Homeಮುಖಪುಟಚೀನಾದಲ್ಲಿ ಪ್ರಬಲ ಭೂಕಂಪ: 100ಕ್ಕೂ ಅಧಿಕ ಮಂದಿ ಸಾವು

ಚೀನಾದಲ್ಲಿ ಪ್ರಬಲ ಭೂಕಂಪ: 100ಕ್ಕೂ ಅಧಿಕ ಮಂದಿ ಸಾವು

- Advertisement -
- Advertisement -

ಚೀನಾದ ಗನ್ಸು, ಕಿಂಗ್‌ಜೈ ಪ್ರಾಂತ್ಯಗಳಲ್ಲಿ ಸೋಮವಾರ ಮಧ್ಯರಾತ್ರಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ನೂರಕ್ಕೂ ಅಧಿಕ (ಬೆಳಿಗ್ಗೆ 6:30ರ ಹೊತ್ತಿಗೆ ಸುಮಾರು 111) ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಭೂಕಂಪ ಪರಿಹಾರ ಕೇಂದ್ರ ಕಚೇರಿಯನ್ನು ಉಲ್ಲೇಖಿಸಿ ರಾಜ್ಯ ಮಾಧ್ಯಮ ಕ್ಸಿನ್ಹುವಾ ವರದಿ ಮಾಡಿದೆ.

ಮಧ್ಯರಾತ್ರಿ 11:59ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಗನ್ಸು ಪ್ರಾಂತ್ಯದ ಲಿಯುಗೌ ಟೌನ್‌ಶಿಪ್ ಬಳಿ ಕಂಪನದ ಕೇಂದ್ರ ಬಿಂದು ಗುರುತಿಸಲಾಗಿದೆ. ಅವಘಡದಲ್ಲಿ ಸುಮಾರು 300ಕ್ಕೂ  ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಘಟನೆ ಸಂಬಂಧ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದ್ದು, ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯ, ಮನೆ ಕಳೆದಕೊಂಡಿರುವವರೆಗೆ ಪುನರ್ವಸತಿ ಹಾಗೂ ಸಂತ್ರಸ್ತರಿಗೆ ಆಹಾರದ ವ್ಯವಸ್ಥೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದ್ದಾರೆ.

ಭೂಕಂಪದಿಂದಾಗಿ ಮನೆ, ರಸ್ತೆಗಳು ಮತ್ತು ಇತರ ಮೂಲಸೌಕರ್ಯಗಳಿಗೆ ಹಾನಿಯಾಗಿದೆ ಎಂದು ವರದಿಗಳು ಹೇಳಿವೆ. ಹಲವು ಗ್ರಾಮಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡು ನೀರಿನ ಸಮಸ್ಯೆ ಉಂಟಾಗಿದೆ.

ಸುಮಾರು 88 ಅಗ್ನಿಶಾಮಕ ತಂಡಗಳೊಂದಿಗೆ 580 ಸಿಬ್ಬಂದಿ, ಹುಡುಕಾಟ ಮತ್ತು ರಕ್ಷಣಾ ಕಾರ್ಯದಲ್ಲಿ ಪಲಗಿರುವ 12 ಶ್ವಾನಗಳು ಹಾಗೂ 10 ಸಾವಿರಕ್ಕೂ ಅಧಿಕಾ ರಕ್ಷಣಾ ಉಪಕರಣಗಳನ್ನು ಭೂಕಂಪ ಸಂಭವಿಸಿದ ಪ್ರದೇಶಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಚೀನಾದ ಪ್ರಾಂತೀಯ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ತಿಳಿಸಿದೆ.

ವರದಿಗಳ ಪ್ರಕಾರ, ಎಲ್ಲಾ ರೀತಿಯ ವೈದ್ಯಕೀಯ ತಂಡಗಳು, ವೈದ್ಯಕೀಯ ಉಪಕರಣ, ಔಷಧ ಮತ್ತು ಸುಮಾರು 60 ಆಂಬ್ಯುಲೆನ್ಸ್‌ಗಳನ್ನು ಭೂಕಂಪ ಪೀಡಿತ ಪ್ರದೇಶಗಳಿಗೆ ಸರ್ಕಾರ ಕಳುಹಿಸಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

ಉತ್ತರ ಚೀನಾದ ಹಲವು ಭಾಗದಲ್ಲಿ ಚಳಿಯ ಪ್ರಮಾಣ ಮಿತಿ ಮೀರಿದೆ. ಕನಿಷ್ಠ ಉಷ್ಣಾಂಶದಿಂದಾಗಿ ಜನ ತತ್ತರಿಸಿಹೋಗಿದ್ದಾರೆ. ಈ ನಡುವೆ ಭೂಕಂಪ ಸಂಭವಿಸಿರುವುದು ಜನರನ್ನು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ.

ಚೀನಾದ ಸಿಚುನ್‌ ಪ್ರದೇಶದಲ್ಲಿ ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಭೂಕಂಪ ಸಂಭವಿಸಿ ನೂರಕ್ಕೂ ಅಧಿಕ ಮಂದಿ ಮೃತಪಟ್ಟು ಭಾರೀ ಹಾನಿಯಾಗಿತ್ತು. ಇದಕ್ಕೂ ಮುನ್ನ 2008ರಲ್ಲಿ ಚೀನಾದಲ್ಲಿ ಸಂಭವಿಸಿದ್ದ ಭೂಕಂಪದಲ್ಲಿ 87,000 ಮಂದಿ ಜೀವ ಕಳೆದುಕೊಂಡಿದ್ದರು. ಇದರಲ್ಲಿ ಶಾಲಾ ಮಕ್ಕಳು, ಸಿಬ್ಬಂದಿ ಸೇರಿ 5,335 ಮಂದಿ ಪ್ರಾಣ ಕಳೆದುಕೊಂಡಿದ್ದರು.

ಇದನ್ನೂ ಓದಿ: ಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...