Homeಕರ್ನಾಟಕಕೇಂದ್ರದ ತಪ್ಪಿಗೆ 560 ಜನ ಮೃತಪಟ್ಟಿದ್ದಾರೆ, ಈ ಸಾವಿಗೆ ಯಾರು ಹೊಣೆ?: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಕೇಂದ್ರದ ತಪ್ಪಿಗೆ 560 ಜನ ಮೃತಪಟ್ಟಿದ್ದಾರೆ, ಈ ಸಾವಿಗೆ ಯಾರು ಹೊಣೆ?: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

- Advertisement -
- Advertisement -

ಕೇಂದ್ರದ ತಪ್ಪಿನಿಂದಾಗಿ 560 ಜನ ಮೃತಪಟ್ಟಿದ್ದಾರೆ, ಈ ಸಾವಿಗೆ ಯಾರು ಹೊಣೆ? ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, “ಎಐಸಿಸಿಯಿಂದ ಕೆಲ ವಿಚಾರಗಳ ಪ್ರಸ್ತಾಪ ಮಾಡಲು ಆದೇಶ ಇದೆ.  ಕೊರೊನಾ ಹಿನ್ನೆಲೆಯಲ್ಲಿ ಮಾಧ್ಯಮಗಳ ಮುಂದೆ ಮಾತನಾಡುವುದು ಬೇಡ ಅಂದುಕೊಂಡಿದ್ದೆ. ಆದರೆ ಹೈಕಮಾಂಡ್ ಸೂಚನೆ ಮೇರೆಗೆ ಮಾತನಾಡುತ್ತಿದ್ದೇನೆ. ಕೊರೊನಾದಿಂದ ಇಡೀ ದೇಶ ಅಲ್ಲೋಲ ಕಲ್ಲೋಲವಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಕೇಂದ್ರದ ತಪ್ಪಿನಿಂದಾಗಿ 560 ಜನ ಮೃತಪಟ್ಟಿದ್ದಾರೆ. ಇದಕ್ಕೆ ಯಾರು ಹೊಣೆ? ಯುದ್ದದ ಸಮಯದಲ್ಲೂ ಇಂತಹ ಕಷ್ಟ ಆಗಿರಲಿಲ್ಲ. ಕೇಂದ್ರ ಯಾವುದೇ ಯೋಜನೆ ಇಲ್ಲದೇ ಲಾಕ್ಡೌನ್ ಮಾಡಿದೆ. 20 ಲಕ್ಷ ಕೋಟಿ ಶೇಕಡಾ 10 ಜಿಡಿಪಿ ಹಣ ಪ್ಯಾಕೇಜ್ ಘೋಷಣೆ ಮಾಡಿದ್ದೇವೆ ಎಂದು ಹೇಳುತ್ತಾರೆ, ಆದರೆ 1.70 ಲಕ್ಷ ಕೋಟಿ ರೂಪಾಯಿ ಹಣ ಬಂದಿದೆ. ಬರೀ ಹೇಳಿದ್ದೇ ಹೇಳೋದು ಸುಳ್ಳು. ನಮಗೂ ಕೇಳಿ ಕೇಳಿ ಸಾಕಾಗಿದೆ. ಮೂರು ತಿಂಗಳ ಬಳಿಕ ಕಂತು ಕಟ್ಟಿ ಅಂದ್ರೆ ರಿಲೀಫ್ ಆಗುತ್ತಾ. ಕೆಲಸ ಇಲ್ಲದೇ ಮೂರು ತಿಂಗಳ ಬಳಿಕ ಹೇಗೆ ಕಂತು ಕಟ್ಟುತ್ತಾರೆ ಎಂದು ಖರ್ಗೆ ಪ್ರಶ್ನೆ ಮಾಡಿದರು.

ಕೂಲಿ ಕಾರ್ಮಿಕರು, ಕುಲಕಸುಬು ಆಧರಿಸಿದವರು ಬಹಳ ತೊಂದರೆಯಲ್ಲಿ ಇದ್ದಾರೆ. ಸಣ್ಣ ಕೈಗಾರಿಕೆಗಳು ಮತ್ತು ಅಸಂಘಟಿತ ಕಾರ್ಮಿಕರಿಗೆ ಬಾರಿ ತೊಂದರೆ ಆಗಿದೆ. ವಲಸಿಗ ಕಾರ್ಮಿಕರು ದೇಶದಲ್ಲಿ 8 ಕೋಟಿ ಜನ ಸಮಸ್ಯೆಯಲ್ಲಿ ಸಿಕ್ಕಿದ್ದಾರೆ. ಅವರ ಜೀವನ ಅಸ್ತವ್ಯಸ್ತ ಆಗಿದೆ. ರೈತರು ಮತ್ತು ರೈತ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಹಕನ ಬಳಿ ಹಣ ಇದ್ದರೆ ಖರೀದಿ ಮಾಡುವ ಶಕ್ತಿ ಬರುತ್ತದೆ.  ಮಾರುಕಟ್ಟೆಯಲ್ಲಿ ಬೇಡಿಕೆ ಬರುತ್ತದೆ. ಆದರೆ ಜನರ ಬಳಿ ಹಣ ಇಲ್ಲದೇ ಬೇಡಿಕೆ ಕುಸಿತ ಕಂಡಿದೆ ಎಂದು ಹೇಳಿದರು.

