Homeಕರ್ನಾಟಕಕೇಂದ್ರದ ತಪ್ಪಿಗೆ 560 ಜನ ಮೃತಪಟ್ಟಿದ್ದಾರೆ, ಈ ಸಾವಿಗೆ ಯಾರು ಹೊಣೆ?: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಕೇಂದ್ರದ ತಪ್ಪಿಗೆ 560 ಜನ ಮೃತಪಟ್ಟಿದ್ದಾರೆ, ಈ ಸಾವಿಗೆ ಯಾರು ಹೊಣೆ?: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

- Advertisement -
- Advertisement -

ಕೇಂದ್ರದ ತಪ್ಪಿನಿಂದಾಗಿ 560 ಜನ ಮೃತಪಟ್ಟಿದ್ದಾರೆ, ಈ ಸಾವಿಗೆ ಯಾರು ಹೊಣೆ? ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, “ಎಐಸಿಸಿಯಿಂದ ಕೆಲ ವಿಚಾರಗಳ ಪ್ರಸ್ತಾಪ ಮಾಡಲು ಆದೇಶ ಇದೆ.  ಕೊರೊನಾ ಹಿನ್ನೆಲೆಯಲ್ಲಿ ಮಾಧ್ಯಮಗಳ ಮುಂದೆ ಮಾತನಾಡುವುದು ಬೇಡ ಅಂದುಕೊಂಡಿದ್ದೆ. ಆದರೆ ಹೈಕಮಾಂಡ್ ಸೂಚನೆ ಮೇರೆಗೆ ಮಾತನಾಡುತ್ತಿದ್ದೇನೆ. ಕೊರೊನಾದಿಂದ ಇಡೀ ದೇಶ ಅಲ್ಲೋಲ ಕಲ್ಲೋಲವಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಕೇಂದ್ರದ ತಪ್ಪಿನಿಂದಾಗಿ 560 ಜನ ಮೃತಪಟ್ಟಿದ್ದಾರೆ. ಇದಕ್ಕೆ ಯಾರು ಹೊಣೆ? ಯುದ್ದದ ಸಮಯದಲ್ಲೂ ಇಂತಹ ಕಷ್ಟ ಆಗಿರಲಿಲ್ಲ. ಕೇಂದ್ರ ಯಾವುದೇ ಯೋಜನೆ ಇಲ್ಲದೇ ಲಾಕ್ಡೌನ್ ಮಾಡಿದೆ. 20 ಲಕ್ಷ ಕೋಟಿ ಶೇಕಡಾ 10 ಜಿಡಿಪಿ ಹಣ ಪ್ಯಾಕೇಜ್ ಘೋಷಣೆ ಮಾಡಿದ್ದೇವೆ ಎಂದು ಹೇಳುತ್ತಾರೆ, ಆದರೆ 1.70 ಲಕ್ಷ ಕೋಟಿ ರೂಪಾಯಿ ಹಣ ಬಂದಿದೆ. ಬರೀ ಹೇಳಿದ್ದೇ ಹೇಳೋದು ಸುಳ್ಳು. ನಮಗೂ ಕೇಳಿ ಕೇಳಿ ಸಾಕಾಗಿದೆ. ಮೂರು ತಿಂಗಳ ಬಳಿಕ ಕಂತು ಕಟ್ಟಿ ಅಂದ್ರೆ ರಿಲೀಫ್ ಆಗುತ್ತಾ. ಕೆಲಸ ಇಲ್ಲದೇ ಮೂರು ತಿಂಗಳ ಬಳಿಕ ಹೇಗೆ ಕಂತು ಕಟ್ಟುತ್ತಾರೆ ಎಂದು ಖರ್ಗೆ ಪ್ರಶ್ನೆ ಮಾಡಿದರು.

ಕೂಲಿ ಕಾರ್ಮಿಕರು, ಕುಲಕಸುಬು ಆಧರಿಸಿದವರು ಬಹಳ ತೊಂದರೆಯಲ್ಲಿ ಇದ್ದಾರೆ. ಸಣ್ಣ ಕೈಗಾರಿಕೆಗಳು ಮತ್ತು ಅಸಂಘಟಿತ ಕಾರ್ಮಿಕರಿಗೆ ಬಾರಿ ತೊಂದರೆ ಆಗಿದೆ. ವಲಸಿಗ ಕಾರ್ಮಿಕರು ದೇಶದಲ್ಲಿ 8 ಕೋಟಿ ಜನ ಸಮಸ್ಯೆಯಲ್ಲಿ ಸಿಕ್ಕಿದ್ದಾರೆ. ಅವರ ಜೀವನ ಅಸ್ತವ್ಯಸ್ತ ಆಗಿದೆ. ರೈತರು ಮತ್ತು ರೈತ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಹಕನ ಬಳಿ ಹಣ ಇದ್ದರೆ ಖರೀದಿ ಮಾಡುವ ಶಕ್ತಿ ಬರುತ್ತದೆ.  ಮಾರುಕಟ್ಟೆಯಲ್ಲಿ ಬೇಡಿಕೆ ಬರುತ್ತದೆ. ಆದರೆ ಜನರ ಬಳಿ ಹಣ ಇಲ್ಲದೇ ಬೇಡಿಕೆ ಕುಸಿತ ಕಂಡಿದೆ ಎಂದು ಹೇಳಿದರು.

