Homeಮುಖಪುಟವಕ್ಫ್ ಮಸೂದೆಗೆ 572 ತಿದ್ದುಪಡಿ ಸೂಚಿಸಿದ ಸಂಸದೀಯ ಸಮಿತಿ

ವಕ್ಫ್ ಮಸೂದೆಗೆ 572 ತಿದ್ದುಪಡಿ ಸೂಚಿಸಿದ ಸಂಸದೀಯ ಸಮಿತಿ

- Advertisement -
- Advertisement -

ವಕ್ಫ್ ತಿದ್ದುಪಡಿ ಮಸೂದೆಯ ಸಂಸದೀಯ ಸಮಿತಿಯ ಸದಸ್ಯರು ಸರ್ಕಾರ ಮತ್ತು ವಿರೋಧ ಪಕ್ಷದ ನಡುವೆ ಭಿನ್ನಾಭಿಪ್ರಾಯ ಮೂಡಿಸಿರುವ ಕರಡು ಶಾಸನಕ್ಕೆ 572 ತಿದ್ದುಪಡಿಗಳನ್ನು ಸೂಚಿಸಿದ್ದಾರೆ ಎಂದು TNIE ವರದಿ ಮಾಡಿದೆ. ಸಮಿತಿಯು ಸೋಮವಾರ ನಡೆಯುವ ತನ್ನ ಸಭೆಯಲ್ಲಿ ಷರತ್ತು ವಾರು ತಿದ್ದುಪಡಿಗಳನ್ನು ಚರ್ಚಿಸಲಿದ್ದು, ಬಿಜೆಪಿ ಮತ್ತು ವಿರೋಧ ಪಕ್ಷದ ಸದಸ್ಯರು ಮಸೂದೆಗೆ ತಿದ್ದುಪಡಿಗಳನ್ನು ಸಲ್ಲಿಸಲಿದ್ದಾರೆ. ವಕ್ಫ್ ಮಸೂದೆಗೆ

ಸಮಿತಿಯ ವಿಚಾರಣೆಯು ಕೊನೆಯ ಹಂತಕ್ಕೆ ತಲುಪುತ್ತಿದ್ದಂತೆ ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಮಿತಿಯು ಭಾನುವಾರ ತಡರಾತ್ರಿ ತಿದ್ದುಪಡಿಗಳ ಸಮಗ್ರ ಪಟ್ಟಿಯನ್ನು ವಿತರಿಸಿತು. ಆದಾಗ್ಯೂ, ತಿದ್ದುಪಡಿಗಳನ್ನು ಸಲ್ಲಿಸಿದ ಸದಸ್ಯರ ಪಟ್ಟಿಯಲ್ಲಿ ಬಿಜೆಪಿಯ ಯಾವುದೇ ಮಿತ್ರಪಕ್ಷಗಳಿಲ್ಲ ಎಂದು ವರದಿ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ಪರಿಚಯಿಸಿದ ನಂತರ ಆಗಸ್ಟ್ 8 ರಂದು ಸಂಸತ್ತಿನ ಜಂಟಿ ಸಮಿತಿಗೆ ಉಲ್ಲೇಖಿಸಲಾಗಿತ್ತು. ವಕ್ಫ್ ಆಸ್ತಿಗಳನ್ನು ನಿಯಂತ್ರಿಸುವ ಮತ್ತು ನಿರ್ವಹಿಸುವಲ್ಲಿನ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಿಹರಿಸಲು 1995 ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಗುರಿಯನ್ನು ಈ ಮಸೂದೆ ಹೊಂದಿದೆ.

ವಕ್ಫ್‌ ಎಂದರೆ ಏನು? 

’ವಕ್ಫ್’ ಎಂದರೆ, ಒಬ್ಬ ಮುಸ್ಲಿಂ ಅಥವಾ ಒಂದು ಮುಸ್ಲಿಂ ಗುಂಪು ತಮ್ಮ ಸ್ವಂತ ಆಸ್ತಿಯನ್ನು ಅಥವಾ ತಮಗೆ ಉಡುಗೊರೆಯಾಗಿ ಸಿಕ್ಕ ಆಸ್ತಿಯನ್ನು ಅಥವಾ ಪಿತ್ರಾರ್ಜಿತ ಆಸ್ತಿಯನ್ನು (ಅದು ಚರಾಸ್ತಿ ಅಥವಾ ಸ್ಥಿರಾಸ್ತಿಯಾದರೂ) ಮನಸಾರೆ ’ದೇವರ ಹೆಸರಿನಲ್ಲಿ ಅರ್ಪಿಸುವ’ ಒಂದು ಆಚರಣೆಯಾಗಿದೆ. ಈ ಆಚರಣೆಯು ಅರ್ಪಿಸುವ ವ್ಯಕ್ತಿ ಮತ್ತು ಆತ ನಂಬುವ ದೇವರ ನಡುವಿನ ಒಂದು ಒಪ್ಪಂದ. ಹಾಗಾಗಿಯೆ ಇದೊಂದು ಸರಳ ಧಾರ್ಮಿಕ ಆಚರಣೆ. ಭಾರತ ಸಂವಿಧಾನ ಹೇಳುವ ’ಆತ್ಮಸಾಕ್ಷಿಯ ಸ್ವಾತಂತ್ರ್ಯ’ದ ಅಡಿಯಲ್ಲಿ ಬರುವ ಆಚರಣೆಯ ಹಕ್ಕು.

