Homeಚಳವಳಿಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕಾಗಿ ಕೆಲಸ ಕಳೆದುಕೊಂಡಿದ್ದ 56 ಮಹಿಳೆಯರಿಗೆ ಕೊನೆಗೂ ಸಿಕ್ಕ ಜಯ

ಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕಾಗಿ ಕೆಲಸ ಕಳೆದುಕೊಂಡಿದ್ದ 56 ಮಹಿಳೆಯರಿಗೆ ಕೊನೆಗೂ ಸಿಕ್ಕ ಜಯ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪ ಹೊರಿಸಿದ ಕಾರಣಕ್ಕಾಗಿ ಉದ್ಯೋಗ ಕಳೆದುಕೊಂಡಿದ್ದ ಎನ್‌ಐಎಫ್‌ಟಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ಹೈದರಾಬಾದ್‌ನ ಎಲ್ಲಾ 56 ಮಹಿಳಾ ಹೌಸ್ ಕೀಪೀಂಗ್ ಸಿಬ್ಬಂದಿಗಳನ್ನು ಗುರುವಾರದಿಂದ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಮೂಲಕ ಮಹಿಳೆಯರು ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ. ಎನ್‌ಐಎಫ್‌ಟಿ ಕ್ಯಾಂಪಸ್‌ನಲ್ಲಿ ಸದ್ಯ ಸ್ಟೆನೋಗ್ರಾಫರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಡಿ ಶ್ರೀನಿವಾಸ್ ರೆಡ್ಡಿ ಎಂಬುವವರು ಲೈಂಗಿಕ ಕಿರುಕುಳದ ನೀಡಿದ್ದರು ಎಂದು ಆರೋಪಿಸಿ ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದರು.

ಶ್ರೀನಿವಾಸ್ ಎಂಬುವವರು ನಮ್ಮ ಒಪ್ಪಿಗೆಯಿಲ್ಲದೆ ಮಹಿಳೆಯರ ಚಿತ್ರಗಳನ್ನು ತೆಗೆಯುತ್ತಿದ್ದರು ಮತ್ತು ಅವರೊಂದಿಗೆ ಮಲಗಲು ಹೇಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಆರೋಪಿಸಿ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮಹಿಳಾ ಸಿಬ್ಬಂದಿ ಶ್ರೀನಿವಾಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ದೂರು ನೀಡಿದ್ದರು. ನಂತರ ಕ್ಯಾಂಪಸ್‌ನಲ್ಲಿ ಆ ಮಹಿಳೆಯರಿಗೆ ತೊಂದರೆ ಉಂಟಾಯಿತು. ಇನ್ನೂ ಹೆಚ್ಚಾದ ಕಿರುಕುಳವನ್ನು ಸಹಿಸಲಾಗದೆ, ಕಳೆದ ವರ್ಷದಲ್ಲಿ 2-3 ಮಹಿಳೆಯರು ತಮ್ಮ ಕೆಲಸವನ್ನು ತ್ಯಜಿಸಿದ್ದರು.

ತದನಂತರ ಮಹಿಳೆಯರು ದೂರನ್ನು ಹಿಂಪಡೆಯುವಂತೆಯೂ, ರಾಜಿಯಾಗುವಂತೆಯೂ ಅವರ ಮೇಲೆ ಎನ್‌ಐಎಫ್‌ಟಿ ಆಡಳಿತ ಮಂಡಳಿ ತೀವ್ರ ಒತ್ತಡ ಹಾಕಿತು. ಇಲ್ಲದಿದ್ದರೆ ನಿಮ್ಮ ಕೆಲಸಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಹೆದರಿಸಲಾಯಿತು. ಜೊತೆಗೆ ಬೆದರಿಕೆಗಳಿಗೆ ಕಾರ್ಮಿಕರ ಬಗ್ಗದೇ ಹೋರಾಟ ಮುಂದುವರೆಸಿದರು. ಆಗ ಎನ್ಐಎಫ್ಟಿ ಅಧಿಕಾರಿಗಳು ಹೊಸ ಟೆಂಡರ್ ಅನ್ನು ಕರೆಯುವ ನಿರ್ಧಾರ ಮಾಡಿದರು. ಇದು ಗುತ್ತಿಗೆದಾರನಿಗೆ ಕ್ಯಾಂಪಸ್ ನಲ್ಲಿ ಪ್ರತಿಭಟಿಸುತ್ತಿರುವ ಎಲ್ಲಾ ಕಾರ್ಮಿಕರನ್ನು ವಜಾಗೊಳಿಸಲು ಮತ್ತು ಹೊಸ ಉದ್ಯೋಗಿಗಳನ್ನು ನಿಯೋಜಿಸಲು ಸಹಕಾರಿಯಾಗಿತ್ತು.

