Homeರಾಜಕೀಯ56 ಇಂಚು ಎದೆ ಮಾಡಿದ 59 ನಿಮಿಷದ ಹಗರಣ

56 ಇಂಚು ಎದೆ ಮಾಡಿದ 59 ನಿಮಿಷದ ಹಗರಣ

- Advertisement -
- Advertisement -

ಸೋಮಶೇಖರ್ ಚಲ್ಯ |

ಭಾರತದ ಪ್ರಧಾನ ಸೇವಕ ನರೇಂದ್ರ ಮೋದಿಯವರು ಸಾಮಾನ್ಯರ ಸೇವೆಯನ್ನು ಬದಿಗಿಟ್ಟು ಕಾರ್ಪೊರೇಟ್ ಖದೀಮರ ಸೇವೆಯಲ್ಲಿ ನಿರತರಾಗಿದ್ದಾರೆಂಬ ಆರೋಪಕ್ಕೆ ಕಾರಣಗಳಿದ್ದವು. ಆದರೆ ನಿರ್ದಿಷ್ಟ ಹಗರಣಗಳಾಗಿ ಹೊರಬಿದ್ದಿರಲಿಲ್ಲ. ಆದರೆ ಅವು ಈಗ ವಾರಕ್ಕೊಂದರಂತೆ ಎಕ್ಸ್ಪೋಸ್ ಆಗುತ್ತಿವೆ. ಮೋದಿಯವರ ಹಗರಣ ಖಾತೆಗಳಲ್ಲಿರುವ ರಫೇಲ್ ಹಗರಣ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನಾ ಹಗರಣಗಳಂತಹವುಗಳ ಜೊತೆಗೆ ಹೊಸದೊಂದು ಹಗರಣ ಸೇರ್ಪಡೆಯಾಗಿದೆ. ಅದೂ ನಿಮಿಷದ ಲೆಕ್ಕದ್ದು.

ಕೆಲವು ಕಂಪನಿಗಳು ವಿಶೇಷ ಆಫರ್‌ಗಳ ಸ್ಕ್ರಾಚ್‌ ಕಾರ್ಡ್ಗಳನ್ನು ನೀಡುತ್ತವೆ. ಸ್ಕ್ರಾಚ್ ಮಾಡಿ ನೋಡಿದರೆ, ಕೆಲವು ಕಾರ್ಡ್ಗಳಲ್ಲಿ ಬೆಟರ್ ಲಕ್ ನೆಕ್ಸ್ಟ್ ಟೈಮ್ ಎಂದಿರುತ್ತವೆ. ಇದೂ ಸಹಾ ಅಂತಹದೊಂದು ‘ಭರ್ಜರಿ ಆಫರ್’. ಮೋದಿ ಸಾಹೇಬರು ಪ್ರಜೆಗಳಿಗೆ ನವೆಂಬರ್ 2ರಂದು ದೀಪಾವಳಿಯ ಭರ್ಜರಿ ಆಫರ್ ಘೋಷಿಸಿದ್ದಾರೆಂದು ಕೆಲವು ಮಾಧ್ಯಮಗಳು ತಮ್ಮ ಸ್ವಾಮಿನಿಷ್ಟೆಯನ್ನು ಪ್ರದರ್ಶಿಸಿದ್ದವು. ಆದರೆ ಅದೀಗ ಜನರ ಪಾಲಿಗೆ ದೀಪಾವಳಿಯ ಟುಸ್ ಪಟಾಕಿಯಾದಂತಿದ್ದರೂ ಕಾರ್ಪೊರೇಟ್‌ಗಳ ಖಾತೆ ತುಂಬಿ ತುಳುಕುವಂತಾಗಿದೆ.

