Homeಮುಖಪುಟವಕ್ಫ್ ಮಸೂದೆಗೆ 572 ತಿದ್ದುಪಡಿ ಸೂಚಿಸಿದ ಸಂಸದೀಯ ಸಮಿತಿ

ವಕ್ಫ್ ಮಸೂದೆಗೆ 572 ತಿದ್ದುಪಡಿ ಸೂಚಿಸಿದ ಸಂಸದೀಯ ಸಮಿತಿ

- Advertisement -
- Advertisement -

ವಕ್ಫ್ ತಿದ್ದುಪಡಿ ಮಸೂದೆಯ ಸಂಸದೀಯ ಸಮಿತಿಯ ಸದಸ್ಯರು ಸರ್ಕಾರ ಮತ್ತು ವಿರೋಧ ಪಕ್ಷದ ನಡುವೆ ಭಿನ್ನಾಭಿಪ್ರಾಯ ಮೂಡಿಸಿರುವ ಕರಡು ಶಾಸನಕ್ಕೆ 572 ತಿದ್ದುಪಡಿಗಳನ್ನು ಸೂಚಿಸಿದ್ದಾರೆ ಎಂದು TNIE ವರದಿ ಮಾಡಿದೆ. ಸಮಿತಿಯು ಸೋಮವಾರ ನಡೆಯುವ ತನ್ನ ಸಭೆಯಲ್ಲಿ ಷರತ್ತು ವಾರು ತಿದ್ದುಪಡಿಗಳನ್ನು ಚರ್ಚಿಸಲಿದ್ದು, ಬಿಜೆಪಿ ಮತ್ತು ವಿರೋಧ ಪಕ್ಷದ ಸದಸ್ಯರು ಮಸೂದೆಗೆ ತಿದ್ದುಪಡಿಗಳನ್ನು ಸಲ್ಲಿಸಲಿದ್ದಾರೆ. ವಕ್ಫ್ ಮಸೂದೆಗೆ

ಸಮಿತಿಯ ವಿಚಾರಣೆಯು ಕೊನೆಯ ಹಂತಕ್ಕೆ ತಲುಪುತ್ತಿದ್ದಂತೆ ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಮಿತಿಯು ಭಾನುವಾರ ತಡರಾತ್ರಿ ತಿದ್ದುಪಡಿಗಳ ಸಮಗ್ರ ಪಟ್ಟಿಯನ್ನು ವಿತರಿಸಿತು. ಆದಾಗ್ಯೂ, ತಿದ್ದುಪಡಿಗಳನ್ನು ಸಲ್ಲಿಸಿದ ಸದಸ್ಯರ ಪಟ್ಟಿಯಲ್ಲಿ ಬಿಜೆಪಿಯ ಯಾವುದೇ ಮಿತ್ರಪಕ್ಷಗಳಿಲ್ಲ ಎಂದು ವರದಿ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ಪರಿಚಯಿಸಿದ ನಂತರ ಆಗಸ್ಟ್ 8 ರಂದು ಸಂಸತ್ತಿನ ಜಂಟಿ ಸಮಿತಿಗೆ ಉಲ್ಲೇಖಿಸಲಾಗಿತ್ತು. ವಕ್ಫ್ ಆಸ್ತಿಗಳನ್ನು ನಿಯಂತ್ರಿಸುವ ಮತ್ತು ನಿರ್ವಹಿಸುವಲ್ಲಿನ ಸಮಸ್ಯೆಗಳು ಮತ್ತು ಸವಾಲುಗಳನ್ನು ಪರಿಹರಿಸಲು 1995 ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಗುರಿಯನ್ನು ಈ ಮಸೂದೆ ಹೊಂದಿದೆ.

ವಕ್ಫ್‌ ಎಂದರೆ ಏನು? 

