Homeಚಳವಳಿಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕಾಗಿ ಕೆಲಸ ಕಳೆದುಕೊಂಡಿದ್ದ 56 ಮಹಿಳೆಯರಿಗೆ ಕೊನೆಗೂ ಸಿಕ್ಕ ಜಯ

ಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕಾಗಿ ಕೆಲಸ ಕಳೆದುಕೊಂಡಿದ್ದ 56 ಮಹಿಳೆಯರಿಗೆ ಕೊನೆಗೂ ಸಿಕ್ಕ ಜಯ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪ ಹೊರಿಸಿದ ಕಾರಣಕ್ಕಾಗಿ ಉದ್ಯೋಗ ಕಳೆದುಕೊಂಡಿದ್ದ ಎನ್‌ಐಎಫ್‌ಟಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ಹೈದರಾಬಾದ್‌ನ ಎಲ್ಲಾ 56 ಮಹಿಳಾ ಹೌಸ್ ಕೀಪೀಂಗ್ ಸಿಬ್ಬಂದಿಗಳನ್ನು ಗುರುವಾರದಿಂದ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಮೂಲಕ ಮಹಿಳೆಯರು ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ. ಎನ್‌ಐಎಫ್‌ಟಿ ಕ್ಯಾಂಪಸ್‌ನಲ್ಲಿ ಸದ್ಯ ಸ್ಟೆನೋಗ್ರಾಫರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಡಿ ಶ್ರೀನಿವಾಸ್ ರೆಡ್ಡಿ ಎಂಬುವವರು ಲೈಂಗಿಕ ಕಿರುಕುಳದ ನೀಡಿದ್ದರು ಎಂದು ಆರೋಪಿಸಿ ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದರು.

ಶ್ರೀನಿವಾಸ್ ಎಂಬುವವರು ನಮ್ಮ ಒಪ್ಪಿಗೆಯಿಲ್ಲದೆ ಮಹಿಳೆಯರ ಚಿತ್ರಗಳನ್ನು ತೆಗೆಯುತ್ತಿದ್ದರು ಮತ್ತು ಅವರೊಂದಿಗೆ ಮಲಗಲು ಹೇಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಆರೋಪಿಸಿ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮಹಿಳಾ ಸಿಬ್ಬಂದಿ ಶ್ರೀನಿವಾಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ದೂರು ನೀಡಿದ್ದರು. ನಂತರ ಕ್ಯಾಂಪಸ್‌ನಲ್ಲಿ ಆ ಮಹಿಳೆಯರಿಗೆ ತೊಂದರೆ ಉಂಟಾಯಿತು. ಇನ್ನೂ ಹೆಚ್ಚಾದ ಕಿರುಕುಳವನ್ನು ಸಹಿಸಲಾಗದೆ, ಕಳೆದ ವರ್ಷದಲ್ಲಿ 2-3 ಮಹಿಳೆಯರು ತಮ್ಮ ಕೆಲಸವನ್ನು ತ್ಯಜಿಸಿದ್ದರು.

ತದನಂತರ ಮಹಿಳೆಯರು ದೂರನ್ನು ಹಿಂಪಡೆಯುವಂತೆಯೂ, ರಾಜಿಯಾಗುವಂತೆಯೂ ಅವರ ಮೇಲೆ ಎನ್‌ಐಎಫ್‌ಟಿ ಆಡಳಿತ ಮಂಡಳಿ ತೀವ್ರ ಒತ್ತಡ ಹಾಕಿತು. ಇಲ್ಲದಿದ್ದರೆ ನಿಮ್ಮ ಕೆಲಸಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಹೆದರಿಸಲಾಯಿತು. ಜೊತೆಗೆ ಬೆದರಿಕೆಗಳಿಗೆ ಕಾರ್ಮಿಕರ ಬಗ್ಗದೇ ಹೋರಾಟ ಮುಂದುವರೆಸಿದರು. ಆಗ ಎನ್ಐಎಫ್ಟಿ ಅಧಿಕಾರಿಗಳು ಹೊಸ ಟೆಂಡರ್ ಅನ್ನು ಕರೆಯುವ ನಿರ್ಧಾರ ಮಾಡಿದರು. ಇದು ಗುತ್ತಿಗೆದಾರನಿಗೆ ಕ್ಯಾಂಪಸ್ ನಲ್ಲಿ ಪ್ರತಿಭಟಿಸುತ್ತಿರುವ ಎಲ್ಲಾ ಕಾರ್ಮಿಕರನ್ನು ವಜಾಗೊಳಿಸಲು ಮತ್ತು ಹೊಸ ಉದ್ಯೋಗಿಗಳನ್ನು ನಿಯೋಜಿಸಲು ಸಹಕಾರಿಯಾಗಿತ್ತು.

