Homeಮುಖಪುಟ2ಜಿ ಸ್ಪೆಕ್ಟ್ರಮ್ ಹಗರಣ ನಡೆದೇ ಇಲ್ಲ ಎಂಬುದನ್ನು ನಿರೂಪಿಸಿದ 5ಜಿ ಹರಾಜು ಪ್ರಕ್ರಿಯೆ!

2ಜಿ ಸ್ಪೆಕ್ಟ್ರಮ್ ಹಗರಣ ನಡೆದೇ ಇಲ್ಲ ಎಂಬುದನ್ನು ನಿರೂಪಿಸಿದ 5ಜಿ ಹರಾಜು ಪ್ರಕ್ರಿಯೆ!

ವಿನೋದ್ ರಾಯ್ ಅವರ ಪ್ರತೀಕಾರದ ಕಲ್ಪನೆಯಿಂದ ಮಾರುಹೋಗಿದ್ದ ನಾವೆಲ್ಲರೂ ಆಗ ಎ.ರಾಜಾರವರಿಗೆ ನೋವುಂಟು ಮಾಡಿದ್ದು, ಅವರ ಬಳಿ ಕ್ಷಮೆಯಾಚಿಸಬೇಕಾಗಿದೆ.

- Advertisement -
- Advertisement -

ಭಾರೀ ಕುತೂಹಲ ಮೂಡಿಸಿದ್ದ 5ಜಿ ತರಂಗಾಂತರ ಹರಾಜು ಪ್ರಕ್ರಿಯೆಗೆ ತೆರೆಬಿದ್ದಿದೆ. ಒಟ್ಟು 1.5 ಲಕ್ಷ ಕೋಟಿ ರೂ ಗರಿಷ್ಟ ಬಿಡ್‌ಗೆ ಹರಾಜು ಮಾಡಲಾಗಿದೆ ಎಂದು ದೂರ ಸಂಪರ್ಕ ಸಚಿವ ಅಶ್ವಿನಿ ವೈಭವ್ ತಿಳಿಸಿದ್ದಾರೆ. ಈ ಬೆನ್ನಲ್ಲೆ 2007 ರಲ್ಲಿ ನಡೆದಿದ್ದ 2ಜಿ ತರಂಗಾಂತರ ಹರಾಜು ಪ್ರಕ್ರಿಯೆಯ ಚರ್ಚೆ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. 5ಜಿ ಹರಾಜು ಕೇವಲ 1.5 ಲಕ್ಷ ಕೋಟಿ ರೂಗಳಿಗೆ ಆಗಿರುವಾಗ 15 ವರ್ಷಗಳ ಹಿಂದೆ ನಡೆದ 2ಜಿ ತರಂಗಾಂತರ ಹರಾಜು ಹಗರಣದಿಂದ ದೇಶಕ್ಕೆ 1.76 ಲಕ್ಷ ಕೋಟಿ ರೂ ನಷ್ಟವಾಯಿತು ಎಂದು ನಂಬಿ ನಾವು ಮೋಸ ಹೋದೆವು ಮತ್ತು ಅನ್ಯಾಯವಾಗಿ ಕೆಲವರನ್ನು ದೂರಿದೆವು ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭಿಸಿದ್ದಾರೆ.

ವಿನೋದ್ ರಾಯ್ ಅವರ ಪ್ರತೀಕಾರದ ಕಲ್ಪನೆಯಿಂದ ಮಾರುಹೋಗಿದ್ದ ನಾವೆಲ್ಲರೂ ಆಗ ಎ.ರಾಜಾರವರು ಸೇರಿದಂತೆ ಹಲವರಿಗೆ ನೋವುಂಟು ಮಾಡಿದ್ದು, ಅವರ ಬಳಿ ಕ್ಷಮೆಯಾಚಿಸಬೇಕಾಗಿದೆ. 5G ಹರಾಜು ಕೇವಲ 1.5 ಲಕ್ಷ ಕೋಟಿ ರೂ ಪಡೆಯುತ್ತದೆ ಎಂದರೆ 15 ವರ್ಷಗಳ ಹಿಂದಿನ 2G ಹರಾಜು 1.76 ಲಕ್ಷ ಕೋಟಿ ರೂ ನಷ್ಟ ಹೆಗಾಯಿತು? ಎಂದು ಸಾಮಾಜಿಕ ಕಾರ್ಯಕರ್ತೆ ಮೀನಾ ಕಂದಸ್ವಾಮಿ ಟ್ವೀಟ್ ಮಾಡಿದ್ದಾರೆ.

