Homeಚಳವಳಿಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕಾಗಿ ಕೆಲಸ ಕಳೆದುಕೊಂಡಿದ್ದ 56 ಮಹಿಳೆಯರಿಗೆ ಕೊನೆಗೂ ಸಿಕ್ಕ ಜಯ

ಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕಾಗಿ ಕೆಲಸ ಕಳೆದುಕೊಂಡಿದ್ದ 56 ಮಹಿಳೆಯರಿಗೆ ಕೊನೆಗೂ ಸಿಕ್ಕ ಜಯ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪ ಹೊರಿಸಿದ ಕಾರಣಕ್ಕಾಗಿ ಉದ್ಯೋಗ ಕಳೆದುಕೊಂಡಿದ್ದ ಎನ್‌ಐಎಫ್‌ಟಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ಹೈದರಾಬಾದ್‌ನ ಎಲ್ಲಾ 56 ಮಹಿಳಾ ಹೌಸ್ ಕೀಪೀಂಗ್ ಸಿಬ್ಬಂದಿಗಳನ್ನು ಗುರುವಾರದಿಂದ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಮೂಲಕ ಮಹಿಳೆಯರು ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ. ಎನ್‌ಐಎಫ್‌ಟಿ ಕ್ಯಾಂಪಸ್‌ನಲ್ಲಿ ಸದ್ಯ ಸ್ಟೆನೋಗ್ರಾಫರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಡಿ ಶ್ರೀನಿವಾಸ್ ರೆಡ್ಡಿ ಎಂಬುವವರು ಲೈಂಗಿಕ ಕಿರುಕುಳದ ನೀಡಿದ್ದರು ಎಂದು ಆರೋಪಿಸಿ ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದರು.

ಶ್ರೀನಿವಾಸ್ ಎಂಬುವವರು ನಮ್ಮ ಒಪ್ಪಿಗೆಯಿಲ್ಲದೆ ಮಹಿಳೆಯರ ಚಿತ್ರಗಳನ್ನು ತೆಗೆಯುತ್ತಿದ್ದರು ಮತ್ತು ಅವರೊಂದಿಗೆ ಮಲಗಲು ಹೇಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಆರೋಪಿಸಿ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮಹಿಳಾ ಸಿಬ್ಬಂದಿ ಶ್ರೀನಿವಾಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ದೂರು ನೀಡಿದ್ದರು. ನಂತರ ಕ್ಯಾಂಪಸ್‌ನಲ್ಲಿ ಆ ಮಹಿಳೆಯರಿಗೆ ತೊಂದರೆ ಉಂಟಾಯಿತು. ಇನ್ನೂ ಹೆಚ್ಚಾದ ಕಿರುಕುಳವನ್ನು ಸಹಿಸಲಾಗದೆ, ಕಳೆದ ವರ್ಷದಲ್ಲಿ 2-3 ಮಹಿಳೆಯರು ತಮ್ಮ ಕೆಲಸವನ್ನು ತ್ಯಜಿಸಿದ್ದರು.

ತದನಂತರ ಮಹಿಳೆಯರು ದೂರನ್ನು ಹಿಂಪಡೆಯುವಂತೆಯೂ, ರಾಜಿಯಾಗುವಂತೆಯೂ ಅವರ ಮೇಲೆ ಎನ್‌ಐಎಫ್‌ಟಿ ಆಡಳಿತ ಮಂಡಳಿ ತೀವ್ರ ಒತ್ತಡ ಹಾಕಿತು. ಇಲ್ಲದಿದ್ದರೆ ನಿಮ್ಮ ಕೆಲಸಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಹೆದರಿಸಲಾಯಿತು. ಜೊತೆಗೆ ಬೆದರಿಕೆಗಳಿಗೆ ಕಾರ್ಮಿಕರ ಬಗ್ಗದೇ ಹೋರಾಟ ಮುಂದುವರೆಸಿದರು. ಆಗ ಎನ್ಐಎಫ್ಟಿ ಅಧಿಕಾರಿಗಳು ಹೊಸ ಟೆಂಡರ್ ಅನ್ನು ಕರೆಯುವ ನಿರ್ಧಾರ ಮಾಡಿದರು. ಇದು ಗುತ್ತಿಗೆದಾರನಿಗೆ ಕ್ಯಾಂಪಸ್ ನಲ್ಲಿ ಪ್ರತಿಭಟಿಸುತ್ತಿರುವ ಎಲ್ಲಾ ಕಾರ್ಮಿಕರನ್ನು ವಜಾಗೊಳಿಸಲು ಮತ್ತು ಹೊಸ ಉದ್ಯೋಗಿಗಳನ್ನು ನಿಯೋಜಿಸಲು ಸಹಕಾರಿಯಾಗಿತ್ತು.

