Homeಅಂತರಾಷ್ಟ್ರೀಯ5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

- Advertisement -
- Advertisement -

ಮಾಸ್ಕೋ:  ರಷ್ಯಾವು ಉಕ್ರೇನ್‌ನಲ್ಲಿ ಇಂಟರ್-ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು (ಐಸಿಬಿಎಂ) ಉಡಾಯಿಸಿದೆ ಎಂದು ವರದಿಯಾಗಿದೆ. ಇದನ್ನು ಸುಮಾರು 60 ವರ್ಷಗಳ ಹಿಂದೆ ಬಳಕೆ ಮಾಡಲಾಗಿದ್ದು, ನಂತರ ಇದು ಪ್ರಥಮ ಬಳಕೆ ಎಂದು ಗುರುತಿಸಲಾಗಿದೆ.

ಇದನ್ನು ಉಕ್ರೇನ್‌ನಲ್ಲಿ ಸ್ಫೋಟಗೊಂಡ ಸ್ಥಳದಿಂದ ಸುಮಾರು 1,000 ಕಿಮೀ ದೂರದಲ್ಲಿರುವ ರಷ್ಯಾದ ಅಸ್ಟ್ರಾಖಾನ್ ಪ್ರದೇಶದಿಂದ  ಉಡಾವಣೆ ಮಾಡಲಾಗಿದೆ.  ಉಕ್ರೇನ್‌ನ  ಡಿನಿಪ್ರೊದಲ್ಲಿ ಮೂಲಸೌಕರ್ಯವನ್ನು ಗುರಿಯಾಗಿಸಲು ಮಾಸ್ಕೋ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ಸ್ (ಎಂಐಆರ್‌ವಿ) ಪ್ರಯೋಗಿಸಲಾಗಿದೆ. ಇದು ತಂತ್ರಜ್ಞಾನದ ಮೊದಲ ಬಳಕೆಯಾಗಿದೆ.

5,800 ಕಿ.ಮೀ.ಗೂ ಅಧಿಕ ವ್ಯಾಪ್ತಿಯವರೆಗೆ  ಗುರಿ ಚಲಾವಣೆಯನ್ನು ಈ ಐಸಿಬಿಎಂಗಳು ಹೊಂದಿವೆ.

ಇವುಗಳಿಂದ ಪರಮಾಣು, ರಾಸಾಯನಿಕ ಮತ್ತು ಜೈವಿಕ ಸಿಡಿತಲೆಗಳನ್ನು ಸಾಗಣೆ ಮಾಡಲು ತಯಾರಿಸಲಾಗಿದೆ. ಇವುಗಳು ಪ್ರಸ್ತುತ ಇರುವ ಸಿಡಿತಲೆಗಳನ್ನೂಸಾಗಣೆ ಮಾಡಬಲ್ಲವಾಗಿವೆ. ಇದನ್ನು ರಷ್ಯಾವು ಆರ್‌ ಎಸ್-26 ರುಬೆಜ್, ಬ್ಯಾಲಿಸ್ಟಿಕ್ ಕ್ಷಿಪಣಿಯಲ್ಲಿ ಬಳಸಿದೆ ಎಂದು ವರದಿಯಾಗಿದೆ.

ಇದರ ಕುರಿತು  ರಷ್ಯಾ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.  ಕೀವ್‌ ಇದನ್ನು ಬಳಕೆ ಮಾಡಿರುವುದನ್ನು ದೃಢಪಡಿಸಿದೆ. ಹೊಸ ಅಣ್ವಸ್ತ್ರ ನೀತಿಗೆ  ಪುಟಿನ್‌ ಸಹಿ ಹಾಕಿದ ನಂತರ ಈ ಉಡಾವಣೆಯನ್ನು ನಡೆಸಲಾಗಿದೆ. ದೀರ್ಘ ಶ್ರೇಣಿಯ ಎಟಿಎಸಿಎಂಎಸ್‌ ಕ್ಷಿಪಣಿಗಳನ್ನು ರಷ್ಯಾ ಮೇಲೆ ಉಡಾಯಿಸಲು  ಉಕ್ರೇನ್‌ಗೆ ಅಮೆರಿಕ ಅನುಮತಿ ನೀಡಿತ್ತು.

