Homeಚಳವಳಿಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕಾಗಿ ಕೆಲಸ ಕಳೆದುಕೊಂಡಿದ್ದ 56 ಮಹಿಳೆಯರಿಗೆ ಕೊನೆಗೂ ಸಿಕ್ಕ ಜಯ

ಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕಾಗಿ ಕೆಲಸ ಕಳೆದುಕೊಂಡಿದ್ದ 56 ಮಹಿಳೆಯರಿಗೆ ಕೊನೆಗೂ ಸಿಕ್ಕ ಜಯ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪ ಹೊರಿಸಿದ ಕಾರಣಕ್ಕಾಗಿ ಉದ್ಯೋಗ ಕಳೆದುಕೊಂಡಿದ್ದ ಎನ್‌ಐಎಫ್‌ಟಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ಹೈದರಾಬಾದ್‌ನ ಎಲ್ಲಾ 56 ಮಹಿಳಾ ಹೌಸ್ ಕೀಪೀಂಗ್ ಸಿಬ್ಬಂದಿಗಳನ್ನು ಗುರುವಾರದಿಂದ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಮೂಲಕ ಮಹಿಳೆಯರು ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ. ಎನ್‌ಐಎಫ್‌ಟಿ ಕ್ಯಾಂಪಸ್‌ನಲ್ಲಿ ಸದ್ಯ ಸ್ಟೆನೋಗ್ರಾಫರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಡಿ ಶ್ರೀನಿವಾಸ್ ರೆಡ್ಡಿ ಎಂಬುವವರು ಲೈಂಗಿಕ ಕಿರುಕುಳದ ನೀಡಿದ್ದರು ಎಂದು ಆರೋಪಿಸಿ ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದರು.

ಶ್ರೀನಿವಾಸ್ ಎಂಬುವವರು ನಮ್ಮ ಒಪ್ಪಿಗೆಯಿಲ್ಲದೆ ಮಹಿಳೆಯರ ಚಿತ್ರಗಳನ್ನು ತೆಗೆಯುತ್ತಿದ್ದರು ಮತ್ತು ಅವರೊಂದಿಗೆ ಮಲಗಲು ಹೇಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಆರೋಪಿಸಿ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮಹಿಳಾ ಸಿಬ್ಬಂದಿ ಶ್ರೀನಿವಾಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ದೂರು ನೀಡಿದ್ದರು. ನಂತರ ಕ್ಯಾಂಪಸ್‌ನಲ್ಲಿ ಆ ಮಹಿಳೆಯರಿಗೆ ತೊಂದರೆ ಉಂಟಾಯಿತು. ಇನ್ನೂ ಹೆಚ್ಚಾದ ಕಿರುಕುಳವನ್ನು ಸಹಿಸಲಾಗದೆ, ಕಳೆದ ವರ್ಷದಲ್ಲಿ 2-3 ಮಹಿಳೆಯರು ತಮ್ಮ ಕೆಲಸವನ್ನು ತ್ಯಜಿಸಿದ್ದರು.

ತದನಂತರ ಮಹಿಳೆಯರು ದೂರನ್ನು ಹಿಂಪಡೆಯುವಂತೆಯೂ, ರಾಜಿಯಾಗುವಂತೆಯೂ ಅವರ ಮೇಲೆ ಎನ್‌ಐಎಫ್‌ಟಿ ಆಡಳಿತ ಮಂಡಳಿ ತೀವ್ರ ಒತ್ತಡ ಹಾಕಿತು. ಇಲ್ಲದಿದ್ದರೆ ನಿಮ್ಮ ಕೆಲಸಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಹೆದರಿಸಲಾಯಿತು. ಜೊತೆಗೆ ಬೆದರಿಕೆಗಳಿಗೆ ಕಾರ್ಮಿಕರ ಬಗ್ಗದೇ ಹೋರಾಟ ಮುಂದುವರೆಸಿದರು. ಆಗ ಎನ್ಐಎಫ್ಟಿ ಅಧಿಕಾರಿಗಳು ಹೊಸ ಟೆಂಡರ್ ಅನ್ನು ಕರೆಯುವ ನಿರ್ಧಾರ ಮಾಡಿದರು. ಇದು ಗುತ್ತಿಗೆದಾರನಿಗೆ ಕ್ಯಾಂಪಸ್ ನಲ್ಲಿ ಪ್ರತಿಭಟಿಸುತ್ತಿರುವ ಎಲ್ಲಾ ಕಾರ್ಮಿಕರನ್ನು ವಜಾಗೊಳಿಸಲು ಮತ್ತು ಹೊಸ ಉದ್ಯೋಗಿಗಳನ್ನು ನಿಯೋಜಿಸಲು ಸಹಕಾರಿಯಾಗಿತ್ತು.

