Homeಚಳವಳಿಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕಾಗಿ ಕೆಲಸ ಕಳೆದುಕೊಂಡಿದ್ದ 56 ಮಹಿಳೆಯರಿಗೆ ಕೊನೆಗೂ ಸಿಕ್ಕ ಜಯ

ಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕಾಗಿ ಕೆಲಸ ಕಳೆದುಕೊಂಡಿದ್ದ 56 ಮಹಿಳೆಯರಿಗೆ ಕೊನೆಗೂ ಸಿಕ್ಕ ಜಯ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪ ಹೊರಿಸಿದ ಕಾರಣಕ್ಕಾಗಿ ಉದ್ಯೋಗ ಕಳೆದುಕೊಂಡಿದ್ದ ಎನ್‌ಐಎಫ್‌ಟಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ಹೈದರಾಬಾದ್‌ನ ಎಲ್ಲಾ 56 ಮಹಿಳಾ ಹೌಸ್ ಕೀಪೀಂಗ್ ಸಿಬ್ಬಂದಿಗಳನ್ನು ಗುರುವಾರದಿಂದ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಮೂಲಕ ಮಹಿಳೆಯರು ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ. ಎನ್‌ಐಎಫ್‌ಟಿ ಕ್ಯಾಂಪಸ್‌ನಲ್ಲಿ ಸದ್ಯ ಸ್ಟೆನೋಗ್ರಾಫರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಡಿ ಶ್ರೀನಿವಾಸ್ ರೆಡ್ಡಿ ಎಂಬುವವರು ಲೈಂಗಿಕ ಕಿರುಕುಳದ ನೀಡಿದ್ದರು ಎಂದು ಆರೋಪಿಸಿ ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದರು.

ಶ್ರೀನಿವಾಸ್ ಎಂಬುವವರು ನಮ್ಮ ಒಪ್ಪಿಗೆಯಿಲ್ಲದೆ ಮಹಿಳೆಯರ ಚಿತ್ರಗಳನ್ನು ತೆಗೆಯುತ್ತಿದ್ದರು ಮತ್ತು ಅವರೊಂದಿಗೆ ಮಲಗಲು ಹೇಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಆರೋಪಿಸಿ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮಹಿಳಾ ಸಿಬ್ಬಂದಿ ಶ್ರೀನಿವಾಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ದೂರು ನೀಡಿದ್ದರು. ನಂತರ ಕ್ಯಾಂಪಸ್‌ನಲ್ಲಿ ಆ ಮಹಿಳೆಯರಿಗೆ ತೊಂದರೆ ಉಂಟಾಯಿತು. ಇನ್ನೂ ಹೆಚ್ಚಾದ ಕಿರುಕುಳವನ್ನು ಸಹಿಸಲಾಗದೆ, ಕಳೆದ ವರ್ಷದಲ್ಲಿ 2-3 ಮಹಿಳೆಯರು ತಮ್ಮ ಕೆಲಸವನ್ನು ತ್ಯಜಿಸಿದ್ದರು.

ತದನಂತರ ಮಹಿಳೆಯರು ದೂರನ್ನು ಹಿಂಪಡೆಯುವಂತೆಯೂ, ರಾಜಿಯಾಗುವಂತೆಯೂ ಅವರ ಮೇಲೆ ಎನ್‌ಐಎಫ್‌ಟಿ ಆಡಳಿತ ಮಂಡಳಿ ತೀವ್ರ ಒತ್ತಡ ಹಾಕಿತು. ಇಲ್ಲದಿದ್ದರೆ ನಿಮ್ಮ ಕೆಲಸಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಹೆದರಿಸಲಾಯಿತು. ಜೊತೆಗೆ ಬೆದರಿಕೆಗಳಿಗೆ ಕಾರ್ಮಿಕರ ಬಗ್ಗದೇ ಹೋರಾಟ ಮುಂದುವರೆಸಿದರು. ಆಗ ಎನ್ಐಎಫ್ಟಿ ಅಧಿಕಾರಿಗಳು ಹೊಸ ಟೆಂಡರ್ ಅನ್ನು ಕರೆಯುವ ನಿರ್ಧಾರ ಮಾಡಿದರು. ಇದು ಗುತ್ತಿಗೆದಾರನಿಗೆ ಕ್ಯಾಂಪಸ್ ನಲ್ಲಿ ಪ್ರತಿಭಟಿಸುತ್ತಿರುವ ಎಲ್ಲಾ ಕಾರ್ಮಿಕರನ್ನು ವಜಾಗೊಳಿಸಲು ಮತ್ತು ಹೊಸ ಉದ್ಯೋಗಿಗಳನ್ನು ನಿಯೋಜಿಸಲು ಸಹಕಾರಿಯಾಗಿತ್ತು.

