Homeಅಂತರಾಷ್ಟ್ರೀಯ5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

- Advertisement -
- Advertisement -

ಮಾಸ್ಕೋ:  ರಷ್ಯಾವು ಉಕ್ರೇನ್‌ನಲ್ಲಿ ಇಂಟರ್-ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು (ಐಸಿಬಿಎಂ) ಉಡಾಯಿಸಿದೆ ಎಂದು ವರದಿಯಾಗಿದೆ. ಇದನ್ನು ಸುಮಾರು 60 ವರ್ಷಗಳ ಹಿಂದೆ ಬಳಕೆ ಮಾಡಲಾಗಿದ್ದು, ನಂತರ ಇದು ಪ್ರಥಮ ಬಳಕೆ ಎಂದು ಗುರುತಿಸಲಾಗಿದೆ.

ಇದನ್ನು ಉಕ್ರೇನ್‌ನಲ್ಲಿ ಸ್ಫೋಟಗೊಂಡ ಸ್ಥಳದಿಂದ ಸುಮಾರು 1,000 ಕಿಮೀ ದೂರದಲ್ಲಿರುವ ರಷ್ಯಾದ ಅಸ್ಟ್ರಾಖಾನ್ ಪ್ರದೇಶದಿಂದ  ಉಡಾವಣೆ ಮಾಡಲಾಗಿದೆ.  ಉಕ್ರೇನ್‌ನ  ಡಿನಿಪ್ರೊದಲ್ಲಿ ಮೂಲಸೌಕರ್ಯವನ್ನು ಗುರಿಯಾಗಿಸಲು ಮಾಸ್ಕೋ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ಸ್ (ಎಂಐಆರ್‌ವಿ) ಪ್ರಯೋಗಿಸಲಾಗಿದೆ. ಇದು ತಂತ್ರಜ್ಞಾನದ ಮೊದಲ ಬಳಕೆಯಾಗಿದೆ.

5,800 ಕಿ.ಮೀ.ಗೂ ಅಧಿಕ ವ್ಯಾಪ್ತಿಯವರೆಗೆ  ಗುರಿ ಚಲಾವಣೆಯನ್ನು ಈ ಐಸಿಬಿಎಂಗಳು ಹೊಂದಿವೆ.

ಇವುಗಳಿಂದ ಪರಮಾಣು, ರಾಸಾಯನಿಕ ಮತ್ತು ಜೈವಿಕ ಸಿಡಿತಲೆಗಳನ್ನು ಸಾಗಣೆ ಮಾಡಲು ತಯಾರಿಸಲಾಗಿದೆ. ಇವುಗಳು ಪ್ರಸ್ತುತ ಇರುವ ಸಿಡಿತಲೆಗಳನ್ನೂಸಾಗಣೆ ಮಾಡಬಲ್ಲವಾಗಿವೆ. ಇದನ್ನು ರಷ್ಯಾವು ಆರ್‌ ಎಸ್-26 ರುಬೆಜ್, ಬ್ಯಾಲಿಸ್ಟಿಕ್ ಕ್ಷಿಪಣಿಯಲ್ಲಿ ಬಳಸಿದೆ ಎಂದು ವರದಿಯಾಗಿದೆ.

ಇದರ ಕುರಿತು  ರಷ್ಯಾ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.  ಕೀವ್‌ ಇದನ್ನು ಬಳಕೆ ಮಾಡಿರುವುದನ್ನು ದೃಢಪಡಿಸಿದೆ. ಹೊಸ ಅಣ್ವಸ್ತ್ರ ನೀತಿಗೆ  ಪುಟಿನ್‌ ಸಹಿ ಹಾಕಿದ ನಂತರ ಈ ಉಡಾವಣೆಯನ್ನು ನಡೆಸಲಾಗಿದೆ. ದೀರ್ಘ ಶ್ರೇಣಿಯ ಎಟಿಎಸಿಎಂಎಸ್‌ ಕ್ಷಿಪಣಿಗಳನ್ನು ರಷ್ಯಾ ಮೇಲೆ ಉಡಾಯಿಸಲು  ಉಕ್ರೇನ್‌ಗೆ ಅಮೆರಿಕ ಅನುಮತಿ ನೀಡಿತ್ತು.

