Homeಮುಖಪುಟ59 ಚೀನಿ ಆಪ್‌ಗಳ ನಿಷೇಧ: ಸ್ಪಷ್ಟೀಕರಣ ನೀಡಿದ ಟಿಕ್‌ಟಾಕ್

59 ಚೀನಿ ಆಪ್‌ಗಳ ನಿಷೇಧ: ಸ್ಪಷ್ಟೀಕರಣ ನೀಡಿದ ಟಿಕ್‌ಟಾಕ್

ಸುಮಾರು 60 ಬಿಲಿಯನ್ ಮೌಲ್ಯದ ಸರಕುಗಳನ್ನು ಭಾರತಕ್ಕೆ ರಫ್ತು ಮಾಡುವ ಚೀನೀ ವ್ಯವಹಾರಗಳನ್ನು ನಿಷೇಧಿಸಲು ಒತ್ತಾಯ ಬಂದಿದೆ ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ತಿಳಿಸಿದೆ.

- Advertisement -
- Advertisement -

ರಾಷ್ಟ್ರೀಯ ಭದ್ರತೆ ಮತ್ತು ಗೌಪ್ಯತೆ ವಿಚಾರದಲ್ಲಿ 59 ಚೀನಾದ ಮೊಬೈಲ್ ಅಪ್ಲಿಕೇಶನ್‌ಗಳನ್ನು ಸೋಮವಾರ ನಿರ್ಬಂಧಿಸಿದ ನಂತರ ಸ್ಪಷ್ಟೀಕರಣ ನೀಡಲು ಟಿಕ್‌ಟಾಕ್ ಇಂಡಿಯಾ ಮುಂದಾಗಿದೆ. ಜನಪ್ರಿಯ ವೀಡಿಯೊ ಹಂಚಿಕೆ ಅಪ್ಲಿಕೇಶನ್ ಸರ್ಕಾರದ ಆದೇಶವನ್ನು ಪಾಲಿಸುವ ಪ್ರಕ್ರಿಯೆಯಲ್ಲಿದೆ ಮತ್ತು “ಭಾರತೀಯ ಕಾನೂನಿನಡಿಯಲ್ಲಿ ಡೇಟಾ ಗೌಪ್ಯತೆ ಮತ್ತು ಭದ್ರತಾ ಅವಶ್ಯಕತೆಗಳನ್ನು ಅನುಸರಿಸುತ್ತಲೇ ಇದೆ” ಎಂದು ಹೇಳಿದೆ.

ಲಡಾಖ್‌ನಲ್ಲಿ ಜೂನ್ 15 ರಂದು ನಡೆದ ಭೀಕರ ಘರ್ಷಣೆಯ ನಂತರ ಭಾರತ ಮತ್ತು ಚೀನಾ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮವಾಗಿ ಸರ್ಕಾರವು ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.

ತನ್ನ ಹೇಳಿಕೆಯಲ್ಲಿ, ಟಿಕ್‌ಟಾಕ್ ಇಂಡಿಯಾ ಭಾರತದಲ್ಲಿನ ಬಳಕೆದಾರರ ಯಾವುದೇ ಮಾಹಿತಿಯನ್ನು “ಚೀನಾ ಸರ್ಕಾರ ಸೇರಿದಂತೆ ಯಾವುದೇ ವಿದೇಶಿ ಸರ್ಕಾರದೊಂದಿಗೆ” ಹಂಚಿಕೊಂಡಿಲ್ಲ ಎಂದು ಹೇಳಿದೆ.

“ಭವಿಷ್ಯದಲ್ಲಿಯೂ ಸಹ ನಾವು ನಾವು ಹಾಗೆ ಮಾಡುವುದಿಲ್ಲ” ಎಂದಿರುವ ಟಿಕ್‌ಟಾಕ್ ಇದು ಬಳಕೆದಾರರ ಗೌಪ್ಯತೆ ಮತ್ತು ಸಮಗ್ರತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ ಎಂದು ಪ್ರತಿಪಾದಿಸಿದೆ.

“ನಿಷೇಧ ಕುರಿತು ಪ್ರತಿಕ್ರಿಯಿಸಲು ಮತ್ತು ಸ್ಪಷ್ಟೀಕರಣಗಳನ್ನು ಸಲ್ಲಿಸಲು ಅವಕಾಶಕ್ಕಾಗಿ ಸಂಬಂಧಪಟ್ಟ ಸರ್ಕಾರಿ ಮಧ್ಯಸ್ಥಗಾರರನ್ನು ಭೇಟಿ ಮಾಡಲು ನಮ್ಮನ್ನು ಆಹ್ವಾನಿಸಲಾಗಿದೆ” ಎಂದು ಟಿಕ್‌ಟಾಕ್‌ ಇಂಡಿಯಾ ಮುಖ್ಯಸ್ಥ ನಿಖಿಲ್ ಗಾಂಧಿ ಹೇಳಿದ್ದಾರೆ.