ಪ್ರತಿಭಟನೆಯ ನೇತೃತ್ವವನ್ನು ಅವರ ಮೇಲ್ವಿಚಾರಕಿ ರತ್ನ ಕುಮಾರಿ ವಹಿಸಿದ್ದರು, ಅವರು ಕಳೆದ ಅಕ್ಟೋಬರ್‌ನಲ್ಲಿ ಆರೋಪಿ ಶ್ರೀನಿವಾಸ್ ರೆಡ್ಡಿ ವಿರುದ್ಧ ಪೊಲೀಸರಿಗೆ ಮೊದಲು ದೂರು ನೀಡಿದ್ದರು. ನಂತರ ಅವರು ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ದೂರು ದಾಖಲಿಸಿದರು ಮಾತ್ರವಲ್ಲ ಹೋರಾಟವನ್ನು ಇನ್ನೂ ತೀವ್ರಗೊಳಿಸಿದರು. ಹತ್ತು ತಿಂಗಳ ಅವಿರತ ಹೋರಾಟ ಮತ್ತು ತನಿಖೆಯ ನಂತರ ಕಾರ್ಮಿಕ ಇಲಾಖೆ ಮಹಿಳೆಯರ ಪರ ತೀರ್ಪು ನೀಡಿದೆ.

ಈಗಿರುವ ಟೆಂಡರ್‌ ಅಮಾನ್ಯವಾಗುವಂತೆ ಮತ್ತು ಎಲ್ಲಾ ಮಹಿಳೆಯರು ಎನ್‌ಐಎಫ್‌ಟಿಯಲ್ಲಿ ತಮ್ಮ ಉದ್ಯೋಗಕ್ಕೆ ಮರಳುವಂತೆ ನೋಡಿಕೊಳ್ಳುವುದಾಗಿ ರಾಜ್ಯ ಕಾರ್ಮಿಕ ಆಯುಕ್ತರು ಮೌಖಿಕವಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಈಗ ಅಸ್ತಿತ್ವಕ್ಕೆ ಬರುವ ಹೊಸ ಕೆಲಸದ ಕಾಂಟ್ರಾಕ್ಟ್ ಮುಂದಿನ ಎರಡು ವರ್ಷಗಳವರೆಗೆ ಮಾನ್ಯವಾಗಿರುತ್ತದೆ. ಈ ಕುರಿತು ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿರುವ ರತ್ನ ಕುಮಾರಿ, ಬುಧವಾರ ಮಧ್ಯಾಹ್ನ ಏಜೆನ್ಸಿ ಗುತ್ತಿಗೆದಾರರಿಂದ ಕರೆ ಬಂದಿದ್ದು, ಎಲ್ಲಾ ಮಹಿಳಾ ಸಿಬ್ಬಂದಿಗಳು ಗುರುವಾರ ಕ್ಯಾಂಪಸ್‌ಗೆ ಮರಳುವಂತೆ ಕೇಳಿಕೊಂಡಿದ್ದಾರೆ.

“ನಾವೆಲ್ಲರೂ ಈಗ ಕ್ಯಾಂಪಸ್‌ಗೆ ಮರಳಿದ್ದೇವೆ ಮತ್ತು ನಮ್ಮ ಕರ್ತವ್ಯವನ್ನು ಮುಂದುವರಿಸುತ್ತಿದ್ದೇವೆ. ಸದ್ಯಕ್ಕೆ ನಮ್ಮ ಉದ್ಯೋಗಗಳು ಸುರಕ್ಷಿತವೆಂದು ತೋರುತ್ತದೆ. ಆದರೆ ಎನ್‌ಐಎಫ್‌ಟಿಯ ಯಾವುದೇ ಅಧಿಕಾರಿಗಳು ಇನ್ನೂ ನಮ್ಮನ್ನು ಸಂಪರ್ಕಿಸಿಲ್ಲ. ಶ್ರೀನಿವಾಸ್ ರೆಡ್ಡಿ ಕೂಡ ಇಲ್ಲಿಯೇ ಇದ್ದು ಪ್ರಸ್ತುತ ನಿರ್ದೇಶಕರೊಂದಿಗೆ ಸಭೆಯಲ್ಲಿದ್ದಾರೆ ಎಂದು ನಾವು ತಿಳಿದುಕೊಂಡಿದ್ದೇವೆ. ಎನ್‌ಐಎಫ್‌ಟಿಯ ನಿರ್ದೇಶಕರು ದೆಹಲಿಯಿಂದ ಹೈದರಾಬಾದ್‌ಗೆ ಗುರುವಾರ ಬರಲಿದ್ದು ಈ ಬಗ್ಗೆ ಪರಿಶೀಲನೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಅಮಾಯಕ ಮಹಿಳೆಯರು ತಮ್ಮದಲ್ಲದ ತಪ್ಪಿಗೆ 10 ತಿಂಗಳು ಕಿರುಕುಳ ಅನುಭವಿಸಬೇಕಾದರೂ ಅವರ ದಿಟ್ಟ ಹೋರಾಟದ ಕಾರಣದಿಂದ ಮತ್ತೆ ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ಕೃಪೆ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...