’ವಕ್ಫ್’ ಎಂದರೆ, ಒಬ್ಬ ಮುಸ್ಲಿಂ ಅಥವಾ ಒಂದು ಮುಸ್ಲಿಂ ಗುಂಪು ತಮ್ಮ ಸ್ವಂತ ಆಸ್ತಿಯನ್ನು ಅಥವಾ ತಮಗೆ ಉಡುಗೊರೆಯಾಗಿ ಸಿಕ್ಕ ಆಸ್ತಿಯನ್ನು ಅಥವಾ ಪಿತ್ರಾರ್ಜಿತ ಆಸ್ತಿಯನ್ನು (ಅದು ಚರಾಸ್ತಿ ಅಥವಾ ಸ್ಥಿರಾಸ್ತಿಯಾದರೂ) ಮನಸಾರೆ ’ದೇವರ ಹೆಸರಿನಲ್ಲಿ ಅರ್ಪಿಸುವ’ ಒಂದು ಆಚರಣೆಯಾಗಿದೆ. ಈ ಆಚರಣೆಯು ಅರ್ಪಿಸುವ ವ್ಯಕ್ತಿ ಮತ್ತು ಆತ ನಂಬುವ ದೇವರ ನಡುವಿನ ಒಂದು ಒಪ್ಪಂದ. ಹಾಗಾಗಿಯೆ ಇದೊಂದು ಸರಳ ಧಾರ್ಮಿಕ ಆಚರಣೆ. ಭಾರತ ಸಂವಿಧಾನ ಹೇಳುವ ’ಆತ್ಮಸಾಕ್ಷಿಯ ಸ್ವಾತಂತ್ರ್ಯ’ದ ಅಡಿಯಲ್ಲಿ ಬರುವ ಆಚರಣೆಯ ಹಕ್ಕು.

ಉದಾಹರಣೆಗೆ ಒಂದು ಮುಸ್ಲಿಂ ಗುಂಪು ದುಡ್ಡು ಸಂಗ್ರಹಿಸಿ ಅದರಲ್ಲಿ ಒಂದಿಷ್ಟು ಜಾಗ ಖರೀದಿಸಿ ಮಸೀದಿ ಕಟ್ಟಿ ಅದನ್ನು ದೇವರಿಗೆ ಅರ್ಪಿಸುತ್ತಾರೆ. ಅಂದಿನಿಂದ ಆ ಮಸೀದಿ ಯಾವುದೇ ವ್ಯಕ್ತಿಯ ಆಸ್ತಿಯಾಗಿ ಇರುವುದಿಲ್ಲ, ಬದಲಾಗಿ ಅದು ಮುಸ್ಲಿಮರ ಸಾಮುದಾಯಿಕ ಸೊತ್ತಾಗಿರುತ್ತದೆ. ಇನ್ನೂ ಮುಂದುವರಿದು ಹೇಳುವುದಾದರೆ ತಮ್ಮ ಆಸ್ತಿಯನ್ನು ದೇವರಿಗಾಗಿ ಅರ್ಪಿಸಿದ್ದೇನೆ ಎಂದು ಸಂಕಲ್ಪಿಸುವುದಾಗಿದೆ ’ವಕ್ಫ್’. ನಂತರ ಅದನ್ನು ಸಮುದಾಯದ ಸೇವೆಗೆ, ಸಬಲೀಕರಣದ ಬಳಕೆಗೆ ಮೀಸಲು ಇಡಬೇಕಾಗುತ್ತದೆ.

