Homeಮುಖಪುಟವಕ್ಫ್ ಮಸೂದೆಗೆ 572 ತಿದ್ದುಪಡಿ ಸೂಚಿಸಿದ ಸಂಸದೀಯ ಸಮಿತಿ

ವಕ್ಫ್ ಮಸೂದೆಗೆ 572 ತಿದ್ದುಪಡಿ ಸೂಚಿಸಿದ ಸಂಸದೀಯ ಸಮಿತಿ

- Advertisement -
- Advertisement -

ವಕ್ಫ್ ತಿದ್ದುಪಡಿ ಮಸೂದೆಯ ಸಂಸದೀಯ ಸಮಿತಿಯ ಸದಸ್ಯರು ಸರ್ಕಾರ ಮತ್ತು ವಿರೋಧ ಪಕ್ಷದ ನಡುವೆ ಭಿನ್ನಾಭಿಪ್ರಾಯ ಮೂಡಿಸಿರುವ ಕರಡು ಶಾಸನಕ್ಕೆ 572 ತಿದ್ದುಪಡಿಗಳನ್ನು ಸೂಚಿಸಿದ್ದಾರೆ ಎಂದು TNIE ವರದಿ ಮಾಡಿದೆ. ಸಮಿತಿಯು ಸೋಮವಾರ ನಡೆಯುವ ತನ್ನ ಸಭೆಯಲ್ಲಿ ಷರತ್ತು ವಾರು ತಿದ್ದುಪಡಿಗಳನ್ನು ಚರ್ಚಿಸಲಿದ್ದು, ಬಿಜೆಪಿ ಮತ್ತು ವಿರೋಧ ಪಕ್ಷದ ಸದಸ್ಯರು ಮಸೂದೆಗೆ ತಿದ್ದುಪಡಿಗಳನ್ನು ಸಲ್ಲಿಸಲಿದ್ದಾರೆ. ವಕ್ಫ್ ಮಸೂದೆಗೆ

ಸಮಿತಿಯ ವಿಚಾರಣೆಯು ಕೊನೆಯ ಹಂತಕ್ಕೆ ತಲುಪುತ್ತಿದ್ದಂತೆ ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಮಿತಿಯು ಭಾನುವಾರ ತಡರಾತ್ರಿ ತಿದ್ದುಪಡಿಗಳ ಸಮಗ್ರ ಪಟ್ಟಿಯನ್ನು ವಿತರಿಸಿತು. ಆದಾಗ್ಯೂ, ತಿದ್ದುಪಡಿಗಳನ್ನು ಸಲ್ಲಿಸಿದ ಸದಸ್ಯರ ಪಟ್ಟಿಯಲ್ಲಿ ಬಿಜೆಪಿಯ ಯಾವುದೇ ಮಿತ್ರಪಕ್ಷಗಳಿಲ್ಲ ಎಂದು ವರದಿ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ಪರಿಚಯಿಸಿದ ನಂತರ ಆಗಸ್ಟ್ 8 ರಂದು ಸಂಸತ್ತಿನ ಜಂಟಿ ಸಮಿತಿಗೆ ಉಲ್ಲೇಖಿಸಲಾಗಿತ್ತು. ವಕ್ಫ್ ಆಸ್ತಿಗಳನ್ನು ನಿಯಂತ್ರಿಸುವ ಮತ್ತು ನಿರ್ವಹಿಸುವಲ್ಲಿನ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಿಹರಿಸಲು 1995 ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಗುರಿಯನ್ನು ಈ ಮಸೂದೆ ಹೊಂದಿದೆ.

ವಕ್ಫ್‌ ಎಂದರೆ ಏನು? 

’ವಕ್ಫ್’ ಎಂದರೆ, ಒಬ್ಬ ಮುಸ್ಲಿಂ ಅಥವಾ ಒಂದು ಮುಸ್ಲಿಂ ಗುಂಪು ತಮ್ಮ ಸ್ವಂತ ಆಸ್ತಿಯನ್ನು ಅಥವಾ ತಮಗೆ ಉಡುಗೊರೆಯಾಗಿ ಸಿಕ್ಕ ಆಸ್ತಿಯನ್ನು ಅಥವಾ ಪಿತ್ರಾರ್ಜಿತ ಆಸ್ತಿಯನ್ನು (ಅದು ಚರಾಸ್ತಿ ಅಥವಾ ಸ್ಥಿರಾಸ್ತಿಯಾದರೂ) ಮನಸಾರೆ ’ದೇವರ ಹೆಸರಿನಲ್ಲಿ ಅರ್ಪಿಸುವ’ ಒಂದು ಆಚರಣೆಯಾಗಿದೆ. ಈ ಆಚರಣೆಯು ಅರ್ಪಿಸುವ ವ್ಯಕ್ತಿ ಮತ್ತು ಆತ ನಂಬುವ ದೇವರ ನಡುವಿನ ಒಂದು ಒಪ್ಪಂದ. ಹಾಗಾಗಿಯೆ ಇದೊಂದು ಸರಳ ಧಾರ್ಮಿಕ ಆಚರಣೆ. ಭಾರತ ಸಂವಿಧಾನ ಹೇಳುವ ’ಆತ್ಮಸಾಕ್ಷಿಯ ಸ್ವಾತಂತ್ರ್ಯ’ದ ಅಡಿಯಲ್ಲಿ ಬರುವ ಆಚರಣೆಯ ಹಕ್ಕು.

