Homeಮುಖಪುಟಐಎನ್‌ಎಸ್ ವಿಕ್ರಾಂತ್ ಉಳಿಸಿ ಅಭಿಯಾನದ 57 ಕೋಟಿ ರೂ ದುರ್ಬಳಕೆ ಆರೋಪ: BJP ಮುಖಂಡ ಕಿರಿತ್...

ಐಎನ್‌ಎಸ್ ವಿಕ್ರಾಂತ್ ಉಳಿಸಿ ಅಭಿಯಾನದ 57 ಕೋಟಿ ರೂ ದುರ್ಬಳಕೆ ಆರೋಪ: BJP ಮುಖಂಡ ಕಿರಿತ್ ಸೋಮಯ್ಯ ವಿರುದ್ಧ FIR

- Advertisement -
- Advertisement -

ಮಹಾರಾಷ್ಟ್ರದ ಭೂ ಹಗರಣವೊಂದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಶೀವಸೇನೆಯ ಸಂಸದ ಸಂಜಯ್ ರಾವತ್‌ರವರ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಬೆನ್ನಲ್ಲೆ  ಮಹಾರಾಷ್ಟ್ರ ಪೊಲೀಸರು ಬಿಜೆಪಿ ಮುಖಂಡ ಮತ್ತು ಮಾಜಿ ಸಂಸದ ಕಿರಿತ್ ಸೋಮಯ್ಯ ಮತ್ತು ಅವರ ಪುತ್ರನ ವಿರುದ್ಧ ಐಎನ್‌ಎಸ್ ವಿಕ್ರಾಂತ್ ಉಳಿಸಿ ಅಭಿಯಾನದ 57 ಕೋಟಿ ದುರ್ಬಳಕೆ ಆರೋಪ ಹೊರಿಸಿ FIR ದಾಖಲಿಸಿದ್ದಾರೆ.

ವಾಯುವಿಮಾನಗಳನ್ನು ಸಾಗಿಸುವ ದೇಶದ ಮೊದಲ ನೌಕೆಯಾದ ಐಎನ್‌ಎಸ್ ವಿಕ್ರಾಂತ್ ಹೊರೆಯಾಗತೊಡಗಿದ್ದಾಗ ಅದನ್ನು ಉಳಿಸಲು ಕ್ರೌಡ್ ಫಂಡಿಂಗ್ ಮೂಲಕ ಹಣ ಸಂಗ್ರಹಿಸಲಾಗಿತ್ತು. ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಮತ್ತು ಅವರ ಮಗ ನೀಲ್ ಆ ಅಭಿಯಾನದ ನೇತೃತ್ವ ವಹಿಸಿ 57 ಕೋಟಿ ರೂ ಸಂಗ್ರಹಿಸಿದ್ದರು. ಆದರೆ ಆ ಹಣವನ್ನು ರಾಜ್ಯದ ಬೊಕ್ಕಸಕ್ಕೆ ಹಾಕುವ ಬದಲು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಂಜಯ್ ರಾವತ್ ಆರೋಪಿಸಿದ್ದಾರೆ.

ಈ ಬೆನ್ನಲ್ಲೆ ನಿವೃತ್ತ ಹಿರಿಯ ಮಿಲಿಟರಿ ಅಧಿಕಾರಿಯವರ ದೂರು ಆಧರಿಸಿ ಟ್ರಾಂಬೆ ಪೊಲೀಸರು ಐಪಿಸಿ ಸೆಕ್ಷನ್ 420 (ವಂಚನೆ ಮತ್ತು ಆಸ್ತಿ ಹಂಚಿಕೆಯಲ್ಲಿ ಅಪ್ರಾಮಾಣಿಕತೆ), 406 (ಕ್ರಿಮಿನಲ್ ಉಲ್ಲಂಘನೆಗಾಗಿ ಶಿಕ್ಷೆ) ಮತ್ತು 34 (ಸಾಮಾನ್ಯ ಉದ್ದೇಶಗಳು) ಪ್ರಕರಣಗಳ ಅಡಿಯಲ್ಲಿ ಸೋಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

“ಐಎನ್‌ಎಸ್ ವಿಕ್ರಾಂತ್ ಅನ್ನು ವಸ್ತುಸಂಗ್ರಹಾಲಯವನ್ನಾಗಿ ಮಾಡಲು ಸಾರ್ವಜನಿಕರಿಂದ 56 ಕೋಟಿ ರೂ ಸಂಗ್ರಹಿಸಲು 2013-14ರಲ್ಲಿ ಕಿರಿತ್ ಸೋಮಯ್ಯ ನೇತೃತ್ವದಲ್ಲಿ ಅಭಿಯಾನ ನಡೆಸಲಾಗಿತ್ತು. ಈ ಮೊತ್ತವನ್ನು ರಾಜಭವನಕ್ಕೆ ಠೇವಣಿ ಇಡಬೇಕಿತ್ತು. ಆದರೆ ಆರ್‌ಟಿಐ ದಾಖಲೆಗಳ ಪ್ರಕಾರ ಆ ಹಣವನ್ನು ಎಂದಿಗೂ ಠೇವಣಿ ಮಾಡಲಾಗಿಲ್ಲ ಎಂದು ರಾವತ್ ಹೇಳಿದ್ದರು.

ಈ ಕುರಿತು ಟ್ವೀಟ್ ಮಾಡಿದ್ದ ಅವರು, “ಐಎನ್‌ಎಸ್ ವಿಕ್ರಾಂತ್ ಹೆಸರಿನಲ್ಲಿ 56 ಕೋಟಿ ರೂಪಾಯಿ ವಸೂಲಿ ಮಾಡಿ ಜನರನ್ನು ವಂಚಿಸಿದ ಸೋಮಯ್ಯ ಮತ್ತು ಆತನ ಮಗ ಜೈಲು ಸೇರಬೇಕಾಗುತ್ತದೆ. ಕಿರಿತ್ ಸೋಮಯ್ಯ ಮಹಾರಾಷ್ಟ್ರ ದ್ರೋಹಿ ಮತ್ತು ದೇಶದ್ರೋಹಿ. ಇನ್ನು ಮುಂದೆ ಜನ ಸುಮ್ಮನಿರಬಾರದು. ಸೈನಿಕರ ಶೋಷಣೆ ಮಾಡುತ್ತಿರುವ ಬಿಜೆಪಿಯವರು ಉತ್ತರ ಕೊಡಬೇಕು” ಎಂದು ಕಿಡಿಕಾರಿದ್ದಾರೆ.

ಈ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡರು, “ಆರೋಪಗಳು ನಿರಾಧಾರವಾಗಿವೆ. ಶಿವಸೇನೆಗೆ ಧೈರ್ಯವಿದ್ದರೆ ದಾಖಲೆಗಳನ್ನು ಮುಂದಿಡಲಿ” ಎಂದು ಸವಾಲು ಹಾಕಿದ್ದಾರೆ.

2019ರ ವಿಧಾನಸಭಾ ಚುನಾವಣೆಯವರೆಗೂ ಬಿಜೆಪಿ ಮತ್ತು ಶಿವಸೇನೆ ಮಿತ್ರಪಕ್ಷಗಳಾಗಿದ್ದವು. ಆದರೆ ಫಲಿತಾಂಶ ಬಂದ ನಂತರ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡ ಶಿವಸೇನೆಯು ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷದ ಜೊತೆ ಸೇರಿ ಸರ್ಕಾರ ರಚಿಸಿದೆ. ಆಗಿನಿಂದ ಬಿಜೆಪಿ ವಿರುದ್ಧ ತೀವ್ರ ಟೀಕೆ ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...