Homeಚಳವಳಿಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕಾಗಿ ಕೆಲಸ ಕಳೆದುಕೊಂಡಿದ್ದ 56 ಮಹಿಳೆಯರಿಗೆ ಕೊನೆಗೂ ಸಿಕ್ಕ ಜಯ

ಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕಾಗಿ ಕೆಲಸ ಕಳೆದುಕೊಂಡಿದ್ದ 56 ಮಹಿಳೆಯರಿಗೆ ಕೊನೆಗೂ ಸಿಕ್ಕ ಜಯ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪ ಹೊರಿಸಿದ ಕಾರಣಕ್ಕಾಗಿ ಉದ್ಯೋಗ ಕಳೆದುಕೊಂಡಿದ್ದ ಎನ್‌ಐಎಫ್‌ಟಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ಹೈದರಾಬಾದ್‌ನ ಎಲ್ಲಾ 56 ಮಹಿಳಾ ಹೌಸ್ ಕೀಪೀಂಗ್ ಸಿಬ್ಬಂದಿಗಳನ್ನು ಗುರುವಾರದಿಂದ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಮೂಲಕ ಮಹಿಳೆಯರು ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ. ಎನ್‌ಐಎಫ್‌ಟಿ ಕ್ಯಾಂಪಸ್‌ನಲ್ಲಿ ಸದ್ಯ ಸ್ಟೆನೋಗ್ರಾಫರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಡಿ ಶ್ರೀನಿವಾಸ್ ರೆಡ್ಡಿ ಎಂಬುವವರು ಲೈಂಗಿಕ ಕಿರುಕುಳದ ನೀಡಿದ್ದರು ಎಂದು ಆರೋಪಿಸಿ ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದರು.

ಶ್ರೀನಿವಾಸ್ ಎಂಬುವವರು ನಮ್ಮ ಒಪ್ಪಿಗೆಯಿಲ್ಲದೆ ಮಹಿಳೆಯರ ಚಿತ್ರಗಳನ್ನು ತೆಗೆಯುತ್ತಿದ್ದರು ಮತ್ತು ಅವರೊಂದಿಗೆ ಮಲಗಲು ಹೇಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಆರೋಪಿಸಿ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮಹಿಳಾ ಸಿಬ್ಬಂದಿ ಶ್ರೀನಿವಾಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ದೂರು ನೀಡಿದ್ದರು. ನಂತರ ಕ್ಯಾಂಪಸ್‌ನಲ್ಲಿ ಆ ಮಹಿಳೆಯರಿಗೆ ತೊಂದರೆ ಉಂಟಾಯಿತು. ಇನ್ನೂ ಹೆಚ್ಚಾದ ಕಿರುಕುಳವನ್ನು ಸಹಿಸಲಾಗದೆ, ಕಳೆದ ವರ್ಷದಲ್ಲಿ 2-3 ಮಹಿಳೆಯರು ತಮ್ಮ ಕೆಲಸವನ್ನು ತ್ಯಜಿಸಿದ್ದರು.

ತದನಂತರ ಮಹಿಳೆಯರು ದೂರನ್ನು ಹಿಂಪಡೆಯುವಂತೆಯೂ, ರಾಜಿಯಾಗುವಂತೆಯೂ ಅವರ ಮೇಲೆ ಎನ್‌ಐಎಫ್‌ಟಿ ಆಡಳಿತ ಮಂಡಳಿ ತೀವ್ರ ಒತ್ತಡ ಹಾಕಿತು. ಇಲ್ಲದಿದ್ದರೆ ನಿಮ್ಮ ಕೆಲಸಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಹೆದರಿಸಲಾಯಿತು. ಜೊತೆಗೆ ಬೆದರಿಕೆಗಳಿಗೆ ಕಾರ್ಮಿಕರ ಬಗ್ಗದೇ ಹೋರಾಟ ಮುಂದುವರೆಸಿದರು. ಆಗ ಎನ್ಐಎಫ್ಟಿ ಅಧಿಕಾರಿಗಳು ಹೊಸ ಟೆಂಡರ್ ಅನ್ನು ಕರೆಯುವ ನಿರ್ಧಾರ ಮಾಡಿದರು. ಇದು ಗುತ್ತಿಗೆದಾರನಿಗೆ ಕ್ಯಾಂಪಸ್ ನಲ್ಲಿ ಪ್ರತಿಭಟಿಸುತ್ತಿರುವ ಎಲ್ಲಾ ಕಾರ್ಮಿಕರನ್ನು ವಜಾಗೊಳಿಸಲು ಮತ್ತು ಹೊಸ ಉದ್ಯೋಗಿಗಳನ್ನು ನಿಯೋಜಿಸಲು ಸಹಕಾರಿಯಾಗಿತ್ತು.