ಪ್ರತಿಭಟನೆಯ ನೇತೃತ್ವವನ್ನು ಅವರ ಮೇಲ್ವಿಚಾರಕಿ ರತ್ನ ಕುಮಾರಿ ವಹಿಸಿದ್ದರು, ಅವರು ಕಳೆದ ಅಕ್ಟೋಬರ್‌ನಲ್ಲಿ ಆರೋಪಿ ಶ್ರೀನಿವಾಸ್ ರೆಡ್ಡಿ ವಿರುದ್ಧ ಪೊಲೀಸರಿಗೆ ಮೊದಲು ದೂರು ನೀಡಿದ್ದರು. ನಂತರ ಅವರು ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ದೂರು ದಾಖಲಿಸಿದರು ಮಾತ್ರವಲ್ಲ ಹೋರಾಟವನ್ನು ಇನ್ನೂ ತೀವ್ರಗೊಳಿಸಿದರು. ಹತ್ತು ತಿಂಗಳ ಅವಿರತ ಹೋರಾಟ ಮತ್ತು ತನಿಖೆಯ ನಂತರ ಕಾರ್ಮಿಕ ಇಲಾಖೆ ಮಹಿಳೆಯರ ಪರ ತೀರ್ಪು ನೀಡಿದೆ.

ಈಗಿರುವ ಟೆಂಡರ್‌ ಅಮಾನ್ಯವಾಗುವಂತೆ ಮತ್ತು ಎಲ್ಲಾ ಮಹಿಳೆಯರು ಎನ್‌ಐಎಫ್‌ಟಿಯಲ್ಲಿ ತಮ್ಮ ಉದ್ಯೋಗಕ್ಕೆ ಮರಳುವಂತೆ ನೋಡಿಕೊಳ್ಳುವುದಾಗಿ ರಾಜ್ಯ ಕಾರ್ಮಿಕ ಆಯುಕ್ತರು ಮೌಖಿಕವಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಈಗ ಅಸ್ತಿತ್ವಕ್ಕೆ ಬರುವ ಹೊಸ ಕೆಲಸದ ಕಾಂಟ್ರಾಕ್ಟ್ ಮುಂದಿನ ಎರಡು ವರ್ಷಗಳವರೆಗೆ ಮಾನ್ಯವಾಗಿರುತ್ತದೆ. ಈ ಕುರಿತು ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿರುವ ರತ್ನ ಕುಮಾರಿ, ಬುಧವಾರ ಮಧ್ಯಾಹ್ನ ಏಜೆನ್ಸಿ ಗುತ್ತಿಗೆದಾರರಿಂದ ಕರೆ ಬಂದಿದ್ದು, ಎಲ್ಲಾ ಮಹಿಳಾ ಸಿಬ್ಬಂದಿಗಳು ಗುರುವಾರ ಕ್ಯಾಂಪಸ್‌ಗೆ ಮರಳುವಂತೆ ಕೇಳಿಕೊಂಡಿದ್ದಾರೆ.

“ನಾವೆಲ್ಲರೂ ಈಗ ಕ್ಯಾಂಪಸ್‌ಗೆ ಮರಳಿದ್ದೇವೆ ಮತ್ತು ನಮ್ಮ ಕರ್ತವ್ಯವನ್ನು ಮುಂದುವರಿಸುತ್ತಿದ್ದೇವೆ. ಸದ್ಯಕ್ಕೆ ನಮ್ಮ ಉದ್ಯೋಗಗಳು ಸುರಕ್ಷಿತವೆಂದು ತೋರುತ್ತದೆ. ಆದರೆ ಎನ್‌ಐಎಫ್‌ಟಿಯ ಯಾವುದೇ ಅಧಿಕಾರಿಗಳು ಇನ್ನೂ ನಮ್ಮನ್ನು ಸಂಪರ್ಕಿಸಿಲ್ಲ. ಶ್ರೀನಿವಾಸ್ ರೆಡ್ಡಿ ಕೂಡ ಇಲ್ಲಿಯೇ ಇದ್ದು ಪ್ರಸ್ತುತ ನಿರ್ದೇಶಕರೊಂದಿಗೆ ಸಭೆಯಲ್ಲಿದ್ದಾರೆ ಎಂದು ನಾವು ತಿಳಿದುಕೊಂಡಿದ್ದೇವೆ. ಎನ್‌ಐಎಫ್‌ಟಿಯ ನಿರ್ದೇಶಕರು ದೆಹಲಿಯಿಂದ ಹೈದರಾಬಾದ್‌ಗೆ ಗುರುವಾರ ಬರಲಿದ್ದು ಈ ಬಗ್ಗೆ ಪರಿಶೀಲನೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಅಮಾಯಕ ಮಹಿಳೆಯರು ತಮ್ಮದಲ್ಲದ ತಪ್ಪಿಗೆ 10 ತಿಂಗಳು ಕಿರುಕುಳ ಅನುಭವಿಸಬೇಕಾದರೂ ಅವರ ದಿಟ್ಟ ಹೋರಾಟದ ಕಾರಣದಿಂದ ಮತ್ತೆ ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ಕೃಪೆ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...