ಉದಾಹರಣೆಗೆ ಒಂದು ಮುಸ್ಲಿಂ ಗುಂಪು ದುಡ್ಡು ಸಂಗ್ರಹಿಸಿ ಅದರಲ್ಲಿ ಒಂದಿಷ್ಟು ಜಾಗ ಖರೀದಿಸಿ ಮಸೀದಿ ಕಟ್ಟಿ ಅದನ್ನು ದೇವರಿಗೆ ಅರ್ಪಿಸುತ್ತಾರೆ. ಅಂದಿನಿಂದ ಆ ಮಸೀದಿ ಯಾವುದೇ ವ್ಯಕ್ತಿಯ ಆಸ್ತಿಯಾಗಿ ಇರುವುದಿಲ್ಲ, ಬದಲಾಗಿ ಅದು ಮುಸ್ಲಿಮರ ಸಾಮುದಾಯಿಕ ಸೊತ್ತಾಗಿರುತ್ತದೆ. ಇನ್ನೂ ಮುಂದುವರಿದು ಹೇಳುವುದಾದರೆ ತಮ್ಮ ಆಸ್ತಿಯನ್ನು ದೇವರಿಗಾಗಿ ಅರ್ಪಿಸಿದ್ದೇನೆ ಎಂದು ಸಂಕಲ್ಪಿಸುವುದಾಗಿದೆ ’ವಕ್ಫ್’. ನಂತರ ಅದನ್ನು ಸಮುದಾಯದ ಸೇವೆಗೆ, ಸಬಲೀಕರಣದ ಬಳಕೆಗೆ ಮೀಸಲು ಇಡಬೇಕಾಗುತ್ತದೆ.

ಇಸ್ಲಾಮಿಕ್ ನಿಯಮಗಳ ಪ್ರಕಾರ, ಒಮ್ಮೆ ಯಾರಾದರೂ ತಮ್ಮ ಆಸ್ತಿಯನ್ನು ’ವಕ್ಫ್’ ಅಂದರೆ ’ದೇವರಿಗಾಗಿ ಅರ್ಪಿಸಿದರೆ’ ಅದರ ಮಾಲೀಕ ಅವರಾಗಿರುವುದಿಲ್ಲ, ಬದಲಾಗಿ ’ದೇವರು’ ಅದರ ಮಾಲೀಕನಾಗುತ್ತಾನೆ. ಹಾಗಾಗಿ ಒಮ್ಮೆ ತಮ್ಮ ಆಸ್ತಿಯನ್ನು ’ವಕ್ಫ್’ ಎಂದು ಸಂಕಲ್ಪಿಸಿದರೆ, ಅದರ ಮೇಲೆ ಅವರಿಗೆ ಯಾವುದೇ ರೀತಿಯ ಹಕ್ಕು ಇರುವುದಿಲ್ಲ. ಸ್ವತಃ ಆಸ್ತಿಯನ್ನು ’ವಕ್ಫ್’ ಮಾಡಿದ ವ್ಯಕ್ತಿಯೇ ಈ ಸಂಕಲ್ಪವನ್ನು ವಾಪಸ್ಸು ಪಡೆಯುವಂತೆ ಇಲ್ಲ. ಅಷ್ಟೇ ಅಲ್ಲದೆ, ಈ ಆಸ್ತಿಗಳನ್ನು ಆತ ಯಾರಿಗೂ ಮಾರಾಟ ಮಾಡುವಂತೆ, ಉಡುಗೊರೆ ನೀಡುವಂತೆ ಹಾಗೂ ಯಾವುದಕ್ಕೋ ಬದಲಿಯಾಗಿ ನೀಡುವಂತೆಯು ಇಲ್ಲ ಎಂದು ಇಸ್ಲಾಮಿಕ್ ನಿಯಮಗಳು ಹೇಳುತ್ತದೆ.

ವಿವಾದ ಏನು?

ಕೇಂದ್ರ ಸರ್ಕಾರ ಜಾರಿಗೆ ತರಬೇಕು ಎಂದು ಉದ್ದೇಶಿಸಿರುವ ಹೊಸ ತಿದ್ದುಪಡಿ ಮಸೂದೆಯಲ್ಲಿ ಬರುವ 3ಸಿ, 3ಆರ್, 14 ಮತ್ತು 40 ಸೆಕ್ಷನ್‌ಗಳು ಮುಸ್ಲಿಂ ವಿರೋಧಿ ಮತ್ತು ವಕ್ಫ್ ವಿರೋಧಿಯಾಗಿದೆ ಎಂಬ ಆರೋಪಗಳನ್ನು ಮಾಡಲಾಗುತ್ತಿದೆ.