“ಟಿಕ್‌ಟಾಕ್ 14 ಭಾರತೀಯ ಭಾಷೆಗಳಲ್ಲಿ ಲಭ್ಯಗೊಳಿಸುವ ಮೂಲಕ ಅಂತರ್ಜಾಲವನ್ನು ಪ್ರಜಾಪ್ರಭುತ್ವಗೊಳಿಸಿದೆ. ನೂರಾರು ಮಿಲಿಯನ್ ಬಳಕೆದಾರರು, ಕಲಾವಿದರು, ಕಥೆ ಹೇಳುವವರು, ಶಿಕ್ಷಣತಜ್ಞರು ಮತ್ತು ಪ್ರದರ್ಶಕರು ತಮ್ಮ ಜೀವನೋಪಾಯಕ್ಕಾಗಿ ಅದನ್ನು ಅವಲಂಬಿಸಿರುತ್ತಾರೆ, ಅವರಲ್ಲಿ ಅನೇಕರು ಮೊದಲ ಬಾರಿಗೆ ಇಂಟರ್ನೆಟ್ ಬಳಕೆದಾರರಾಗಿದ್ದಾರೆ” ಎಂದು ನಿಖಿಲ್ ಗಾಂಧಿ ಹೇಳಿದ್ದಾರೆ.

“ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಪೂರ್ವಾಗ್ರಹಪೀಡಿತ ಚಟುವಟಿಕೆಗಳಲ್ಲಿ ತೊಡಗುವುದು, ಭಾರತದ ರಕ್ಷಣೆ, ರಾಜ್ಯದ ಸುರಕ್ಷತೆ ಮತ್ತು ಸಾರ್ವಜನಿಕ ಸುವ್ಯವಸ್ಥೆ” ಗಾಗಿ ಭಾರತವು ಹಲವು ಆಪ್‌ಗಳನ್ನು ನಿರ್ಬಂಧಿಸಿದೆ. ಅವುಗಳಲ್ಲಿ ಟಿಕ್‌ಟಾಕ್, ಯುಸಿ ಬ್ರೌಸರ್ ಮತ್ತು ವೀಚಾಟ್ ಸೇರಿವೆ.

ಕೆಲವು ಅಪ್ಲಿಕೇಶನ್‌ಗಳ ಬಳಕೆಯನ್ನು ನಿರ್ಬಂಧಿಸುವ ನಿರ್ಧಾರವು “ಭಾರತೀಯ ಸೈಬರ್‌ಸ್ಪೇಸ್‌ನ ಸುರಕ್ಷತೆ ಮತ್ತು ಸಾರ್ವಭೌಮತ್ವವನ್ನು ಖಚಿತಪಡಿಸಿಕೊಳ್ಳಲು ಉದ್ದೇಶಿತ ಕ್ರಮವಾಗಿದೆ” ಎಂದು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸೋಮವಾರ ತಿಳಿಸಿದೆ.
ಬಳಕೆದಾರರ ದತ್ತಾಂಶ ಕಳ್ಳತನ ಮತ್ತು ಬಳಕೆದಾರರ ಗೌಪ್ಯತೆ ಉಲ್ಲಂಘನೆ ಎಂದು ಆರೋಪಿಸಿ ಸಚಿವಾಲಯಕ್ಕೆ ಹಲವಾರು ದೂರುಗಳು ಬಂದಿವೆ ಎಂದು ಸರ್ಕಾರ ಹೇಳಿದೆ.

ಸುಮಾರು 60 ಬಿಲಿಯನ್ ಮೌಲ್ಯದ ಸರಕುಗಳನ್ನು ಭಾರತಕ್ಕೆ ರಫ್ತು ಮಾಡುವ ಚೀನೀ ವ್ಯವಹಾರಗಳನ್ನು ನಿಷೇಧಿಸಲು ಒತ್ತಾಯ ಬಂದಿದೆ ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ತಿಳಿಸಿದೆ.

ಚೀನೀ ಮೊಬೈಲ್‌ಗಳು ಸ್ಥಳೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸುಮಾರು 65 ಪ್ರತಿಶತದಷ್ಟು ಪಾಲನ್ನು ಹೊಂದಿವೆ ಮತ್ತು ಟಿಕ್‌ಟಾಕ್ ಮತ್ತು ಹೆಲೋನಂತಹ ವೀಡಿಯೊ-ಹಂಚಿಕೆ ಅಪ್ಲಿಕೇಶನ್‌ಗಳು ಕಿರಿಯ ಬಳಕೆದಾರರಲ್ಲಿ ಹೆಚ್ಚು ಜನಪ್ರಿಯವಾಗಿವೆ. ಭಾರತದಲ್ಲಿ ಸುಮಾರು 12ಕೋಟಿ ಬಳಕೆದಾರರನ್ನು ಹೊಂದಿರುವ ಟಿಕ್‌ಟಾಕ್‌ ಅತಿದೊಡ್ಡ ಅಂತರರಾಷ್ಟ್ರೀಯ ಮಾರುಕಟ್ಟೆಯಾಗಿದೆ ಎಂದು ಹೇಳಲಾಗುತ್ತದೆ.


ಟಿಕ್‌‌ಟಾಕ್ ಸೇರಿದಂತೆ 59 ಚೀನಿ ಆಪ್‌ಗಳನ್ನು ನಿಷೇಧಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...