ಪ್ರತಿಭಟನೆಯ ನೇತೃತ್ವವನ್ನು ಅವರ ಮೇಲ್ವಿಚಾರಕಿ ರತ್ನ ಕುಮಾರಿ ವಹಿಸಿದ್ದರು, ಅವರು ಕಳೆದ ಅಕ್ಟೋಬರ್‌ನಲ್ಲಿ ಆರೋಪಿ ಶ್ರೀನಿವಾಸ್ ರೆಡ್ಡಿ ವಿರುದ್ಧ ಪೊಲೀಸರಿಗೆ ಮೊದಲು ದೂರು ನೀಡಿದ್ದರು. ನಂತರ ಅವರು ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ದೂರು ದಾಖಲಿಸಿದರು ಮಾತ್ರವಲ್ಲ ಹೋರಾಟವನ್ನು ಇನ್ನೂ ತೀವ್ರಗೊಳಿಸಿದರು. ಹತ್ತು ತಿಂಗಳ ಅವಿರತ ಹೋರಾಟ ಮತ್ತು ತನಿಖೆಯ ನಂತರ ಕಾರ್ಮಿಕ ಇಲಾಖೆ ಮಹಿಳೆಯರ ಪರ ತೀರ್ಪು ನೀಡಿದೆ.

ಈಗಿರುವ ಟೆಂಡರ್‌ ಅಮಾನ್ಯವಾಗುವಂತೆ ಮತ್ತು ಎಲ್ಲಾ ಮಹಿಳೆಯರು ಎನ್‌ಐಎಫ್‌ಟಿಯಲ್ಲಿ ತಮ್ಮ ಉದ್ಯೋಗಕ್ಕೆ ಮರಳುವಂತೆ ನೋಡಿಕೊಳ್ಳುವುದಾಗಿ ರಾಜ್ಯ ಕಾರ್ಮಿಕ ಆಯುಕ್ತರು ಮೌಖಿಕವಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಈಗ ಅಸ್ತಿತ್ವಕ್ಕೆ ಬರುವ ಹೊಸ ಕೆಲಸದ ಕಾಂಟ್ರಾಕ್ಟ್ ಮುಂದಿನ ಎರಡು ವರ್ಷಗಳವರೆಗೆ ಮಾನ್ಯವಾಗಿರುತ್ತದೆ. ಈ ಕುರಿತು ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿರುವ ರತ್ನ ಕುಮಾರಿ, ಬುಧವಾರ ಮಧ್ಯಾಹ್ನ ಏಜೆನ್ಸಿ ಗುತ್ತಿಗೆದಾರರಿಂದ ಕರೆ ಬಂದಿದ್ದು, ಎಲ್ಲಾ ಮಹಿಳಾ ಸಿಬ್ಬಂದಿಗಳು ಗುರುವಾರ ಕ್ಯಾಂಪಸ್‌ಗೆ ಮರಳುವಂತೆ ಕೇಳಿಕೊಂಡಿದ್ದಾರೆ.

“ನಾವೆಲ್ಲರೂ ಈಗ ಕ್ಯಾಂಪಸ್‌ಗೆ ಮರಳಿದ್ದೇವೆ ಮತ್ತು ನಮ್ಮ ಕರ್ತವ್ಯವನ್ನು ಮುಂದುವರಿಸುತ್ತಿದ್ದೇವೆ. ಸದ್ಯಕ್ಕೆ ನಮ್ಮ ಉದ್ಯೋಗಗಳು ಸುರಕ್ಷಿತವೆಂದು ತೋರುತ್ತದೆ. ಆದರೆ ಎನ್‌ಐಎಫ್‌ಟಿಯ ಯಾವುದೇ ಅಧಿಕಾರಿಗಳು ಇನ್ನೂ ನಮ್ಮನ್ನು ಸಂಪರ್ಕಿಸಿಲ್ಲ. ಶ್ರೀನಿವಾಸ್ ರೆಡ್ಡಿ ಕೂಡ ಇಲ್ಲಿಯೇ ಇದ್ದು ಪ್ರಸ್ತುತ ನಿರ್ದೇಶಕರೊಂದಿಗೆ ಸಭೆಯಲ್ಲಿದ್ದಾರೆ ಎಂದು ನಾವು ತಿಳಿದುಕೊಂಡಿದ್ದೇವೆ. ಎನ್‌ಐಎಫ್‌ಟಿಯ ನಿರ್ದೇಶಕರು ದೆಹಲಿಯಿಂದ ಹೈದರಾಬಾದ್‌ಗೆ ಗುರುವಾರ ಬರಲಿದ್ದು ಈ ಬಗ್ಗೆ ಪರಿಶೀಲನೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಅಮಾಯಕ ಮಹಿಳೆಯರು ತಮ್ಮದಲ್ಲದ ತಪ್ಪಿಗೆ 10 ತಿಂಗಳು ಕಿರುಕುಳ ಅನುಭವಿಸಬೇಕಾದರೂ ಅವರ ದಿಟ್ಟ ಹೋರಾಟದ ಕಾರಣದಿಂದ ಮತ್ತೆ ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ಕೃಪೆ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....