ಇಸ್ಲಾಮಿಕ್ ನಿಯಮಗಳ ಪ್ರಕಾರ, ಒಮ್ಮೆ ಯಾರಾದರೂ ತಮ್ಮ ಆಸ್ತಿಯನ್ನು ’ವಕ್ಫ್’ ಅಂದರೆ ’ದೇವರಿಗಾಗಿ ಅರ್ಪಿಸಿದರೆ’ ಅದರ ಮಾಲೀಕ ಅವರಾಗಿರುವುದಿಲ್ಲ, ಬದಲಾಗಿ ’ದೇವರು’ ಅದರ ಮಾಲೀಕನಾಗುತ್ತಾನೆ. ಹಾಗಾಗಿ ಒಮ್ಮೆ ತಮ್ಮ ಆಸ್ತಿಯನ್ನು ’ವಕ್ಫ್’ ಎಂದು ಸಂಕಲ್ಪಿಸಿದರೆ, ಅದರ ಮೇಲೆ ಅವರಿಗೆ ಯಾವುದೇ ರೀತಿಯ ಹಕ್ಕು ಇರುವುದಿಲ್ಲ. ಸ್ವತಃ ಆಸ್ತಿಯನ್ನು ’ವಕ್ಫ್’ ಮಾಡಿದ ವ್ಯಕ್ತಿಯೇ ಈ ಸಂಕಲ್ಪವನ್ನು ವಾಪಸ್ಸು ಪಡೆಯುವಂತೆ ಇಲ್ಲ. ಅಷ್ಟೇ ಅಲ್ಲದೆ, ಈ ಆಸ್ತಿಗಳನ್ನು ಆತ ಯಾರಿಗೂ ಮಾರಾಟ ಮಾಡುವಂತೆ, ಉಡುಗೊರೆ ನೀಡುವಂತೆ ಹಾಗೂ ಯಾವುದಕ್ಕೋ ಬದಲಿಯಾಗಿ ನೀಡುವಂತೆಯು ಇಲ್ಲ ಎಂದು ಇಸ್ಲಾಮಿಕ್ ನಿಯಮಗಳು ಹೇಳುತ್ತದೆ.

ವಿವಾದ ಏನು?

ಕೇಂದ್ರ ಸರ್ಕಾರ ಜಾರಿಗೆ ತರಬೇಕು ಎಂದು ಉದ್ದೇಶಿಸಿರುವ ಹೊಸ ತಿದ್ದುಪಡಿ ಮಸೂದೆಯಲ್ಲಿ ಬರುವ 3ಸಿ, 3ಆರ್, 14 ಮತ್ತು 40 ಸೆಕ್ಷನ್‌ಗಳು ಮುಸ್ಲಿಂ ವಿರೋಧಿ ಮತ್ತು ವಕ್ಫ್ ವಿರೋಧಿಯಾಗಿದೆ ಎಂಬ ಆರೋಪಗಳನ್ನು ಮಾಡಲಾಗುತ್ತಿದೆ.

ಬಹಳ ಮುಖ್ಯವಾಗಿ, ತಿದ್ದುಪಡಿ ಮಸೂದೆಯ 3ಆರ್ ಸೆಕ್ಷನ್, ಯಾವುದಾದರೂ ವಕ್ಫ್ ಆಸ್ತಿಯ ಬಗ್ಗೆ ವಕ್ಫ್ ಬೋರ್ಡ್ ಮತ್ತು ರಾಜ್ಯ ಸರ್ಕಾರದ ನಡುವೆ ತಕರಾರು ಇದ್ದರೆ ಆ ವ್ಯಾಜ್ಯವನ್ನು ಜಿಲ್ಲಾಧಿಕಾರಿಯ ಬಳಿಗೆ ತೆಗೆದುಕೊಂಡುಹೋಗಬೇಕು ಎಂದು ಹೇಳುತ್ತದೆ. ಇದರ ಬಗ್ಗೆ ಜಿಲ್ಲಾಧಿಕಾರಿ ವಿಚಾರಣೆ ನಡೆಸಬೇಕು ಎಂದು ಹೇಳುವ ಸೆಕ್ಷನ್, ಅದರ ತೀರ್ಮಾನ ಬರುವವರೆಗೆ ಅದು ಸರ್ಕಾರದ ಜಾಗವಾಗಿರಲಿದೆ ಎಂದು ಹೇಳುತ್ತದೆ.