ಪ್ರತಿಭಟನೆಯ ನೇತೃತ್ವವನ್ನು ಅವರ ಮೇಲ್ವಿಚಾರಕಿ ರತ್ನ ಕುಮಾರಿ ವಹಿಸಿದ್ದರು, ಅವರು ಕಳೆದ ಅಕ್ಟೋಬರ್‌ನಲ್ಲಿ ಆರೋಪಿ ಶ್ರೀನಿವಾಸ್ ರೆಡ್ಡಿ ವಿರುದ್ಧ ಪೊಲೀಸರಿಗೆ ಮೊದಲು ದೂರು ನೀಡಿದ್ದರು. ನಂತರ ಅವರು ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ದೂರು ದಾಖಲಿಸಿದರು ಮಾತ್ರವಲ್ಲ ಹೋರಾಟವನ್ನು ಇನ್ನೂ ತೀವ್ರಗೊಳಿಸಿದರು. ಹತ್ತು ತಿಂಗಳ ಅವಿರತ ಹೋರಾಟ ಮತ್ತು ತನಿಖೆಯ ನಂತರ ಕಾರ್ಮಿಕ ಇಲಾಖೆ ಮಹಿಳೆಯರ ಪರ ತೀರ್ಪು ನೀಡಿದೆ.

ಈಗಿರುವ ಟೆಂಡರ್‌ ಅಮಾನ್ಯವಾಗುವಂತೆ ಮತ್ತು ಎಲ್ಲಾ ಮಹಿಳೆಯರು ಎನ್‌ಐಎಫ್‌ಟಿಯಲ್ಲಿ ತಮ್ಮ ಉದ್ಯೋಗಕ್ಕೆ ಮರಳುವಂತೆ ನೋಡಿಕೊಳ್ಳುವುದಾಗಿ ರಾಜ್ಯ ಕಾರ್ಮಿಕ ಆಯುಕ್ತರು ಮೌಖಿಕವಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಈಗ ಅಸ್ತಿತ್ವಕ್ಕೆ ಬರುವ ಹೊಸ ಕೆಲಸದ ಕಾಂಟ್ರಾಕ್ಟ್ ಮುಂದಿನ ಎರಡು ವರ್ಷಗಳವರೆಗೆ ಮಾನ್ಯವಾಗಿರುತ್ತದೆ. ಈ ಕುರಿತು ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿರುವ ರತ್ನ ಕುಮಾರಿ, ಬುಧವಾರ ಮಧ್ಯಾಹ್ನ ಏಜೆನ್ಸಿ ಗುತ್ತಿಗೆದಾರರಿಂದ ಕರೆ ಬಂದಿದ್ದು, ಎಲ್ಲಾ ಮಹಿಳಾ ಸಿಬ್ಬಂದಿಗಳು ಗುರುವಾರ ಕ್ಯಾಂಪಸ್‌ಗೆ ಮರಳುವಂತೆ ಕೇಳಿಕೊಂಡಿದ್ದಾರೆ.

“ನಾವೆಲ್ಲರೂ ಈಗ ಕ್ಯಾಂಪಸ್‌ಗೆ ಮರಳಿದ್ದೇವೆ ಮತ್ತು ನಮ್ಮ ಕರ್ತವ್ಯವನ್ನು ಮುಂದುವರಿಸುತ್ತಿದ್ದೇವೆ. ಸದ್ಯಕ್ಕೆ ನಮ್ಮ ಉದ್ಯೋಗಗಳು ಸುರಕ್ಷಿತವೆಂದು ತೋರುತ್ತದೆ. ಆದರೆ ಎನ್‌ಐಎಫ್‌ಟಿಯ ಯಾವುದೇ ಅಧಿಕಾರಿಗಳು ಇನ್ನೂ ನಮ್ಮನ್ನು ಸಂಪರ್ಕಿಸಿಲ್ಲ. ಶ್ರೀನಿವಾಸ್ ರೆಡ್ಡಿ ಕೂಡ ಇಲ್ಲಿಯೇ ಇದ್ದು ಪ್ರಸ್ತುತ ನಿರ್ದೇಶಕರೊಂದಿಗೆ ಸಭೆಯಲ್ಲಿದ್ದಾರೆ ಎಂದು ನಾವು ತಿಳಿದುಕೊಂಡಿದ್ದೇವೆ. ಎನ್‌ಐಎಫ್‌ಟಿಯ ನಿರ್ದೇಶಕರು ದೆಹಲಿಯಿಂದ ಹೈದರಾಬಾದ್‌ಗೆ ಗುರುವಾರ ಬರಲಿದ್ದು ಈ ಬಗ್ಗೆ ಪರಿಶೀಲನೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಅಮಾಯಕ ಮಹಿಳೆಯರು ತಮ್ಮದಲ್ಲದ ತಪ್ಪಿಗೆ 10 ತಿಂಗಳು ಕಿರುಕುಳ ಅನುಭವಿಸಬೇಕಾದರೂ ಅವರ ದಿಟ್ಟ ಹೋರಾಟದ ಕಾರಣದಿಂದ ಮತ್ತೆ ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ಕೃಪೆ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...