Homeಮುಖಪುಟಐಎನ್‌ಎಸ್ ವಿಕ್ರಾಂತ್ ಉಳಿಸಿ ಅಭಿಯಾನದ 57 ಕೋಟಿ ರೂ ದುರ್ಬಳಕೆ ಆರೋಪ: BJP ಮುಖಂಡ ಕಿರಿತ್...

ಐಎನ್‌ಎಸ್ ವಿಕ್ರಾಂತ್ ಉಳಿಸಿ ಅಭಿಯಾನದ 57 ಕೋಟಿ ರೂ ದುರ್ಬಳಕೆ ಆರೋಪ: BJP ಮುಖಂಡ ಕಿರಿತ್ ಸೋಮಯ್ಯ ವಿರುದ್ಧ FIR

- Advertisement -
- Advertisement -

ಮಹಾರಾಷ್ಟ್ರದ ಭೂ ಹಗರಣವೊಂದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಶೀವಸೇನೆಯ ಸಂಸದ ಸಂಜಯ್ ರಾವತ್‌ರವರ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಬೆನ್ನಲ್ಲೆ  ಮಹಾರಾಷ್ಟ್ರ ಪೊಲೀಸರು ಬಿಜೆಪಿ ಮುಖಂಡ ಮತ್ತು ಮಾಜಿ ಸಂಸದ ಕಿರಿತ್ ಸೋಮಯ್ಯ ಮತ್ತು ಅವರ ಪುತ್ರನ ವಿರುದ್ಧ ಐಎನ್‌ಎಸ್ ವಿಕ್ರಾಂತ್ ಉಳಿಸಿ ಅಭಿಯಾನದ 57 ಕೋಟಿ ದುರ್ಬಳಕೆ ಆರೋಪ ಹೊರಿಸಿ FIR ದಾಖಲಿಸಿದ್ದಾರೆ.

ವಾಯುವಿಮಾನಗಳನ್ನು ಸಾಗಿಸುವ ದೇಶದ ಮೊದಲ ನೌಕೆಯಾದ ಐಎನ್‌ಎಸ್ ವಿಕ್ರಾಂತ್ ಹೊರೆಯಾಗತೊಡಗಿದ್ದಾಗ ಅದನ್ನು ಉಳಿಸಲು ಕ್ರೌಡ್ ಫಂಡಿಂಗ್ ಮೂಲಕ ಹಣ ಸಂಗ್ರಹಿಸಲಾಗಿತ್ತು. ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಮತ್ತು ಅವರ ಮಗ ನೀಲ್ ಆ ಅಭಿಯಾನದ ನೇತೃತ್ವ ವಹಿಸಿ 57 ಕೋಟಿ ರೂ ಸಂಗ್ರಹಿಸಿದ್ದರು. ಆದರೆ ಆ ಹಣವನ್ನು ರಾಜ್ಯದ ಬೊಕ್ಕಸಕ್ಕೆ ಹಾಕುವ ಬದಲು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಂಜಯ್ ರಾವತ್ ಆರೋಪಿಸಿದ್ದಾರೆ.

ಈ ಬೆನ್ನಲ್ಲೆ ನಿವೃತ್ತ ಹಿರಿಯ ಮಿಲಿಟರಿ ಅಧಿಕಾರಿಯವರ ದೂರು ಆಧರಿಸಿ ಟ್ರಾಂಬೆ ಪೊಲೀಸರು ಐಪಿಸಿ ಸೆಕ್ಷನ್ 420 (ವಂಚನೆ ಮತ್ತು ಆಸ್ತಿ ಹಂಚಿಕೆಯಲ್ಲಿ ಅಪ್ರಾಮಾಣಿಕತೆ), 406 (ಕ್ರಿಮಿನಲ್ ಉಲ್ಲಂಘನೆಗಾಗಿ ಶಿಕ್ಷೆ) ಮತ್ತು 34 (ಸಾಮಾನ್ಯ ಉದ್ದೇಶಗಳು) ಪ್ರಕರಣಗಳ ಅಡಿಯಲ್ಲಿ ಸೋಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

“ಐಎನ್‌ಎಸ್ ವಿಕ್ರಾಂತ್ ಅನ್ನು ವಸ್ತುಸಂಗ್ರಹಾಲಯವನ್ನಾಗಿ ಮಾಡಲು ಸಾರ್ವಜನಿಕರಿಂದ 56 ಕೋಟಿ ರೂ ಸಂಗ್ರಹಿಸಲು 2013-14ರಲ್ಲಿ ಕಿರಿತ್ ಸೋಮಯ್ಯ ನೇತೃತ್ವದಲ್ಲಿ ಅಭಿಯಾನ ನಡೆಸಲಾಗಿತ್ತು. ಈ ಮೊತ್ತವನ್ನು ರಾಜಭವನಕ್ಕೆ ಠೇವಣಿ ಇಡಬೇಕಿತ್ತು. ಆದರೆ ಆರ್‌ಟಿಐ ದಾಖಲೆಗಳ ಪ್ರಕಾರ ಆ ಹಣವನ್ನು ಎಂದಿಗೂ ಠೇವಣಿ ಮಾಡಲಾಗಿಲ್ಲ ಎಂದು ರಾವತ್ ಹೇಳಿದ್ದರು.

ಈ ಕುರಿತು ಟ್ವೀಟ್ ಮಾಡಿದ್ದ ಅವರು, “ಐಎನ್‌ಎಸ್ ವಿಕ್ರಾಂತ್ ಹೆಸರಿನಲ್ಲಿ 56 ಕೋಟಿ ರೂಪಾಯಿ ವಸೂಲಿ ಮಾಡಿ ಜನರನ್ನು ವಂಚಿಸಿದ ಸೋಮಯ್ಯ ಮತ್ತು ಆತನ ಮಗ ಜೈಲು ಸೇರಬೇಕಾಗುತ್ತದೆ. ಕಿರಿತ್ ಸೋಮಯ್ಯ ಮಹಾರಾಷ್ಟ್ರ ದ್ರೋಹಿ ಮತ್ತು ದೇಶದ್ರೋಹಿ. ಇನ್ನು ಮುಂದೆ ಜನ ಸುಮ್ಮನಿರಬಾರದು. ಸೈನಿಕರ ಶೋಷಣೆ ಮಾಡುತ್ತಿರುವ ಬಿಜೆಪಿಯವರು ಉತ್ತರ ಕೊಡಬೇಕು” ಎಂದು ಕಿಡಿಕಾರಿದ್ದಾರೆ.

ಈ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡರು, “ಆರೋಪಗಳು ನಿರಾಧಾರವಾಗಿವೆ. ಶಿವಸೇನೆಗೆ ಧೈರ್ಯವಿದ್ದರೆ ದಾಖಲೆಗಳನ್ನು ಮುಂದಿಡಲಿ” ಎಂದು ಸವಾಲು ಹಾಕಿದ್ದಾರೆ.

2019ರ ವಿಧಾನಸಭಾ ಚುನಾವಣೆಯವರೆಗೂ ಬಿಜೆಪಿ ಮತ್ತು ಶಿವಸೇನೆ ಮಿತ್ರಪಕ್ಷಗಳಾಗಿದ್ದವು. ಆದರೆ ಫಲಿತಾಂಶ ಬಂದ ನಂತರ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡ ಶಿವಸೇನೆಯು ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷದ ಜೊತೆ ಸೇರಿ ಸರ್ಕಾರ ರಚಿಸಿದೆ. ಆಗಿನಿಂದ ಬಿಜೆಪಿ ವಿರುದ್ಧ ತೀವ್ರ ಟೀಕೆ ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....