Homeಅಂತರಾಷ್ಟ್ರೀಯ5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

- Advertisement -
- Advertisement -

ಮಾಸ್ಕೋ:  ರಷ್ಯಾವು ಉಕ್ರೇನ್‌ನಲ್ಲಿ ಇಂಟರ್-ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು (ಐಸಿಬಿಎಂ) ಉಡಾಯಿಸಿದೆ ಎಂದು ವರದಿಯಾಗಿದೆ. ಇದನ್ನು ಸುಮಾರು 60 ವರ್ಷಗಳ ಹಿಂದೆ ಬಳಕೆ ಮಾಡಲಾಗಿದ್ದು, ನಂತರ ಇದು ಪ್ರಥಮ ಬಳಕೆ ಎಂದು ಗುರುತಿಸಲಾಗಿದೆ.

ಇದನ್ನು ಉಕ್ರೇನ್‌ನಲ್ಲಿ ಸ್ಫೋಟಗೊಂಡ ಸ್ಥಳದಿಂದ ಸುಮಾರು 1,000 ಕಿಮೀ ದೂರದಲ್ಲಿರುವ ರಷ್ಯಾದ ಅಸ್ಟ್ರಾಖಾನ್ ಪ್ರದೇಶದಿಂದ  ಉಡಾವಣೆ ಮಾಡಲಾಗಿದೆ.  ಉಕ್ರೇನ್‌ನ  ಡಿನಿಪ್ರೊದಲ್ಲಿ ಮೂಲಸೌಕರ್ಯವನ್ನು ಗುರಿಯಾಗಿಸಲು ಮಾಸ್ಕೋ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ಸ್ (ಎಂಐಆರ್‌ವಿ) ಪ್ರಯೋಗಿಸಲಾಗಿದೆ. ಇದು ತಂತ್ರಜ್ಞಾನದ ಮೊದಲ ಬಳಕೆಯಾಗಿದೆ.

5,800 ಕಿ.ಮೀ.ಗೂ ಅಧಿಕ ವ್ಯಾಪ್ತಿಯವರೆಗೆ  ಗುರಿ ಚಲಾವಣೆಯನ್ನು ಈ ಐಸಿಬಿಎಂಗಳು ಹೊಂದಿವೆ.

ಇವುಗಳಿಂದ ಪರಮಾಣು, ರಾಸಾಯನಿಕ ಮತ್ತು ಜೈವಿಕ ಸಿಡಿತಲೆಗಳನ್ನು ಸಾಗಣೆ ಮಾಡಲು ತಯಾರಿಸಲಾಗಿದೆ. ಇವುಗಳು ಪ್ರಸ್ತುತ ಇರುವ ಸಿಡಿತಲೆಗಳನ್ನೂಸಾಗಣೆ ಮಾಡಬಲ್ಲವಾಗಿವೆ. ಇದನ್ನು ರಷ್ಯಾವು ಆರ್‌ ಎಸ್-26 ರುಬೆಜ್, ಬ್ಯಾಲಿಸ್ಟಿಕ್ ಕ್ಷಿಪಣಿಯಲ್ಲಿ ಬಳಸಿದೆ ಎಂದು ವರದಿಯಾಗಿದೆ.

ಇದರ ಕುರಿತು  ರಷ್ಯಾ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.  ಕೀವ್‌ ಇದನ್ನು ಬಳಕೆ ಮಾಡಿರುವುದನ್ನು ದೃಢಪಡಿಸಿದೆ. ಹೊಸ ಅಣ್ವಸ್ತ್ರ ನೀತಿಗೆ  ಪುಟಿನ್‌ ಸಹಿ ಹಾಕಿದ ನಂತರ ಈ ಉಡಾವಣೆಯನ್ನು ನಡೆಸಲಾಗಿದೆ. ದೀರ್ಘ ಶ್ರೇಣಿಯ ಎಟಿಎಸಿಎಂಎಸ್‌ ಕ್ಷಿಪಣಿಗಳನ್ನು ರಷ್ಯಾ ಮೇಲೆ ಉಡಾಯಿಸಲು  ಉಕ್ರೇನ್‌ಗೆ ಅಮೆರಿಕ ಅನುಮತಿ ನೀಡಿತ್ತು.