ಉದಾಹರಣೆಗೆ ಒಂದು ಮುಸ್ಲಿಂ ಗುಂಪು ದುಡ್ಡು ಸಂಗ್ರಹಿಸಿ ಅದರಲ್ಲಿ ಒಂದಿಷ್ಟು ಜಾಗ ಖರೀದಿಸಿ ಮಸೀದಿ ಕಟ್ಟಿ ಅದನ್ನು ದೇವರಿಗೆ ಅರ್ಪಿಸುತ್ತಾರೆ. ಅಂದಿನಿಂದ ಆ ಮಸೀದಿ ಯಾವುದೇ ವ್ಯಕ್ತಿಯ ಆಸ್ತಿಯಾಗಿ ಇರುವುದಿಲ್ಲ, ಬದಲಾಗಿ ಅದು ಮುಸ್ಲಿಮರ ಸಾಮುದಾಯಿಕ ಸೊತ್ತಾಗಿರುತ್ತದೆ. ಇನ್ನೂ ಮುಂದುವರಿದು ಹೇಳುವುದಾದರೆ ತಮ್ಮ ಆಸ್ತಿಯನ್ನು ದೇವರಿಗಾಗಿ ಅರ್ಪಿಸಿದ್ದೇನೆ ಎಂದು ಸಂಕಲ್ಪಿಸುವುದಾಗಿದೆ ’ವಕ್ಫ್’. ನಂತರ ಅದನ್ನು ಸಮುದಾಯದ ಸೇವೆಗೆ, ಸಬಲೀಕರಣದ ಬಳಕೆಗೆ ಮೀಸಲು ಇಡಬೇಕಾಗುತ್ತದೆ.

ಇಸ್ಲಾಮಿಕ್ ನಿಯಮಗಳ ಪ್ರಕಾರ, ಒಮ್ಮೆ ಯಾರಾದರೂ ತಮ್ಮ ಆಸ್ತಿಯನ್ನು ’ವಕ್ಫ್’ ಅಂದರೆ ’ದೇವರಿಗಾಗಿ ಅರ್ಪಿಸಿದರೆ’ ಅದರ ಮಾಲೀಕ ಅವರಾಗಿರುವುದಿಲ್ಲ, ಬದಲಾಗಿ ’ದೇವರು’ ಅದರ ಮಾಲೀಕನಾಗುತ್ತಾನೆ. ಹಾಗಾಗಿ ಒಮ್ಮೆ ತಮ್ಮ ಆಸ್ತಿಯನ್ನು ’ವಕ್ಫ್’ ಎಂದು ಸಂಕಲ್ಪಿಸಿದರೆ, ಅದರ ಮೇಲೆ ಅವರಿಗೆ ಯಾವುದೇ ರೀತಿಯ ಹಕ್ಕು ಇರುವುದಿಲ್ಲ. ಸ್ವತಃ ಆಸ್ತಿಯನ್ನು ’ವಕ್ಫ್’ ಮಾಡಿದ ವ್ಯಕ್ತಿಯೇ ಈ ಸಂಕಲ್ಪವನ್ನು ವಾಪಸ್ಸು ಪಡೆಯುವಂತೆ ಇಲ್ಲ. ಅಷ್ಟೇ ಅಲ್ಲದೆ, ಈ ಆಸ್ತಿಗಳನ್ನು ಆತ ಯಾರಿಗೂ ಮಾರಾಟ ಮಾಡುವಂತೆ, ಉಡುಗೊರೆ ನೀಡುವಂತೆ ಹಾಗೂ ಯಾವುದಕ್ಕೋ ಬದಲಿಯಾಗಿ ನೀಡುವಂತೆಯು ಇಲ್ಲ ಎಂದು ಇಸ್ಲಾಮಿಕ್ ನಿಯಮಗಳು ಹೇಳುತ್ತದೆ.

ವಿವಾದ ಏನು?

ಕೇಂದ್ರ ಸರ್ಕಾರ ಜಾರಿಗೆ ತರಬೇಕು ಎಂದು ಉದ್ದೇಶಿಸಿರುವ ಹೊಸ ತಿದ್ದುಪಡಿ ಮಸೂದೆಯಲ್ಲಿ ಬರುವ 3ಸಿ, 3ಆರ್, 14 ಮತ್ತು 40 ಸೆಕ್ಷನ್‌ಗಳು ಮುಸ್ಲಿಂ ವಿರೋಧಿ ಮತ್ತು ವಕ್ಫ್ ವಿರೋಧಿಯಾಗಿದೆ ಎಂಬ ಆರೋಪಗಳನ್ನು ಮಾಡಲಾಗುತ್ತಿದೆ.

