Homeಮುಖಪುಟ2ಜಿ ಸ್ಪೆಕ್ಟ್ರಮ್ ಹಗರಣ ನಡೆದೇ ಇಲ್ಲ ಎಂಬುದನ್ನು ನಿರೂಪಿಸಿದ 5ಜಿ ಹರಾಜು ಪ್ರಕ್ರಿಯೆ!

2ಜಿ ಸ್ಪೆಕ್ಟ್ರಮ್ ಹಗರಣ ನಡೆದೇ ಇಲ್ಲ ಎಂಬುದನ್ನು ನಿರೂಪಿಸಿದ 5ಜಿ ಹರಾಜು ಪ್ರಕ್ರಿಯೆ!

ವಿನೋದ್ ರಾಯ್ ಅವರ ಪ್ರತೀಕಾರದ ಕಲ್ಪನೆಯಿಂದ ಮಾರುಹೋಗಿದ್ದ ನಾವೆಲ್ಲರೂ ಆಗ ಎ.ರಾಜಾರವರಿಗೆ ನೋವುಂಟು ಮಾಡಿದ್ದು, ಅವರ ಬಳಿ ಕ್ಷಮೆಯಾಚಿಸಬೇಕಾಗಿದೆ.

- Advertisement -
- Advertisement -

ಭಾರೀ ಕುತೂಹಲ ಮೂಡಿಸಿದ್ದ 5ಜಿ ತರಂಗಾಂತರ ಹರಾಜು ಪ್ರಕ್ರಿಯೆಗೆ ತೆರೆಬಿದ್ದಿದೆ. ಒಟ್ಟು 1.5 ಲಕ್ಷ ಕೋಟಿ ರೂ ಗರಿಷ್ಟ ಬಿಡ್‌ಗೆ ಹರಾಜು ಮಾಡಲಾಗಿದೆ ಎಂದು ದೂರ ಸಂಪರ್ಕ ಸಚಿವ ಅಶ್ವಿನಿ ವೈಭವ್ ತಿಳಿಸಿದ್ದಾರೆ. ಈ ಬೆನ್ನಲ್ಲೆ 2007 ರಲ್ಲಿ ನಡೆದಿದ್ದ 2ಜಿ ತರಂಗಾಂತರ ಹರಾಜು ಪ್ರಕ್ರಿಯೆಯ ಚರ್ಚೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. 5ಜಿ ಹರಾಜು ಕೇವಲ 1.5 ಲಕ್ಷ ಕೋಟಿ ರೂಗಳಿಗೆ ಆಗಿರುವಾಗ 15 ವರ್ಷಗಳ ಹಿಂದೆ ನಡೆದ 2ಜಿ ತರಂಗಾಂತರ ಹರಾಜು ಹಗರಣದಿಂದ ದೇಶಕ್ಕೆ 1.76 ಲಕ್ಷ ಕೋಟಿ ರೂ ನಷ್ಟವಾಯಿತು ಎಂದು ನಂಬಿ ನಾವು ಮೋಸ ಹೋದೆವು ಮತ್ತು ಅನ್ಯಾಯವಾಗಿ ಕೆಲವರನ್ನು ದೂರಿದೆವು ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭಿಸಿದ್ದಾರೆ.

ವಿನೋದ್ ರಾಯ್ ಅವರ ಪ್ರತೀಕಾರದ ಕಲ್ಪನೆಯಿಂದ ಮಾರುಹೋಗಿದ್ದ ನಾವೆಲ್ಲರೂ ಆಗ ಎ.ರಾಜಾರವರು ಸೇರಿದಂತೆ ಹಲವರಿಗೆ ನೋವುಂಟು ಮಾಡಿದ್ದು, ಅವರ ಬಳಿ ಕ್ಷಮೆಯಾಚಿಸಬೇಕಾಗಿದೆ. 5G ಹರಾಜು ಕೇವಲ 1.5 ಲಕ್ಷ ಕೋಟಿ ರೂ ಪಡೆಯುತ್ತದೆ ಎಂದರೆ 15 ವರ್ಷಗಳ ಹಿಂದಿನ 2G ಹರಾಜು 1.76 ಲಕ್ಷ ಕೋಟಿ ರೂ ನಷ್ಟ ಹೆಗಾಯಿತು? ಎಂದು ಸಾಮಾಜಿಕ ಕಾರ್ಯಕರ್ತೆ ಮೀನಾ ಕಂದಸ್ವಾಮಿ ಟ್ವೀಟ್ ಮಾಡಿದ್ದಾರೆ.

