Homeಅಂತರಾಷ್ಟ್ರೀಯ5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

- Advertisement -
- Advertisement -

ಮಾಸ್ಕೋ:  ರಷ್ಯಾವು ಉಕ್ರೇನ್‌ನಲ್ಲಿ ಇಂಟರ್-ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು (ಐಸಿಬಿಎಂ) ಉಡಾಯಿಸಿದೆ ಎಂದು ವರದಿಯಾಗಿದೆ. ಇದನ್ನು ಸುಮಾರು 60 ವರ್ಷಗಳ ಹಿಂದೆ ಬಳಕೆ ಮಾಡಲಾಗಿದ್ದು, ನಂತರ ಇದು ಪ್ರಥಮ ಬಳಕೆ ಎಂದು ಗುರುತಿಸಲಾಗಿದೆ.

ಇದನ್ನು ಉಕ್ರೇನ್‌ನಲ್ಲಿ ಸ್ಫೋಟಗೊಂಡ ಸ್ಥಳದಿಂದ ಸುಮಾರು 1,000 ಕಿಮೀ ದೂರದಲ್ಲಿರುವ ರಷ್ಯಾದ ಅಸ್ಟ್ರಾಖಾನ್ ಪ್ರದೇಶದಿಂದ  ಉಡಾವಣೆ ಮಾಡಲಾಗಿದೆ.  ಉಕ್ರೇನ್‌ನ  ಡಿನಿಪ್ರೊದಲ್ಲಿ ಮೂಲಸೌಕರ್ಯವನ್ನು ಗುರಿಯಾಗಿಸಲು ಮಾಸ್ಕೋ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ಸ್ (ಎಂಐಆರ್‌ವಿ) ಪ್ರಯೋಗಿಸಲಾಗಿದೆ. ಇದು ತಂತ್ರಜ್ಞಾನದ ಮೊದಲ ಬಳಕೆಯಾಗಿದೆ.

5,800 ಕಿ.ಮೀ.ಗೂ ಅಧಿಕ ವ್ಯಾಪ್ತಿಯವರೆಗೆ  ಗುರಿ ಚಲಾವಣೆಯನ್ನು ಈ ಐಸಿಬಿಎಂಗಳು ಹೊಂದಿವೆ.

ಇವುಗಳಿಂದ ಪರಮಾಣು, ರಾಸಾಯನಿಕ ಮತ್ತು ಜೈವಿಕ ಸಿಡಿತಲೆಗಳನ್ನು ಸಾಗಣೆ ಮಾಡಲು ತಯಾರಿಸಲಾಗಿದೆ. ಇವುಗಳು ಪ್ರಸ್ತುತ ಇರುವ ಸಿಡಿತಲೆಗಳನ್ನೂಸಾಗಣೆ ಮಾಡಬಲ್ಲವಾಗಿವೆ. ಇದನ್ನು ರಷ್ಯಾವು ಆರ್‌ ಎಸ್-26 ರುಬೆಜ್, ಬ್ಯಾಲಿಸ್ಟಿಕ್ ಕ್ಷಿಪಣಿಯಲ್ಲಿ ಬಳಸಿದೆ ಎಂದು ವರದಿಯಾಗಿದೆ.

ಇದರ ಕುರಿತು  ರಷ್ಯಾ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.  ಕೀವ್‌ ಇದನ್ನು ಬಳಕೆ ಮಾಡಿರುವುದನ್ನು ದೃಢಪಡಿಸಿದೆ. ಹೊಸ ಅಣ್ವಸ್ತ್ರ ನೀತಿಗೆ  ಪುಟಿನ್‌ ಸಹಿ ಹಾಕಿದ ನಂತರ ಈ ಉಡಾವಣೆಯನ್ನು ನಡೆಸಲಾಗಿದೆ. ದೀರ್ಘ ಶ್ರೇಣಿಯ ಎಟಿಎಸಿಎಂಎಸ್‌ ಕ್ಷಿಪಣಿಗಳನ್ನು ರಷ್ಯಾ ಮೇಲೆ ಉಡಾಯಿಸಲು  ಉಕ್ರೇನ್‌ಗೆ ಅಮೆರಿಕ ಅನುಮತಿ ನೀಡಿತ್ತು.