ಬಹಳ ಮುಖ್ಯವಾಗಿ, ತಿದ್ದುಪಡಿ ಮಸೂದೆಯ 3ಆರ್ ಸೆಕ್ಷನ್, ಯಾವುದಾದರೂ ವಕ್ಫ್ ಆಸ್ತಿಯ ಬಗ್ಗೆ ವಕ್ಫ್ ಬೋರ್ಡ್ ಮತ್ತು ರಾಜ್ಯ ಸರ್ಕಾರದ ನಡುವೆ ತಕರಾರು ಇದ್ದರೆ ಆ ವ್ಯಾಜ್ಯವನ್ನು ಜಿಲ್ಲಾಧಿಕಾರಿಯ ಬಳಿಗೆ ತೆಗೆದುಕೊಂಡುಹೋಗಬೇಕು ಎಂದು ಹೇಳುತ್ತದೆ. ಇದರ ಬಗ್ಗೆ ಜಿಲ್ಲಾಧಿಕಾರಿ ವಿಚಾರಣೆ ನಡೆಸಬೇಕು ಎಂದು ಹೇಳುವ ಸೆಕ್ಷನ್, ಅದರ ತೀರ್ಮಾನ ಬರುವವರೆಗೆ ಅದು ಸರ್ಕಾರದ ಜಾಗವಾಗಿರಲಿದೆ ಎಂದು ಹೇಳುತ್ತದೆ.

ಒಂದುವೇಳೆ ಇದೇ ರೀತಿ ಮಸೀದಿಯೊಂದರ ತಕರಾರು ಜಿಲ್ಲಾಧಿಕಾರಿ ಬಳಿಗೆ ತೆಗೆದುಕೊಂಡು ಹೋದರೆ, ಅದರ ತೀರ್ಮಾನ ಬರುವವರೆಗೆ ಅದು ಸರ್ಕಾರಿ ಜಾಗವಾಗಿ ಇರುತ್ತದೆ. ಇಂತಹ ಸರ್ಕಾರದ ಜಾಗದಲ್ಲಿ ಯಾರು ಬೇಕಾದರೂ ಕಾರ್ಯಕ್ರಮ ಮಾಡಲು ಅನುಮತಿ ನೀಡುವ ಅಪಾಯವಿರುತ್ತದೆ ಎಂದು ಟೀಕಾಕಾರರು ಹೇಳಿದ್ದಾರೆ.

ಅಲ್ಲದೆ, ಪ್ರಸ್ತುತ ಜಾರಿಯಲ್ಲಿರುವ ವಕ್ಫ್ ಕಾಯ್ದೆಯ ಪ್ರಕಾರ, ತಕರಾರುಗಳು ಟ್ರಿಬ್ಯುನಲ್‌ಗೆ ಹೋಗಬೇಕು, ಅಲ್ಲಿಯೂ ಬಗೆಹರಿಯದಿದ್ದರೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್‌ಗೆ ಹೋಗಬಹುದು. ಆದರೆ ತಿದ್ದುಪಡಿ ಮಸೂದೆಯ ಪ್ರಕಾರ ಜಿಲ್ಲಾಧಿಕಾರಿಯೇ ಕೊನೆಯ ಆಯ್ಕೆಯಾಗಿರುತ್ತದೆ. ಅದರ ನಂತರ ಮೇಲ್ಮನವಿಯ ಬಗ್ಗೆ ಈ ತಿದ್ದುಪಡಿ ಮಸೂದೆ ಮಾತನಾಡುವುದೇ ಇಲ್ಲ. ಜಿಲ್ಲಾಧಿಕಾರಿಯ ತೀರ್ಪಿನ ವಿರುದ್ಧ ಮೇಲ್ಮನವಿಯ ಬಗ್ಗೆ ತಿದ್ದುಪಡಿ ಮಸೂದೆಯು ಮೌನವಾಗಿದೆ. ಈ ಮಸೂದೆಯು ನ್ಯಾಯಾಲಯದ ಬಗ್ಗೆ ಹೇಳುವುದೇ ಇಲ್ಲ. ಇದು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಜಿಲ್ಲಾಧಿಕಾರಿಗಳ ಮತ್ತು ಆಡಳಿತರೂಢ ಪಕ್ಷಗಳ ಸರ್ವಾಧಿಕಾರ ಇಲ್ಲಿ ಕೆಲಸ ಮಾಡಲಿದೆ ಎಂಬ ಆರೋಪ ವ್ಯಕ್ತವಾಗಿದೆ.

ಇದನ್ನೂಓದಿ:  ಶ್ರೀಲಂಕಾ ನೌಕಾಪಡೆಯಿಂದ 34 ಭಾರತೀಯ ಮೀನುಗಾರರ ಬಂಧನ; ತಕ್ಷಣ ಬಿಡುಗಡೆಗೆ ಸಿಎಂ ಸ್ಟಾಲಿನ್ ಆಗ್ರಹ

ಶ್ರೀಲಂಕಾ ನೌಕಾಪಡೆಯಿಂದ 34 ಭಾರತೀಯ ಮೀನುಗಾರರ ಬಂಧನ; ತಕ್ಷಣ ಬಿಡುಗಡೆಗೆ ಸಿಎಂ ಸ್ಟಾಲಿನ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...