Homeಮುಖಪುಟ2ಜಿ ಸ್ಪೆಕ್ಟ್ರಮ್ ಹಗರಣ ನಡೆದೇ ಇಲ್ಲ ಎಂಬುದನ್ನು ನಿರೂಪಿಸಿದ 5ಜಿ ಹರಾಜು ಪ್ರಕ್ರಿಯೆ!

2ಜಿ ಸ್ಪೆಕ್ಟ್ರಮ್ ಹಗರಣ ನಡೆದೇ ಇಲ್ಲ ಎಂಬುದನ್ನು ನಿರೂಪಿಸಿದ 5ಜಿ ಹರಾಜು ಪ್ರಕ್ರಿಯೆ!

ವಿನೋದ್ ರಾಯ್ ಅವರ ಪ್ರತೀಕಾರದ ಕಲ್ಪನೆಯಿಂದ ಮಾರುಹೋಗಿದ್ದ ನಾವೆಲ್ಲರೂ ಆಗ ಎ.ರಾಜಾರವರಿಗೆ ನೋವುಂಟು ಮಾಡಿದ್ದು, ಅವರ ಬಳಿ ಕ್ಷಮೆಯಾಚಿಸಬೇಕಾಗಿದೆ.

- Advertisement -
- Advertisement -

ಭಾರೀ ಕುತೂಹಲ ಮೂಡಿಸಿದ್ದ 5ಜಿ ತರಂಗಾಂತರ ಹರಾಜು ಪ್ರಕ್ರಿಯೆಗೆ ತೆರೆಬಿದ್ದಿದೆ. ಒಟ್ಟು 1.5 ಲಕ್ಷ ಕೋಟಿ ರೂ ಗರಿಷ್ಟ ಬಿಡ್‌ಗೆ ಹರಾಜು ಮಾಡಲಾಗಿದೆ ಎಂದು ದೂರ ಸಂಪರ್ಕ ಸಚಿವ ಅಶ್ವಿನಿ ವೈಭವ್ ತಿಳಿಸಿದ್ದಾರೆ. ಈ ಬೆನ್ನಲ್ಲೆ 2007 ರಲ್ಲಿ ನಡೆದಿದ್ದ 2ಜಿ ತರಂಗಾಂತರ ಹರಾಜು ಪ್ರಕ್ರಿಯೆಯ ಚರ್ಚೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. 5ಜಿ ಹರಾಜು ಕೇವಲ 1.5 ಲಕ್ಷ ಕೋಟಿ ರೂಗಳಿಗೆ ಆಗಿರುವಾಗ 15 ವರ್ಷಗಳ ಹಿಂದೆ ನಡೆದ 2ಜಿ ತರಂಗಾಂತರ ಹರಾಜು ಹಗರಣದಿಂದ ದೇಶಕ್ಕೆ 1.76 ಲಕ್ಷ ಕೋಟಿ ರೂ ನಷ್ಟವಾಯಿತು ಎಂದು ನಂಬಿ ನಾವು ಮೋಸ ಹೋದೆವು ಮತ್ತು ಅನ್ಯಾಯವಾಗಿ ಕೆಲವರನ್ನು ದೂರಿದೆವು ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭಿಸಿದ್ದಾರೆ.

ವಿನೋದ್ ರಾಯ್ ಅವರ ಪ್ರತೀಕಾರದ ಕಲ್ಪನೆಯಿಂದ ಮಾರುಹೋಗಿದ್ದ ನಾವೆಲ್ಲರೂ ಆಗ ಎ.ರಾಜಾರವರು ಸೇರಿದಂತೆ ಹಲವರಿಗೆ ನೋವುಂಟು ಮಾಡಿದ್ದು, ಅವರ ಬಳಿ ಕ್ಷಮೆಯಾಚಿಸಬೇಕಾಗಿದೆ. 5G ಹರಾಜು ಕೇವಲ 1.5 ಲಕ್ಷ ಕೋಟಿ ರೂ ಪಡೆಯುತ್ತದೆ ಎಂದರೆ 15 ವರ್ಷಗಳ ಹಿಂದಿನ 2G ಹರಾಜು 1.76 ಲಕ್ಷ ಕೋಟಿ ರೂ ನಷ್ಟ ಹೆಗಾಯಿತು? ಎಂದು ಸಾಮಾಜಿಕ ಕಾರ್ಯಕರ್ತೆ ಮೀನಾ ಕಂದಸ್ವಾಮಿ ಟ್ವೀಟ್ ಮಾಡಿದ್ದಾರೆ.

