Homeಕರ್ನಾಟಕಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌...

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌ ಮುನಿಯಪ್ಪ

- Advertisement -
- Advertisement -

ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 461 ಎಫ್‌ಐಆರ್‌ಗಳನ್ನು ದಾಖಲಿಸಿ, 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್‌ ಮುನಿಯಪ್ಪ ಮಾಹಿತಿ ನೀಡಿದರು.

ಸೋಮವಾರ (ಡಿಸೆಂಬರ್ 8) ವಿಧಾನಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಸಿ.ಟಿ ರವಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಬಿಪಿಎಲ್ ಪಡಿತರ ಚೀಟಿದಾರರಿಗೆ ವಿತರಿಸುವ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಣೆ ಮಾಡಿ ಹೊರ ದೇಶಗಳಿಗೆ, ರಾಜ್ಯಗಳಿಗೆ ಮಾರಾಟ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ?. ಈ ಸಂಬಂಧ ದಾಖಲಾದ ಪ್ರಕರಣದಲ್ಲಿ ಎಷ್ಟು ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ, ಎಷ್ಟು ವಾಹನಗಳನ್ನು ಜಪ್ತಿ ಮಾಡಲಾಗಿದೆ ಮತ್ತು ಎಷ್ಟು ಜನರ ಮೇಲೆ ಮೊಕದ್ದಮ್ಮೆ ದಾಖಲಿಸಲಾಗಿದೆ ಎಂದು ಸಿ.ಟಿ ರವಿ ಕೇಳಿದರು.

ಮುಂದುವರಿದು, ಅನ್ನಭಾಗ್ಯದ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟದ ಪ್ರಕರಣಗಳ ತನಿಖೆಗೆ ಸರ್ಕಾರ ಆದೇಶ ನೀಡಿದೆಯೇ? ಈ ಪ್ರಕರಣಗಳಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ? ಹೂಡಿರುವ ಪ್ರಕರಣಗಳು ಯಾವುವು? ಅಕ್ರಮದಲ್ಲಿ ಶಾಮೀಲಾಗಿರುವ ಅಧಿಕಾರಿಗಳ ವಿರುದ್ದ ಕೈಗೊಂಡಿರುವ ಕ್ರಮ ಏನು? ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಮುನಿಯಪ್ಪ, 2025-26ರಲ್ಲಿ ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 485 ಮೊಕದ್ದಮೆಗಳನ್ನು ಹೂಡಲಾಗಿದೆ, 461 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ, 570 ಜನರನ್ನು ಬಂಧಿಸಲಾಗಿದೆ. 29,603 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಂಡಿದ್ದೇವೆ ಮತ್ತು 314 ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಯಾದಗಿರಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಕೊಪ್ಪಳ ಗೋದಾಮಿನ ಪ್ರಕರಣದಲ್ಲಿ ಸುಮಾರು 330 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡು ಎಫ್‌ಐಆರ್ ದಾಖಲಿಸಲಾಗಿದೆ. ಬಾಗಲಕೋಟೆಯಲ್ಲಿ ಎಫ್‌ಐರ್ ದಾಖಲಿಸಲಾಗಿದೆ. ಅಲ್ಲಿನ ಪ್ರಕರಣದಲ್ಲಿ ಒಬ್ಬ ಪತ್ರಕರ್ತನ ಕೊಲೆಯಾಗಿದೆ. ಬಸವರಾಜ್ ರಾಮಪ್ಪ ಖಾನಗೊಂಡ ಎಂಬವರು ಟಿವಿಎಸ್‌ ಸ್ಕೂಟರ್‌ನಲ್ಲಿ ತೆರಳುವಾಗ ಅಪಘಾತವೆಸಗಿ ಕೊಲೆ ಮಾಡಲಾಗಿದೆ. ಈ ಕುರಿತು ಅವರ ಪತ್ನಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಅದು ಈಗ ವಿಚಾರಣೆಯ ಹಂತದಲ್ಲಿದೆ ಎಂದು ಹೇಳಿದರು.

