Homeಚಳವಳಿಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕಾಗಿ ಕೆಲಸ ಕಳೆದುಕೊಂಡಿದ್ದ 56 ಮಹಿಳೆಯರಿಗೆ ಕೊನೆಗೂ ಸಿಕ್ಕ ಜಯ

ಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕಾಗಿ ಕೆಲಸ ಕಳೆದುಕೊಂಡಿದ್ದ 56 ಮಹಿಳೆಯರಿಗೆ ಕೊನೆಗೂ ಸಿಕ್ಕ ಜಯ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪ ಹೊರಿಸಿದ ಕಾರಣಕ್ಕಾಗಿ ಉದ್ಯೋಗ ಕಳೆದುಕೊಂಡಿದ್ದ ಎನ್‌ಐಎಫ್‌ಟಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ಹೈದರಾಬಾದ್‌ನ ಎಲ್ಲಾ 56 ಮಹಿಳಾ ಹೌಸ್ ಕೀಪೀಂಗ್ ಸಿಬ್ಬಂದಿಗಳನ್ನು ಗುರುವಾರದಿಂದ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಮೂಲಕ ಮಹಿಳೆಯರು ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ. ಎನ್‌ಐಎಫ್‌ಟಿ ಕ್ಯಾಂಪಸ್‌ನಲ್ಲಿ ಸದ್ಯ ಸ್ಟೆನೋಗ್ರಾಫರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಡಿ ಶ್ರೀನಿವಾಸ್ ರೆಡ್ಡಿ ಎಂಬುವವರು ಲೈಂಗಿಕ ಕಿರುಕುಳದ ನೀಡಿದ್ದರು ಎಂದು ಆರೋಪಿಸಿ ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದರು.

ಶ್ರೀನಿವಾಸ್ ಎಂಬುವವರು ನಮ್ಮ ಒಪ್ಪಿಗೆಯಿಲ್ಲದೆ ಮಹಿಳೆಯರ ಚಿತ್ರಗಳನ್ನು ತೆಗೆಯುತ್ತಿದ್ದರು ಮತ್ತು ಅವರೊಂದಿಗೆ ಮಲಗಲು ಹೇಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಆರೋಪಿಸಿ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮಹಿಳಾ ಸಿಬ್ಬಂದಿ ಶ್ರೀನಿವಾಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ದೂರು ನೀಡಿದ್ದರು. ನಂತರ ಕ್ಯಾಂಪಸ್‌ನಲ್ಲಿ ಆ ಮಹಿಳೆಯರಿಗೆ ತೊಂದರೆ ಉಂಟಾಯಿತು. ಇನ್ನೂ ಹೆಚ್ಚಾದ ಕಿರುಕುಳವನ್ನು ಸಹಿಸಲಾಗದೆ, ಕಳೆದ ವರ್ಷದಲ್ಲಿ 2-3 ಮಹಿಳೆಯರು ತಮ್ಮ ಕೆಲಸವನ್ನು ತ್ಯಜಿಸಿದ್ದರು.

ತದನಂತರ ಮಹಿಳೆಯರು ದೂರನ್ನು ಹಿಂಪಡೆಯುವಂತೆಯೂ, ರಾಜಿಯಾಗುವಂತೆಯೂ ಅವರ ಮೇಲೆ ಎನ್‌ಐಎಫ್‌ಟಿ ಆಡಳಿತ ಮಂಡಳಿ ತೀವ್ರ ಒತ್ತಡ ಹಾಕಿತು. ಇಲ್ಲದಿದ್ದರೆ ನಿಮ್ಮ ಕೆಲಸಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಹೆದರಿಸಲಾಯಿತು. ಜೊತೆಗೆ ಬೆದರಿಕೆಗಳಿಗೆ ಕಾರ್ಮಿಕರ ಬಗ್ಗದೇ ಹೋರಾಟ ಮುಂದುವರೆಸಿದರು. ಆಗ ಎನ್ಐಎಫ್ಟಿ ಅಧಿಕಾರಿಗಳು ಹೊಸ ಟೆಂಡರ್ ಅನ್ನು ಕರೆಯುವ ನಿರ್ಧಾರ ಮಾಡಿದರು. ಇದು ಗುತ್ತಿಗೆದಾರನಿಗೆ ಕ್ಯಾಂಪಸ್ ನಲ್ಲಿ ಪ್ರತಿಭಟಿಸುತ್ತಿರುವ ಎಲ್ಲಾ ಕಾರ್ಮಿಕರನ್ನು ವಜಾಗೊಳಿಸಲು ಮತ್ತು ಹೊಸ ಉದ್ಯೋಗಿಗಳನ್ನು ನಿಯೋಜಿಸಲು ಸಹಕಾರಿಯಾಗಿತ್ತು.

