Homeಮುಖಪುಟವಕ್ಫ್ ಮಸೂದೆಗೆ 572 ತಿದ್ದುಪಡಿ ಸೂಚಿಸಿದ ಸಂಸದೀಯ ಸಮಿತಿ

ವಕ್ಫ್ ಮಸೂದೆಗೆ 572 ತಿದ್ದುಪಡಿ ಸೂಚಿಸಿದ ಸಂಸದೀಯ ಸಮಿತಿ

- Advertisement -
- Advertisement -

ವಕ್ಫ್ ತಿದ್ದುಪಡಿ ಮಸೂದೆಯ ಸಂಸದೀಯ ಸಮಿತಿಯ ಸದಸ್ಯರು ಸರ್ಕಾರ ಮತ್ತು ವಿರೋಧ ಪಕ್ಷದ ನಡುವೆ ಭಿನ್ನಾಭಿಪ್ರಾಯ ಮೂಡಿಸಿರುವ ಕರಡು ಶಾಸನಕ್ಕೆ 572 ತಿದ್ದುಪಡಿಗಳನ್ನು ಸೂಚಿಸಿದ್ದಾರೆ ಎಂದು TNIE ವರದಿ ಮಾಡಿದೆ. ಸಮಿತಿಯು ಸೋಮವಾರ ನಡೆಯುವ ತನ್ನ ಸಭೆಯಲ್ಲಿ ಷರತ್ತು ವಾರು ತಿದ್ದುಪಡಿಗಳನ್ನು ಚರ್ಚಿಸಲಿದ್ದು, ಬಿಜೆಪಿ ಮತ್ತು ವಿರೋಧ ಪಕ್ಷದ ಸದಸ್ಯರು ಮಸೂದೆಗೆ ತಿದ್ದುಪಡಿಗಳನ್ನು ಸಲ್ಲಿಸಲಿದ್ದಾರೆ. ವಕ್ಫ್ ಮಸೂದೆಗೆ

ಸಮಿತಿಯ ವಿಚಾರಣೆಯು ಕೊನೆಯ ಹಂತಕ್ಕೆ ತಲುಪುತ್ತಿದ್ದಂತೆ ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಮಿತಿಯು ಭಾನುವಾರ ತಡರಾತ್ರಿ ತಿದ್ದುಪಡಿಗಳ ಸಮಗ್ರ ಪಟ್ಟಿಯನ್ನು ವಿತರಿಸಿತು. ಆದಾಗ್ಯೂ, ತಿದ್ದುಪಡಿಗಳನ್ನು ಸಲ್ಲಿಸಿದ ಸದಸ್ಯರ ಪಟ್ಟಿಯಲ್ಲಿ ಬಿಜೆಪಿಯ ಯಾವುದೇ ಮಿತ್ರಪಕ್ಷಗಳಿಲ್ಲ ಎಂದು ವರದಿ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ಪರಿಚಯಿಸಿದ ನಂತರ ಆಗಸ್ಟ್ 8 ರಂದು ಸಂಸತ್ತಿನ ಜಂಟಿ ಸಮಿತಿಗೆ ಉಲ್ಲೇಖಿಸಲಾಗಿತ್ತು. ವಕ್ಫ್ ಆಸ್ತಿಗಳನ್ನು ನಿಯಂತ್ರಿಸುವ ಮತ್ತು ನಿರ್ವಹಿಸುವಲ್ಲಿನ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಿಹರಿಸಲು 1995 ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಗುರಿಯನ್ನು ಈ ಮಸೂದೆ ಹೊಂದಿದೆ.

ವಕ್ಫ್‌ ಎಂದರೆ ಏನು? 

’ವಕ್ಫ್’ ಎಂದರೆ, ಒಬ್ಬ ಮುಸ್ಲಿಂ ಅಥವಾ ಒಂದು ಮುಸ್ಲಿಂ ಗುಂಪು ತಮ್ಮ ಸ್ವಂತ ಆಸ್ತಿಯನ್ನು ಅಥವಾ ತಮಗೆ ಉಡುಗೊರೆಯಾಗಿ ಸಿಕ್ಕ ಆಸ್ತಿಯನ್ನು ಅಥವಾ ಪಿತ್ರಾರ್ಜಿತ ಆಸ್ತಿಯನ್ನು (ಅದು ಚರಾಸ್ತಿ ಅಥವಾ ಸ್ಥಿರಾಸ್ತಿಯಾದರೂ) ಮನಸಾರೆ ’ದೇವರ ಹೆಸರಿನಲ್ಲಿ ಅರ್ಪಿಸುವ’ ಒಂದು ಆಚರಣೆಯಾಗಿದೆ. ಈ ಆಚರಣೆಯು ಅರ್ಪಿಸುವ ವ್ಯಕ್ತಿ ಮತ್ತು ಆತ ನಂಬುವ ದೇವರ ನಡುವಿನ ಒಂದು ಒಪ್ಪಂದ. ಹಾಗಾಗಿಯೆ ಇದೊಂದು ಸರಳ ಧಾರ್ಮಿಕ ಆಚರಣೆ. ಭಾರತ ಸಂವಿಧಾನ ಹೇಳುವ ’ಆತ್ಮಸಾಕ್ಷಿಯ ಸ್ವಾತಂತ್ರ್ಯ’ದ ಅಡಿಯಲ್ಲಿ ಬರುವ ಆಚರಣೆಯ ಹಕ್ಕು.