2007ರಲ್ಲಿ ಯುಪಿಎ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದರು. ಎ.ರಾಜಾ ದೂರ ಸಂಪರ್ಕ ಸಚಿವರಾಗಿದ್ದರು. ಆ ಸಂದರ್ಭದಲ್ಲಿ 2ಜಿ ತರಂಗಾಂತರಗಳ ಹರಾಜು ಪ್ರಕ್ರಿಯೆ ನಡೆದಿತ್ತು. ಆ ನಂತರ 2011ರಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ, ಕಿಕ್‌ಬ್ಯಾಕ್ ಪಡೆದು ಕಡಿಮೆ ಮೊತ್ತಕ್ಕೆ ಹರಾಜು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಸಿಎಜಿ ವಿನೋದ್ ರಾಯ್‌ರವರು ಇದರಿಂದ ದೇಶಕ್ಕೆ 1.76 ಲಕ್ಷ ಕೋಟಿ ರೂ ನಷ್ಟವಾಗಿದೆ ಎಂದು ವಾದಿಸಿದ್ದರು. ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಈ ಹಗರಣವನ್ನು ಹೊರತಂದಿದ್ದು ನಾನು ಎಂದು ಎಲ್ಲೆಡೆ ಹೇಳಿಕೊಂಡಿದ್ದರು. ಮಾಧ್ಯಮಗಳು ಅದನ್ನು ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿದ್ದವು. ಇದು ಯುಪಿಎ ಸರ್ಕಾರಕ್ಕೆ ಭಾರೀ ಮುಜುಗರ ತಂದಿತ್ತು. ಎ.ರಾಜಾ ಮತ್ತು ಡಿಎಂಕೆ ಸಂಸದೆ ಕನಿಮೋಳಿಯವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಸಿಬಿಐ ಮತ್ತು ಸಿಎಜಿ ತನಿಖೆ ನಡೆಸಿತ್ತು. ಆದರೆ ದೆಹಲಿಯ ವಿಶೇಷ ನ್ಯಾಯಾಲಯ 2ಜಿ ಸ್ಪೆಕ್ಟ್ರಮ್ ಹಗರಣ ನಡೆದಿಲ್ಲ, ಇದೊಂದು ಕಟ್ಟುಕಥೆ ಇಂದು 2017ರಲ್ಲಿ ತೀರ್ಪಿತ್ತಿತ್ತು. ವಿನೋದ್ ರಾಯ್ ಕ್ಷಮೆ ಕೇಳಿದ್ದರು. ಅಷ್ಟರಲ್ಲಿ ಯುಪಿಎ ಸರ್ಕಾರವನ್ನು ಇಳಿಸಿ ಎನ್‌ಡಿಎ ಅಧಿಕಾರಕ್ಕೇರಿತ್ತು.

ಈಗ 5ಜಿ ಸ್ಪೆಕ್ಟ್ರಮ್ ಹರಾಜು ಪ್ರಕ್ರಿಯೆಯು 2ಜಿ ಸ್ಕಾಮ್ ನಡೆದಿರಲಿಲ್ಲ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದೆ. ಆದರೆ ಆಗ ದೇಶವೇ ಮುಳುಗಿಹೋಯಿತು ಎಂದು ಕೂಗಾಡಿದ ಬಿಜೆಪಿ ಅಧಿಕಾರದಲ್ಲಿದ್ದರೂ ಮೌನ ವಹಿಸಿದೆ. ಆಗ ಅಬ್ಬರಿಸಿ ಬೊಬ್ಬಿರಿದವರೂ ಎನ್‌ಡಿಎ ಸರ್ಕಾರದ ಆರ್ಥಿಕ ಅಧಃಪತನವನ್ನು ಪ್ರಶ್ನಿಸುತ್ತಿಲ್ಲವೇಕೆ? ಇವರ ವಿರೋಧ ಸೆಲಕ್ಟಿವ್ ಆಗಿರುವುದೇಕೆ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಯುಪಿ: ನಾಲ್ಕು ಧರ್ಮಗಳ ಪ್ರಾರ್ಥನೆ ಮಾಡಿಸುತ್ತಿದ್ದ ಶಾಲೆಯ ಮ್ಯಾನೇಜರ್‌ ಮೇಲೆ ಎಫ್‌ಐಆರ್‌; ಮತಾಂತರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಗೋದಿ ಪತ್ರಿಕೆ ಯಾವಾಗಲು ಸುಳ್ಳು ಹೇಳೋದು,ಜನರನ್ನು ದಾರಿ ತಪ್ಪಿಸೋದೆ ಅನಿಸುತ್ತೇ ಹಗರಣದ ಸೂತ್ರದಾರ ಎ ರಾಜ ಎಲ್ಲೋ ಈ ಪತ್ರಿಕೆಗೆ ಎಂಜಲು ಹಾಕಿರಬೇಕು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...