Homeಕರ್ನಾಟಕಕೇಂದ್ರದ ತಪ್ಪಿಗೆ 560 ಜನ ಮೃತಪಟ್ಟಿದ್ದಾರೆ, ಈ ಸಾವಿಗೆ ಯಾರು ಹೊಣೆ?: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಕೇಂದ್ರದ ತಪ್ಪಿಗೆ 560 ಜನ ಮೃತಪಟ್ಟಿದ್ದಾರೆ, ಈ ಸಾವಿಗೆ ಯಾರು ಹೊಣೆ?: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

- Advertisement -
- Advertisement -

ಕೇಂದ್ರದ ತಪ್ಪಿನಿಂದಾಗಿ 560 ಜನ ಮೃತಪಟ್ಟಿದ್ದಾರೆ, ಈ ಸಾವಿಗೆ ಯಾರು ಹೊಣೆ? ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, “ಎಐಸಿಸಿಯಿಂದ ಕೆಲ ವಿಚಾರಗಳ ಪ್ರಸ್ತಾಪ ಮಾಡಲು ಆದೇಶ ಇದೆ.  ಕೊರೊನಾ ಹಿನ್ನೆಲೆಯಲ್ಲಿ ಮಾಧ್ಯಮಗಳ ಮುಂದೆ ಮಾತನಾಡುವುದು ಬೇಡ ಅಂದುಕೊಂಡಿದ್ದೆ. ಆದರೆ ಹೈಕಮಾಂಡ್ ಸೂಚನೆ ಮೇರೆಗೆ ಮಾತನಾಡುತ್ತಿದ್ದೇನೆ. ಕೊರೊನಾದಿಂದ ಇಡೀ ದೇಶ ಅಲ್ಲೋಲ ಕಲ್ಲೋಲವಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಕೇಂದ್ರದ ತಪ್ಪಿನಿಂದಾಗಿ 560 ಜನ ಮೃತಪಟ್ಟಿದ್ದಾರೆ. ಇದಕ್ಕೆ ಯಾರು ಹೊಣೆ? ಯುದ್ದದ ಸಮಯದಲ್ಲೂ ಇಂತಹ ಕಷ್ಟ ಆಗಿರಲಿಲ್ಲ. ಕೇಂದ್ರ ಯಾವುದೇ ಯೋಜನೆ ಇಲ್ಲದೇ ಲಾಕ್ಡೌನ್ ಮಾಡಿದೆ. 20 ಲಕ್ಷ ಕೋಟಿ ಶೇಕಡಾ 10 ಜಿಡಿಪಿ ಹಣ ಪ್ಯಾಕೇಜ್ ಘೋಷಣೆ ಮಾಡಿದ್ದೇವೆ ಎಂದು ಹೇಳುತ್ತಾರೆ, ಆದರೆ 1.70 ಲಕ್ಷ ಕೋಟಿ ರೂಪಾಯಿ ಹಣ ಬಂದಿದೆ. ಬರೀ ಹೇಳಿದ್ದೇ ಹೇಳೋದು ಸುಳ್ಳು. ನಮಗೂ ಕೇಳಿ ಕೇಳಿ ಸಾಕಾಗಿದೆ. ಮೂರು ತಿಂಗಳ ಬಳಿಕ ಕಂತು ಕಟ್ಟಿ ಅಂದ್ರೆ ರಿಲೀಫ್ ಆಗುತ್ತಾ. ಕೆಲಸ ಇಲ್ಲದೇ ಮೂರು ತಿಂಗಳ ಬಳಿಕ ಹೇಗೆ ಕಂತು ಕಟ್ಟುತ್ತಾರೆ ಎಂದು ಖರ್ಗೆ ಪ್ರಶ್ನೆ ಮಾಡಿದರು.