‘ಕೇಂದ್ರ ಸರ್ಕಾರ ಕೈಗೊಂಡಿರುವ 12 ಪ್ರಮುಖ ಯೋಜನೆಗಳು ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ(ಎಂಎಸ್‌ಎಂಇ)ಗಳಿಗೆ ವರದಾನವಾಗಲಿದೆ. ಅದರಲ್ಲಿ ಪ್ರಮುಖವಾದದ್ದು 59 ನಿಮಿಷದಲ್ಲಿ ಒಂದು ಕೋಟಿಯವರೆಗಿನ ಲೋನ್ ಮೇಳದ ಸೌಲಭ್ಯ’ ಎಂದು ಮೋದಿ ಪುಂಗಿ ಊದಿದ್ದರು. ಈ ಯೋಜನೆಯಡಿಯಲ್ಲಿ ಸಾಲ ಪಡೆದವರಿಗೆ ಶೇ.3ರಿಂದ ಶೇ.5 ರಷ್ಟು ಬಡ್ಡಿ ರಿಯಾಯತಿ, ಮಹಿಳಾ ಉದ್ಯಮಿಗಳಿಂದ ಶೇ.3ರಷ್ಟು ಸರ್ಕಾರವೇ ಖರೀದಿಸುತ್ತದೆ. ಈ ಯೋಜನೆಗಾಗಿ 6,000ರೂ ಕೋಟಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಹೇಳಿಕೊಂಡಿದ್ದರು.

ಈ ಯೋಜನೆಯ ಫಲಾನುಭವಿಯಾಗಲು ಪ್ರತ್ಯೇಕ ವೆಬ್‌ಪೇಜ್‌ಯಿದ್ದು www.psbloansin59minutes.com ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿತ್ತು. ಈ ಸೂಚನೆಯಂತೆ ಒಬ್ಬ ವ್ಯಕ್ತಿ ಅಪ್ಲಿಕೇಷನ್ ಹಾಕಿದ್ದು 85 ಲಕ್ಷರೂಗಳ ಅಪ್ರೂವಲ್ ಕೂಡ ಪಡೆದು ವಿಜಯಾ ಬ್ಯಾಂಕಿನಲ್ಲಿ ಲೋನ್ ಕೇಳಲು ಹೋಗಿದ್ದಾರೆ. ಬ್ಯಾಂಕ್‌ನವರು ಹೇಳಿದ್ದು ಕೇಳಿ ಹೌಹಾರಿ ಹೋಗಿದ್ದಾರೆ. ಅಲ್ಲಿ ‘ನೀವೇ ಮೊದಲು 85 ಲಕ್ಷ ರೂ.ಗಳನ್ನು ಕಟ್ಟಬೇಕು. ಆನಂತರ ನಿಮಗೆ ಒಂದು ಕೋಟಿಯ ಲೋನ್ ಕೊಡುತ್ತೇವೆ’ ಎಂದು ಹೇಳಿದ್ದಾರೆ. ಆ ವ್ಯಕ್ತಿ ಬ್ಯಾಂಕಿನವರೊಂದಿಗೆ ಜಗಳ ಮಾಡಿಕೊಂಡು ಬಂದಿದ್ದಾರೆ. ಈ ವಿಚಾರ ತಿಳಿದ ಹೆಚ್‌ಡಬ್ಲ್ಯು ನ್ಯೂಸ್ ವರದಿಗಾರರು, ಇದರ ಅಸಲೀಯತ್ತೇನೆಂದು ತಿಳಿಯಲು ತಾವೇ ಒಬ್ಬರಿಂದ ಅಪ್ಲಿಕೇಶನ್ ಹಾಕಿಸಿದ್ದಾರೆ. ಈ ಅಪ್ಲಿಕೇಶನ್ ಮೋದಿ ಸಾಹೇಬರ 59 ನಿಮಿಷದ ಹಗರಣವನ್ನು ಬಯಲು ಮಾಡಿದೆ.

