Homeಮುಖಪುಟ17ನೇ ಲೋಕಸಭೆ: ಸಂಸತ್ತಿನಲ್ಲಿ ಒಂದೇ ಒಂದು ಮಾತನ್ನಾಡದ ಕರ್ನಾಟಕದ ನಾಲ್ವರು ಸೇರಿ 6 ಮಂದಿ ಬಿಜೆಪಿ...

17ನೇ ಲೋಕಸಭೆ: ಸಂಸತ್ತಿನಲ್ಲಿ ಒಂದೇ ಒಂದು ಮಾತನ್ನಾಡದ ಕರ್ನಾಟಕದ ನಾಲ್ವರು ಸೇರಿ 6 ಮಂದಿ ಬಿಜೆಪಿ ಸಂಸದರು!

- Advertisement -
- Advertisement -

17ನೇ ಲೋಕಸಭೆಯ ಅವಧಿ ಮುಗಿದಿದೆ. 17ನೇ ಲೋಕಸಭೆಯ ಕೊನೆಯ ಅಧಿವೇಶನ ಫೆ.9 2024ರಂದು ಕೊನೆಗೊಂಡಿತ್ತು. ಲೋಕಸಭೆಯ ಈ 5 ವರ್ಷಗಳ ಅವಧಿಯಲ್ಲಿ ಕರ್ನಾಟಕದ ನಾಲ್ವರು ಸಂಸದರು ಸೇರಿ ಒಟ್ಟು 9ಮಂದಿ ಸಂಸದರು ಒಂದೇ ಒಂದು ಬಾರಿ ಮಾತನಾಡಿಲ್ಲ ಎನ್ನುವುದನ್ನು ಸಂಸತ್ತಿನ ದಾಖಲೆಗಳು ಬಹಿರಂಗಪಡಿಸಿದೆ.

ಸನ್ನಿ ಡಿಯೋಲ್, ಶತ್ರುಘ್ನ ಸಿನ್ಹಾ ಮತ್ತು ಇತರ 9 ಸಂಸದರು ಸಂಸತ್ತಿನಲ್ಲಿ ಒಂದು ಬಾರಿಯೂ ಮಾತನಾಡಿಲ್ಲ ಎನ್ನುವುದನ್ನು ದಾಖಲೆಗಳು ಬಹಿರಂಗಪಡಿಸುತ್ತದೆ. ಗುರುದಾಸ್‌ಪುರವನ್ನು ಪ್ರತಿನಿಧಿಸುವ ಬಿಜೆಪಿಯಿಂದ ಮೊದಲ ಬಾರಿಗೆ ಸಂಸದರಾಗಿರುವ ಡಿಯೋಲ್ ಅವರು ಐದು ವರ್ಷಗಳ ಅವಧಿಯಲ್ಲಿ ಕೆಲವು ವಿಚಾರಗಳನ್ನು ಲಿಖಿತವಾಗಿ  ಸಲ್ಲಿಸಿದ್ದಾರೆ. ಆದರೆ ತೃಣಮೂಲ ಕಾಂಗ್ರೆಸ್‌ಗೆ ಸೇರಿದ್ದ ಸಿನ್ಹಾ ಅವರು ಮೌಖಿಕ ಅಥವಾ ಲಿಖಿತ ಸಂವಹನದ ಮೂಲಕ ಯಾವುದೇ ವಿಚಾರವನ್ನು ಪ್ರಸ್ತಾಪಿಸಿಲ್ಲ ಎನ್ನುವುದನ್ನು ಸಂಸತ್ತಿನ ದಾಖಲೆಗಳು ಬಹಿರಂಗಪಡಿಸಿದೆ.

17ನೇ ಲೋಕಸಭೆಯ ಮೊದಲ ಅಧಿವೇಶನವು ಜೂನ್ 17, 2019ರಂದು ಪ್ರಾರಂಭವಾಗಿತ್ತು. 543 ಸಂಸದರ ಪೈಕಿ 9 ಮಂದಿ ಸಂಸದರು ಐದು ವರ್ಷಗಳ ಅವಧಿಯಲ್ಲಿ ಲೋಕಸಭೆಯಲ್ಲಿ ಯಾವುದೇ  ಚರ್ಚೆಯಲ್ಲಿ ಭಾಗವಹಿಸದೆ ದೂರ ಉಳಿದಿದ್ದಾರೆ. ಈ ಪಟ್ಟಿಯಲ್ಲಿ ಆಡಳಿತಾರೂಢ ಬಿಜೆಪಿಯ 6 ಮಂದಿ ಸಂಸದರು,  ಟಿಎಂಸಿಯ ಇಬ್ಬರು ಮತ್ತು ಬಹುಜನ ಸಮಾಜ ಪಕ್ಷದ ಓರ್ವ ಸಂಸದರು ಸೇರಿದ್ದಾರೆ.

