Homeಮುಖಪುಟ2ಜಿ ಸ್ಪೆಕ್ಟ್ರಮ್ ಹಗರಣ ನಡೆದೇ ಇಲ್ಲ ಎಂಬುದನ್ನು ನಿರೂಪಿಸಿದ 5ಜಿ ಹರಾಜು ಪ್ರಕ್ರಿಯೆ!

2ಜಿ ಸ್ಪೆಕ್ಟ್ರಮ್ ಹಗರಣ ನಡೆದೇ ಇಲ್ಲ ಎಂಬುದನ್ನು ನಿರೂಪಿಸಿದ 5ಜಿ ಹರಾಜು ಪ್ರಕ್ರಿಯೆ!

ವಿನೋದ್ ರಾಯ್ ಅವರ ಪ್ರತೀಕಾರದ ಕಲ್ಪನೆಯಿಂದ ಮಾರುಹೋಗಿದ್ದ ನಾವೆಲ್ಲರೂ ಆಗ ಎ.ರಾಜಾರವರಿಗೆ ನೋವುಂಟು ಮಾಡಿದ್ದು, ಅವರ ಬಳಿ ಕ್ಷಮೆಯಾಚಿಸಬೇಕಾಗಿದೆ.

- Advertisement -
- Advertisement -

ಭಾರೀ ಕುತೂಹಲ ಮೂಡಿಸಿದ್ದ 5ಜಿ ತರಂಗಾಂತರ ಹರಾಜು ಪ್ರಕ್ರಿಯೆಗೆ ತೆರೆಬಿದ್ದಿದೆ. ಒಟ್ಟು 1.5 ಲಕ್ಷ ಕೋಟಿ ರೂ ಗರಿಷ್ಟ ಬಿಡ್‌ಗೆ ಹರಾಜು ಮಾಡಲಾಗಿದೆ ಎಂದು ದೂರ ಸಂಪರ್ಕ ಸಚಿವ ಅಶ್ವಿನಿ ವೈಭವ್ ತಿಳಿಸಿದ್ದಾರೆ. ಈ ಬೆನ್ನಲ್ಲೆ 2007 ರಲ್ಲಿ ನಡೆದಿದ್ದ 2ಜಿ ತರಂಗಾಂತರ ಹರಾಜು ಪ್ರಕ್ರಿಯೆಯ ಚರ್ಚೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. 5ಜಿ ಹರಾಜು ಕೇವಲ 1.5 ಲಕ್ಷ ಕೋಟಿ ರೂಗಳಿಗೆ ಆಗಿರುವಾಗ 15 ವರ್ಷಗಳ ಹಿಂದೆ ನಡೆದ 2ಜಿ ತರಂಗಾಂತರ ಹರಾಜು ಹಗರಣದಿಂದ ದೇಶಕ್ಕೆ 1.76 ಲಕ್ಷ ಕೋಟಿ ರೂ ನಷ್ಟವಾಯಿತು ಎಂದು ನಂಬಿ ನಾವು ಮೋಸ ಹೋದೆವು ಮತ್ತು ಅನ್ಯಾಯವಾಗಿ ಕೆಲವರನ್ನು ದೂರಿದೆವು ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭಿಸಿದ್ದಾರೆ.

ವಿನೋದ್ ರಾಯ್ ಅವರ ಪ್ರತೀಕಾರದ ಕಲ್ಪನೆಯಿಂದ ಮಾರುಹೋಗಿದ್ದ ನಾವೆಲ್ಲರೂ ಆಗ ಎ.ರಾಜಾರವರು ಸೇರಿದಂತೆ ಹಲವರಿಗೆ ನೋವುಂಟು ಮಾಡಿದ್ದು, ಅವರ ಬಳಿ ಕ್ಷಮೆಯಾಚಿಸಬೇಕಾಗಿದೆ. 5G ಹರಾಜು ಕೇವಲ 1.5 ಲಕ್ಷ ಕೋಟಿ ರೂ ಪಡೆಯುತ್ತದೆ ಎಂದರೆ 15 ವರ್ಷಗಳ ಹಿಂದಿನ 2G ಹರಾಜು 1.76 ಲಕ್ಷ ಕೋಟಿ ರೂ ನಷ್ಟ ಹೆಗಾಯಿತು? ಎಂದು ಸಾಮಾಜಿಕ ಕಾರ್ಯಕರ್ತೆ ಮೀನಾ ಕಂದಸ್ವಾಮಿ ಟ್ವೀಟ್ ಮಾಡಿದ್ದಾರೆ.