ಅಪ್ಲೇ ಮಾಡಿದ ವ್ಯಕ್ತಿಯಿಂದ ಪಾನ್ ನಂಬರ್, ಜಿಎಸ್‌ಟಿ ನಂಬರ್ ಅಷ್ಟೇ ಅಲ್ಲದೆ ಲಾಗಿನ್ ಐಡಿಯ ಪಾಸ್‌ರ‍್ಡ್ ಕೂಡ ಅಪ್ಲಿಕೇಷನ್‌ನಲ್ಲಿ ಪಡೆದುಕೊಂಡಿದ್ದಾರೆ. ಅಪ್ಲೇ ಮಾಡಿದ ಕೇವಲ 47 ನಿಮಿಷದಲ್ಲಿ ಲೋನ್‌ಗೆ 1,48,000ರೂ.ಗಳಿಗೆ ಅಪ್ರೂವಲ್ ಸಿಕ್ಕಿದೆ. ತಮಾಷೆಯೆಂದರೆ ಅಪ್ರುವಲ್‌ನಲ್ಲಿ ಇನ್ ಪ್ರಿನ್ಸಿಪಲ್ ಅಪ್ರೂವಲ್ (ತಾತ್ವಿಕ ಒಪ್ಪಿಗೆ) ಎಂದು ನೀಡಲಾಗಿದ್ದು, ಸಾಲವನ್ನು ಒರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಎಂಬ ಬ್ಯಾಂಕಿನಿಂದ ಪಡೆಯಬೇಕು ಎಂದು ಬ್ಯಾಂಕಿನ ವಿವರಗಳನ್ನೂ ಸಹ ಸೂಚಿಸಲಾಗಿತ್ತು. ಅಷ್ಟೇ ಅಲ್ಲದೆ ಈತ 1,180ರೂ ಗಳ ಡಿಡಿಯನ್ನು ಕ್ಯಾಪಿಟ ವರ್ಲ್ಡ್ ಪ್ಲಾಟ್‌ಫಾರ್ಮ ಪ್ರೈ. ಲಿ. ಎಂಬ ಖಾಸಗೀ ಕಂಪನಿಯ ಹೆಸರಿಗೆ ಕಟ್ಟಬೇಕೆಂದು ಸೂಚಿಸಲಾಗಿತ್ತು. ಸಾಮಾನ್ಯವಾಗಿ ಸರ್ಕಾರಿ ಸೌಲಭ್ಯಗಳನ್ನು ಪಡೆದರೆ ಸರ್ಕಾರಕ್ಕೆ ಡಿಡಿ ಕಟ್ಟುವುದು ಮಾಮೂಲಿ. ಆದರೆ ಈ ಸ್ಕೀಮ್‌ಗೆ ಮಾತ್ರ ಖಾಸಗಿ ಕಂಪನಿ ಹೆಸರಿನಲ್ಲಿ ಕಟ್ಟಬೇಕೆನ್ನುವುದೇ ಈ ಹಗರಣದ ಮೊದಲ ಹಂತ.

ಅಂದರೆ ಮೋದಿ ಸಾಹೇಬರು ಈ ಸ್ಕೀಮ್ ಮೂಲಕ ಖಾಸಗೀ ಕಂಪನಿಯ ಖಜಾನೆ ತುಂಬಿಸುವ ಪ್ಲಾನ್ ಮಾಡಿದ್ದಾರೆ ಎಂಬುದು ಕಣ್ಣೋಟಕ್ಕೆ ಕಾಣುವ ವಿಚಾರ. ಕೇವಲ ಒಂದು ಮಿಲಿಯನ್ ಅರ್ಜಿಗಳು ಬಂದರೂ 118 ಕೋಟಿ ರೂ.ಗಳು ಆ ಖಾಸಗಿ ಕಂಪೆನಿಗೆ ದಕ್ಕುತ್ತವೆ. ಪ್ರಧಾನಿ ಮೋದಿ ಈ ಸ್ಕೀಮ್ ಘೋಷಿಸಿದ ಮಾರನೆಯ ದಿನವೇ 23,582 ಕೋಟಿ ರೂ.ಗಳಷ್ಟು ಸಾಲ ನೀಡುವ 1.69 ಲಕ್ಷ ಅರ್ಜಿಗಳನ್ನು ಅಪ್ರೂವಲ್ ಮಾಡಲಾಗಿದೆ ಎಂದು ಘೋಷಿಸಲಾಗಿತ್ತು. ವಾಸ್ತವವೇನೆಂದರೆ ಅಲ್ಲಿಯವರೆಗೆ ಒಬ್ಬರಿಗೂ ಲೋನ್ ಹಣ ಸಿಕ್ಕಿರಲಿಲ್ಲ. ಈ ಲೆಕ್ಕವನ್ನು ಪ್ರಶ್ನಿಸಿದ ಕ್ಷಣಗಳಲ್ಲಿ ಮಾಹಿತಿಯನ್ನು ಅಳಿಸಿ ಹಾಕಿದ್ದು ಮತ್ತಷ್ಟು ಅನುಮಾನಗಳನ್ನು ಹುಟ್ಟು ಹಾಕಿತ್ತು.

