Homeಅಂತರಾಷ್ಟ್ರೀಯ5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

- Advertisement -
- Advertisement -

ಮಾಸ್ಕೋ:  ರಷ್ಯಾವು ಉಕ್ರೇನ್‌ನಲ್ಲಿ ಇಂಟರ್-ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು (ಐಸಿಬಿಎಂ) ಉಡಾಯಿಸಿದೆ ಎಂದು ವರದಿಯಾಗಿದೆ. ಇದನ್ನು ಸುಮಾರು 60 ವರ್ಷಗಳ ಹಿಂದೆ ಬಳಕೆ ಮಾಡಲಾಗಿದ್ದು, ನಂತರ ಇದು ಪ್ರಥಮ ಬಳಕೆ ಎಂದು ಗುರುತಿಸಲಾಗಿದೆ.

ಇದನ್ನು ಉಕ್ರೇನ್‌ನಲ್ಲಿ ಸ್ಫೋಟಗೊಂಡ ಸ್ಥಳದಿಂದ ಸುಮಾರು 1,000 ಕಿಮೀ ದೂರದಲ್ಲಿರುವ ರಷ್ಯಾದ ಅಸ್ಟ್ರಾಖಾನ್ ಪ್ರದೇಶದಿಂದ  ಉಡಾವಣೆ ಮಾಡಲಾಗಿದೆ.  ಉಕ್ರೇನ್‌ನ  ಡಿನಿಪ್ರೊದಲ್ಲಿ ಮೂಲಸೌಕರ್ಯವನ್ನು ಗುರಿಯಾಗಿಸಲು ಮಾಸ್ಕೋ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ಸ್ (ಎಂಐಆರ್‌ವಿ) ಪ್ರಯೋಗಿಸಲಾಗಿದೆ. ಇದು ತಂತ್ರಜ್ಞಾನದ ಮೊದಲ ಬಳಕೆಯಾಗಿದೆ.

5,800 ಕಿ.ಮೀ.ಗೂ ಅಧಿಕ ವ್ಯಾಪ್ತಿಯವರೆಗೆ  ಗುರಿ ಚಲಾವಣೆಯನ್ನು ಈ ಐಸಿಬಿಎಂಗಳು ಹೊಂದಿವೆ.

ಇವುಗಳಿಂದ ಪರಮಾಣು, ರಾಸಾಯನಿಕ ಮತ್ತು ಜೈವಿಕ ಸಿಡಿತಲೆಗಳನ್ನು ಸಾಗಣೆ ಮಾಡಲು ತಯಾರಿಸಲಾಗಿದೆ. ಇವುಗಳು ಪ್ರಸ್ತುತ ಇರುವ ಸಿಡಿತಲೆಗಳನ್ನೂಸಾಗಣೆ ಮಾಡಬಲ್ಲವಾಗಿವೆ. ಇದನ್ನು ರಷ್ಯಾವು ಆರ್‌ ಎಸ್-26 ರುಬೆಜ್, ಬ್ಯಾಲಿಸ್ಟಿಕ್ ಕ್ಷಿಪಣಿಯಲ್ಲಿ ಬಳಸಿದೆ ಎಂದು ವರದಿಯಾಗಿದೆ.

ಇದರ ಕುರಿತು  ರಷ್ಯಾ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.  ಕೀವ್‌ ಇದನ್ನು ಬಳಕೆ ಮಾಡಿರುವುದನ್ನು ದೃಢಪಡಿಸಿದೆ. ಹೊಸ ಅಣ್ವಸ್ತ್ರ ನೀತಿಗೆ  ಪುಟಿನ್‌ ಸಹಿ ಹಾಕಿದ ನಂತರ ಈ ಉಡಾವಣೆಯನ್ನು ನಡೆಸಲಾಗಿದೆ. ದೀರ್ಘ ಶ್ರೇಣಿಯ ಎಟಿಎಸಿಎಂಎಸ್‌ ಕ್ಷಿಪಣಿಗಳನ್ನು ರಷ್ಯಾ ಮೇಲೆ ಉಡಾಯಿಸಲು  ಉಕ್ರೇನ್‌ಗೆ ಅಮೆರಿಕ ಅನುಮತಿ ನೀಡಿತ್ತು.