2007ರಲ್ಲಿ ಯುಪಿಎ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದರು. ಎ.ರಾಜಾ ದೂರ ಸಂಪರ್ಕ ಸಚಿವರಾಗಿದ್ದರು. ಆ ಸಂದರ್ಭದಲ್ಲಿ 2ಜಿ ತರಂಗಾಂತರಗಳ ಹರಾಜು ಪ್ರಕ್ರಿಯೆ ನಡೆದಿತ್ತು. ಆ ನಂತರ 2011ರಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ, ಕಿಕ್‌ಬ್ಯಾಕ್ ಪಡೆದು ಕಡಿಮೆ ಮೊತ್ತಕ್ಕೆ ಹರಾಜು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಸಿಎಜಿ ವಿನೋದ್ ರಾಯ್‌ರವರು ಇದರಿಂದ ದೇಶಕ್ಕೆ 1.76 ಲಕ್ಷ ಕೋಟಿ ರೂ ನಷ್ಟವಾಗಿದೆ ಎಂದು ವಾದಿಸಿದ್ದರು. ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಈ ಹಗರಣವನ್ನು ಹೊರತಂದಿದ್ದು ನಾನು ಎಂದು ಎಲ್ಲೆಡೆ ಹೇಳಿಕೊಂಡಿದ್ದರು. ಮಾಧ್ಯಮಗಳು ಅದನ್ನು ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿದ್ದವು. ಇದು ಯುಪಿಎ ಸರ್ಕಾರಕ್ಕೆ ಭಾರೀ ಮುಜುಗರ ತಂದಿತ್ತು. ಎ.ರಾಜಾ ಮತ್ತು ಡಿಎಂಕೆ ಸಂಸದೆ ಕನಿಮೋಳಿಯವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಸಿಬಿಐ ಮತ್ತು ಸಿಎಜಿ ತನಿಖೆ ನಡೆಸಿತ್ತು. ಆದರೆ ದೆಹಲಿಯ ವಿಶೇಷ ನ್ಯಾಯಾಲಯ 2ಜಿ ಸ್ಪೆಕ್ಟ್ರಮ್ ಹಗರಣ ನಡೆದಿಲ್ಲ, ಇದೊಂದು ಕಟ್ಟುಕಥೆ ಇಂದು 2017ರಲ್ಲಿ ತೀರ್ಪಿತ್ತಿತ್ತು. ವಿನೋದ್ ರಾಯ್ ಕ್ಷಮೆ ಕೇಳಿದ್ದರು. ಅಷ್ಟರಲ್ಲಿ ಯುಪಿಎ ಸರ್ಕಾರವನ್ನು ಇಳಿಸಿ ಎನ್‌ಡಿಎ ಅಧಿಕಾರಕ್ಕೇರಿತ್ತು.

ಈಗ 5ಜಿ ಸ್ಪೆಕ್ಟ್ರಮ್ ಹರಾಜು ಪ್ರಕ್ರಿಯೆಯು 2ಜಿ ಸ್ಕಾಮ್ ನಡೆದಿರಲಿಲ್ಲ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದೆ. ಆದರೆ ಆಗ ದೇಶವೇ ಮುಳುಗಿಹೋಯಿತು ಎಂದು ಕೂಗಾಡಿದ ಬಿಜೆಪಿ ಅಧಿಕಾರದಲ್ಲಿದ್ದರೂ ಮೌನ ವಹಿಸಿದೆ. ಆಗ ಅಬ್ಬರಿಸಿ ಬೊಬ್ಬಿರಿದವರೂ ಎನ್‌ಡಿಎ ಸರ್ಕಾರದ ಆರ್ಥಿಕ ಅಧಃಪತನವನ್ನು ಪ್ರಶ್ನಿಸುತ್ತಿಲ್ಲವೇಕೆ? ಇವರ ವಿರೋಧ ಸೆಲಕ್ಟಿವ್ ಆಗಿರುವುದೇಕೆ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಯುಪಿ: ನಾಲ್ಕು ಧರ್ಮಗಳ ಪ್ರಾರ್ಥನೆ ಮಾಡಿಸುತ್ತಿದ್ದ ಶಾಲೆಯ ಮ್ಯಾನೇಜರ್‌ ಮೇಲೆ ಎಫ್‌ಐಆರ್‌; ಮತಾಂತರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಗೋದಿ ಪತ್ರಿಕೆ ಯಾವಾಗಲು ಸುಳ್ಳು ಹೇಳೋದು,ಜನರನ್ನು ದಾರಿ ತಪ್ಪಿಸೋದೆ ಅನಿಸುತ್ತೇ ಹಗರಣದ ಸೂತ್ರದಾರ ಎ ರಾಜ ಎಲ್ಲೋ ಈ ಪತ್ರಿಕೆಗೆ ಎಂಜಲು ಹಾಕಿರಬೇಕು

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...