Homeಅಂತರಾಷ್ಟ್ರೀಯ5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

- Advertisement -
- Advertisement -

ಮಾಸ್ಕೋ:  ರಷ್ಯಾವು ಉಕ್ರೇನ್‌ನಲ್ಲಿ ಇಂಟರ್-ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು (ಐಸಿಬಿಎಂ) ಉಡಾಯಿಸಿದೆ ಎಂದು ವರದಿಯಾಗಿದೆ. ಇದನ್ನು ಸುಮಾರು 60 ವರ್ಷಗಳ ಹಿಂದೆ ಬಳಕೆ ಮಾಡಲಾಗಿದ್ದು, ನಂತರ ಇದು ಪ್ರಥಮ ಬಳಕೆ ಎಂದು ಗುರುತಿಸಲಾಗಿದೆ.

ಇದನ್ನು ಉಕ್ರೇನ್‌ನಲ್ಲಿ ಸ್ಫೋಟಗೊಂಡ ಸ್ಥಳದಿಂದ ಸುಮಾರು 1,000 ಕಿಮೀ ದೂರದಲ್ಲಿರುವ ರಷ್ಯಾದ ಅಸ್ಟ್ರಾಖಾನ್ ಪ್ರದೇಶದಿಂದ  ಉಡಾವಣೆ ಮಾಡಲಾಗಿದೆ.  ಉಕ್ರೇನ್‌ನ  ಡಿನಿಪ್ರೊದಲ್ಲಿ ಮೂಲಸೌಕರ್ಯವನ್ನು ಗುರಿಯಾಗಿಸಲು ಮಾಸ್ಕೋ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ಸ್ (ಎಂಐಆರ್‌ವಿ) ಪ್ರಯೋಗಿಸಲಾಗಿದೆ. ಇದು ತಂತ್ರಜ್ಞಾನದ ಮೊದಲ ಬಳಕೆಯಾಗಿದೆ.

5,800 ಕಿ.ಮೀ.ಗೂ ಅಧಿಕ ವ್ಯಾಪ್ತಿಯವರೆಗೆ  ಗುರಿ ಚಲಾವಣೆಯನ್ನು ಈ ಐಸಿಬಿಎಂಗಳು ಹೊಂದಿವೆ.

ಇವುಗಳಿಂದ ಪರಮಾಣು, ರಾಸಾಯನಿಕ ಮತ್ತು ಜೈವಿಕ ಸಿಡಿತಲೆಗಳನ್ನು ಸಾಗಣೆ ಮಾಡಲು ತಯಾರಿಸಲಾಗಿದೆ. ಇವುಗಳು ಪ್ರಸ್ತುತ ಇರುವ ಸಿಡಿತಲೆಗಳನ್ನೂಸಾಗಣೆ ಮಾಡಬಲ್ಲವಾಗಿವೆ. ಇದನ್ನು ರಷ್ಯಾವು ಆರ್‌ ಎಸ್-26 ರುಬೆಜ್, ಬ್ಯಾಲಿಸ್ಟಿಕ್ ಕ್ಷಿಪಣಿಯಲ್ಲಿ ಬಳಸಿದೆ ಎಂದು ವರದಿಯಾಗಿದೆ.

ಇದರ ಕುರಿತು  ರಷ್ಯಾ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.  ಕೀವ್‌ ಇದನ್ನು ಬಳಕೆ ಮಾಡಿರುವುದನ್ನು ದೃಢಪಡಿಸಿದೆ. ಹೊಸ ಅಣ್ವಸ್ತ್ರ ನೀತಿಗೆ  ಪುಟಿನ್‌ ಸಹಿ ಹಾಕಿದ ನಂತರ ಈ ಉಡಾವಣೆಯನ್ನು ನಡೆಸಲಾಗಿದೆ. ದೀರ್ಘ ಶ್ರೇಣಿಯ ಎಟಿಎಸಿಎಂಎಸ್‌ ಕ್ಷಿಪಣಿಗಳನ್ನು ರಷ್ಯಾ ಮೇಲೆ ಉಡಾಯಿಸಲು  ಉಕ್ರೇನ್‌ಗೆ ಅಮೆರಿಕ ಅನುಮತಿ ನೀಡಿತ್ತು.