ಪ್ರತಿಭಟನೆಯ ನೇತೃತ್ವವನ್ನು ಅವರ ಮೇಲ್ವಿಚಾರಕಿ ರತ್ನ ಕುಮಾರಿ ವಹಿಸಿದ್ದರು, ಅವರು ಕಳೆದ ಅಕ್ಟೋಬರ್‌ನಲ್ಲಿ ಆರೋಪಿ ಶ್ರೀನಿವಾಸ್ ರೆಡ್ಡಿ ವಿರುದ್ಧ ಪೊಲೀಸರಿಗೆ ಮೊದಲು ದೂರು ನೀಡಿದ್ದರು. ನಂತರ ಅವರು ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ದೂರು ದಾಖಲಿಸಿದರು ಮಾತ್ರವಲ್ಲ ಹೋರಾಟವನ್ನು ಇನ್ನೂ ತೀವ್ರಗೊಳಿಸಿದರು. ಹತ್ತು ತಿಂಗಳ ಅವಿರತ ಹೋರಾಟ ಮತ್ತು ತನಿಖೆಯ ನಂತರ ಕಾರ್ಮಿಕ ಇಲಾಖೆ ಮಹಿಳೆಯರ ಪರ ತೀರ್ಪು ನೀಡಿದೆ.

ಈಗಿರುವ ಟೆಂಡರ್‌ ಅಮಾನ್ಯವಾಗುವಂತೆ ಮತ್ತು ಎಲ್ಲಾ ಮಹಿಳೆಯರು ಎನ್‌ಐಎಫ್‌ಟಿಯಲ್ಲಿ ತಮ್ಮ ಉದ್ಯೋಗಕ್ಕೆ ಮರಳುವಂತೆ ನೋಡಿಕೊಳ್ಳುವುದಾಗಿ ರಾಜ್ಯ ಕಾರ್ಮಿಕ ಆಯುಕ್ತರು ಮೌಖಿಕವಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಈಗ ಅಸ್ತಿತ್ವಕ್ಕೆ ಬರುವ ಹೊಸ ಕೆಲಸದ ಕಾಂಟ್ರಾಕ್ಟ್ ಮುಂದಿನ ಎರಡು ವರ್ಷಗಳವರೆಗೆ ಮಾನ್ಯವಾಗಿರುತ್ತದೆ. ಈ ಕುರಿತು ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿರುವ ರತ್ನ ಕುಮಾರಿ, ಬುಧವಾರ ಮಧ್ಯಾಹ್ನ ಏಜೆನ್ಸಿ ಗುತ್ತಿಗೆದಾರರಿಂದ ಕರೆ ಬಂದಿದ್ದು, ಎಲ್ಲಾ ಮಹಿಳಾ ಸಿಬ್ಬಂದಿಗಳು ಗುರುವಾರ ಕ್ಯಾಂಪಸ್‌ಗೆ ಮರಳುವಂತೆ ಕೇಳಿಕೊಂಡಿದ್ದಾರೆ.

“ನಾವೆಲ್ಲರೂ ಈಗ ಕ್ಯಾಂಪಸ್‌ಗೆ ಮರಳಿದ್ದೇವೆ ಮತ್ತು ನಮ್ಮ ಕರ್ತವ್ಯವನ್ನು ಮುಂದುವರಿಸುತ್ತಿದ್ದೇವೆ. ಸದ್ಯಕ್ಕೆ ನಮ್ಮ ಉದ್ಯೋಗಗಳು ಸುರಕ್ಷಿತವೆಂದು ತೋರುತ್ತದೆ. ಆದರೆ ಎನ್‌ಐಎಫ್‌ಟಿಯ ಯಾವುದೇ ಅಧಿಕಾರಿಗಳು ಇನ್ನೂ ನಮ್ಮನ್ನು ಸಂಪರ್ಕಿಸಿಲ್ಲ. ಶ್ರೀನಿವಾಸ್ ರೆಡ್ಡಿ ಕೂಡ ಇಲ್ಲಿಯೇ ಇದ್ದು ಪ್ರಸ್ತುತ ನಿರ್ದೇಶಕರೊಂದಿಗೆ ಸಭೆಯಲ್ಲಿದ್ದಾರೆ ಎಂದು ನಾವು ತಿಳಿದುಕೊಂಡಿದ್ದೇವೆ. ಎನ್‌ಐಎಫ್‌ಟಿಯ ನಿರ್ದೇಶಕರು ದೆಹಲಿಯಿಂದ ಹೈದರಾಬಾದ್‌ಗೆ ಗುರುವಾರ ಬರಲಿದ್ದು ಈ ಬಗ್ಗೆ ಪರಿಶೀಲನೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಅಮಾಯಕ ಮಹಿಳೆಯರು ತಮ್ಮದಲ್ಲದ ತಪ್ಪಿಗೆ 10 ತಿಂಗಳು ಕಿರುಕುಳ ಅನುಭವಿಸಬೇಕಾದರೂ ಅವರ ದಿಟ್ಟ ಹೋರಾಟದ ಕಾರಣದಿಂದ ಮತ್ತೆ ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ಕೃಪೆ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...