Homeಮುಖಪುಟ59 ಚೀನಿ ಆಪ್‌ಗಳ ನಿಷೇಧ: ಸ್ಪಷ್ಟೀಕರಣ ನೀಡಿದ ಟಿಕ್‌ಟಾಕ್

59 ಚೀನಿ ಆಪ್‌ಗಳ ನಿಷೇಧ: ಸ್ಪಷ್ಟೀಕರಣ ನೀಡಿದ ಟಿಕ್‌ಟಾಕ್

ಸುಮಾರು 60 ಬಿಲಿಯನ್ ಮೌಲ್ಯದ ಸರಕುಗಳನ್ನು ಭಾರತಕ್ಕೆ ರಫ್ತು ಮಾಡುವ ಚೀನೀ ವ್ಯವಹಾರಗಳನ್ನು ನಿಷೇಧಿಸಲು ಒತ್ತಾಯ ಬಂದಿದೆ ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ತಿಳಿಸಿದೆ.

- Advertisement -
- Advertisement -

ರಾಷ್ಟ್ರೀಯ ಭದ್ರತೆ ಮತ್ತು ಗೌಪ್ಯತೆ ವಿಚಾರದಲ್ಲಿ 59 ಚೀನಾದ ಮೊಬೈಲ್ ಅಪ್ಲಿಕೇಶನ್‌ಗಳನ್ನು ಸೋಮವಾರ ನಿರ್ಬಂಧಿಸಿದ ನಂತರ ಸ್ಪಷ್ಟೀಕರಣ ನೀಡಲು ಟಿಕ್‌ಟಾಕ್ ಇಂಡಿಯಾ ಮುಂದಾಗಿದೆ. ಜನಪ್ರಿಯ ವೀಡಿಯೊ ಹಂಚಿಕೆ ಅಪ್ಲಿಕೇಶನ್ ಸರ್ಕಾರದ ಆದೇಶವನ್ನು ಪಾಲಿಸುವ ಪ್ರಕ್ರಿಯೆಯಲ್ಲಿದೆ ಮತ್ತು “ಭಾರತೀಯ ಕಾನೂನಿನಡಿಯಲ್ಲಿ ಡೇಟಾ ಗೌಪ್ಯತೆ ಮತ್ತು ಭದ್ರತಾ ಅವಶ್ಯಕತೆಗಳನ್ನು ಅನುಸರಿಸುತ್ತಲೇ ಇದೆ” ಎಂದು ಹೇಳಿದೆ.

ಲಡಾಖ್‌ನಲ್ಲಿ ಜೂನ್ 15 ರಂದು ನಡೆದ ಭೀಕರ ಘರ್ಷಣೆಯ ನಂತರ ಭಾರತ ಮತ್ತು ಚೀನಾ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮವಾಗಿ ಸರ್ಕಾರವು ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.

ತನ್ನ ಹೇಳಿಕೆಯಲ್ಲಿ, ಟಿಕ್‌ಟಾಕ್ ಇಂಡಿಯಾ ಭಾರತದಲ್ಲಿನ ಬಳಕೆದಾರರ ಯಾವುದೇ ಮಾಹಿತಿಯನ್ನು “ಚೀನಾ ಸರ್ಕಾರ ಸೇರಿದಂತೆ ಯಾವುದೇ ವಿದೇಶಿ ಸರ್ಕಾರದೊಂದಿಗೆ” ಹಂಚಿಕೊಂಡಿಲ್ಲ ಎಂದು ಹೇಳಿದೆ.

“ಭವಿಷ್ಯದಲ್ಲಿಯೂ ಸಹ ನಾವು ನಾವು ಹಾಗೆ ಮಾಡುವುದಿಲ್ಲ” ಎಂದಿರುವ ಟಿಕ್‌ಟಾಕ್ ಇದು ಬಳಕೆದಾರರ ಗೌಪ್ಯತೆ ಮತ್ತು ಸಮಗ್ರತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ ಎಂದು ಪ್ರತಿಪಾದಿಸಿದೆ.

“ನಿಷೇಧ ಕುರಿತು ಪ್ರತಿಕ್ರಿಯಿಸಲು ಮತ್ತು ಸ್ಪಷ್ಟೀಕರಣಗಳನ್ನು ಸಲ್ಲಿಸಲು ಅವಕಾಶಕ್ಕಾಗಿ ಸಂಬಂಧಪಟ್ಟ ಸರ್ಕಾರಿ ಮಧ್ಯಸ್ಥಗಾರರನ್ನು ಭೇಟಿ ಮಾಡಲು ನಮ್ಮನ್ನು ಆಹ್ವಾನಿಸಲಾಗಿದೆ” ಎಂದು ಟಿಕ್‌ಟಾಕ್‌ ಇಂಡಿಯಾ ಮುಖ್ಯಸ್ಥ ನಿಖಿಲ್ ಗಾಂಧಿ ಹೇಳಿದ್ದಾರೆ.