ಅಂದಹಾಗೆ ರಫೇಲ್ ಹಗರಣದ ಮೂಲಕ ಅಂಬಾನಿಯ ಖಜಾನೆ ತುಂಬಿಸಹೊರಟಿದ್ದ ಮೋದಿ ಈ ಸ್ಕೀಮ್‌ಗೆ ಕೈಜೋಡಿಸಿದ್ದು ಇದೇ ಅಂಬಾನಿಯ ಆಪ್ತಮಿತ್ರ ಅಹಮದಾಬಾದ್ ವಿನೋದ್ ಮೋದ, ಜಿನಂದ್ ಶಾ ಮತ್ತು ಚಕ್ರಬೋಟ್ರಿ ಪಾಲುದಾರಿಕೆಯ ಕ್ಯಾಪಿಟಾ ವರ್ಲ್ಡ್ ಕಂಪನಿಯೊಂದಿಗೆ. ಈ ಕಂಪನಿ ಉದ್ಭವವಾಗಿದ್ದು ಮೋದಿ ಅಧಿಕಾರಕ್ಕೇರಿದ ಒಂದು ವರ್ಷದ ನಂತರ 2015ರಲ್ಲಿ. ಈ ಕಂಪನಿ ಆರಂಭಗೊಂಡ ಮೊದಲ ವರ್ಷ ಅಂದರೆ 2016ರಲ್ಲಿ ಇದರ ಆದಾಯ ಸೊನ್ನೆ ಮಾತ್ರ. ನಂತರ 2017ರಲ್ಲಿ 15.680 ರೂ. ಲಾಭ ಗಳಿಸಿತ್ತು. ಇನ್ನೊಂದು ಗಮನಿಸಬೇಕಾದ ವಿಷಯವೆಂದರೆ ಈ ಕಂಪನಿಯ ಶೇರ್‌ನಲ್ಲಿ ಎಸ್‌ಐಡಿಬಿಐ ಬ್ಯಾಂಕ್ ಸೇರಿದಂತೆ 9 ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಒಂದು ಶೇರ್‌ಗೆ 119.39 ರೂ.ಗಳಂತೆ 17.43.371 ಶೇರ್‌ಗಳಿಗೆ 22.5 ಕೋಟಿ ರೂ.ಗಳನ್ನು ಹೂಡಿಕೆ ಮಾಡಿವೆ.

ಇಷ್ಟೆಲ್ಲಾ ಹೂಡಿಕೆ ಮಾಡಿರುವ ಈ ಕಂಪನಿಯ ಲಾಭ 15.680 ಇದ್ದುದರಿಂದ ಮೋದಿ ಸಾಹೇಬರು ಈ ಕಂಪನಿಯನ್ನು ಮೇಲೆತ್ತುವ ಉಸ್ತುವಾರಿ ತೆಗೆದುಕೊಂಡಿದ್ದಾರೆ. ಇನ್ನೊಂದು ವಿಚಾರವೆಂದರೆ ಈ ಕಂಪನಿ ಆರಂಭಗೊಂಡು 3 ವರ್ಷವಾಗಿದ್ದು ಇದರ ಸಿಇಓಗಳು ಮೂರು ಭಾರಿ ಬದಲಾಗಿದ್ದರೆ. ಜಿನಾಬ್ ವೈ ಶಾ, ವಿಕಾಸ್ ಮನಿಲಾಲ್ ಷಾ, ಅಖಿಲ್ ಹಂಡಾ ಈ ಮೂವರೂ ಕ್ಯಾಪಿಟಾವರ್ಲ್ಡ್ನ ಸಿಇಓಗಳಾಗಿದ್ದು, ಇವರು 2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಪರ ಪ್ರಚಾರದ ಬ್ಯಾಟಿಂಗ್ ಮಾಡಿದ್ದರು ಎಂಬುದು ವಿಶೇಷ.

