Homeಕರ್ನಾಟಕಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌...

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌ ಮುನಿಯಪ್ಪ

- Advertisement -
- Advertisement -

ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 461 ಎಫ್‌ಐಆರ್‌ಗಳನ್ನು ದಾಖಲಿಸಿ, 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್‌ ಮುನಿಯಪ್ಪ ಮಾಹಿತಿ ನೀಡಿದರು.

ಸೋಮವಾರ (ಡಿಸೆಂಬರ್ 8) ವಿಧಾನಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಸಿ.ಟಿ ರವಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಬಿಪಿಎಲ್ ಪಡಿತರ ಚೀಟಿದಾರರಿಗೆ ವಿತರಿಸುವ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಣೆ ಮಾಡಿ ಹೊರ ದೇಶಗಳಿಗೆ, ರಾಜ್ಯಗಳಿಗೆ ಮಾರಾಟ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ?. ಈ ಸಂಬಂಧ ದಾಖಲಾದ ಪ್ರಕರಣದಲ್ಲಿ ಎಷ್ಟು ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ, ಎಷ್ಟು ವಾಹನಗಳನ್ನು ಜಪ್ತಿ ಮಾಡಲಾಗಿದೆ ಮತ್ತು ಎಷ್ಟು ಜನರ ಮೇಲೆ ಮೊಕದ್ದಮ್ಮೆ ದಾಖಲಿಸಲಾಗಿದೆ ಎಂದು ಸಿ.ಟಿ ರವಿ ಕೇಳಿದರು.

ಮುಂದುವರಿದು, ಅನ್ನಭಾಗ್ಯದ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟದ ಪ್ರಕರಣಗಳ ತನಿಖೆಗೆ ಸರ್ಕಾರ ಆದೇಶ ನೀಡಿದೆಯೇ? ಈ ಪ್ರಕರಣಗಳಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ? ಹೂಡಿರುವ ಪ್ರಕರಣಗಳು ಯಾವುವು? ಅಕ್ರಮದಲ್ಲಿ ಶಾಮೀಲಾಗಿರುವ ಅಧಿಕಾರಿಗಳ ವಿರುದ್ದ ಕೈಗೊಂಡಿರುವ ಕ್ರಮ ಏನು? ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಮುನಿಯಪ್ಪ, 2025-26ರಲ್ಲಿ ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 485 ಮೊಕದ್ದಮೆಗಳನ್ನು ಹೂಡಲಾಗಿದೆ, 461 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ, 570 ಜನರನ್ನು ಬಂಧಿಸಲಾಗಿದೆ. 29,603 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಂಡಿದ್ದೇವೆ ಮತ್ತು 314 ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಯಾದಗಿರಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಕೊಪ್ಪಳ ಗೋದಾಮಿನ ಪ್ರಕರಣದಲ್ಲಿ ಸುಮಾರು 330 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡು ಎಫ್‌ಐಆರ್ ದಾಖಲಿಸಲಾಗಿದೆ. ಬಾಗಲಕೋಟೆಯಲ್ಲಿ ಎಫ್‌ಐರ್ ದಾಖಲಿಸಲಾಗಿದೆ. ಅಲ್ಲಿನ ಪ್ರಕರಣದಲ್ಲಿ ಒಬ್ಬ ಪತ್ರಕರ್ತನ ಕೊಲೆಯಾಗಿದೆ. ಬಸವರಾಜ್ ರಾಮಪ್ಪ ಖಾನಗೊಂಡ ಎಂಬವರು ಟಿವಿಎಸ್‌ ಸ್ಕೂಟರ್‌ನಲ್ಲಿ ತೆರಳುವಾಗ ಅಪಘಾತವೆಸಗಿ ಕೊಲೆ ಮಾಡಲಾಗಿದೆ. ಈ ಕುರಿತು ಅವರ ಪತ್ನಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಅದು ಈಗ ವಿಚಾರಣೆಯ ಹಂತದಲ್ಲಿದೆ ಎಂದು ಹೇಳಿದರು.