ಬಹಳ ಮುಖ್ಯವಾಗಿ, ತಿದ್ದುಪಡಿ ಮಸೂದೆಯ 3ಆರ್ ಸೆಕ್ಷನ್, ಯಾವುದಾದರೂ ವಕ್ಫ್ ಆಸ್ತಿಯ ಬಗ್ಗೆ ವಕ್ಫ್ ಬೋರ್ಡ್ ಮತ್ತು ರಾಜ್ಯ ಸರ್ಕಾರದ ನಡುವೆ ತಕರಾರು ಇದ್ದರೆ ಆ ವ್ಯಾಜ್ಯವನ್ನು ಜಿಲ್ಲಾಧಿಕಾರಿಯ ಬಳಿಗೆ ತೆಗೆದುಕೊಂಡುಹೋಗಬೇಕು ಎಂದು ಹೇಳುತ್ತದೆ. ಇದರ ಬಗ್ಗೆ ಜಿಲ್ಲಾಧಿಕಾರಿ ವಿಚಾರಣೆ ನಡೆಸಬೇಕು ಎಂದು ಹೇಳುವ ಸೆಕ್ಷನ್, ಅದರ ತೀರ್ಮಾನ ಬರುವವರೆಗೆ ಅದು ಸರ್ಕಾರದ ಜಾಗವಾಗಿರಲಿದೆ ಎಂದು ಹೇಳುತ್ತದೆ.

ಒಂದುವೇಳೆ ಇದೇ ರೀತಿ ಮಸೀದಿಯೊಂದರ ತಕರಾರು ಜಿಲ್ಲಾಧಿಕಾರಿ ಬಳಿಗೆ ತೆಗೆದುಕೊಂಡು ಹೋದರೆ, ಅದರ ತೀರ್ಮಾನ ಬರುವವರೆಗೆ ಅದು ಸರ್ಕಾರಿ ಜಾಗವಾಗಿ ಇರುತ್ತದೆ. ಇಂತಹ ಸರ್ಕಾರದ ಜಾಗದಲ್ಲಿ ಯಾರು ಬೇಕಾದರೂ ಕಾರ್ಯಕ್ರಮ ಮಾಡಲು ಅನುಮತಿ ನೀಡುವ ಅಪಾಯವಿರುತ್ತದೆ ಎಂದು ಟೀಕಾಕಾರರು ಹೇಳಿದ್ದಾರೆ.

ಅಲ್ಲದೆ, ಪ್ರಸ್ತುತ ಜಾರಿಯಲ್ಲಿರುವ ವಕ್ಫ್ ಕಾಯ್ದೆಯ ಪ್ರಕಾರ, ತಕರಾರುಗಳು ಟ್ರಿಬ್ಯುನಲ್‌ಗೆ ಹೋಗಬೇಕು, ಅಲ್ಲಿಯೂ ಬಗೆಹರಿಯದಿದ್ದರೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್‌ಗೆ ಹೋಗಬಹುದು. ಆದರೆ ತಿದ್ದುಪಡಿ ಮಸೂದೆಯ ಪ್ರಕಾರ ಜಿಲ್ಲಾಧಿಕಾರಿಯೇ ಕೊನೆಯ ಆಯ್ಕೆಯಾಗಿರುತ್ತದೆ. ಅದರ ನಂತರ ಮೇಲ್ಮನವಿಯ ಬಗ್ಗೆ ಈ ತಿದ್ದುಪಡಿ ಮಸೂದೆ ಮಾತನಾಡುವುದೇ ಇಲ್ಲ. ಜಿಲ್ಲಾಧಿಕಾರಿಯ ತೀರ್ಪಿನ ವಿರುದ್ಧ ಮೇಲ್ಮನವಿಯ ಬಗ್ಗೆ ತಿದ್ದುಪಡಿ ಮಸೂದೆಯು ಮೌನವಾಗಿದೆ. ಈ ಮಸೂದೆಯು ನ್ಯಾಯಾಲಯದ ಬಗ್ಗೆ ಹೇಳುವುದೇ ಇಲ್ಲ. ಇದು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಜಿಲ್ಲಾಧಿಕಾರಿಗಳ ಮತ್ತು ಆಡಳಿತರೂಢ ಪಕ್ಷಗಳ ಸರ್ವಾಧಿಕಾರ ಇಲ್ಲಿ ಕೆಲಸ ಮಾಡಲಿದೆ ಎಂಬ ಆರೋಪ ವ್ಯಕ್ತವಾಗಿದೆ.

ಇದನ್ನೂಓದಿ:  ಶ್ರೀಲಂಕಾ ನೌಕಾಪಡೆಯಿಂದ 34 ಭಾರತೀಯ ಮೀನುಗಾರರ ಬಂಧನ; ತಕ್ಷಣ ಬಿಡುಗಡೆಗೆ ಸಿಎಂ ಸ್ಟಾಲಿನ್ ಆಗ್ರಹ

ಶ್ರೀಲಂಕಾ ನೌಕಾಪಡೆಯಿಂದ 34 ಭಾರತೀಯ ಮೀನುಗಾರರ ಬಂಧನ; ತಕ್ಷಣ ಬಿಡುಗಡೆಗೆ ಸಿಎಂ ಸ್ಟಾಲಿನ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...