Homeಮುಖಪುಟ2ಜಿ ಸ್ಪೆಕ್ಟ್ರಮ್ ಹಗರಣ ನಡೆದೇ ಇಲ್ಲ ಎಂಬುದನ್ನು ನಿರೂಪಿಸಿದ 5ಜಿ ಹರಾಜು ಪ್ರಕ್ರಿಯೆ!

2ಜಿ ಸ್ಪೆಕ್ಟ್ರಮ್ ಹಗರಣ ನಡೆದೇ ಇಲ್ಲ ಎಂಬುದನ್ನು ನಿರೂಪಿಸಿದ 5ಜಿ ಹರಾಜು ಪ್ರಕ್ರಿಯೆ!

ವಿನೋದ್ ರಾಯ್ ಅವರ ಪ್ರತೀಕಾರದ ಕಲ್ಪನೆಯಿಂದ ಮಾರುಹೋಗಿದ್ದ ನಾವೆಲ್ಲರೂ ಆಗ ಎ.ರಾಜಾರವರಿಗೆ ನೋವುಂಟು ಮಾಡಿದ್ದು, ಅವರ ಬಳಿ ಕ್ಷಮೆಯಾಚಿಸಬೇಕಾಗಿದೆ.

- Advertisement -
- Advertisement -

ಭಾರೀ ಕುತೂಹಲ ಮೂಡಿಸಿದ್ದ 5ಜಿ ತರಂಗಾಂತರ ಹರಾಜು ಪ್ರಕ್ರಿಯೆಗೆ ತೆರೆಬಿದ್ದಿದೆ. ಒಟ್ಟು 1.5 ಲಕ್ಷ ಕೋಟಿ ರೂ ಗರಿಷ್ಟ ಬಿಡ್‌ಗೆ ಹರಾಜು ಮಾಡಲಾಗಿದೆ ಎಂದು ದೂರ ಸಂಪರ್ಕ ಸಚಿವ ಅಶ್ವಿನಿ ವೈಭವ್ ತಿಳಿಸಿದ್ದಾರೆ. ಈ ಬೆನ್ನಲ್ಲೆ 2007 ರಲ್ಲಿ ನಡೆದಿದ್ದ 2ಜಿ ತರಂಗಾಂತರ ಹರಾಜು ಪ್ರಕ್ರಿಯೆಯ ಚರ್ಚೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. 5ಜಿ ಹರಾಜು ಕೇವಲ 1.5 ಲಕ್ಷ ಕೋಟಿ ರೂಗಳಿಗೆ ಆಗಿರುವಾಗ 15 ವರ್ಷಗಳ ಹಿಂದೆ ನಡೆದ 2ಜಿ ತರಂಗಾಂತರ ಹರಾಜು ಹಗರಣದಿಂದ ದೇಶಕ್ಕೆ 1.76 ಲಕ್ಷ ಕೋಟಿ ರೂ ನಷ್ಟವಾಯಿತು ಎಂದು ನಂಬಿ ನಾವು ಮೋಸ ಹೋದೆವು ಮತ್ತು ಅನ್ಯಾಯವಾಗಿ ಕೆಲವರನ್ನು ದೂರಿದೆವು ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭಿಸಿದ್ದಾರೆ.

ವಿನೋದ್ ರಾಯ್ ಅವರ ಪ್ರತೀಕಾರದ ಕಲ್ಪನೆಯಿಂದ ಮಾರುಹೋಗಿದ್ದ ನಾವೆಲ್ಲರೂ ಆಗ ಎ.ರಾಜಾರವರು ಸೇರಿದಂತೆ ಹಲವರಿಗೆ ನೋವುಂಟು ಮಾಡಿದ್ದು, ಅವರ ಬಳಿ ಕ್ಷಮೆಯಾಚಿಸಬೇಕಾಗಿದೆ. 5G ಹರಾಜು ಕೇವಲ 1.5 ಲಕ್ಷ ಕೋಟಿ ರೂ ಪಡೆಯುತ್ತದೆ ಎಂದರೆ 15 ವರ್ಷಗಳ ಹಿಂದಿನ 2G ಹರಾಜು 1.76 ಲಕ್ಷ ಕೋಟಿ ರೂ ನಷ್ಟ ಹೆಗಾಯಿತು? ಎಂದು ಸಾಮಾಜಿಕ ಕಾರ್ಯಕರ್ತೆ ಮೀನಾ ಕಂದಸ್ವಾಮಿ ಟ್ವೀಟ್ ಮಾಡಿದ್ದಾರೆ.