2007ರಲ್ಲಿ ಯುಪಿಎ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದರು. ಎ.ರಾಜಾ ದೂರ ಸಂಪರ್ಕ ಸಚಿವರಾಗಿದ್ದರು. ಆ ಸಂದರ್ಭದಲ್ಲಿ 2ಜಿ ತರಂಗಾಂತರಗಳ ಹರಾಜು ಪ್ರಕ್ರಿಯೆ ನಡೆದಿತ್ತು. ಆ ನಂತರ 2011ರಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ, ಕಿಕ್‌ಬ್ಯಾಕ್ ಪಡೆದು ಕಡಿಮೆ ಮೊತ್ತಕ್ಕೆ ಹರಾಜು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಸಿಎಜಿ ವಿನೋದ್ ರಾಯ್‌ರವರು ಇದರಿಂದ ದೇಶಕ್ಕೆ 1.76 ಲಕ್ಷ ಕೋಟಿ ರೂ ನಷ್ಟವಾಗಿದೆ ಎಂದು ವಾದಿಸಿದ್ದರು. ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಈ ಹಗರಣವನ್ನು ಹೊರತಂದಿದ್ದು ನಾನು ಎಂದು ಎಲ್ಲೆಡೆ ಹೇಳಿಕೊಂಡಿದ್ದರು. ಮಾಧ್ಯಮಗಳು ಅದನ್ನು ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿದ್ದವು. ಇದು ಯುಪಿಎ ಸರ್ಕಾರಕ್ಕೆ ಭಾರೀ ಮುಜುಗರ ತಂದಿತ್ತು. ಎ.ರಾಜಾ ಮತ್ತು ಡಿಎಂಕೆ ಸಂಸದೆ ಕನಿಮೋಳಿಯವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಸಿಬಿಐ ಮತ್ತು ಸಿಎಜಿ ತನಿಖೆ ನಡೆಸಿತ್ತು. ಆದರೆ ದೆಹಲಿಯ ವಿಶೇಷ ನ್ಯಾಯಾಲಯ 2ಜಿ ಸ್ಪೆಕ್ಟ್ರಮ್ ಹಗರಣ ನಡೆದಿಲ್ಲ, ಇದೊಂದು ಕಟ್ಟುಕಥೆ ಇಂದು 2017ರಲ್ಲಿ ತೀರ್ಪಿತ್ತಿತ್ತು. ವಿನೋದ್ ರಾಯ್ ಕ್ಷಮೆ ಕೇಳಿದ್ದರು. ಅಷ್ಟರಲ್ಲಿ ಯುಪಿಎ ಸರ್ಕಾರವನ್ನು ಇಳಿಸಿ ಎನ್‌ಡಿಎ ಅಧಿಕಾರಕ್ಕೇರಿತ್ತು.

ಈಗ 5ಜಿ ಸ್ಪೆಕ್ಟ್ರಮ್ ಹರಾಜು ಪ್ರಕ್ರಿಯೆಯು 2ಜಿ ಸ್ಕಾಮ್ ನಡೆದಿರಲಿಲ್ಲ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದೆ. ಆದರೆ ಆಗ ದೇಶವೇ ಮುಳುಗಿಹೋಯಿತು ಎಂದು ಕೂಗಾಡಿದ ಬಿಜೆಪಿ ಅಧಿಕಾರದಲ್ಲಿದ್ದರೂ ಮೌನ ವಹಿಸಿದೆ. ಆಗ ಅಬ್ಬರಿಸಿ ಬೊಬ್ಬಿರಿದವರೂ ಎನ್‌ಡಿಎ ಸರ್ಕಾರದ ಆರ್ಥಿಕ ಅಧಃಪತನವನ್ನು ಪ್ರಶ್ನಿಸುತ್ತಿಲ್ಲವೇಕೆ? ಇವರ ವಿರೋಧ ಸೆಲಕ್ಟಿವ್ ಆಗಿರುವುದೇಕೆ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಯುಪಿ: ನಾಲ್ಕು ಧರ್ಮಗಳ ಪ್ರಾರ್ಥನೆ ಮಾಡಿಸುತ್ತಿದ್ದ ಶಾಲೆಯ ಮ್ಯಾನೇಜರ್‌ ಮೇಲೆ ಎಫ್‌ಐಆರ್‌; ಮತಾಂತರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಗೋದಿ ಪತ್ರಿಕೆ ಯಾವಾಗಲು ಸುಳ್ಳು ಹೇಳೋದು,ಜನರನ್ನು ದಾರಿ ತಪ್ಪಿಸೋದೆ ಅನಿಸುತ್ತೇ ಹಗರಣದ ಸೂತ್ರದಾರ ಎ ರಾಜ ಎಲ್ಲೋ ಈ ಪತ್ರಿಕೆಗೆ ಎಂಜಲು ಹಾಕಿರಬೇಕು

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...