ಹಾಗಾಗಿ ಮೋದಿ ಪರ ಬ್ಯಾಟಿಂಗ್ ಮಾಡಿದ್ದ ಸಿಇಓಗಳು, ಮಿತ್ರ ಅಂಬಾನಿಯ ಸ್ನೇಹಿತರ ಕಂಪನಿಯನ್ನು ಉಳಿಸುವ ಸಲುವಗಿ 59 ನಿಮಿಷದಲ್ಲಿ ಸಾಲ ಸೌಲಭ್ಯದ ಮೋದಿಯ ಸ್ಕೀಮ್‌ಗೆ ಲಕ್ಷಾಂತರ ಜನ ಅಪ್ಲಿಕೇಷನ್ ಹಾಕಿದ್ದು ತಲಾ 1.180ರೂ ಡಿಡಿಯಂತೆ ಬಿಲಿಯನ್‌ಗಟ್ಟಲೆ ಸಾರ್ವಜನಿಕರ ಹಣ ಕ್ಯಾಪಿಟಾವರ್ಲ್ಡ್ನ ಪಾಲಿಗೆ ದಯಪಾಲಿಸಿದೆ, ಅಷ್ಟೇ ಅಲ್ಲದೆ ಅಪ್ಲೇ ಮಾಡಿದವರ ವ್ಯವಹಾರದ ಎಲ್ಲಾ ಡಿಟೈಲ್ಸ್ಗಳನ್ನು ಈ ಕಂಪನಿ ಪಡೆದುಕೊಂಡಿದೆ. ಅಪ್ರುವಲ್‌ನಲ್ಲಿಯೇ ಇರುವಂತೆ ಅದು ತಾತ್ವಿಕ ಒಪ್ಪಿಗೆಯಾಗಿದ್ದು, ಸಾಲ ನೀಡಬಹುದೆಂದಷ್ಟೇ ಸೂಚಿಸಿದ್ದು ಸಾಲ ದೊರೆತೇಬಿಡುತ್ತದೆ ಎಂದೇನೂ ಇಲ್ಲವಾದ್ದರಿಂದ ಲೋನ್‌ನ ಆಸೆಯನ್ನು ಮರೆಯುವುದೇ ಸೂಕ್ತವೆಂಬಂತೆ ಪರೋಕ್ಷವಾಗಿ ಕಂಪನಿ ತಿಳಿಸಿದೆ. ಒಟ್ಟಿನಲ್ಲಿ ಇದುವರೆಗೂ ಸರ್ಕಾರದ ಹಣದಿಂದ ಕಾರ್ಪೊರೇಟ್‌ಗಳನ್ನು ಬೆಳೆಸುತ್ತಿದ್ದ ದಾರಿಗಿಂತ ಭಿನ್ನವಾಗಿ ನೇರವಾಗಿ ಸಾರ್ವಜನಿಕರ ಜೇಬಿನಿಂದ ಕಾರ್ಪೊರೇಟ್ ಖಜಾನೆ ತುಂಬಿಸಿರುವ ಮೊದಲ ಹಗರಣ ಪ್ರಧಾನ ಕಾರ್ಪೊರೇಟ್ ಸೇವಕ ಮೋದಿಯದ್ದು. ಮುದ್ರಾ, ಫಸಲ್ ಬಿಮಾ ಯೋಜನೆಗಳಿಂದ ಜನರನ್ನು ಯಾಮಾರಿಸಿದ್ದ ಮೋದಿ ಈ ಹಗರಣದಲ್ಲಿ ನೇರವಾಗಿ ಜನರ ಜೇಬಿಗೆ ಕತ್ತರಿಹಾಕಿ ಯಾಮಾರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...