ಆಹಾರ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾಲ, ಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶನ ನೀಡಿ, ತಪ್ಪಿತಸ್ಥರ ವಿರುದ್ದ ಅಗತ್ಯ ವಸ್ತುಗಳ ಕಾಯ್ದೆ 1995ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಮುನಿಯಪ್ಪ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಸಿ.ಟಿ ರವಿ, ಸಿಂಗಾಪುರದಲ್ಲಿ ಇದೇ ಪಾಲಿಶ್ ಮಾಡಿದ ಅಕ್ಕಿಯನ್ನು 25 ಕೆ.ಜಿಗೆ 8 ಸಾವಿರ ರೂಪಾಯಿಯಂತೆ ಮಾರಾಟ ಮಾಡಲಾಗುತ್ತಿದೆ. ದುಬೈನಲ್ಲಿ 15 ಕೆ.ಜಿ ಅಕ್ಕಿಯನ್ನು 1,500 ರೂಪಾಯಿಗೆ ಮಾರಾಲಾಗುತ್ತಿದೆ ಎಂಬ ಮಾಹಿತಿಯಿದೆ. ಹಾಗಾಗಿ, ಬಡವರಿಗೆ ಅನ್ನಭಾಗ್ಯ ಎಂದು ಕೊಡಲಾಗುತ್ತಿರುವ ಅಕ್ಕಿ ಬಡವರಿಗೆ ಸಿಗುತ್ತಿಲ್ಲ ಎಂದು ಹೇಳಿದರು.

ಇದರಲ್ಲಿ ಅಧಿಕಾರಿಗಳು ಶಾಮಿಲಾಗಿದ್ದಾರೆ. ಗೋದಾಮುಗಳಿಗೆ ಬರುವ ಮುಂಚೆಯೇ ಕ್ವಿಂಟಾಲ್‌ಗಟ್ಟಲೆ ಅಕ್ಕಿ ಮಾಯವಾಗುತ್ತಿದೆ. ನೂರಾರು ಪ್ರಕರಣಗಳು ದಾಖಲಾಗಿರುವುದರಿಂದ. ಇದರ ಹಿಂದೆ ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದರ ಜಾಲ ಇರಬಹುದು. ಹಾಗಾಗಿ, ಈ ಬಗ್ಗೆ ಎಸ್‌ಐಟಿ ತನಿಖೆ ನಡೆಸುವ ಕುರಿತು ಸರ್ಕಾರ ಚಿಂತಿಸಿದೆಯಾ? ಈ ಅಕ್ರಮ ತಡೆಯಲು ಕಠಿಣ ಕ್ರಮವನ್ನು ಕೈಗೊಳ್ಳುವ ಬಗ್ಗೆ ಯೋಚಿಸಿದೆಯಾ? ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಮುನಿಯಪ್ಪ, ಅಗತ್ಯ ವಸ್ತುಗಳ ಕಾಯ್ದೆ ಅಡಿ ಎಲ್ಲಾ ಕ್ರಮ ಕೈಗೊಳ್ಳುವ ಅಧಿಕಾರ ಆಹಾರ ಇಲಾಖೆಯ ಉಪ ಆಯುಕ್ತರಿಗೆ ಇದೆ. ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಹಾಗಾಗಿಯೇ ಅಕ್ರಮಗಳ ಬಗ್ಗೆ ಇಷ್ಟೊಂದು ತನಿಖೆ ನಡೆದು ಮಾಹಿತಿಯನ್ನು ಒದಗಿಸಿದ್ದೇವೆ. ಬಾಗಲಕೋಟೆಯ ಕೊಲೆ ಪ್ರಕರಣ ಸಂಬಂಧ ಮೂರ್ನಾಲು ಮಂದಿಯನ್ನು ಬಂಧಿಸಲಾಗಿದೆ. ಅವರೆಲ್ಲ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದರು.

ಎಸ್‌ಐಟಿ ರಚಿಸುವ ಅವಶ್ಯಕತೆ ಇಲ್ಲ. ಪ್ರಸ್ತುತ ಇರುವ ಕಾನೂನಿನಲ್ಲಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವ ಅವಕಾಶವಿದೆ. ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸನಾತನ ಧರ್ಮ ವಿವಾದ’: ಉದಯನಿಧಿ ಹೇಳಿಕೆ ‘ದ್ವೇಷ ಭಾಷಣ’ಕ್ಕೆ ಸಮ ಎಂದು ಬಿಜೆಪಿ ನಾಯಕನ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಮಧುರೈ: ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ ನಿರ್ಮೂಲನೆ’ ಕುರಿತ ಹೇಳಿಕೆಗಳನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ಬಿಜೆಪಿ ಐಟಿ ವಿಭಾಗದ ನಾಯಕ ಅಮಿತ್ ಮಾಳವೀಯ ಅವರ ವಿರುದ್ಧ ದಾಖಲಾಗಿದ್ದ...

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು...