2007ರಲ್ಲಿ ಯುಪಿಎ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದರು. ಎ.ರಾಜಾ ದೂರ ಸಂಪರ್ಕ ಸಚಿವರಾಗಿದ್ದರು. ಆ ಸಂದರ್ಭದಲ್ಲಿ 2ಜಿ ತರಂಗಾಂತರಗಳ ಹರಾಜು ಪ್ರಕ್ರಿಯೆ ನಡೆದಿತ್ತು. ಆ ನಂತರ 2011ರಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ, ಕಿಕ್‌ಬ್ಯಾಕ್ ಪಡೆದು ಕಡಿಮೆ ಮೊತ್ತಕ್ಕೆ ಹರಾಜು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಸಿಎಜಿ ವಿನೋದ್ ರಾಯ್‌ರವರು ಇದರಿಂದ ದೇಶಕ್ಕೆ 1.76 ಲಕ್ಷ ಕೋಟಿ ರೂ ನಷ್ಟವಾಗಿದೆ ಎಂದು ವಾದಿಸಿದ್ದರು. ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಈ ಹಗರಣವನ್ನು ಹೊರತಂದಿದ್ದು ನಾನು ಎಂದು ಎಲ್ಲೆಡೆ ಹೇಳಿಕೊಂಡಿದ್ದರು. ಮಾಧ್ಯಮಗಳು ಅದನ್ನು ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿದ್ದವು. ಇದು ಯುಪಿಎ ಸರ್ಕಾರಕ್ಕೆ ಭಾರೀ ಮುಜುಗರ ತಂದಿತ್ತು. ಎ.ರಾಜಾ ಮತ್ತು ಡಿಎಂಕೆ ಸಂಸದೆ ಕನಿಮೋಳಿಯವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಸಿಬಿಐ ಮತ್ತು ಸಿಎಜಿ ತನಿಖೆ ನಡೆಸಿತ್ತು. ಆದರೆ ದೆಹಲಿಯ ವಿಶೇಷ ನ್ಯಾಯಾಲಯ 2ಜಿ ಸ್ಪೆಕ್ಟ್ರಮ್ ಹಗರಣ ನಡೆದಿಲ್ಲ, ಇದೊಂದು ಕಟ್ಟುಕಥೆ ಇಂದು 2017ರಲ್ಲಿ ತೀರ್ಪಿತ್ತಿತ್ತು. ವಿನೋದ್ ರಾಯ್ ಕ್ಷಮೆ ಕೇಳಿದ್ದರು. ಅಷ್ಟರಲ್ಲಿ ಯುಪಿಎ ಸರ್ಕಾರವನ್ನು ಇಳಿಸಿ ಎನ್‌ಡಿಎ ಅಧಿಕಾರಕ್ಕೇರಿತ್ತು.

ಈಗ 5ಜಿ ಸ್ಪೆಕ್ಟ್ರಮ್ ಹರಾಜು ಪ್ರಕ್ರಿಯೆಯು 2ಜಿ ಸ್ಕಾಮ್ ನಡೆದಿರಲಿಲ್ಲ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದೆ. ಆದರೆ ಆಗ ದೇಶವೇ ಮುಳುಗಿಹೋಯಿತು ಎಂದು ಕೂಗಾಡಿದ ಬಿಜೆಪಿ ಅಧಿಕಾರದಲ್ಲಿದ್ದರೂ ಮೌನ ವಹಿಸಿದೆ. ಆಗ ಅಬ್ಬರಿಸಿ ಬೊಬ್ಬಿರಿದವರೂ ಎನ್‌ಡಿಎ ಸರ್ಕಾರದ ಆರ್ಥಿಕ ಅಧಃಪತನವನ್ನು ಪ್ರಶ್ನಿಸುತ್ತಿಲ್ಲವೇಕೆ? ಇವರ ವಿರೋಧ ಸೆಲಕ್ಟಿವ್ ಆಗಿರುವುದೇಕೆ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಯುಪಿ: ನಾಲ್ಕು ಧರ್ಮಗಳ ಪ್ರಾರ್ಥನೆ ಮಾಡಿಸುತ್ತಿದ್ದ ಶಾಲೆಯ ಮ್ಯಾನೇಜರ್‌ ಮೇಲೆ ಎಫ್‌ಐಆರ್‌; ಮತಾಂತರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಗೋದಿ ಪತ್ರಿಕೆ ಯಾವಾಗಲು ಸುಳ್ಳು ಹೇಳೋದು,ಜನರನ್ನು ದಾರಿ ತಪ್ಪಿಸೋದೆ ಅನಿಸುತ್ತೇ ಹಗರಣದ ಸೂತ್ರದಾರ ಎ ರಾಜ ಎಲ್ಲೋ ಈ ಪತ್ರಿಕೆಗೆ ಎಂಜಲು ಹಾಕಿರಬೇಕು

LEAVE A REPLY

Please enter your comment!
Please enter your name here

- Advertisment -

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...