Homeಕರ್ನಾಟಕಕೇಂದ್ರದ ತಪ್ಪಿಗೆ 560 ಜನ ಮೃತಪಟ್ಟಿದ್ದಾರೆ, ಈ ಸಾವಿಗೆ ಯಾರು ಹೊಣೆ?: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಕೇಂದ್ರದ ತಪ್ಪಿಗೆ 560 ಜನ ಮೃತಪಟ್ಟಿದ್ದಾರೆ, ಈ ಸಾವಿಗೆ ಯಾರು ಹೊಣೆ?: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

- Advertisement -
- Advertisement -

ಕೇಂದ್ರದ ತಪ್ಪಿನಿಂದಾಗಿ 560 ಜನ ಮೃತಪಟ್ಟಿದ್ದಾರೆ, ಈ ಸಾವಿಗೆ ಯಾರು ಹೊಣೆ? ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, “ಎಐಸಿಸಿಯಿಂದ ಕೆಲ ವಿಚಾರಗಳ ಪ್ರಸ್ತಾಪ ಮಾಡಲು ಆದೇಶ ಇದೆ.  ಕೊರೊನಾ ಹಿನ್ನೆಲೆಯಲ್ಲಿ ಮಾಧ್ಯಮಗಳ ಮುಂದೆ ಮಾತನಾಡುವುದು ಬೇಡ ಅಂದುಕೊಂಡಿದ್ದೆ. ಆದರೆ ಹೈಕಮಾಂಡ್ ಸೂಚನೆ ಮೇರೆಗೆ ಮಾತನಾಡುತ್ತಿದ್ದೇನೆ. ಕೊರೊನಾದಿಂದ ಇಡೀ ದೇಶ ಅಲ್ಲೋಲ ಕಲ್ಲೋಲವಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಕೇಂದ್ರದ ತಪ್ಪಿನಿಂದಾಗಿ 560 ಜನ ಮೃತಪಟ್ಟಿದ್ದಾರೆ. ಇದಕ್ಕೆ ಯಾರು ಹೊಣೆ? ಯುದ್ದದ ಸಮಯದಲ್ಲೂ ಇಂತಹ ಕಷ್ಟ ಆಗಿರಲಿಲ್ಲ. ಕೇಂದ್ರ ಯಾವುದೇ ಯೋಜನೆ ಇಲ್ಲದೇ ಲಾಕ್ಡೌನ್ ಮಾಡಿದೆ. 20 ಲಕ್ಷ ಕೋಟಿ ಶೇಕಡಾ 10 ಜಿಡಿಪಿ ಹಣ ಪ್ಯಾಕೇಜ್ ಘೋಷಣೆ ಮಾಡಿದ್ದೇವೆ ಎಂದು ಹೇಳುತ್ತಾರೆ, ಆದರೆ 1.70 ಲಕ್ಷ ಕೋಟಿ ರೂಪಾಯಿ ಹಣ ಬಂದಿದೆ. ಬರೀ ಹೇಳಿದ್ದೇ ಹೇಳೋದು ಸುಳ್ಳು. ನಮಗೂ ಕೇಳಿ ಕೇಳಿ ಸಾಕಾಗಿದೆ. ಮೂರು ತಿಂಗಳ ಬಳಿಕ ಕಂತು ಕಟ್ಟಿ ಅಂದ್ರೆ ರಿಲೀಫ್ ಆಗುತ್ತಾ. ಕೆಲಸ ಇಲ್ಲದೇ ಮೂರು ತಿಂಗಳ ಬಳಿಕ ಹೇಗೆ ಕಂತು ಕಟ್ಟುತ್ತಾರೆ ಎಂದು ಖರ್ಗೆ ಪ್ರಶ್ನೆ ಮಾಡಿದರು.

ಕೂಲಿ ಕಾರ್ಮಿಕರು, ಕುಲಕಸುಬು ಆಧರಿಸಿದವರು ಬಹಳ ತೊಂದರೆಯಲ್ಲಿ ಇದ್ದಾರೆ. ಸಣ್ಣ ಕೈಗಾರಿಕೆಗಳು ಮತ್ತು ಅಸಂಘಟಿತ ಕಾರ್ಮಿಕರಿಗೆ ಬಾರಿ ತೊಂದರೆ ಆಗಿದೆ. ವಲಸಿಗ ಕಾರ್ಮಿಕರು ದೇಶದಲ್ಲಿ 8 ಕೋಟಿ ಜನ ಸಮಸ್ಯೆಯಲ್ಲಿ ಸಿಕ್ಕಿದ್ದಾರೆ. ಅವರ ಜೀವನ ಅಸ್ತವ್ಯಸ್ತ ಆಗಿದೆ. ರೈತರು ಮತ್ತು ರೈತ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಹಕನ ಬಳಿ ಹಣ ಇದ್ದರೆ ಖರೀದಿ ಮಾಡುವ ಶಕ್ತಿ ಬರುತ್ತದೆ.  ಮಾರುಕಟ್ಟೆಯಲ್ಲಿ ಬೇಡಿಕೆ ಬರುತ್ತದೆ. ಆದರೆ ಜನರ ಬಳಿ ಹಣ ಇಲ್ಲದೇ ಬೇಡಿಕೆ ಕುಸಿತ ಕಂಡಿದೆ ಎಂದು ಹೇಳಿದರು.