ಅವರಲ್ಲಿ ಕರ್ನಾಟಕದ ಬಿಜಾಪುರದ ಸಂಸದ ರಮೇಶ್ ಚಂದಪ್ಪ ಜಿಗಜಿಣಗಿ, ಉತ್ತರಪ್ರದೇಶದ ಘೋಸಿಯ ಪ್ರಸ್ತುತ ಜೈಲಿನಲ್ಲಿರುವ ಸಂಸದ ಅತುಲ್ ಕುಮಾರ್ ಸಿಂಗ್, ಪಶ್ಚಿಮ ಬಂಗಾಳದ ತಮ್ಲುಕ್‌ನ ದಿಬ್ಯೇಂದು ಅಧಿಕಾರಿ, ಕರ್ನಾಟಕದ ಚಿಕ್ಕಬಳ್ಳಾಪುರದ ಬಿ.ಎನ್. ಬಚ್ಚೇಗೌಡ,  ಅಸ್ಸಾಂನ ಲಖೀಂಪುರದ ಪ್ರಧಾನ್ ಬರುವಾ,  ಪಂಜಾಬ್‌ನ ಗುರುದಾಸ್‌ಪುರದ ಸನ್ನಿ ಡಿಯೋಲ್, ಕರ್ನಾಟಕದ ಉತ್ತರಕನ್ನಡ ಜಿಲ್ಲೆಯ ಅನಂತ್ ಕುಮಾರ್ ಹೆಗ್ಡೆ, ಕರ್ನಾಟಕದ ಚಾಮರಾಜನಗರ ಜಿಲ್ಲೆಯ ವಿ ಶ್ರೀನಿವಾಸ ಪ್ರಸಾದ್ ಮತ್ತು ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದ ಸಂಸದ ಶತ್ರುಘ್ನ ಸಿನ್ಹಾ ಸೇರಿದ್ದಾರೆ.

ಈ ಒಂಬತ್ತು ಸಂಸದರಲ್ಲಿ ಆರು ಮಂದಿ ಲಿಖಿತವಾಗಿ ಪ್ರಸ್ತಾಪಗಳನ್ನು, ಪ್ರಶ್ನೆಗಳನ್ನು ನೀಡಿದ್ದರೆ, ಸಿನ್ಹಾ, ಸಿಂಗ್ ಮತ್ತು ಚಂದಪ್ಪ ಅವರು ಲಿಖಿತ ಅಥವಾ ಮೌಖಿಕ ರೂಪಗಳಲ್ಲಿ ಸದನದ ಚರ್ಚೆಯಲ್ಲಿ ಭಾಗಿಯಾಗಿಲ್ಲ ಎನ್ನುವುದನ್ನು ಸಂಸತ್ತಿನ ದಾಖಲೆಗಳು ತಿಳಿಸುತ್ತದೆ.

ವರದಿಗಳ ಪ್ರಕಾರ, ಸನ್ನಿ ಡಿಯೋಲ್ ಸೇರಿದಂತೆ ಮೊದಲ ಬಾರಿಗೆ ಸಂಸತ್ತಿಗೆ ಆಯ್ಕೆಯಾದ ಸಂಸದರಿಗೆ ಸ್ಪೀಕರ್‌ ಓಂ ಬಿರ್ಲಾ ಅವರು ಸದನದಲ್ಲಿ ಮಾತನಾಡುವಂತೆ ಉತ್ತೇಜಿಸಿದ್ದರು. ವರದಿ ಪ್ರಕರ ಎರಡು ಬಾರಿ ಸನ್ನಿ ಡಿಯೋಲ್ ಅವರಲ್ಲಿ ಸಂಸತ್ತಿನಲ್ಲಿ ಮಾತನಾಡುವಂತೆ ಸ್ಪೀಕರ್‌ ಓಂ ಬಿರ್ಲಾ ಆಗ್ರಹಿಸಿದ್ದರು. ಆದರೆ ಅವರು ಅದಕ್ಕೆ ಸರಿಯಾಗಿ ಸ್ಪಂದಿಸಿಲ್ಲ ಎನ್ನುವುದು ಸಂಸತ್ತಿನ ದಾಖಲೆಗಳು ಬಹಿರಂಗಪಡಿಸುತ್ತದೆ.

ಇದನ್ನು ಓದಿ: ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳಿಗೆ ಜಾಮೀನು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...