ಇದನ್ನೂ ಓದಿ…ನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

ಸಾಮಾಜಿಕ ಜಾಲತಾಣ ಮತ್ತು ಟೆಲಿಗ್ರಾಮ್ ಹ್ಯಾಂಡಲ್‌ಗಳಲ್ಲಿ ಇದರ ವೀಡಿಯೊಗಳು ಕಾಣಿಸಿಕೊಂಡಿವೆ. ಪರಮಾಣು ಸಿದ್ಧಾಂತದ ಬದಲಾವಣೆಗಳಿಗೆ ಪುಟಿನ್ ಸಹಿ ಹಾಕಿದ ಕೇವಲ ಒಂದು ದಿನದ ನಂತರ ಈ ಉಡಾವಣೆಯಾಗಿದೆ.

Rubezh MIRV ತಂತ್ರಜ್ಞಾನವನ್ನು ಹೊಂದಿರುವ ಘನ-ಇಂಧನ ಐಸಿಬಿಎಂ ಆಗಿದೆ. ಇದನ್ನು 2011ರಲ್ಲಿ ಅಭಿವೃದ್ಧಿಪಡಿಸಲಾಗಿದೆ ಮತ್ತು 2012 ರಲ್ಲಿ ಮೊದಲ ಬಾರಿಗೆ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಉಡಾವಣಾ ಸ್ಥಳದಿಂದ 5,800 ಕಿಮೀ ದೂರದ ಗುರಿಯನ್ನು ಇದು ಹೊಂದಿದೆ.

ಇದನ್ನೂ ಓದಿ…ಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂನಿಂದ ‘ಪಕ್ಷಪಾತದ ನಿಲುವು’ : ಸಿಜೆಐಗೆ ಪತ್ರ ಬರೆದ ವಕೀಲ

ಘನ-ಇಂಧನ ಕ್ಷಿಪಣಿಗಳನ್ನು ಉಡಾವಣೆ ಮಾಡಿದ ತಕ್ಷಣ ಇಂಧನ ತುಂಬುವ ಅಗತ್ಯವಿಲ್ಲ ಮತ್ತು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಸುಲಭವಾಗಿರುತ್ತದೆ. ಇದು ಇಂಧನ ಮತ್ತು ಆಕ್ಸಿಡೈಸರ್ ಮಿಶ್ರಣವಾಗಿದ್ದು, ಗಟ್ಟಿಯಾದ ರಬ್ಬರಿನ ವಸ್ತುವಿನಿಂದ ಒಟ್ಟಿಗೆ ಜೋಡಿಸಲ್ಪಟ್ಟಿರುತ್ತದೆ ಮತ್ತು ಲೋಹದ ಕವಚದಲ್ಲಿ ಪ್ಯಾಕ್ ಮಾಡಲಾಗುತ್ತದೆ.

ಆರ್ ಎಸ್-26 ನಲ್ಲಿ ಘನ-ಪ್ರೊಪೆಲೆಂಟ್ ಸುಟ್ಟಾಗ, ಇಂಧನ ಅಂಶದಿಂದ ಆಮ್ಲಜನಕವು ಅಗಾಧವಾದ ಶಕ್ತಿಯನ್ನು ಉತ್ಪಾದಿಸುತ್ತದೆ. ಒತ್ತಡವನ್ನು ಸೃಷ್ಟಿಸುತ್ತದೆ ಮತ್ತು ಚಿಮ್ಮುವಿಕೆಗೆ ಸಹಾಯ ಮಾಡುತ್ತದೆ. ಜಾಗತಿಕ ನಾಯಕರು ಈ ಕುರಿತು ಭಾರೀ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ…ಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...