ಪ್ರತಿಭಟನೆಯ ನೇತೃತ್ವವನ್ನು ಅವರ ಮೇಲ್ವಿಚಾರಕಿ ರತ್ನ ಕುಮಾರಿ ವಹಿಸಿದ್ದರು, ಅವರು ಕಳೆದ ಅಕ್ಟೋಬರ್‌ನಲ್ಲಿ ಆರೋಪಿ ಶ್ರೀನಿವಾಸ್ ರೆಡ್ಡಿ ವಿರುದ್ಧ ಪೊಲೀಸರಿಗೆ ಮೊದಲು ದೂರು ನೀಡಿದ್ದರು. ನಂತರ ಅವರು ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ದೂರು ದಾಖಲಿಸಿದರು ಮಾತ್ರವಲ್ಲ ಹೋರಾಟವನ್ನು ಇನ್ನೂ ತೀವ್ರಗೊಳಿಸಿದರು. ಹತ್ತು ತಿಂಗಳ ಅವಿರತ ಹೋರಾಟ ಮತ್ತು ತನಿಖೆಯ ನಂತರ ಕಾರ್ಮಿಕ ಇಲಾಖೆ ಮಹಿಳೆಯರ ಪರ ತೀರ್ಪು ನೀಡಿದೆ.

ಈಗಿರುವ ಟೆಂಡರ್‌ ಅಮಾನ್ಯವಾಗುವಂತೆ ಮತ್ತು ಎಲ್ಲಾ ಮಹಿಳೆಯರು ಎನ್‌ಐಎಫ್‌ಟಿಯಲ್ಲಿ ತಮ್ಮ ಉದ್ಯೋಗಕ್ಕೆ ಮರಳುವಂತೆ ನೋಡಿಕೊಳ್ಳುವುದಾಗಿ ರಾಜ್ಯ ಕಾರ್ಮಿಕ ಆಯುಕ್ತರು ಮೌಖಿಕವಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಈಗ ಅಸ್ತಿತ್ವಕ್ಕೆ ಬರುವ ಹೊಸ ಕೆಲಸದ ಕಾಂಟ್ರಾಕ್ಟ್ ಮುಂದಿನ ಎರಡು ವರ್ಷಗಳವರೆಗೆ ಮಾನ್ಯವಾಗಿರುತ್ತದೆ. ಈ ಕುರಿತು ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿರುವ ರತ್ನ ಕುಮಾರಿ, ಬುಧವಾರ ಮಧ್ಯಾಹ್ನ ಏಜೆನ್ಸಿ ಗುತ್ತಿಗೆದಾರರಿಂದ ಕರೆ ಬಂದಿದ್ದು, ಎಲ್ಲಾ ಮಹಿಳಾ ಸಿಬ್ಬಂದಿಗಳು ಗುರುವಾರ ಕ್ಯಾಂಪಸ್‌ಗೆ ಮರಳುವಂತೆ ಕೇಳಿಕೊಂಡಿದ್ದಾರೆ.

“ನಾವೆಲ್ಲರೂ ಈಗ ಕ್ಯಾಂಪಸ್‌ಗೆ ಮರಳಿದ್ದೇವೆ ಮತ್ತು ನಮ್ಮ ಕರ್ತವ್ಯವನ್ನು ಮುಂದುವರಿಸುತ್ತಿದ್ದೇವೆ. ಸದ್ಯಕ್ಕೆ ನಮ್ಮ ಉದ್ಯೋಗಗಳು ಸುರಕ್ಷಿತವೆಂದು ತೋರುತ್ತದೆ. ಆದರೆ ಎನ್‌ಐಎಫ್‌ಟಿಯ ಯಾವುದೇ ಅಧಿಕಾರಿಗಳು ಇನ್ನೂ ನಮ್ಮನ್ನು ಸಂಪರ್ಕಿಸಿಲ್ಲ. ಶ್ರೀನಿವಾಸ್ ರೆಡ್ಡಿ ಕೂಡ ಇಲ್ಲಿಯೇ ಇದ್ದು ಪ್ರಸ್ತುತ ನಿರ್ದೇಶಕರೊಂದಿಗೆ ಸಭೆಯಲ್ಲಿದ್ದಾರೆ ಎಂದು ನಾವು ತಿಳಿದುಕೊಂಡಿದ್ದೇವೆ. ಎನ್‌ಐಎಫ್‌ಟಿಯ ನಿರ್ದೇಶಕರು ದೆಹಲಿಯಿಂದ ಹೈದರಾಬಾದ್‌ಗೆ ಗುರುವಾರ ಬರಲಿದ್ದು ಈ ಬಗ್ಗೆ ಪರಿಶೀಲನೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಅಮಾಯಕ ಮಹಿಳೆಯರು ತಮ್ಮದಲ್ಲದ ತಪ್ಪಿಗೆ 10 ತಿಂಗಳು ಕಿರುಕುಳ ಅನುಭವಿಸಬೇಕಾದರೂ ಅವರ ದಿಟ್ಟ ಹೋರಾಟದ ಕಾರಣದಿಂದ ಮತ್ತೆ ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ಕೃಪೆ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...