ಇದನ್ನೂ ಓದಿ…ನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

ಸಾಮಾಜಿಕ ಜಾಲತಾಣ ಮತ್ತು ಟೆಲಿಗ್ರಾಮ್ ಹ್ಯಾಂಡಲ್‌ಗಳಲ್ಲಿ ಇದರ ವೀಡಿಯೊಗಳು ಕಾಣಿಸಿಕೊಂಡಿವೆ. ಪರಮಾಣು ಸಿದ್ಧಾಂತದ ಬದಲಾವಣೆಗಳಿಗೆ ಪುಟಿನ್ ಸಹಿ ಹಾಕಿದ ಕೇವಲ ಒಂದು ದಿನದ ನಂತರ ಈ ಉಡಾವಣೆಯಾಗಿದೆ.

Rubezh MIRV ತಂತ್ರಜ್ಞಾನವನ್ನು ಹೊಂದಿರುವ ಘನ-ಇಂಧನ ಐಸಿಬಿಎಂ ಆಗಿದೆ. ಇದನ್ನು 2011ರಲ್ಲಿ ಅಭಿವೃದ್ಧಿಪಡಿಸಲಾಗಿದೆ ಮತ್ತು 2012 ರಲ್ಲಿ ಮೊದಲ ಬಾರಿಗೆ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಉಡಾವಣಾ ಸ್ಥಳದಿಂದ 5,800 ಕಿಮೀ ದೂರದ ಗುರಿಯನ್ನು ಇದು ಹೊಂದಿದೆ.

ಇದನ್ನೂ ಓದಿ…ಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂನಿಂದ ‘ಪಕ್ಷಪಾತದ ನಿಲುವು’ : ಸಿಜೆಐಗೆ ಪತ್ರ ಬರೆದ ವಕೀಲ

ಘನ-ಇಂಧನ ಕ್ಷಿಪಣಿಗಳನ್ನು ಉಡಾವಣೆ ಮಾಡಿದ ತಕ್ಷಣ ಇಂಧನ ತುಂಬುವ ಅಗತ್ಯವಿಲ್ಲ ಮತ್ತು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಸುಲಭವಾಗಿರುತ್ತದೆ. ಇದು ಇಂಧನ ಮತ್ತು ಆಕ್ಸಿಡೈಸರ್ ಮಿಶ್ರಣವಾಗಿದ್ದು, ಗಟ್ಟಿಯಾದ ರಬ್ಬರಿನ ವಸ್ತುವಿನಿಂದ ಒಟ್ಟಿಗೆ ಜೋಡಿಸಲ್ಪಟ್ಟಿರುತ್ತದೆ ಮತ್ತು ಲೋಹದ ಕವಚದಲ್ಲಿ ಪ್ಯಾಕ್ ಮಾಡಲಾಗುತ್ತದೆ.

ಆರ್ ಎಸ್-26 ನಲ್ಲಿ ಘನ-ಪ್ರೊಪೆಲೆಂಟ್ ಸುಟ್ಟಾಗ, ಇಂಧನ ಅಂಶದಿಂದ ಆಮ್ಲಜನಕವು ಅಗಾಧವಾದ ಶಕ್ತಿಯನ್ನು ಉತ್ಪಾದಿಸುತ್ತದೆ. ಒತ್ತಡವನ್ನು ಸೃಷ್ಟಿಸುತ್ತದೆ ಮತ್ತು ಚಿಮ್ಮುವಿಕೆಗೆ ಸಹಾಯ ಮಾಡುತ್ತದೆ. ಜಾಗತಿಕ ನಾಯಕರು ಈ ಕುರಿತು ಭಾರೀ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ…ಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...