ್ರೂವಲ್ ಕೂಡ ಪಡೆದು ವಿಜಯಾ ಬ್ಯಾಂಕಿನಲ್ಲಿ ಲೋನ್ ಕೇಳಲು ಹೋಗಿದ್ದಾರೆ. ಬ್ಯಾಂಕ್‌ನವರು ಹೇಳಿದ್ದು ಕೇಳಿ ಹೌಹಾರಿ ಹೋಗಿದ್ದಾರೆ. ಅಲ್ಲಿ ‘ನೀವೇ ಮೊದಲು 85 ಲಕ್ಷ ರೂ.ಗಳನ್ನು ಕಟ್ಟಬೇಕು. ಆನಂತರ ನಿಮಗೆ ಒಂದು ಕೋಟಿಯ ಲೋನ್ ಕೊಡುತ್ತೇವೆ’ ಎಂದು ಹೇಳಿದ್ದಾರೆ. ಆ ವ್ಯಕ್ತಿ ಬ್ಯಾಂಕಿನವರೊಂದಿಗೆ ಜಗಳ ಮಾಡಿಕೊಂಡು ಬಂದಿದ್ದಾರೆ. ಈ ವಿಚಾರ ತಿಳಿದ ಹೆಚ್‌ಡಬ್ಲ್ಯು ನ್ಯೂಸ್ ವರದಿಗಾರರು, ಇದರ ಅಸಲೀಯತ್ತೇನೆಂದು ತಿಳಿಯಲು ತಾವೇ ಒಬ್ಬರಿಂದ ಅಪ್ಲಿಕೇಶನ್ ಹಾಕಿಸಿದ್ದಾರೆ. ಈ ಅಪ್ಲಿಕೇಶನ್ ಮೋದಿ ಸಾಹೇಬರ 59 ನಿಮಿಷದ ಹಗರಣವನ್ನು ಬಯಲು ಮಾಡಿದೆ.

ಅಪ್ಲೇ ಮಾಡಿದ ವ್ಯಕ್ತಿಯಿಂದ ಪಾನ್ ನಂಬರ್, ಜಿಎಸ್‌ಟಿ ನಂಬರ್ ಅಷ್ಟೇ ಅಲ್ಲದೆ ಲಾಗಿನ್ ಐಡಿಯ ಪಾಸ್‌ರ‍್ಡ್ ಕೂಡ ಅಪ್ಲಿಕೇಷನ್‌ನಲ್ಲಿ ಪಡೆದುಕೊಂಡಿದ್ದಾರೆ. ಅಪ್ಲೇ ಮಾಡಿದ ಕೇವಲ 47 ನಿಮಿಷದಲ್ಲಿ ಲೋನ್‌ಗೆ 1,48,000ರೂ.ಗಳಿಗೆ ಅಪ್ರೂವಲ್ ಸಿಕ್ಕಿದೆ. ತಮಾಷೆಯೆಂದರೆ ಅಪ್ರುವಲ್‌ನಲ್ಲಿ ಇನ್ ಪ್ರಿನ್ಸಿಪಲ್ ಅಪ್ರೂವಲ್ (ತಾತ್ವಿಕ ಒಪ್ಪಿಗೆ) ಎಂದು ನೀಡಲಾಗಿದ್ದು, ಸಾಲವನ್ನು ಒರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಎಂಬ ಬ್ಯಾಂಕಿನಿಂದ ಪಡೆಯಬೇಕು ಎಂದು ಬ್ಯಾಂಕಿನ ವಿವರಗಳನ್ನೂ ಸಹ ಸೂಚಿಸಲಾಗಿತ್ತು. ಅಷ್ಟೇ ಅಲ್ಲದೆ ಈತ 1,180ರೂ ಗಳ ಡಿಡಿಯನ್ನು ಕ್ಯಾಪಿಟ ವರ್ಲ್ಡ್ ಪ್ಲಾಟ್‌ಫಾರ್ಮ ಪ್ರೈ. ಲಿ. ಎಂಬ ಖಾಸಗೀ ಕಂಪನಿಯ ಹೆಸರಿಗೆ ಕಟ್ಟಬೇಕೆಂದು ಸೂಚಿಸಲಾಗಿತ್ತು. ಸಾಮಾನ್ಯವಾಗಿ ಸರ್ಕಾರಿ ಸೌಲಭ್ಯಗಳನ್ನು ಪಡೆದರೆ ಸರ್ಕಾರಕ್ಕೆ ಡಿಡಿ ಕಟ್ಟುವುದು ಮಾಮೂಲಿ. ಆದರೆ ಈ ಸ್ಕೀಮ್‌ಗೆ ಮಾತ್ರ ಖಾಸಗಿ ಕಂಪನಿ ಹೆಸರಿನಲ್ಲಿ ಕಟ್ಟಬೇಕೆನ್ನುವುದೇ ಈ ಹಗರಣದ ಮೊದಲ ಹಂತ.