ಆಹಾರ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾಲ, ಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶನ ನೀಡಿ, ತಪ್ಪಿತಸ್ಥರ ವಿರುದ್ದ ಅಗತ್ಯ ವಸ್ತುಗಳ ಕಾಯ್ದೆ 1995ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಮುನಿಯಪ್ಪ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಸಿ.ಟಿ ರವಿ, ಸಿಂಗಾಪುರದಲ್ಲಿ ಇದೇ ಪಾಲಿಶ್ ಮಾಡಿದ ಅಕ್ಕಿಯನ್ನು 25 ಕೆ.ಜಿಗೆ 8 ಸಾವಿರ ರೂಪಾಯಿಯಂತೆ ಮಾರಾಟ ಮಾಡಲಾಗುತ್ತಿದೆ. ದುಬೈನಲ್ಲಿ 15 ಕೆ.ಜಿ ಅಕ್ಕಿಯನ್ನು 1,500 ರೂಪಾಯಿಗೆ ಮಾರಾಲಾಗುತ್ತಿದೆ ಎಂಬ ಮಾಹಿತಿಯಿದೆ. ಹಾಗಾಗಿ, ಬಡವರಿಗೆ ಅನ್ನಭಾಗ್ಯ ಎಂದು ಕೊಡಲಾಗುತ್ತಿರುವ ಅಕ್ಕಿ ಬಡವರಿಗೆ ಸಿಗುತ್ತಿಲ್ಲ ಎಂದು ಹೇಳಿದರು.

ಇದರಲ್ಲಿ ಅಧಿಕಾರಿಗಳು ಶಾಮಿಲಾಗಿದ್ದಾರೆ. ಗೋದಾಮುಗಳಿಗೆ ಬರುವ ಮುಂಚೆಯೇ ಕ್ವಿಂಟಾಲ್‌ಗಟ್ಟಲೆ ಅಕ್ಕಿ ಮಾಯವಾಗುತ್ತಿದೆ. ನೂರಾರು ಪ್ರಕರಣಗಳು ದಾಖಲಾಗಿರುವುದರಿಂದ. ಇದರ ಹಿಂದೆ ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದರ ಜಾಲ ಇರಬಹುದು. ಹಾಗಾಗಿ, ಈ ಬಗ್ಗೆ ಎಸ್‌ಐಟಿ ತನಿಖೆ ನಡೆಸುವ ಕುರಿತು ಸರ್ಕಾರ ಚಿಂತಿಸಿದೆಯಾ? ಈ ಅಕ್ರಮ ತಡೆಯಲು ಕಠಿಣ ಕ್ರಮವನ್ನು ಕೈಗೊಳ್ಳುವ ಬಗ್ಗೆ ಯೋಚಿಸಿದೆಯಾ? ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಮುನಿಯಪ್ಪ, ಅಗತ್ಯ ವಸ್ತುಗಳ ಕಾಯ್ದೆ ಅಡಿ ಎಲ್ಲಾ ಕ್ರಮ ಕೈಗೊಳ್ಳುವ ಅಧಿಕಾರ ಆಹಾರ ಇಲಾಖೆಯ ಉಪ ಆಯುಕ್ತರಿಗೆ ಇದೆ. ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಹಾಗಾಗಿಯೇ ಅಕ್ರಮಗಳ ಬಗ್ಗೆ ಇಷ್ಟೊಂದು ತನಿಖೆ ನಡೆದು ಮಾಹಿತಿಯನ್ನು ಒದಗಿಸಿದ್ದೇವೆ. ಬಾಗಲಕೋಟೆಯ ಕೊಲೆ ಪ್ರಕರಣ ಸಂಬಂಧ ಮೂರ್ನಾಲು ಮಂದಿಯನ್ನು ಬಂಧಿಸಲಾಗಿದೆ. ಅವರೆಲ್ಲ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದರು.

ಎಸ್‌ಐಟಿ ರಚಿಸುವ ಅವಶ್ಯಕತೆ ಇಲ್ಲ. ಪ್ರಸ್ತುತ ಇರುವ ಕಾನೂನಿನಲ್ಲಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವ ಅವಕಾಶವಿದೆ. ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...