ಸ್ಥಳದಲ್ಲೇ ದಂಡ ಪಾವತಿಸುವಂತೆ ಸಂಚಾರ ಪೊಲೀಸರು ಒತ್ತಾಯಿಸುವಂತಿಲ್ಲ: ತೆಲಂಗಾಣ ಹೈಕೋರ್ಟ್

ಸಂಚಾರ ನಿಯಮ ಉಲ್ಲಂಘಿಸುವವರ ಬ್ಯಾಂಕ್ ಖಾತೆಗಳಿಂದ ಸ್ವಯಂಚಾಲಿತವಾಗಿ ದಂಡ ಕಡಿತಗೊಳಿಸಬೇಕೆಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚಿಸಿದ ಕೆಲವು ದಿನಗಳ ನಂತರ ಮಹತ್ವದ ತೀರ್ಪು ನೀಡಿರುವ ತೆಲಂಗಾಣ ಹೈಕೋರ್ಟ್, ಪೊಲೀಸರು ನಾಗರಿಕರನ್ನು ರಸ್ತೆಯಲ್ಲಿ ನಿಲ್ಲಿಸಿ...

ಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

ಮಧುರೈ: ತಮಿಳುನಾಡಿನ ಸುಮಾರು 170 ಎಸ್‌ಸಿ/ಎಸ್‌ಟಿ ಶಾಲೆ ಮತ್ತು ಹಾಸ್ಟೆಲ್ ಕಟ್ಟಡಗಳ ದುರಸ್ತಿ ಮತ್ತು ನಿರ್ಮಾಣ ಕಾರ್ಯಗಳಿಗೆ ತಮಿಳುನಾಡು ಆದಿ ದ್ರಾವಿಡರ್ ವಸತಿ ಅಭಿವೃದ್ಧಿ ನಿಗಮ (ಟಿಎಎಚ್‌ಡಿಸಿಒ) 50 ಕೋಟಿ ರೂ.ಗಳನ್ನು ಖರ್ಚು...

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ರಾಜ್ಯ ಸಂಸ್ಥೆ ತನಿಖೆ ಮಾಡಬಹುದು : ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರಿ ನೌಕರರು ಮಾಡುವ ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ಮತ್ತು ಆರೋಪಪಟ್ಟಿ ಸಲ್ಲಿಸಲು ಸಮರ್ಥರು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಕಾರ್ಯಚರಣೆ ಆರಂಭಿಸಿದ ಪಂಜಾಬ್ ಸರ್ಕಾರ

ಮಾದಕ ವಸ್ತುಗಳ ವಿರುದ್ಧದ ತನ್ನ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದು, ಪಂಜಾಬ್ ಸರ್ಕಾರ ಮಂಗಳವಾರ ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನ ಆರಂಭಿಸಿದ್ದು, ಶಸ್ತ್ರಾಸ್ತ್ರ ಪೂರೈಕೆ ಸರಪಳಿಗಳು, ಲಾಜಿಸ್ಟಿಕ್ಸ್, ಅಡಗುತಾಣಗಳು ಮತ್ತು ಸಂವಹನ ಜಾಲಗಳು ಸೇರಿದಂತೆ...

‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ "ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ರದ್ದುಗೊಳಿಸಲು ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ : ತಮಿಳುನಾಡು ಸಿಎಂ ಸ್ಟಾಲಿನ್

ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲರು ವಾರ್ಷಿಕ ಭಾಷಣ ಮಾಡುವ ಸಂಪ್ರದಾಯವನ್ನು ರದ್ದುಗೊಳಿಸುವ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌ ರವಿ ನಡುವೆ ಜಟಾಪಟಿ ನಡೆದು,...

ಅಸ್ಸಾಂ| ದನ ಕಳ್ಳತನದ ಶಂಕೆಯಿಂದ ಗುಂಪು ದಾಳಿ; ಓರ್ವ ಸಾವು-ನಾಲ್ವರ ಸ್ಥಿತಿ ಗಂಭೀರ

ದನ ಕಳ್ಳತನದ ಶಂಕೆಯ ಮೇಲೆ ಗುಂಪೊಂದು ದಾಳಿ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ (ಜ.19) ಅಸ್ಸಾಂನ ಕೊಕ್ರಜಾರ್‌ನಲ್ಲಿ ನಡೆದಿದೆ. ಬಲಿಪಶುಗಳು, ರಸ್ತೆ ನಿರ್ಮಾಣ ಯೋಜನೆಯೊಮದರಲ್ಲಿ...

ಕರ್ನಾಟಕ: ಐದು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಮೇಲಿನ ಅಪರಾಧಗಳು ಶೇ. 37.7 ರಷ್ಟು ಏರಿಕೆ; ಬೆಂಗಳೂರಿನದೇ ಅಗ್ರಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಕಠಿಣ ಕಾನೂನುಗಳಿದ್ದರೂ, ಈ ಸಮುದಾಯಗಳ ಮೇಲಿನ ಅಪರಾಧಗಳು ಕಳೆದ ಐದು ವರ್ಷಗಳಲ್ಲಿ ಶೇ. 37.74 ರಷ್ಟು ಹೆಚ್ಚಾಗಿದ್ದು,...