ಇದನ್ನೂ ಓದಿ…ನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

ಸಾಮಾಜಿಕ ಜಾಲತಾಣ ಮತ್ತು ಟೆಲಿಗ್ರಾಮ್ ಹ್ಯಾಂಡಲ್‌ಗಳಲ್ಲಿ ಇದರ ವೀಡಿಯೊಗಳು ಕಾಣಿಸಿಕೊಂಡಿವೆ. ಪರಮಾಣು ಸಿದ್ಧಾಂತದ ಬದಲಾವಣೆಗಳಿಗೆ ಪುಟಿನ್ ಸಹಿ ಹಾಕಿದ ಕೇವಲ ಒಂದು ದಿನದ ನಂತರ ಈ ಉಡಾವಣೆಯಾಗಿದೆ.

Rubezh MIRV ತಂತ್ರಜ್ಞಾನವನ್ನು ಹೊಂದಿರುವ ಘನ-ಇಂಧನ ಐಸಿಬಿಎಂ ಆಗಿದೆ. ಇದನ್ನು 2011ರಲ್ಲಿ ಅಭಿವೃದ್ಧಿಪಡಿಸಲಾಗಿದೆ ಮತ್ತು 2012 ರಲ್ಲಿ ಮೊದಲ ಬಾರಿಗೆ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಉಡಾವಣಾ ಸ್ಥಳದಿಂದ 5,800 ಕಿಮೀ ದೂರದ ಗುರಿಯನ್ನು ಇದು ಹೊಂದಿದೆ.

ಇದನ್ನೂ ಓದಿ…ಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂನಿಂದ ‘ಪಕ್ಷಪಾತದ ನಿಲುವು’ : ಸಿಜೆಐಗೆ ಪತ್ರ ಬರೆದ ವಕೀಲ

ಘನ-ಇಂಧನ ಕ್ಷಿಪಣಿಗಳನ್ನು ಉಡಾವಣೆ ಮಾಡಿದ ತಕ್ಷಣ ಇಂಧನ ತುಂಬುವ ಅಗತ್ಯವಿಲ್ಲ ಮತ್ತು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಸುಲಭವಾಗಿರುತ್ತದೆ. ಇದು ಇಂಧನ ಮತ್ತು ಆಕ್ಸಿಡೈಸರ್ ಮಿಶ್ರಣವಾಗಿದ್ದು, ಗಟ್ಟಿಯಾದ ರಬ್ಬರಿನ ವಸ್ತುವಿನಿಂದ ಒಟ್ಟಿಗೆ ಜೋಡಿಸಲ್ಪಟ್ಟಿರುತ್ತದೆ ಮತ್ತು ಲೋಹದ ಕವಚದಲ್ಲಿ ಪ್ಯಾಕ್ ಮಾಡಲಾಗುತ್ತದೆ.

ಆರ್ ಎಸ್-26 ನಲ್ಲಿ ಘನ-ಪ್ರೊಪೆಲೆಂಟ್ ಸುಟ್ಟಾಗ, ಇಂಧನ ಅಂಶದಿಂದ ಆಮ್ಲಜನಕವು ಅಗಾಧವಾದ ಶಕ್ತಿಯನ್ನು ಉತ್ಪಾದಿಸುತ್ತದೆ. ಒತ್ತಡವನ್ನು ಸೃಷ್ಟಿಸುತ್ತದೆ ಮತ್ತು ಚಿಮ್ಮುವಿಕೆಗೆ ಸಹಾಯ ಮಾಡುತ್ತದೆ. ಜಾಗತಿಕ ನಾಯಕರು ಈ ಕುರಿತು ಭಾರೀ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ…ಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...