ಇದನ್ನೂ ಓದಿ…ನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

ಸಾಮಾಜಿಕ ಜಾಲತಾಣ ಮತ್ತು ಟೆಲಿಗ್ರಾಮ್ ಹ್ಯಾಂಡಲ್‌ಗಳಲ್ಲಿ ಇದರ ವೀಡಿಯೊಗಳು ಕಾಣಿಸಿಕೊಂಡಿವೆ. ಪರಮಾಣು ಸಿದ್ಧಾಂತದ ಬದಲಾವಣೆಗಳಿಗೆ ಪುಟಿನ್ ಸಹಿ ಹಾಕಿದ ಕೇವಲ ಒಂದು ದಿನದ ನಂತರ ಈ ಉಡಾವಣೆಯಾಗಿದೆ.

Rubezh MIRV ತಂತ್ರಜ್ಞಾನವನ್ನು ಹೊಂದಿರುವ ಘನ-ಇಂಧನ ಐಸಿಬಿಎಂ ಆಗಿದೆ. ಇದನ್ನು 2011ರಲ್ಲಿ ಅಭಿವೃದ್ಧಿಪಡಿಸಲಾಗಿದೆ ಮತ್ತು 2012 ರಲ್ಲಿ ಮೊದಲ ಬಾರಿಗೆ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಉಡಾವಣಾ ಸ್ಥಳದಿಂದ 5,800 ಕಿಮೀ ದೂರದ ಗುರಿಯನ್ನು ಇದು ಹೊಂದಿದೆ.

ಇದನ್ನೂ ಓದಿ…ಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂನಿಂದ ‘ಪಕ್ಷಪಾತದ ನಿಲುವು’ : ಸಿಜೆಐಗೆ ಪತ್ರ ಬರೆದ ವಕೀಲ

ಘನ-ಇಂಧನ ಕ್ಷಿಪಣಿಗಳನ್ನು ಉಡಾವಣೆ ಮಾಡಿದ ತಕ್ಷಣ ಇಂಧನ ತುಂಬುವ ಅಗತ್ಯವಿಲ್ಲ ಮತ್ತು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಸುಲಭವಾಗಿರುತ್ತದೆ. ಇದು ಇಂಧನ ಮತ್ತು ಆಕ್ಸಿಡೈಸರ್ ಮಿಶ್ರಣವಾಗಿದ್ದು, ಗಟ್ಟಿಯಾದ ರಬ್ಬರಿನ ವಸ್ತುವಿನಿಂದ ಒಟ್ಟಿಗೆ ಜೋಡಿಸಲ್ಪಟ್ಟಿರುತ್ತದೆ ಮತ್ತು ಲೋಹದ ಕವಚದಲ್ಲಿ ಪ್ಯಾಕ್ ಮಾಡಲಾಗುತ್ತದೆ.

ಆರ್ ಎಸ್-26 ನಲ್ಲಿ ಘನ-ಪ್ರೊಪೆಲೆಂಟ್ ಸುಟ್ಟಾಗ, ಇಂಧನ ಅಂಶದಿಂದ ಆಮ್ಲಜನಕವು ಅಗಾಧವಾದ ಶಕ್ತಿಯನ್ನು ಉತ್ಪಾದಿಸುತ್ತದೆ. ಒತ್ತಡವನ್ನು ಸೃಷ್ಟಿಸುತ್ತದೆ ಮತ್ತು ಚಿಮ್ಮುವಿಕೆಗೆ ಸಹಾಯ ಮಾಡುತ್ತದೆ. ಜಾಗತಿಕ ನಾಯಕರು ಈ ಕುರಿತು ಭಾರೀ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ…ಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...