13 ಸಾವಿರ ಪ್ಯಾಸೆಂಜರ್ ರೈಲು ದೇಶದಲ್ಲಿ ಓಡಾಟ ಮಾಡುತ್ತಿದ್ದವು. 2.30 ಕೋಟಿ ಜನರು ದಿನವೂ ಪ್ರಯಾಣಿಸುತ್ತಿದ್ದರು. 5-6 ಕೋಟಿ ಜನ ವಲಸಿಗ ಕಾರ್ಮಿಕರು ಇದ್ರು. ಪ್ಯಾಸೆಂಜರ್ ರೈಲಿನಲ್ಲಿ ನಾಲ್ಕು ದಿನದಲ್ಲಿ ಕಳುಹಿಸಿಕೊಡಬಹುದಿತ್ತು. ಲಾಕ್ಡೌನ್​ಗೂ ಮೊದಲು ಅವರನ್ನು ಅವರ ಸ್ಥಳಗಳಿಗೆ ತಲುಪಿಸಬಹುದಿತ್ತು. ಹಾಗೇ ಮಾಡಿದ್ರೆ ಬೀದಿಯಲ್ಲಿ ಸಾವು, ರಸ್ತೆಯಲ್ಲಿ ಹೆರಿಗೆ ಆಗುವುದು ಕಾಣುತ್ತಿರಲಿಲ್ಲ. ರೈಲ್ವೆ ಹಳಿಗಳ ಮೇಲೆ ಮಲಗಿ ಸಾಯುತ್ತಿರಲಿಲ್ಲ. ಅನ್ನ ಮತ್ತು ನೀರಿಲ್ಲದೇ ಜನರು ಪ್ರಾಣ ಬಿಡುತ್ತಿರಲಿಲ್ಲ ಎಂದು ಕೇಂದ್ರ ಸರ್ಕಾರದ ನಡೆಯ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಮಹಾರಾಷ್ಟ್ರದಲ್ಲಿ 50 ಕೋಟಿ ಕೊಟ್ಟಿದ್ದಾರೆ. ಬರೀ ಪ್ರಚಾರ ಗಿಟ್ಟಿಸಿಕೊಳ್ಳುವುದಷ್ಟೇ ಇವರ ಕೆಲಸ. ಬಾಂಬೆಯಿಂದ ಲಕ್ನೋಗೆ ಹೋಗಬೇಕಾದರೆ ಬಿಹಾರ ಕಡೆ ಕಳಿಸಿದ್ದಾರೆ. ಮೂವತ್ತು ಗಂಟೆಯಲ್ಲಿ ಮುಗಿಯುವ ಪಯಣ 72 ಗಂಟೆ ಬೇಕಾಯಿತು. ಸೂಕ್ತ ವ್ಯವಸ್ಥೆ, ಊಟ ಇಲ್ಲದೆ ಇಷ್ಟು ಸಮಯ ಅವರು ರೈಲಿನಲ್ಲಿ ಇರೋದು ಹೇಗೆ? ಎಂದು ಖಾರವಾಗಿ ಪ್ರಶ್ನಿಸಿದರು.

ಸರ್ಕಾರ ಮಾತನಾಡಲು ಸಿದ್ದವಿದೆ. ಆದರೆ ಕೆಲಸ ಮಾಡುವ ಹುಮ್ಮಸ್ಸು ಇಲ್ಲ. ಜನರ ಬಗ್ಗೆ ಕೇಂದ್ರ ಸರ್ಕಾರ ಕಾಳಜಿ ವಹಿಸಿಲ್ಲ. ಜನರಿಗಾಗಿ ನಾವು ಸುಮ್ಮನಿದ್ದೇವೆ. ಸರ್ಕಾರದ ವೈಫಲ್ಯಗಳನ್ನ ಜನರ ಗಮನಕ್ಕೆ ತರುತ್ತಿದ್ದೇವೆ. ಕೂಲಿ ಕಾರ್ಮಿಕರನ್ನು ಕಳುಹಿಸಿ ಕೊಡುವ ವಿಚಾರದಲ್ಲಿ ಕೇಂದ್ರ ರೈಲ್ವೆ ಇಲಾಖೆ ವಿಫಲವಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ. ಕೂಡಲೇ ಕೇಂದ್ರ ರೈಲ್ವೆ ಸಚಿವ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲಿ ಎಂದು ಖರ್ಗೆ ಒತ್ತಾಯಿಸಿದ್ದಾರೆ.


ಓದಿ: ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...