Homeಮುಖಪುಟಚೀನಾದಲ್ಲಿ ಪ್ರಬಲ ಭೂಕಂಪ: 100ಕ್ಕೂ ಅಧಿಕ ಮಂದಿ ಸಾವು

ಚೀನಾದಲ್ಲಿ ಪ್ರಬಲ ಭೂಕಂಪ: 100ಕ್ಕೂ ಅಧಿಕ ಮಂದಿ ಸಾವು

- Advertisement -
- Advertisement -

ಚೀನಾದ ಗನ್ಸು, ಕಿಂಗ್‌ಜೈ ಪ್ರಾಂತ್ಯಗಳಲ್ಲಿ ಸೋಮವಾರ ಮಧ್ಯರಾತ್ರಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ನೂರಕ್ಕೂ ಅಧಿಕ (ಬೆಳಿಗ್ಗೆ 6:30ರ ಹೊತ್ತಿಗೆ ಸುಮಾರು 111) ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಭೂಕಂಪ ಪರಿಹಾರ ಕೇಂದ್ರ ಕಚೇರಿಯನ್ನು ಉಲ್ಲೇಖಿಸಿ ರಾಜ್ಯ ಮಾಧ್ಯಮ ಕ್ಸಿನ್ಹುವಾ ವರದಿ ಮಾಡಿದೆ.

ಮಧ್ಯರಾತ್ರಿ 11:59ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಗನ್ಸು ಪ್ರಾಂತ್ಯದ ಲಿಯುಗೌ ಟೌನ್‌ಶಿಪ್ ಬಳಿ ಕಂಪನದ ಕೇಂದ್ರ ಬಿಂದು ಗುರುತಿಸಲಾಗಿದೆ. ಅವಘಡದಲ್ಲಿ ಸುಮಾರು 300ಕ್ಕೂ  ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಘಟನೆ ಸಂಬಂಧ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದ್ದು, ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯ, ಮನೆ ಕಳೆದಕೊಂಡಿರುವವರೆಗೆ ಪುನರ್ವಸತಿ ಹಾಗೂ ಸಂತ್ರಸ್ತರಿಗೆ ಆಹಾರದ ವ್ಯವಸ್ಥೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದ್ದಾರೆ.

ಭೂಕಂಪದಿಂದಾಗಿ ಮನೆ, ರಸ್ತೆಗಳು ಮತ್ತು ಇತರ ಮೂಲಸೌಕರ್ಯಗಳಿಗೆ ಹಾನಿಯಾಗಿದೆ ಎಂದು ವರದಿಗಳು ಹೇಳಿವೆ. ಹಲವು ಗ್ರಾಮಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡು ನೀರಿನ ಸಮಸ್ಯೆ ಉಂಟಾಗಿದೆ.

ಸುಮಾರು 88 ಅಗ್ನಿಶಾಮಕ ತಂಡಗಳೊಂದಿಗೆ 580 ಸಿಬ್ಬಂದಿ, ಹುಡುಕಾಟ ಮತ್ತು ರಕ್ಷಣಾ ಕಾರ್ಯದಲ್ಲಿ ಪಲಗಿರುವ 12 ಶ್ವಾನಗಳು ಹಾಗೂ 10 ಸಾವಿರಕ್ಕೂ ಅಧಿಕಾ ರಕ್ಷಣಾ ಉಪಕರಣಗಳನ್ನು ಭೂಕಂಪ ಸಂಭವಿಸಿದ ಪ್ರದೇಶಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಚೀನಾದ ಪ್ರಾಂತೀಯ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ತಿಳಿಸಿದೆ.

ವರದಿಗಳ ಪ್ರಕಾರ, ಎಲ್ಲಾ ರೀತಿಯ ವೈದ್ಯಕೀಯ ತಂಡಗಳು, ವೈದ್ಯಕೀಯ ಉಪಕರಣ, ಔಷಧ ಮತ್ತು ಸುಮಾರು 60 ಆಂಬ್ಯುಲೆನ್ಸ್‌ಗಳನ್ನು ಭೂಕಂಪ ಪೀಡಿತ ಪ್ರದೇಶಗಳಿಗೆ ಸರ್ಕಾರ ಕಳುಹಿಸಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

ಉತ್ತರ ಚೀನಾದ ಹಲವು ಭಾಗದಲ್ಲಿ ಚಳಿಯ ಪ್ರಮಾಣ ಮಿತಿ ಮೀರಿದೆ. ಕನಿಷ್ಠ ಉಷ್ಣಾಂಶದಿಂದಾಗಿ ಜನ ತತ್ತರಿಸಿಹೋಗಿದ್ದಾರೆ. ಈ ನಡುವೆ ಭೂಕಂಪ ಸಂಭವಿಸಿರುವುದು ಜನರನ್ನು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ.

ಚೀನಾದ ಸಿಚುನ್‌ ಪ್ರದೇಶದಲ್ಲಿ ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಭೂಕಂಪ ಸಂಭವಿಸಿ ನೂರಕ್ಕೂ ಅಧಿಕ ಮಂದಿ ಮೃತಪಟ್ಟು ಭಾರೀ ಹಾನಿಯಾಗಿತ್ತು. ಇದಕ್ಕೂ ಮುನ್ನ 2008ರಲ್ಲಿ ಚೀನಾದಲ್ಲಿ ಸಂಭವಿಸಿದ್ದ ಭೂಕಂಪದಲ್ಲಿ 87,000 ಮಂದಿ ಜೀವ ಕಳೆದುಕೊಂಡಿದ್ದರು. ಇದರಲ್ಲಿ ಶಾಲಾ ಮಕ್ಕಳು, ಸಿಬ್ಬಂದಿ ಸೇರಿ 5,335 ಮಂದಿ ಪ್ರಾಣ ಕಳೆದುಕೊಂಡಿದ್ದರು.

ಇದನ್ನೂ ಓದಿ: ಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...