ಉದಾಹರಣೆಗೆ ಒಂದು ಮುಸ್ಲಿಂ ಗುಂಪು ದುಡ್ಡು ಸಂಗ್ರಹಿಸಿ ಅದರಲ್ಲಿ ಒಂದಿಷ್ಟು ಜಾಗ ಖರೀದಿಸಿ ಮಸೀದಿ ಕಟ್ಟಿ ಅದನ್ನು ದೇವರಿಗೆ ಅರ್ಪಿಸುತ್ತಾರೆ. ಅಂದಿನಿಂದ ಆ ಮಸೀದಿ ಯಾವುದೇ ವ್ಯಕ್ತಿಯ ಆಸ್ತಿಯಾಗಿ ಇರುವುದಿಲ್ಲ, ಬದಲಾಗಿ ಅದು ಮುಸ್ಲಿಮರ ಸಾಮುದಾಯಿಕ ಸೊತ್ತಾಗಿರುತ್ತದೆ. ಇನ್ನೂ ಮುಂದುವರಿದು ಹೇಳುವುದಾದರೆ ತಮ್ಮ ಆಸ್ತಿಯನ್ನು ದೇವರಿಗಾಗಿ ಅರ್ಪಿಸಿದ್ದೇನೆ ಎಂದು ಸಂಕಲ್ಪಿಸುವುದಾಗಿದೆ ’ವಕ್ಫ್’. ನಂತರ ಅದನ್ನು ಸಮುದಾಯದ ಸೇವೆಗೆ, ಸಬಲೀಕರಣದ ಬಳಕೆಗೆ ಮೀಸಲು ಇಡಬೇಕಾಗುತ್ತದೆ.

ಇಸ್ಲಾಮಿಕ್ ನಿಯಮಗಳ ಪ್ರಕಾರ, ಒಮ್ಮೆ ಯಾರಾದರೂ ತಮ್ಮ ಆಸ್ತಿಯನ್ನು ’ವಕ್ಫ್’ ಅಂದರೆ ’ದೇವರಿಗಾಗಿ ಅರ್ಪಿಸಿದರೆ’ ಅದರ ಮಾಲೀಕ ಅವರಾಗಿರುವುದಿಲ್ಲ, ಬದಲಾಗಿ ’ದೇವರು’ ಅದರ ಮಾಲೀಕನಾಗುತ್ತಾನೆ. ಹಾಗಾಗಿ ಒಮ್ಮೆ ತಮ್ಮ ಆಸ್ತಿಯನ್ನು ’ವಕ್ಫ್’ ಎಂದು ಸಂಕಲ್ಪಿಸಿದರೆ, ಅದರ ಮೇಲೆ ಅವರಿಗೆ ಯಾವುದೇ ರೀತಿಯ ಹಕ್ಕು ಇರುವುದಿಲ್ಲ. ಸ್ವತಃ ಆಸ್ತಿಯನ್ನು ’ವಕ್ಫ್’ ಮಾಡಿದ ವ್ಯಕ್ತಿಯೇ ಈ ಸಂಕಲ್ಪವನ್ನು ವಾಪಸ್ಸು ಪಡೆಯುವಂತೆ ಇಲ್ಲ. ಅಷ್ಟೇ ಅಲ್ಲದೆ, ಈ ಆಸ್ತಿಗಳನ್ನು ಆತ ಯಾರಿಗೂ ಮಾರಾಟ ಮಾಡುವಂತೆ, ಉಡುಗೊರೆ ನೀಡುವಂತೆ ಹಾಗೂ ಯಾವುದಕ್ಕೋ ಬದಲಿಯಾಗಿ ನೀಡುವಂತೆಯು ಇಲ್ಲ ಎಂದು ಇಸ್ಲಾಮಿಕ್ ನಿಯಮಗಳು ಹೇಳುತ್ತದೆ.

ವಿವಾದ ಏನು?

ಕೇಂದ್ರ ಸರ್ಕಾರ ಜಾರಿಗೆ ತರಬೇಕು ಎಂದು ಉದ್ದೇಶಿಸಿರುವ ಹೊಸ ತಿದ್ದುಪಡಿ ಮಸೂದೆಯಲ್ಲಿ ಬರುವ 3ಸಿ, 3ಆರ್, 14 ಮತ್ತು 40 ಸೆಕ್ಷನ್‌ಗಳು ಮುಸ್ಲಿಂ ವಿರೋಧಿ ಮತ್ತು ವಕ್ಫ್ ವಿರೋಧಿಯಾಗಿದೆ ಎಂಬ ಆರೋಪಗಳನ್ನು ಮಾಡಲಾಗುತ್ತಿದೆ.

