Homeಮುಖಪುಟಐಎನ್‌ಎಸ್ ವಿಕ್ರಾಂತ್ ಉಳಿಸಿ ಅಭಿಯಾನದ 57 ಕೋಟಿ ರೂ ದುರ್ಬಳಕೆ ಆರೋಪ: BJP ಮುಖಂಡ ಕಿರಿತ್...

ಐಎನ್‌ಎಸ್ ವಿಕ್ರಾಂತ್ ಉಳಿಸಿ ಅಭಿಯಾನದ 57 ಕೋಟಿ ರೂ ದುರ್ಬಳಕೆ ಆರೋಪ: BJP ಮುಖಂಡ ಕಿರಿತ್ ಸೋಮಯ್ಯ ವಿರುದ್ಧ FIR

- Advertisement -
- Advertisement -

ಮಹಾರಾಷ್ಟ್ರದ ಭೂ ಹಗರಣವೊಂದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಶೀವಸೇನೆಯ ಸಂಸದ ಸಂಜಯ್ ರಾವತ್‌ರವರ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಬೆನ್ನಲ್ಲೆ  ಮಹಾರಾಷ್ಟ್ರ ಪೊಲೀಸರು ಬಿಜೆಪಿ ಮುಖಂಡ ಮತ್ತು ಮಾಜಿ ಸಂಸದ ಕಿರಿತ್ ಸೋಮಯ್ಯ ಮತ್ತು ಅವರ ಪುತ್ರನ ವಿರುದ್ಧ ಐಎನ್‌ಎಸ್ ವಿಕ್ರಾಂತ್ ಉಳಿಸಿ ಅಭಿಯಾನದ 57 ಕೋಟಿ ದುರ್ಬಳಕೆ ಆರೋಪ ಹೊರಿಸಿ FIR ದಾಖಲಿಸಿದ್ದಾರೆ.

ವಾಯುವಿಮಾನಗಳನ್ನು ಸಾಗಿಸುವ ದೇಶದ ಮೊದಲ ನೌಕೆಯಾದ ಐಎನ್‌ಎಸ್ ವಿಕ್ರಾಂತ್ ಹೊರೆಯಾಗತೊಡಗಿದ್ದಾಗ ಅದನ್ನು ಉಳಿಸಲು ಕ್ರೌಡ್ ಫಂಡಿಂಗ್ ಮೂಲಕ ಹಣ ಸಂಗ್ರಹಿಸಲಾಗಿತ್ತು. ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಮತ್ತು ಅವರ ಮಗ ನೀಲ್ ಆ ಅಭಿಯಾನದ ನೇತೃತ್ವ ವಹಿಸಿ 57 ಕೋಟಿ ರೂ ಸಂಗ್ರಹಿಸಿದ್ದರು. ಆದರೆ ಆ ಹಣವನ್ನು ರಾಜ್ಯದ ಬೊಕ್ಕಸಕ್ಕೆ ಹಾಕುವ ಬದಲು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಂಜಯ್ ರಾವತ್ ಆರೋಪಿಸಿದ್ದಾರೆ.

ಈ ಬೆನ್ನಲ್ಲೆ ನಿವೃತ್ತ ಹಿರಿಯ ಮಿಲಿಟರಿ ಅಧಿಕಾರಿಯವರ ದೂರು ಆಧರಿಸಿ ಟ್ರಾಂಬೆ ಪೊಲೀಸರು ಐಪಿಸಿ ಸೆಕ್ಷನ್ 420 (ವಂಚನೆ ಮತ್ತು ಆಸ್ತಿ ಹಂಚಿಕೆಯಲ್ಲಿ ಅಪ್ರಾಮಾಣಿಕತೆ), 406 (ಕ್ರಿಮಿನಲ್ ಉಲ್ಲಂಘನೆಗಾಗಿ ಶಿಕ್ಷೆ) ಮತ್ತು 34 (ಸಾಮಾನ್ಯ ಉದ್ದೇಶಗಳು) ಪ್ರಕರಣಗಳ ಅಡಿಯಲ್ಲಿ ಸೋಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

“ಐಎನ್‌ಎಸ್ ವಿಕ್ರಾಂತ್ ಅನ್ನು ವಸ್ತುಸಂಗ್ರಹಾಲಯವನ್ನಾಗಿ ಮಾಡಲು ಸಾರ್ವಜನಿಕರಿಂದ 56 ಕೋಟಿ ರೂ ಸಂಗ್ರಹಿಸಲು 2013-14ರಲ್ಲಿ ಕಿರಿತ್ ಸೋಮಯ್ಯ ನೇತೃತ್ವದಲ್ಲಿ ಅಭಿಯಾನ ನಡೆಸಲಾಗಿತ್ತು. ಈ ಮೊತ್ತವನ್ನು ರಾಜಭವನಕ್ಕೆ ಠೇವಣಿ ಇಡಬೇಕಿತ್ತು. ಆದರೆ ಆರ್‌ಟಿಐ ದಾಖಲೆಗಳ ಪ್ರಕಾರ ಆ ಹಣವನ್ನು ಎಂದಿಗೂ ಠೇವಣಿ ಮಾಡಲಾಗಿಲ್ಲ ಎಂದು ರಾವತ್ ಹೇಳಿದ್ದರು.

ಈ ಕುರಿತು ಟ್ವೀಟ್ ಮಾಡಿದ್ದ ಅವರು, “ಐಎನ್‌ಎಸ್ ವಿಕ್ರಾಂತ್ ಹೆಸರಿನಲ್ಲಿ 56 ಕೋಟಿ ರೂಪಾಯಿ ವಸೂಲಿ ಮಾಡಿ ಜನರನ್ನು ವಂಚಿಸಿದ ಸೋಮಯ್ಯ ಮತ್ತು ಆತನ ಮಗ ಜೈಲು ಸೇರಬೇಕಾಗುತ್ತದೆ. ಕಿರಿತ್ ಸೋಮಯ್ಯ ಮಹಾರಾಷ್ಟ್ರ ದ್ರೋಹಿ ಮತ್ತು ದೇಶದ್ರೋಹಿ. ಇನ್ನು ಮುಂದೆ ಜನ ಸುಮ್ಮನಿರಬಾರದು. ಸೈನಿಕರ ಶೋಷಣೆ ಮಾಡುತ್ತಿರುವ ಬಿಜೆಪಿಯವರು ಉತ್ತರ ಕೊಡಬೇಕು” ಎಂದು ಕಿಡಿಕಾರಿದ್ದಾರೆ.

ಈ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡರು, “ಆರೋಪಗಳು ನಿರಾಧಾರವಾಗಿವೆ. ಶಿವಸೇನೆಗೆ ಧೈರ್ಯವಿದ್ದರೆ ದಾಖಲೆಗಳನ್ನು ಮುಂದಿಡಲಿ” ಎಂದು ಸವಾಲು ಹಾಕಿದ್ದಾರೆ.

2019ರ ವಿಧಾನಸಭಾ ಚುನಾವಣೆಯವರೆಗೂ ಬಿಜೆಪಿ ಮತ್ತು ಶಿವಸೇನೆ ಮಿತ್ರಪಕ್ಷಗಳಾಗಿದ್ದವು. ಆದರೆ ಫಲಿತಾಂಶ ಬಂದ ನಂತರ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡ ಶಿವಸೇನೆಯು ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷದ ಜೊತೆ ಸೇರಿ ಸರ್ಕಾರ ರಚಿಸಿದೆ. ಆಗಿನಿಂದ ಬಿಜೆಪಿ ವಿರುದ್ಧ ತೀವ್ರ ಟೀಕೆ ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...