2007ರಲ್ಲಿ ಯುಪಿಎ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದರು. ಎ.ರಾಜಾ ದೂರ ಸಂಪರ್ಕ ಸಚಿವರಾಗಿದ್ದರು. ಆ ಸಂದರ್ಭದಲ್ಲಿ 2ಜಿ ತರಂಗಾಂತರಗಳ ಹರಾಜು ಪ್ರಕ್ರಿಯೆ ನಡೆದಿತ್ತು. ಆ ನಂತರ 2011ರಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ, ಕಿಕ್‌ಬ್ಯಾಕ್ ಪಡೆದು ಕಡಿಮೆ ಮೊತ್ತಕ್ಕೆ ಹರಾಜು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಸಿಎಜಿ ವಿನೋದ್ ರಾಯ್‌ರವರು ಇದರಿಂದ ದೇಶಕ್ಕೆ 1.76 ಲಕ್ಷ ಕೋಟಿ ರೂ ನಷ್ಟವಾಗಿದೆ ಎಂದು ವಾದಿಸಿದ್ದರು. ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಈ ಹಗರಣವನ್ನು ಹೊರತಂದಿದ್ದು ನಾನು ಎಂದು ಎಲ್ಲೆಡೆ ಹೇಳಿಕೊಂಡಿದ್ದರು. ಮಾಧ್ಯಮಗಳು ಅದನ್ನು ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿದ್ದವು. ಇದು ಯುಪಿಎ ಸರ್ಕಾರಕ್ಕೆ ಭಾರೀ ಮುಜುಗರ ತಂದಿತ್ತು. ಎ.ರಾಜಾ ಮತ್ತು ಡಿಎಂಕೆ ಸಂಸದೆ ಕನಿಮೋಳಿಯವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಸಿಬಿಐ ಮತ್ತು ಸಿಎಜಿ ತನಿಖೆ ನಡೆಸಿತ್ತು. ಆದರೆ ದೆಹಲಿಯ ವಿಶೇಷ ನ್ಯಾಯಾಲಯ 2ಜಿ ಸ್ಪೆಕ್ಟ್ರಮ್ ಹಗರಣ ನಡೆದಿಲ್ಲ, ಇದೊಂದು ಕಟ್ಟುಕಥೆ ಇಂದು 2017ರಲ್ಲಿ ತೀರ್ಪಿತ್ತಿತ್ತು. ವಿನೋದ್ ರಾಯ್ ಕ್ಷಮೆ ಕೇಳಿದ್ದರು. ಅಷ್ಟರಲ್ಲಿ ಯುಪಿಎ ಸರ್ಕಾರವನ್ನು ಇಳಿಸಿ ಎನ್‌ಡಿಎ ಅಧಿಕಾರಕ್ಕೇರಿತ್ತು.

ಈಗ 5ಜಿ ಸ್ಪೆಕ್ಟ್ರಮ್ ಹರಾಜು ಪ್ರಕ್ರಿಯೆಯು 2ಜಿ ಸ್ಕಾಮ್ ನಡೆದಿರಲಿಲ್ಲ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದೆ. ಆದರೆ ಆಗ ದೇಶವೇ ಮುಳುಗಿಹೋಯಿತು ಎಂದು ಕೂಗಾಡಿದ ಬಿಜೆಪಿ ಅಧಿಕಾರದಲ್ಲಿದ್ದರೂ ಮೌನ ವಹಿಸಿದೆ. ಆಗ ಅಬ್ಬರಿಸಿ ಬೊಬ್ಬಿರಿದವರೂ ಎನ್‌ಡಿಎ ಸರ್ಕಾರದ ಆರ್ಥಿಕ ಅಧಃಪತನವನ್ನು ಪ್ರಶ್ನಿಸುತ್ತಿಲ್ಲವೇಕೆ? ಇವರ ವಿರೋಧ ಸೆಲಕ್ಟಿವ್ ಆಗಿರುವುದೇಕೆ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಯುಪಿ: ನಾಲ್ಕು ಧರ್ಮಗಳ ಪ್ರಾರ್ಥನೆ ಮಾಡಿಸುತ್ತಿದ್ದ ಶಾಲೆಯ ಮ್ಯಾನೇಜರ್‌ ಮೇಲೆ ಎಫ್‌ಐಆರ್‌; ಮತಾಂತರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಗೋದಿ ಪತ್ರಿಕೆ ಯಾವಾಗಲು ಸುಳ್ಳು ಹೇಳೋದು,ಜನರನ್ನು ದಾರಿ ತಪ್ಪಿಸೋದೆ ಅನಿಸುತ್ತೇ ಹಗರಣದ ಸೂತ್ರದಾರ ಎ ರಾಜ ಎಲ್ಲೋ ಈ ಪತ್ರಿಕೆಗೆ ಎಂಜಲು ಹಾಕಿರಬೇಕು

LEAVE A REPLY

Please enter your comment!
Please enter your name here

- Advertisment -

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...