ಇದನ್ನೂ ಓದಿ…ನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

ಸಾಮಾಜಿಕ ಜಾಲತಾಣ ಮತ್ತು ಟೆಲಿಗ್ರಾಮ್ ಹ್ಯಾಂಡಲ್‌ಗಳಲ್ಲಿ ಇದರ ವೀಡಿಯೊಗಳು ಕಾಣಿಸಿಕೊಂಡಿವೆ. ಪರಮಾಣು ಸಿದ್ಧಾಂತದ ಬದಲಾವಣೆಗಳಿಗೆ ಪುಟಿನ್ ಸಹಿ ಹಾಕಿದ ಕೇವಲ ಒಂದು ದಿನದ ನಂತರ ಈ ಉಡಾವಣೆಯಾಗಿದೆ.

Rubezh MIRV ತಂತ್ರಜ್ಞಾನವನ್ನು ಹೊಂದಿರುವ ಘನ-ಇಂಧನ ಐಸಿಬಿಎಂ ಆಗಿದೆ. ಇದನ್ನು 2011ರಲ್ಲಿ ಅಭಿವೃದ್ಧಿಪಡಿಸಲಾಗಿದೆ ಮತ್ತು 2012 ರಲ್ಲಿ ಮೊದಲ ಬಾರಿಗೆ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಉಡಾವಣಾ ಸ್ಥಳದಿಂದ 5,800 ಕಿಮೀ ದೂರದ ಗುರಿಯನ್ನು ಇದು ಹೊಂದಿದೆ.

ಇದನ್ನೂ ಓದಿ…ಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂನಿಂದ ‘ಪಕ್ಷಪಾತದ ನಿಲುವು’ : ಸಿಜೆಐಗೆ ಪತ್ರ ಬರೆದ ವಕೀಲ

ಘನ-ಇಂಧನ ಕ್ಷಿಪಣಿಗಳನ್ನು ಉಡಾವಣೆ ಮಾಡಿದ ತಕ್ಷಣ ಇಂಧನ ತುಂಬುವ ಅಗತ್ಯವಿಲ್ಲ ಮತ್ತು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಸುಲಭವಾಗಿರುತ್ತದೆ. ಇದು ಇಂಧನ ಮತ್ತು ಆಕ್ಸಿಡೈಸರ್ ಮಿಶ್ರಣವಾಗಿದ್ದು, ಗಟ್ಟಿಯಾದ ರಬ್ಬರಿನ ವಸ್ತುವಿನಿಂದ ಒಟ್ಟಿಗೆ ಜೋಡಿಸಲ್ಪಟ್ಟಿರುತ್ತದೆ ಮತ್ತು ಲೋಹದ ಕವಚದಲ್ಲಿ ಪ್ಯಾಕ್ ಮಾಡಲಾಗುತ್ತದೆ.

ಆರ್ ಎಸ್-26 ನಲ್ಲಿ ಘನ-ಪ್ರೊಪೆಲೆಂಟ್ ಸುಟ್ಟಾಗ, ಇಂಧನ ಅಂಶದಿಂದ ಆಮ್ಲಜನಕವು ಅಗಾಧವಾದ ಶಕ್ತಿಯನ್ನು ಉತ್ಪಾದಿಸುತ್ತದೆ. ಒತ್ತಡವನ್ನು ಸೃಷ್ಟಿಸುತ್ತದೆ ಮತ್ತು ಚಿಮ್ಮುವಿಕೆಗೆ ಸಹಾಯ ಮಾಡುತ್ತದೆ. ಜಾಗತಿಕ ನಾಯಕರು ಈ ಕುರಿತು ಭಾರೀ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ…ಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...