ಬಹಳ ಮುಖ್ಯವಾಗಿ, ತಿದ್ದುಪಡಿ ಮಸೂದೆಯ 3ಆರ್ ಸೆಕ್ಷನ್, ಯಾವುದಾದರೂ ವಕ್ಫ್ ಆಸ್ತಿಯ ಬಗ್ಗೆ ವಕ್ಫ್ ಬೋರ್ಡ್ ಮತ್ತು ರಾಜ್ಯ ಸರ್ಕಾರದ ನಡುವೆ ತಕರಾರು ಇದ್ದರೆ ಆ ವ್ಯಾಜ್ಯವನ್ನು ಜಿಲ್ಲಾಧಿಕಾರಿಯ ಬಳಿಗೆ ತೆಗೆದುಕೊಂಡುಹೋಗಬೇಕು ಎಂದು ಹೇಳುತ್ತದೆ. ಇದರ ಬಗ್ಗೆ ಜಿಲ್ಲಾಧಿಕಾರಿ ವಿಚಾರಣೆ ನಡೆಸಬೇಕು ಎಂದು ಹೇಳುವ ಸೆಕ್ಷನ್, ಅದರ ತೀರ್ಮಾನ ಬರುವವರೆಗೆ ಅದು ಸರ್ಕಾರದ ಜಾಗವಾಗಿರಲಿದೆ ಎಂದು ಹೇಳುತ್ತದೆ.

ಒಂದುವೇಳೆ ಇದೇ ರೀತಿ ಮಸೀದಿಯೊಂದರ ತಕರಾರು ಜಿಲ್ಲಾಧಿಕಾರಿ ಬಳಿಗೆ ತೆಗೆದುಕೊಂಡು ಹೋದರೆ, ಅದರ ತೀರ್ಮಾನ ಬರುವವರೆಗೆ ಅದು ಸರ್ಕಾರಿ ಜಾಗವಾಗಿ ಇರುತ್ತದೆ. ಇಂತಹ ಸರ್ಕಾರದ ಜಾಗದಲ್ಲಿ ಯಾರು ಬೇಕಾದರೂ ಕಾರ್ಯಕ್ರಮ ಮಾಡಲು ಅನುಮತಿ ನೀಡುವ ಅಪಾಯವಿರುತ್ತದೆ ಎಂದು ಟೀಕಾಕಾರರು ಹೇಳಿದ್ದಾರೆ.

ಅಲ್ಲದೆ, ಪ್ರಸ್ತುತ ಜಾರಿಯಲ್ಲಿರುವ ವಕ್ಫ್ ಕಾಯ್ದೆಯ ಪ್ರಕಾರ, ತಕರಾರುಗಳು ಟ್ರಿಬ್ಯುನಲ್‌ಗೆ ಹೋಗಬೇಕು, ಅಲ್ಲಿಯೂ ಬಗೆಹರಿಯದಿದ್ದರೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್‌ಗೆ ಹೋಗಬಹುದು. ಆದರೆ ತಿದ್ದುಪಡಿ ಮಸೂದೆಯ ಪ್ರಕಾರ ಜಿಲ್ಲಾಧಿಕಾರಿಯೇ ಕೊನೆಯ ಆಯ್ಕೆಯಾಗಿರುತ್ತದೆ. ಅದರ ನಂತರ ಮೇಲ್ಮನವಿಯ ಬಗ್ಗೆ ಈ ತಿದ್ದುಪಡಿ ಮಸೂದೆ ಮಾತನಾಡುವುದೇ ಇಲ್ಲ. ಜಿಲ್ಲಾಧಿಕಾರಿಯ ತೀರ್ಪಿನ ವಿರುದ್ಧ ಮೇಲ್ಮನವಿಯ ಬಗ್ಗೆ ತಿದ್ದುಪಡಿ ಮಸೂದೆಯು ಮೌನವಾಗಿದೆ. ಈ ಮಸೂದೆಯು ನ್ಯಾಯಾಲಯದ ಬಗ್ಗೆ ಹೇಳುವುದೇ ಇಲ್ಲ. ಇದು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಜಿಲ್ಲಾಧಿಕಾರಿಗಳ ಮತ್ತು ಆಡಳಿತರೂಢ ಪಕ್ಷಗಳ ಸರ್ವಾಧಿಕಾರ ಇಲ್ಲಿ ಕೆಲಸ ಮಾಡಲಿದೆ ಎಂಬ ಆರೋಪ ವ್ಯಕ್ತವಾಗಿದೆ.

ಇದನ್ನೂಓದಿ:  ಶ್ರೀಲಂಕಾ ನೌಕಾಪಡೆಯಿಂದ 34 ಭಾರತೀಯ ಮೀನುಗಾರರ ಬಂಧನ; ತಕ್ಷಣ ಬಿಡುಗಡೆಗೆ ಸಿಎಂ ಸ್ಟಾಲಿನ್ ಆಗ್ರಹ

ಶ್ರೀಲಂಕಾ ನೌಕಾಪಡೆಯಿಂದ 34 ಭಾರತೀಯ ಮೀನುಗಾರರ ಬಂಧನ; ತಕ್ಷಣ ಬಿಡುಗಡೆಗೆ ಸಿಎಂ ಸ್ಟಾಲಿನ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...