13 ಸಾವಿರ ಪ್ಯಾಸೆಂಜರ್ ರೈಲು ದೇಶದಲ್ಲಿ ಓಡಾಟ ಮಾಡುತ್ತಿದ್ದವು. 2.30 ಕೋಟಿ ಜನರು ದಿನವೂ ಪ್ರಯಾಣಿಸುತ್ತಿದ್ದರು. 5-6 ಕೋಟಿ ಜನ ವಲಸಿಗ ಕಾರ್ಮಿಕರು ಇದ್ರು. ಪ್ಯಾಸೆಂಜರ್ ರೈಲಿನಲ್ಲಿ ನಾಲ್ಕು ದಿನದಲ್ಲಿ ಕಳುಹಿಸಿಕೊಡಬಹುದಿತ್ತು. ಲಾಕ್ಡೌನ್​ಗೂ ಮೊದಲು ಅವರನ್ನು ಅವರ ಸ್ಥಳಗಳಿಗೆ ತಲುಪಿಸಬಹುದಿತ್ತು. ಹಾಗೇ ಮಾಡಿದ್ರೆ ಬೀದಿಯಲ್ಲಿ ಸಾವು, ರಸ್ತೆಯಲ್ಲಿ ಹೆರಿಗೆ ಆಗುವುದು ಕಾಣುತ್ತಿರಲಿಲ್ಲ. ರೈಲ್ವೆ ಹಳಿಗಳ ಮೇಲೆ ಮಲಗಿ ಸಾಯುತ್ತಿರಲಿಲ್ಲ. ಅನ್ನ ಮತ್ತು ನೀರಿಲ್ಲದೇ ಜನರು ಪ್ರಾಣ ಬಿಡುತ್ತಿರಲಿಲ್ಲ ಎಂದು ಕೇಂದ್ರ ಸರ್ಕಾರದ ನಡೆಯ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಮಹಾರಾಷ್ಟ್ರದಲ್ಲಿ 50 ಕೋಟಿ ಕೊಟ್ಟಿದ್ದಾರೆ. ಬರೀ ಪ್ರಚಾರ ಗಿಟ್ಟಿಸಿಕೊಳ್ಳುವುದಷ್ಟೇ ಇವರ ಕೆಲಸ. ಬಾಂಬೆಯಿಂದ ಲಕ್ನೋಗೆ ಹೋಗಬೇಕಾದರೆ ಬಿಹಾರ ಕಡೆ ಕಳಿಸಿದ್ದಾರೆ. ಮೂವತ್ತು ಗಂಟೆಯಲ್ಲಿ ಮುಗಿಯುವ ಪಯಣ 72 ಗಂಟೆ ಬೇಕಾಯಿತು. ಸೂಕ್ತ ವ್ಯವಸ್ಥೆ, ಊಟ ಇಲ್ಲದೆ ಇಷ್ಟು ಸಮಯ ಅವರು ರೈಲಿನಲ್ಲಿ ಇರೋದು ಹೇಗೆ? ಎಂದು ಖಾರವಾಗಿ ಪ್ರಶ್ನಿಸಿದರು.

ಸರ್ಕಾರ ಮಾತನಾಡಲು ಸಿದ್ದವಿದೆ. ಆದರೆ ಕೆಲಸ ಮಾಡುವ ಹುಮ್ಮಸ್ಸು ಇಲ್ಲ. ಜನರ ಬಗ್ಗೆ ಕೇಂದ್ರ ಸರ್ಕಾರ ಕಾಳಜಿ ವಹಿಸಿಲ್ಲ. ಜನರಿಗಾಗಿ ನಾವು ಸುಮ್ಮನಿದ್ದೇವೆ. ಸರ್ಕಾರದ ವೈಫಲ್ಯಗಳನ್ನ ಜನರ ಗಮನಕ್ಕೆ ತರುತ್ತಿದ್ದೇವೆ. ಕೂಲಿ ಕಾರ್ಮಿಕರನ್ನು ಕಳುಹಿಸಿ ಕೊಡುವ ವಿಚಾರದಲ್ಲಿ ಕೇಂದ್ರ ರೈಲ್ವೆ ಇಲಾಖೆ ವಿಫಲವಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ. ಕೂಡಲೇ ಕೇಂದ್ರ ರೈಲ್ವೆ ಸಚಿವ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲಿ ಎಂದು ಖರ್ಗೆ ಒತ್ತಾಯಿಸಿದ್ದಾರೆ.


ಓದಿ: ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...