13 ಸಾವಿರ ಪ್ಯಾಸೆಂಜರ್ ರೈಲು ದೇಶದಲ್ಲಿ ಓಡಾಟ ಮಾಡುತ್ತಿದ್ದವು. 2.30 ಕೋಟಿ ಜನರು ದಿನವೂ ಪ್ರಯಾಣಿಸುತ್ತಿದ್ದರು. 5-6 ಕೋಟಿ ಜನ ವಲಸಿಗ ಕಾರ್ಮಿಕರು ಇದ್ರು. ಪ್ಯಾಸೆಂಜರ್ ರೈಲಿನಲ್ಲಿ ನಾಲ್ಕು ದಿನದಲ್ಲಿ ಕಳುಹಿಸಿಕೊಡಬಹುದಿತ್ತು. ಲಾಕ್ಡೌನ್​ಗೂ ಮೊದಲು ಅವರನ್ನು ಅವರ ಸ್ಥಳಗಳಿಗೆ ತಲುಪಿಸಬಹುದಿತ್ತು. ಹಾಗೇ ಮಾಡಿದ್ರೆ ಬೀದಿಯಲ್ಲಿ ಸಾವು, ರಸ್ತೆಯಲ್ಲಿ ಹೆರಿಗೆ ಆಗುವುದು ಕಾಣುತ್ತಿರಲಿಲ್ಲ. ರೈಲ್ವೆ ಹಳಿಗಳ ಮೇಲೆ ಮಲಗಿ ಸಾಯುತ್ತಿರಲಿಲ್ಲ. ಅನ್ನ ಮತ್ತು ನೀರಿಲ್ಲದೇ ಜನರು ಪ್ರಾಣ ಬಿಡುತ್ತಿರಲಿಲ್ಲ ಎಂದು ಕೇಂದ್ರ ಸರ್ಕಾರದ ನಡೆಯ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಮಹಾರಾಷ್ಟ್ರದಲ್ಲಿ 50 ಕೋಟಿ ಕೊಟ್ಟಿದ್ದಾರೆ. ಬರೀ ಪ್ರಚಾರ ಗಿಟ್ಟಿಸಿಕೊಳ್ಳುವುದಷ್ಟೇ ಇವರ ಕೆಲಸ. ಬಾಂಬೆಯಿಂದ ಲಕ್ನೋಗೆ ಹೋಗಬೇಕಾದರೆ ಬಿಹಾರ ಕಡೆ ಕಳಿಸಿದ್ದಾರೆ. ಮೂವತ್ತು ಗಂಟೆಯಲ್ಲಿ ಮುಗಿಯುವ ಪಯಣ 72 ಗಂಟೆ ಬೇಕಾಯಿತು. ಸೂಕ್ತ ವ್ಯವಸ್ಥೆ, ಊಟ ಇಲ್ಲದೆ ಇಷ್ಟು ಸಮಯ ಅವರು ರೈಲಿನಲ್ಲಿ ಇರೋದು ಹೇಗೆ? ಎಂದು ಖಾರವಾಗಿ ಪ್ರಶ್ನಿಸಿದರು.

ಸರ್ಕಾರ ಮಾತನಾಡಲು ಸಿದ್ದವಿದೆ. ಆದರೆ ಕೆಲಸ ಮಾಡುವ ಹುಮ್ಮಸ್ಸು ಇಲ್ಲ. ಜನರ ಬಗ್ಗೆ ಕೇಂದ್ರ ಸರ್ಕಾರ ಕಾಳಜಿ ವಹಿಸಿಲ್ಲ. ಜನರಿಗಾಗಿ ನಾವು ಸುಮ್ಮನಿದ್ದೇವೆ. ಸರ್ಕಾರದ ವೈಫಲ್ಯಗಳನ್ನ ಜನರ ಗಮನಕ್ಕೆ ತರುತ್ತಿದ್ದೇವೆ. ಕೂಲಿ ಕಾರ್ಮಿಕರನ್ನು ಕಳುಹಿಸಿ ಕೊಡುವ ವಿಚಾರದಲ್ಲಿ ಕೇಂದ್ರ ರೈಲ್ವೆ ಇಲಾಖೆ ವಿಫಲವಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ. ಕೂಡಲೇ ಕೇಂದ್ರ ರೈಲ್ವೆ ಸಚಿವ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲಿ ಎಂದು ಖರ್ಗೆ ಒತ್ತಾಯಿಸಿದ್ದಾರೆ.


ಓದಿ: ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...