ಕೂಲಿ ಕಾರ್ಮಿಕರು, ಕುಲಕಸುಬು ಆಧರಿಸಿದವರು ಬಹಳ ತೊಂದರೆಯಲ್ಲಿ ಇದ್ದಾರೆ. ಸಣ್ಣ ಕೈಗಾರಿಕೆಗಳು ಮತ್ತು ಅಸಂಘಟಿತ ಕಾರ್ಮಿಕರಿಗೆ ಬಾರಿ ತೊಂದರೆ ಆಗಿದೆ. ವಲಸಿಗ ಕಾರ್ಮಿಕರು ದೇಶದಲ್ಲಿ 8 ಕೋಟಿ ಜನ ಸಮಸ್ಯೆಯಲ್ಲಿ ಸಿಕ್ಕಿದ್ದಾರೆ. ಅವರ ಜೀವನ ಅಸ್ತವ್ಯಸ್ತ ಆಗಿದೆ. ರೈತರು ಮತ್ತು ರೈತ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಹಕನ ಬಳಿ ಹಣ ಇದ್ದರೆ ಖರೀದಿ ಮಾಡುವ ಶಕ್ತಿ ಬರುತ್ತದೆ.  ಮಾರುಕಟ್ಟೆಯಲ್ಲಿ ಬೇಡಿಕೆ ಬರುತ್ತದೆ. ಆದರೆ ಜನರ ಬಳಿ ಹಣ ಇಲ್ಲದೇ ಬೇಡಿಕೆ ಕುಸಿತ ಕಂಡಿದೆ ಎಂದು ಹೇಳಿದರು.

13 ಸಾವಿರ ಪ್ಯಾಸೆಂಜರ್ ರೈಲು ದೇಶದಲ್ಲಿ ಓಡಾಟ ಮಾಡುತ್ತಿದ್ದವು. 2.30 ಕೋಟಿ ಜನರು ದಿನವೂ ಪ್ರಯಾಣಿಸುತ್ತಿದ್ದರು. 5-6 ಕೋಟಿ ಜನ ವಲಸಿಗ ಕಾರ್ಮಿಕರು ಇದ್ರು. ಪ್ಯಾಸೆಂಜರ್ ರೈಲಿನಲ್ಲಿ ನಾಲ್ಕು ದಿನದಲ್ಲಿ ಕಳುಹಿಸಿಕೊಡಬಹುದಿತ್ತು. ಲಾಕ್ಡೌನ್​ಗೂ ಮೊದಲು ಅವರನ್ನು ಅವರ ಸ್ಥಳಗಳಿಗೆ ತಲುಪಿಸಬಹುದಿತ್ತು. ಹಾಗೇ ಮಾಡಿದ್ರೆ ಬೀದಿಯಲ್ಲಿ ಸಾವು, ರಸ್ತೆಯಲ್ಲಿ ಹೆರಿಗೆ ಆಗುವುದು ಕಾಣುತ್ತಿರಲಿಲ್ಲ. ರೈಲ್ವೆ ಹಳಿಗಳ ಮೇಲೆ ಮಲಗಿ ಸಾಯುತ್ತಿರಲಿಲ್ಲ. ಅನ್ನ ಮತ್ತು ನೀರಿಲ್ಲದೇ ಜನರು ಪ್ರಾಣ ಬಿಡುತ್ತಿರಲಿಲ್ಲ ಎಂದು ಕೇಂದ್ರ ಸರ್ಕಾರದ ನಡೆಯ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಮಹಾರಾಷ್ಟ್ರದಲ್ಲಿ 50 ಕೋಟಿ ಕೊಟ್ಟಿದ್ದಾರೆ. ಬರೀ ಪ್ರಚಾರ ಗಿಟ್ಟಿಸಿಕೊಳ್ಳುವುದಷ್ಟೇ ಇವರ ಕೆಲಸ. ಬಾಂಬೆಯಿಂದ ಲಕ್ನೋಗೆ ಹೋಗಬೇಕಾದರೆ ಬಿಹಾರ ಕಡೆ ಕಳಿಸಿದ್ದಾರೆ. ಮೂವತ್ತು ಗಂಟೆಯಲ್ಲಿ ಮುಗಿಯುವ ಪಯಣ 72 ಗಂಟೆ ಬೇಕಾಯಿತು. ಸೂಕ್ತ ವ್ಯವಸ್ಥೆ, ಊಟ ಇಲ್ಲದೆ ಇಷ್ಟು ಸಮಯ ಅವರು ರೈಲಿನಲ್ಲಿ ಇರೋದು ಹೇಗೆ? ಎಂದು ಖಾರವಾಗಿ ಪ್ರಶ್ನಿಸಿದರು.

