Homeಮುಖಪುಟಐಎನ್‌ಎಸ್ ವಿಕ್ರಾಂತ್ ಉಳಿಸಿ ಅಭಿಯಾನದ 57 ಕೋಟಿ ರೂ ದುರ್ಬಳಕೆ ಆರೋಪ: BJP ಮುಖಂಡ ಕಿರಿತ್...

ಐಎನ್‌ಎಸ್ ವಿಕ್ರಾಂತ್ ಉಳಿಸಿ ಅಭಿಯಾನದ 57 ಕೋಟಿ ರೂ ದುರ್ಬಳಕೆ ಆರೋಪ: BJP ಮುಖಂಡ ಕಿರಿತ್ ಸೋಮಯ್ಯ ವಿರುದ್ಧ FIR

- Advertisement -
- Advertisement -

ಮಹಾರಾಷ್ಟ್ರದ ಭೂ ಹಗರಣವೊಂದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಶೀವಸೇನೆಯ ಸಂಸದ ಸಂಜಯ್ ರಾವತ್‌ರವರ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಬೆನ್ನಲ್ಲೆ  ಮಹಾರಾಷ್ಟ್ರ ಪೊಲೀಸರು ಬಿಜೆಪಿ ಮುಖಂಡ ಮತ್ತು ಮಾಜಿ ಸಂಸದ ಕಿರಿತ್ ಸೋಮಯ್ಯ ಮತ್ತು ಅವರ ಪುತ್ರನ ವಿರುದ್ಧ ಐಎನ್‌ಎಸ್ ವಿಕ್ರಾಂತ್ ಉಳಿಸಿ ಅಭಿಯಾನದ 57 ಕೋಟಿ ದುರ್ಬಳಕೆ ಆರೋಪ ಹೊರಿಸಿ FIR ದಾಖಲಿಸಿದ್ದಾರೆ.

ವಾಯುವಿಮಾನಗಳನ್ನು ಸಾಗಿಸುವ ದೇಶದ ಮೊದಲ ನೌಕೆಯಾದ ಐಎನ್‌ಎಸ್ ವಿಕ್ರಾಂತ್ ಹೊರೆಯಾಗತೊಡಗಿದ್ದಾಗ ಅದನ್ನು ಉಳಿಸಲು ಕ್ರೌಡ್ ಫಂಡಿಂಗ್ ಮೂಲಕ ಹಣ ಸಂಗ್ರಹಿಸಲಾಗಿತ್ತು. ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಮತ್ತು ಅವರ ಮಗ ನೀಲ್ ಆ ಅಭಿಯಾನದ ನೇತೃತ್ವ ವಹಿಸಿ 57 ಕೋಟಿ ರೂ ಸಂಗ್ರಹಿಸಿದ್ದರು. ಆದರೆ ಆ ಹಣವನ್ನು ರಾಜ್ಯದ ಬೊಕ್ಕಸಕ್ಕೆ ಹಾಕುವ ಬದಲು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಂಜಯ್ ರಾವತ್ ಆರೋಪಿಸಿದ್ದಾರೆ.

ಈ ಬೆನ್ನಲ್ಲೆ ನಿವೃತ್ತ ಹಿರಿಯ ಮಿಲಿಟರಿ ಅಧಿಕಾರಿಯವರ ದೂರು ಆಧರಿಸಿ ಟ್ರಾಂಬೆ ಪೊಲೀಸರು ಐಪಿಸಿ ಸೆಕ್ಷನ್ 420 (ವಂಚನೆ ಮತ್ತು ಆಸ್ತಿ ಹಂಚಿಕೆಯಲ್ಲಿ ಅಪ್ರಾಮಾಣಿಕತೆ), 406 (ಕ್ರಿಮಿನಲ್ ಉಲ್ಲಂಘನೆಗಾಗಿ ಶಿಕ್ಷೆ) ಮತ್ತು 34 (ಸಾಮಾನ್ಯ ಉದ್ದೇಶಗಳು) ಪ್ರಕರಣಗಳ ಅಡಿಯಲ್ಲಿ ಸೋಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

“ಐಎನ್‌ಎಸ್ ವಿಕ್ರಾಂತ್ ಅನ್ನು ವಸ್ತುಸಂಗ್ರಹಾಲಯವನ್ನಾಗಿ ಮಾಡಲು ಸಾರ್ವಜನಿಕರಿಂದ 56 ಕೋಟಿ ರೂ ಸಂಗ್ರಹಿಸಲು 2013-14ರಲ್ಲಿ ಕಿರಿತ್ ಸೋಮಯ್ಯ ನೇತೃತ್ವದಲ್ಲಿ ಅಭಿಯಾನ ನಡೆಸಲಾಗಿತ್ತು. ಈ ಮೊತ್ತವನ್ನು ರಾಜಭವನಕ್ಕೆ ಠೇವಣಿ ಇಡಬೇಕಿತ್ತು. ಆದರೆ ಆರ್‌ಟಿಐ ದಾಖಲೆಗಳ ಪ್ರಕಾರ ಆ ಹಣವನ್ನು ಎಂದಿಗೂ ಠೇವಣಿ ಮಾಡಲಾಗಿಲ್ಲ ಎಂದು ರಾವತ್ ಹೇಳಿದ್ದರು.

ಈ ಕುರಿತು ಟ್ವೀಟ್ ಮಾಡಿದ್ದ ಅವರು, “ಐಎನ್‌ಎಸ್ ವಿಕ್ರಾಂತ್ ಹೆಸರಿನಲ್ಲಿ 56 ಕೋಟಿ ರೂಪಾಯಿ ವಸೂಲಿ ಮಾಡಿ ಜನರನ್ನು ವಂಚಿಸಿದ ಸೋಮಯ್ಯ ಮತ್ತು ಆತನ ಮಗ ಜೈಲು ಸೇರಬೇಕಾಗುತ್ತದೆ. ಕಿರಿತ್ ಸೋಮಯ್ಯ ಮಹಾರಾಷ್ಟ್ರ ದ್ರೋಹಿ ಮತ್ತು ದೇಶದ್ರೋಹಿ. ಇನ್ನು ಮುಂದೆ ಜನ ಸುಮ್ಮನಿರಬಾರದು. ಸೈನಿಕರ ಶೋಷಣೆ ಮಾಡುತ್ತಿರುವ ಬಿಜೆಪಿಯವರು ಉತ್ತರ ಕೊಡಬೇಕು” ಎಂದು ಕಿಡಿಕಾರಿದ್ದಾರೆ.

ಈ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡರು, “ಆರೋಪಗಳು ನಿರಾಧಾರವಾಗಿವೆ. ಶಿವಸೇನೆಗೆ ಧೈರ್ಯವಿದ್ದರೆ ದಾಖಲೆಗಳನ್ನು ಮುಂದಿಡಲಿ” ಎಂದು ಸವಾಲು ಹಾಕಿದ್ದಾರೆ.

2019ರ ವಿಧಾನಸಭಾ ಚುನಾವಣೆಯವರೆಗೂ ಬಿಜೆಪಿ ಮತ್ತು ಶಿವಸೇನೆ ಮಿತ್ರಪಕ್ಷಗಳಾಗಿದ್ದವು. ಆದರೆ ಫಲಿತಾಂಶ ಬಂದ ನಂತರ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡ ಶಿವಸೇನೆಯು ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷದ ಜೊತೆ ಸೇರಿ ಸರ್ಕಾರ ರಚಿಸಿದೆ. ಆಗಿನಿಂದ ಬಿಜೆಪಿ ವಿರುದ್ಧ ತೀವ್ರ ಟೀಕೆ ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...