ಅಂದರೆ ಮೋದಿ ಸಾಹೇಬರು ಈ ಸ್ಕೀಮ್ ಮೂಲಕ ಖಾಸಗೀ ಕಂಪನಿಯ ಖಜಾನೆ ತುಂಬಿಸುವ ಪ್ಲಾನ್ ಮಾಡಿದ್ದಾರೆ ಎಂಬುದು ಕಣ್ಣೋಟಕ್ಕೆ ಕಾಣುವ ವಿಚಾರ. ಕೇವಲ ಒಂದು ಮಿಲಿಯನ್ ಅರ್ಜಿಗಳು ಬಂದರೂ 118 ಕೋಟಿ ರೂ.ಗಳು ಆ ಖಾಸಗಿ ಕಂಪೆನಿಗೆ ದಕ್ಕುತ್ತವೆ. ಪ್ರಧಾನಿ ಮೋದಿ ಈ ಸ್ಕೀಮ್ ಘೋಷಿಸಿದ ಮಾರನೆಯ ದಿನವೇ 23,582 ಕೋಟಿ ರೂ.ಗಳಷ್ಟು ಸಾಲ ನೀಡುವ 1.69 ಲಕ್ಷ ಅರ್ಜಿಗಳನ್ನು ಅಪ್ರೂವಲ್ ಮಾಡಲಾಗಿದೆ ಎಂದು ಘೋಷಿಸಲಾಗಿತ್ತು. ವಾಸ್ತವವೇನೆಂದರೆ ಅಲ್ಲಿಯವರೆಗೆ ಒಬ್ಬರಿಗೂ ಲೋನ್ ಹಣ ಸಿಕ್ಕಿರಲಿಲ್ಲ. ಈ ಲೆಕ್ಕವನ್ನು ಪ್ರಶ್ನಿಸಿದ ಕ್ಷಣಗಳಲ್ಲಿ ಮಾಹಿತಿಯನ್ನು ಅಳಿಸಿ ಹಾಕಿದ್ದು ಮತ್ತಷ್ಟು ಅನುಮಾನಗಳನ್ನು ಹುಟ್ಟು ಹಾಕಿತ್ತು.

ಅಂದಹಾಗೆ ರಫೇಲ್ ಹಗರಣದ ಮೂಲಕ ಅಂಬಾನಿಯ ಖಜಾನೆ ತುಂಬಿಸಹೊರಟಿದ್ದ ಮೋದಿ ಈ ಸ್ಕೀಮ್‌ಗೆ ಕೈಜೋಡಿಸಿದ್ದು ಇದೇ ಅಂಬಾನಿಯ ಆಪ್ತಮಿತ್ರ ಅಹಮದಾಬಾದ್ ವಿನೋದ್ ಮೋದ, ಜಿನಂದ್ ಶಾ ಮತ್ತು ಚಕ್ರಬೋಟ್ರಿ ಪಾಲುದಾರಿಕೆಯ ಕ್ಯಾಪಿಟಾ ವರ್ಲ್ಡ್ ಕಂಪನಿಯೊಂದಿಗೆ. ಈ ಕಂಪನಿ ಉದ್ಭವವಾಗಿದ್ದು ಮೋದಿ ಅಧಿಕಾರಕ್ಕೇರಿದ ಒಂದು ವರ್ಷದ ನಂತರ 2015ರಲ್ಲಿ. ಈ ಕಂಪನಿ ಆರಂಭಗೊಂಡ ಮೊದಲ ವರ್ಷ ಅಂದರೆ 2016ರಲ್ಲಿ ಇದರ ಆದಾಯ ಸೊನ್ನೆ ಮಾತ್ರ. ನಂತರ 2017ರಲ್ಲಿ 15.680 ರೂ. ಲಾಭ ಗಳಿಸಿತ್ತು. ಇನ್ನೊಂದು ಗಮನಿಸಬೇಕಾದ ವಿಷಯವೆಂದರೆ ಈ ಕಂಪನಿಯ ಶೇರ್‌ನಲ್ಲಿ ಎಸ್‌ಐಡಿಬಿಐ ಬ್ಯಾಂಕ್ ಸೇರಿದಂತೆ 9 ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಒಂದು ಶೇರ್‌ಗೆ 119.39 ರೂ.ಗಳಂತೆ 17.43.371 ಶೇರ್‌ಗಳಿಗೆ 22.5 ಕೋಟಿ ರೂ.ಗಳನ್ನು ಹೂಡಿಕೆ ಮಾಡಿವೆ.