ಇದನ್ನೂ ಓದಿ…ನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

ಸಾಮಾಜಿಕ ಜಾಲತಾಣ ಮತ್ತು ಟೆಲಿಗ್ರಾಮ್ ಹ್ಯಾಂಡಲ್‌ಗಳಲ್ಲಿ ಇದರ ವೀಡಿಯೊಗಳು ಕಾಣಿಸಿಕೊಂಡಿವೆ. ಪರಮಾಣು ಸಿದ್ಧಾಂತದ ಬದಲಾವಣೆಗಳಿಗೆ ಪುಟಿನ್ ಸಹಿ ಹಾಕಿದ ಕೇವಲ ಒಂದು ದಿನದ ನಂತರ ಈ ಉಡಾವಣೆಯಾಗಿದೆ.

Rubezh MIRV ತಂತ್ರಜ್ಞಾನವನ್ನು ಹೊಂದಿರುವ ಘನ-ಇಂಧನ ಐಸಿಬಿಎಂ ಆಗಿದೆ. ಇದನ್ನು 2011ರಲ್ಲಿ ಅಭಿವೃದ್ಧಿಪಡಿಸಲಾಗಿದೆ ಮತ್ತು 2012 ರಲ್ಲಿ ಮೊದಲ ಬಾರಿಗೆ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಉಡಾವಣಾ ಸ್ಥಳದಿಂದ 5,800 ಕಿಮೀ ದೂರದ ಗುರಿಯನ್ನು ಇದು ಹೊಂದಿದೆ.

ಇದನ್ನೂ ಓದಿ…ಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂನಿಂದ ‘ಪಕ್ಷಪಾತದ ನಿಲುವು’ : ಸಿಜೆಐಗೆ ಪತ್ರ ಬರೆದ ವಕೀಲ

ಘನ-ಇಂಧನ ಕ್ಷಿಪಣಿಗಳನ್ನು ಉಡಾವಣೆ ಮಾಡಿದ ತಕ್ಷಣ ಇಂಧನ ತುಂಬುವ ಅಗತ್ಯವಿಲ್ಲ ಮತ್ತು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಸುಲಭವಾಗಿರುತ್ತದೆ. ಇದು ಇಂಧನ ಮತ್ತು ಆಕ್ಸಿಡೈಸರ್ ಮಿಶ್ರಣವಾಗಿದ್ದು, ಗಟ್ಟಿಯಾದ ರಬ್ಬರಿನ ವಸ್ತುವಿನಿಂದ ಒಟ್ಟಿಗೆ ಜೋಡಿಸಲ್ಪಟ್ಟಿರುತ್ತದೆ ಮತ್ತು ಲೋಹದ ಕವಚದಲ್ಲಿ ಪ್ಯಾಕ್ ಮಾಡಲಾಗುತ್ತದೆ.

ಆರ್ ಎಸ್-26 ನಲ್ಲಿ ಘನ-ಪ್ರೊಪೆಲೆಂಟ್ ಸುಟ್ಟಾಗ, ಇಂಧನ ಅಂಶದಿಂದ ಆಮ್ಲಜನಕವು ಅಗಾಧವಾದ ಶಕ್ತಿಯನ್ನು ಉತ್ಪಾದಿಸುತ್ತದೆ. ಒತ್ತಡವನ್ನು ಸೃಷ್ಟಿಸುತ್ತದೆ ಮತ್ತು ಚಿಮ್ಮುವಿಕೆಗೆ ಸಹಾಯ ಮಾಡುತ್ತದೆ. ಜಾಗತಿಕ ನಾಯಕರು ಈ ಕುರಿತು ಭಾರೀ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ…ಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...