“ಟಿಕ್‌ಟಾಕ್ 14 ಭಾರತೀಯ ಭಾಷೆಗಳಲ್ಲಿ ಲಭ್ಯಗೊಳಿಸುವ ಮೂಲಕ ಅಂತರ್ಜಾಲವನ್ನು ಪ್ರಜಾಪ್ರಭುತ್ವಗೊಳಿಸಿದೆ. ನೂರಾರು ಮಿಲಿಯನ್ ಬಳಕೆದಾರರು, ಕಲಾವಿದರು, ಕಥೆ ಹೇಳುವವರು, ಶಿಕ್ಷಣತಜ್ಞರು ಮತ್ತು ಪ್ರದರ್ಶಕರು ತಮ್ಮ ಜೀವನೋಪಾಯಕ್ಕಾಗಿ ಅದನ್ನು ಅವಲಂಬಿಸಿರುತ್ತಾರೆ, ಅವರಲ್ಲಿ ಅನೇಕರು ಮೊದಲ ಬಾರಿಗೆ ಇಂಟರ್ನೆಟ್ ಬಳಕೆದಾರರಾಗಿದ್ದಾರೆ” ಎಂದು ನಿಖಿಲ್ ಗಾಂಧಿ ಹೇಳಿದ್ದಾರೆ.

“ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಪೂರ್ವಾಗ್ರಹಪೀಡಿತ ಚಟುವಟಿಕೆಗಳಲ್ಲಿ ತೊಡಗುವುದು, ಭಾರತದ ರಕ್ಷಣೆ, ರಾಜ್ಯದ ಸುರಕ್ಷತೆ ಮತ್ತು ಸಾರ್ವಜನಿಕ ಸುವ್ಯವಸ್ಥೆ” ಗಾಗಿ ಭಾರತವು ಹಲವು ಆಪ್‌ಗಳನ್ನು ನಿರ್ಬಂಧಿಸಿದೆ. ಅವುಗಳಲ್ಲಿ ಟಿಕ್‌ಟಾಕ್, ಯುಸಿ ಬ್ರೌಸರ್ ಮತ್ತು ವೀಚಾಟ್ ಸೇರಿವೆ.

ಕೆಲವು ಅಪ್ಲಿಕೇಶನ್‌ಗಳ ಬಳಕೆಯನ್ನು ನಿರ್ಬಂಧಿಸುವ ನಿರ್ಧಾರವು “ಭಾರತೀಯ ಸೈಬರ್‌ಸ್ಪೇಸ್‌ನ ಸುರಕ್ಷತೆ ಮತ್ತು ಸಾರ್ವಭೌಮತ್ವವನ್ನು ಖಚಿತಪಡಿಸಿಕೊಳ್ಳಲು ಉದ್ದೇಶಿತ ಕ್ರಮವಾಗಿದೆ” ಎಂದು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸೋಮವಾರ ತಿಳಿಸಿದೆ.
ಬಳಕೆದಾರರ ದತ್ತಾಂಶ ಕಳ್ಳತನ ಮತ್ತು ಬಳಕೆದಾರರ ಗೌಪ್ಯತೆ ಉಲ್ಲಂಘನೆ ಎಂದು ಆರೋಪಿಸಿ ಸಚಿವಾಲಯಕ್ಕೆ ಹಲವಾರು ದೂರುಗಳು ಬಂದಿವೆ ಎಂದು ಸರ್ಕಾರ ಹೇಳಿದೆ.

ಸುಮಾರು 60 ಬಿಲಿಯನ್ ಮೌಲ್ಯದ ಸರಕುಗಳನ್ನು ಭಾರತಕ್ಕೆ ರಫ್ತು ಮಾಡುವ ಚೀನೀ ವ್ಯವಹಾರಗಳನ್ನು ನಿಷೇಧಿಸಲು ಒತ್ತಾಯ ಬಂದಿದೆ ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ತಿಳಿಸಿದೆ.

ಚೀನೀ ಮೊಬೈಲ್‌ಗಳು ಸ್ಥಳೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸುಮಾರು 65 ಪ್ರತಿಶತದಷ್ಟು ಪಾಲನ್ನು ಹೊಂದಿವೆ ಮತ್ತು ಟಿಕ್‌ಟಾಕ್ ಮತ್ತು ಹೆಲೋನಂತಹ ವೀಡಿಯೊ-ಹಂಚಿಕೆ ಅಪ್ಲಿಕೇಶನ್‌ಗಳು ಕಿರಿಯ ಬಳಕೆದಾರರಲ್ಲಿ ಹೆಚ್ಚು ಜನಪ್ರಿಯವಾಗಿವೆ. ಭಾರತದಲ್ಲಿ ಸುಮಾರು 12ಕೋಟಿ ಬಳಕೆದಾರರನ್ನು ಹೊಂದಿರುವ ಟಿಕ್‌ಟಾಕ್‌ ಅತಿದೊಡ್ಡ ಅಂತರರಾಷ್ಟ್ರೀಯ ಮಾರುಕಟ್ಟೆಯಾಗಿದೆ ಎಂದು ಹೇಳಲಾಗುತ್ತದೆ.


ಟಿಕ್‌‌ಟಾಕ್ ಸೇರಿದಂತೆ 59 ಚೀನಿ ಆಪ್‌ಗಳನ್ನು ನಿಷೇಧಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...