ಇಷ್ಟೆಲ್ಲಾ ಹೂಡಿಕೆ ಮಾಡಿರುವ ಈ ಕಂಪನಿಯ ಲಾಭ 15.680 ಇದ್ದುದರಿಂದ ಮೋದಿ ಸಾಹೇಬರು ಈ ಕಂಪನಿಯನ್ನು ಮೇಲೆತ್ತುವ ಉಸ್ತುವಾರಿ ತೆಗೆದುಕೊಂಡಿದ್ದಾರೆ. ಇನ್ನೊಂದು ವಿಚಾರವೆಂದರೆ ಈ ಕಂಪನಿ ಆರಂಭಗೊಂಡು 3 ವರ್ಷವಾಗಿದ್ದು ಇದರ ಸಿಇಓಗಳು ಮೂರು ಭಾರಿ ಬದಲಾಗಿದ್ದರೆ. ಜಿನಾಬ್ ವೈ ಶಾ, ವಿಕಾಸ್ ಮನಿಲಾಲ್ ಷಾ, ಅಖಿಲ್ ಹಂಡಾ ಈ ಮೂವರೂ ಕ್ಯಾಪಿಟಾವರ್ಲ್ಡ್ನ ಸಿಇಓಗಳಾಗಿದ್ದು, ಇವರು 2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಪರ ಪ್ರಚಾರದ ಬ್ಯಾಟಿಂಗ್ ಮಾಡಿದ್ದರು ಎಂಬುದು ವಿಶೇಷ.

ಹಾಗಾಗಿ ಮೋದಿ ಪರ ಬ್ಯಾಟಿಂಗ್ ಮಾಡಿದ್ದ ಸಿಇಓಗಳು, ಮಿತ್ರ ಅಂಬಾನಿಯ ಸ್ನೇಹಿತರ ಕಂಪನಿಯನ್ನು ಉಳಿಸುವ ಸಲುವಗಿ 59 ನಿಮಿಷದಲ್ಲಿ ಸಾಲ ಸೌಲಭ್ಯದ ಮೋದಿಯ ಸ್ಕೀಮ್‌ಗೆ ಲಕ್ಷಾಂತರ ಜನ ಅಪ್ಲಿಕೇಷನ್ ಹಾಕಿದ್ದು ತಲಾ 1.180ರೂ ಡಿಡಿಯಂತೆ ಬಿಲಿಯನ್‌ಗಟ್ಟಲೆ ಸಾರ್ವಜನಿಕರ ಹಣ ಕ್ಯಾಪಿಟಾವರ್ಲ್ಡ್ನ ಪಾಲಿಗೆ ದಯಪಾಲಿಸಿದೆ, ಅಷ್ಟೇ ಅಲ್ಲದೆ ಅಪ್ಲೇ ಮಾಡಿದವರ ವ್ಯವಹಾರದ ಎಲ್ಲಾ ಡಿಟೈಲ್ಸ್ಗಳನ್ನು ಈ ಕಂಪನಿ ಪಡೆದುಕೊಂಡಿದೆ. ಅಪ್ರುವಲ್‌ನಲ್ಲಿಯೇ ಇರುವಂತೆ ಅದು ತಾತ್ವಿಕ ಒಪ್ಪಿಗೆಯಾಗಿದ್ದು, ಸಾಲ ನೀಡಬಹುದೆಂದಷ್ಟೇ ಸೂಚಿಸಿದ್ದು ಸಾಲ ದೊರೆತೇಬಿಡುತ್ತದೆ ಎಂದೇನೂ ಇಲ್ಲವಾದ್ದರಿಂದ ಲೋನ್‌ನ ಆಸೆಯನ್ನು ಮರೆಯುವುದೇ ಸೂಕ್ತವೆಂಬಂತೆ ಪರೋಕ್ಷವಾಗಿ ಕಂಪನಿ ತಿಳಿಸಿದೆ. ಒಟ್ಟಿನಲ್ಲಿ ಇದುವರೆಗೂ ಸರ್ಕಾರದ ಹಣದಿಂದ ಕಾರ್ಪೊರೇಟ್‌ಗಳನ್ನು ಬೆಳೆಸುತ್ತಿದ್ದ ದಾರಿಗಿಂತ ಭಿನ್ನವಾಗಿ ನೇರವಾಗಿ ಸಾರ್ವಜನಿಕರ ಜೇಬಿನಿಂದ ಕಾರ್ಪೊರೇಟ್ ಖಜಾನೆ ತುಂಬಿಸಿರುವ ಮೊದಲ ಹಗರಣ ಪ್ರಧಾನ ಕಾರ್ಪೊರೇಟ್ ಸೇವಕ ಮೋದಿಯದ್ದು. ಮುದ್ರಾ, ಫಸಲ್ ಬಿಮಾ ಯೋಜನೆಗಳಿಂದ ಜನರನ್ನು ಯಾಮಾರಿಸಿದ್ದ ಮೋದಿ ಈ ಹಗರಣದಲ್ಲಿ ನೇರವಾಗಿ ಜನರ ಜೇಬಿಗೆ ಕತ್ತರಿಹಾಕಿ ಯಾಮಾರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...