ಪ್ರತಿಭಟನೆಯ ನೇತೃತ್ವವನ್ನು ಅವರ ಮೇಲ್ವಿಚಾರಕಿ ರತ್ನ ಕುಮಾರಿ ವಹಿಸಿದ್ದರು, ಅವರು ಕಳೆದ ಅಕ್ಟೋಬರ್‌ನಲ್ಲಿ ಆರೋಪಿ ಶ್ರೀನಿವಾಸ್ ರೆಡ್ಡಿ ವಿರುದ್ಧ ಪೊಲೀಸರಿಗೆ ಮೊದಲು ದೂರು ನೀಡಿದ್ದರು. ನಂತರ ಅವರು ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ದೂರು ದಾಖಲಿಸಿದರು ಮಾತ್ರವಲ್ಲ ಹೋರಾಟವನ್ನು ಇನ್ನೂ ತೀವ್ರಗೊಳಿಸಿದರು. ಹತ್ತು ತಿಂಗಳ ಅವಿರತ ಹೋರಾಟ ಮತ್ತು ತನಿಖೆಯ ನಂತರ ಕಾರ್ಮಿಕ ಇಲಾಖೆ ಮಹಿಳೆಯರ ಪರ ತೀರ್ಪು ನೀಡಿದೆ.

ಈಗಿರುವ ಟೆಂಡರ್‌ ಅಮಾನ್ಯವಾಗುವಂತೆ ಮತ್ತು ಎಲ್ಲಾ ಮಹಿಳೆಯರು ಎನ್‌ಐಎಫ್‌ಟಿಯಲ್ಲಿ ತಮ್ಮ ಉದ್ಯೋಗಕ್ಕೆ ಮರಳುವಂತೆ ನೋಡಿಕೊಳ್ಳುವುದಾಗಿ ರಾಜ್ಯ ಕಾರ್ಮಿಕ ಆಯುಕ್ತರು ಮೌಖಿಕವಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಈಗ ಅಸ್ತಿತ್ವಕ್ಕೆ ಬರುವ ಹೊಸ ಕೆಲಸದ ಕಾಂಟ್ರಾಕ್ಟ್ ಮುಂದಿನ ಎರಡು ವರ್ಷಗಳವರೆಗೆ ಮಾನ್ಯವಾಗಿರುತ್ತದೆ. ಈ ಕುರಿತು ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿರುವ ರತ್ನ ಕುಮಾರಿ, ಬುಧವಾರ ಮಧ್ಯಾಹ್ನ ಏಜೆನ್ಸಿ ಗುತ್ತಿಗೆದಾರರಿಂದ ಕರೆ ಬಂದಿದ್ದು, ಎಲ್ಲಾ ಮಹಿಳಾ ಸಿಬ್ಬಂದಿಗಳು ಗುರುವಾರ ಕ್ಯಾಂಪಸ್‌ಗೆ ಮರಳುವಂತೆ ಕೇಳಿಕೊಂಡಿದ್ದಾರೆ.

“ನಾವೆಲ್ಲರೂ ಈಗ ಕ್ಯಾಂಪಸ್‌ಗೆ ಮರಳಿದ್ದೇವೆ ಮತ್ತು ನಮ್ಮ ಕರ್ತವ್ಯವನ್ನು ಮುಂದುವರಿಸುತ್ತಿದ್ದೇವೆ. ಸದ್ಯಕ್ಕೆ ನಮ್ಮ ಉದ್ಯೋಗಗಳು ಸುರಕ್ಷಿತವೆಂದು ತೋರುತ್ತದೆ. ಆದರೆ ಎನ್‌ಐಎಫ್‌ಟಿಯ ಯಾವುದೇ ಅಧಿಕಾರಿಗಳು ಇನ್ನೂ ನಮ್ಮನ್ನು ಸಂಪರ್ಕಿಸಿಲ್ಲ. ಶ್ರೀನಿವಾಸ್ ರೆಡ್ಡಿ ಕೂಡ ಇಲ್ಲಿಯೇ ಇದ್ದು ಪ್ರಸ್ತುತ ನಿರ್ದೇಶಕರೊಂದಿಗೆ ಸಭೆಯಲ್ಲಿದ್ದಾರೆ ಎಂದು ನಾವು ತಿಳಿದುಕೊಂಡಿದ್ದೇವೆ. ಎನ್‌ಐಎಫ್‌ಟಿಯ ನಿರ್ದೇಶಕರು ದೆಹಲಿಯಿಂದ ಹೈದರಾಬಾದ್‌ಗೆ ಗುರುವಾರ ಬರಲಿದ್ದು ಈ ಬಗ್ಗೆ ಪರಿಶೀಲನೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಅಮಾಯಕ ಮಹಿಳೆಯರು ತಮ್ಮದಲ್ಲದ ತಪ್ಪಿಗೆ 10 ತಿಂಗಳು ಕಿರುಕುಳ ಅನುಭವಿಸಬೇಕಾದರೂ ಅವರ ದಿಟ್ಟ ಹೋರಾಟದ ಕಾರಣದಿಂದ ಮತ್ತೆ ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ಕೃಪೆ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...