ಸರ್ಕಾರ ಮಾತನಾಡಲು ಸಿದ್ದವಿದೆ. ಆದರೆ ಕೆಲಸ ಮಾಡುವ ಹುಮ್ಮಸ್ಸು ಇಲ್ಲ. ಜನರ ಬಗ್ಗೆ ಕೇಂದ್ರ ಸರ್ಕಾರ ಕಾಳಜಿ ವಹಿಸಿಲ್ಲ. ಜನರಿಗಾಗಿ ನಾವು ಸುಮ್ಮನಿದ್ದೇವೆ. ಸರ್ಕಾರದ ವೈಫಲ್ಯಗಳನ್ನ ಜನರ ಗಮನಕ್ಕೆ ತರುತ್ತಿದ್ದೇವೆ. ಕೂಲಿ ಕಾರ್ಮಿಕರನ್ನು ಕಳುಹಿಸಿ ಕೊಡುವ ವಿಚಾರದಲ್ಲಿ ಕೇಂದ್ರ ರೈಲ್ವೆ ಇಲಾಖೆ ವಿಫಲವಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ. ಕೂಡಲೇ ಕೇಂದ್ರ ರೈಲ್ವೆ ಸಚಿವ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲಿ ಎಂದು ಖರ್ಗೆ ಒತ್ತಾಯಿಸಿದ್ದಾರೆ.


ಓದಿ: ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವರದಿ ಮಾಡುತ್ತಿದ್ದ ಸಿಎನ್‌ಎನ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ನಡೆಸಿದ ದೌರ್ಜನ್ಯವನ್ನು ಮಾಧ್ಯಮ ಒಕ್ಕೂಟ ಫಾರಿನ್ ಪ್ರೆಸ್ ಅಸೋಸಿಯೇಷನ್ (ಎಫ್‌ಪಿಎ) ತೀವ್ರವಾಗಿ ಖಂಡಿಸಿದೆ. ಪ್ಯಾಲೆಸ್ತೀನ್‌ನ ತಯಾಸಿರ್...

ಪಶ್ಚಿಮ ಏಷ್ಯಾ ಸಂಘರ್ಷ: ಮಧ್ಯಪ್ರಾಚ್ಯಕ್ಕೆ 3,500 ಅಮೆರಿಕ ಸೈನಿಕರ ನಿಯೋಜನೆ; ಇರಾನ್ ಮೇಲೆ ಭೂದಾಳಿ ನಡೆಸಲು ಪೆಂಟಗನ್ ಸಿದ್ಧತೆ

ಇರಾನ್ ಜೊತೆಗಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆ, ಪೆಂಟಗನ್ ಸಂಭಾವ್ಯ ನೆಲದ ಕಾರ್ಯಾಚರಣೆಗಳಿಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಗಳು ಸೂಚಿಸುತ್ತಿರುವಾಗಲೂ, ಅಮೆರಿಕವು ಮಧ್ಯಪ್ರಾಚ್ಯದಲ್ಲಿ ತನ್ನ ಮಿಲಿಟರಿ ಉಪಸ್ಥಿತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ, 3,500 ಕ್ಕೂ ಹೆಚ್ಚು ಸೈನಿಕರನ್ನು...

ಮುಂಬೈನಲ್ಲಿ ವಿತರಣಾ ಟೆಂಪೋದಿಂದ 27 ಎಲ್‌ಪಿಜಿ ಸಿಲಿಂಡರ್‌ಗಳು ಕಳವು; ತನಿಖೆ 

ಮುಂಬೈನಲ್ಲಿ ವಿತರಣಾ ವಾಹನದಿಂದ ಐದು ತುಂಬಿದ ಎಲ್‌ಪಿಜಿ ಸಿಲಿಂಡರ್‌ಗಳು ಸೇರಿದಂತೆ ಇಪ್ಪತ್ತೇಳು ಎಲ್‌ಪಿಜಿ ಸಿಲಿಂಡರ್‌ಗಳು ಕಳವಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಅನಿಲ ಪೂರೈಕೆಯ...

No Kings : ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಬೃಹತ್ ಪ್ರತಿಭಟನೆ; ಬೀದಿಗಿಳಿದ ಲಕ್ಷಾಂತರ ಜನರು

ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಅಮೆರಿಕದಾದ್ಯಂತ ಶನಿವಾರ (ಮಾ. 28) ದೊಡ್ಡ ಮಟ್ಟದ 'ನೋ ಕಿಂಗ್ಸ್' ಪ್ರತಿಭಟನೆಗಳು ನಡೆದಿವೆ. ಟ್ರಂಪ್ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ, ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು ಲಕ್ಷಾಂತರ ಸಂಖ್ಯೆಯಲ್ಲಿ...

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...