ಒಂದುವೇಳೆ ಇದೇ ರೀತಿ ಮಸೀದಿಯೊಂದರ ತಕರಾರು ಜಿಲ್ಲಾಧಿಕಾರಿ ಬಳಿಗೆ ತೆಗೆದುಕೊಂಡು ಹೋದರೆ, ಅದರ ತೀರ್ಮಾನ ಬರುವವರೆಗೆ ಅದು ಸರ್ಕಾರಿ ಜಾಗವಾಗಿ ಇರುತ್ತದೆ. ಇಂತಹ ಸರ್ಕಾರದ ಜಾಗದಲ್ಲಿ ಯಾರು ಬೇಕಾದರೂ ಕಾರ್ಯಕ್ರಮ ಮಾಡಲು ಅನುಮತಿ ನೀಡುವ ಅಪಾಯವಿರುತ್ತದೆ ಎಂದು ಟೀಕಾಕಾರರು ಹೇಳಿದ್ದಾರೆ.

ಅಲ್ಲದೆ, ಪ್ರಸ್ತುತ ಜಾರಿಯಲ್ಲಿರುವ ವಕ್ಫ್ ಕಾಯ್ದೆಯ ಪ್ರಕಾರ, ತಕರಾರುಗಳು ಟ್ರಿಬ್ಯುನಲ್‌ಗೆ ಹೋಗಬೇಕು, ಅಲ್ಲಿಯೂ ಬಗೆಹರಿಯದಿದ್ದರೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್‌ಗೆ ಹೋಗಬಹುದು. ಆದರೆ ತಿದ್ದುಪಡಿ ಮಸೂದೆಯ ಪ್ರಕಾರ ಜಿಲ್ಲಾಧಿಕಾರಿಯೇ ಕೊನೆಯ ಆಯ್ಕೆಯಾಗಿರುತ್ತದೆ. ಅದರ ನಂತರ ಮೇಲ್ಮನವಿಯ ಬಗ್ಗೆ ಈ ತಿದ್ದುಪಡಿ ಮಸೂದೆ ಮಾತನಾಡುವುದೇ ಇಲ್ಲ. ಜಿಲ್ಲಾಧಿಕಾರಿಯ ತೀರ್ಪಿನ ವಿರುದ್ಧ ಮೇಲ್ಮನವಿಯ ಬಗ್ಗೆ ತಿದ್ದುಪಡಿ ಮಸೂದೆಯು ಮೌನವಾಗಿದೆ. ಈ ಮಸೂದೆಯು ನ್ಯಾಯಾಲಯದ ಬಗ್ಗೆ ಹೇಳುವುದೇ ಇಲ್ಲ. ಇದು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಜಿಲ್ಲಾಧಿಕಾರಿಗಳ ಮತ್ತು ಆಡಳಿತರೂಢ ಪಕ್ಷಗಳ ಸರ್ವಾಧಿಕಾರ ಇಲ್ಲಿ ಕೆಲಸ ಮಾಡಲಿದೆ ಎಂಬ ಆರೋಪ ವ್ಯಕ್ತವಾಗಿದೆ.

ಇದನ್ನೂಓದಿ:  ಶ್ರೀಲಂಕಾ ನೌಕಾಪಡೆಯಿಂದ 34 ಭಾರತೀಯ ಮೀನುಗಾರರ ಬಂಧನ; ತಕ್ಷಣ ಬಿಡುಗಡೆಗೆ ಸಿಎಂ ಸ್ಟಾಲಿನ್ ಆಗ್ರಹ

ಶ್ರೀಲಂಕಾ ನೌಕಾಪಡೆಯಿಂದ 34 ಭಾರತೀಯ ಮೀನುಗಾರರ ಬಂಧನ; ತಕ್ಷಣ ಬಿಡುಗಡೆಗೆ ಸಿಎಂ ಸ್ಟಾಲಿನ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...