Homeಮುಖಪುಟ17ನೇ ಲೋಕಸಭೆ: ಸಂಸತ್ತಿನಲ್ಲಿ ಒಂದೇ ಒಂದು ಮಾತನ್ನಾಡದ ಕರ್ನಾಟಕದ ನಾಲ್ವರು ಸೇರಿ 6 ಮಂದಿ ಬಿಜೆಪಿ...

17ನೇ ಲೋಕಸಭೆ: ಸಂಸತ್ತಿನಲ್ಲಿ ಒಂದೇ ಒಂದು ಮಾತನ್ನಾಡದ ಕರ್ನಾಟಕದ ನಾಲ್ವರು ಸೇರಿ 6 ಮಂದಿ ಬಿಜೆಪಿ ಸಂಸದರು!

- Advertisement -
- Advertisement -

17ನೇ ಲೋಕಸಭೆಯ ಅವಧಿ ಮುಗಿದಿದೆ. 17ನೇ ಲೋಕಸಭೆಯ ಕೊನೆಯ ಅಧಿವೇಶನ ಫೆ.9 2024ರಂದು ಕೊನೆಗೊಂಡಿತ್ತು. ಲೋಕಸಭೆಯ ಈ 5 ವರ್ಷಗಳ ಅವಧಿಯಲ್ಲಿ ಕರ್ನಾಟಕದ ನಾಲ್ವರು ಸಂಸದರು ಸೇರಿ ಒಟ್ಟು 9ಮಂದಿ ಸಂಸದರು ಒಂದೇ ಒಂದು ಬಾರಿ ಮಾತನಾಡಿಲ್ಲ ಎನ್ನುವುದನ್ನು ಸಂಸತ್ತಿನ ದಾಖಲೆಗಳು ಬಹಿರಂಗಪಡಿಸಿದೆ.

ಸನ್ನಿ ಡಿಯೋಲ್, ಶತ್ರುಘ್ನ ಸಿನ್ಹಾ ಮತ್ತು ಇತರ 9 ಸಂಸದರು ಸಂಸತ್ತಿನಲ್ಲಿ ಒಂದು ಬಾರಿಯೂ ಮಾತನಾಡಿಲ್ಲ ಎನ್ನುವುದನ್ನು ದಾಖಲೆಗಳು ಬಹಿರಂಗಪಡಿಸುತ್ತದೆ. ಗುರುದಾಸ್‌ಪುರವನ್ನು ಪ್ರತಿನಿಧಿಸುವ ಬಿಜೆಪಿಯಿಂದ ಮೊದಲ ಬಾರಿಗೆ ಸಂಸದರಾಗಿರುವ ಡಿಯೋಲ್ ಅವರು ಐದು ವರ್ಷಗಳ ಅವಧಿಯಲ್ಲಿ ಕೆಲವು ವಿಚಾರಗಳನ್ನು ಲಿಖಿತವಾಗಿ  ಸಲ್ಲಿಸಿದ್ದಾರೆ. ಆದರೆ ತೃಣಮೂಲ ಕಾಂಗ್ರೆಸ್‌ಗೆ ಸೇರಿದ್ದ ಸಿನ್ಹಾ ಅವರು ಮೌಖಿಕ ಅಥವಾ ಲಿಖಿತ ಸಂವಹನದ ಮೂಲಕ ಯಾವುದೇ ವಿಚಾರವನ್ನು ಪ್ರಸ್ತಾಪಿಸಿಲ್ಲ ಎನ್ನುವುದನ್ನು ಸಂಸತ್ತಿನ ದಾಖಲೆಗಳು ಬಹಿರಂಗಪಡಿಸಿದೆ.

17ನೇ ಲೋಕಸಭೆಯ ಮೊದಲ ಅಧಿವೇಶನವು ಜೂನ್ 17, 2019ರಂದು ಪ್ರಾರಂಭವಾಗಿತ್ತು. 543 ಸಂಸದರ ಪೈಕಿ 9 ಮಂದಿ ಸಂಸದರು ಐದು ವರ್ಷಗಳ ಅವಧಿಯಲ್ಲಿ ಲೋಕಸಭೆಯಲ್ಲಿ ಯಾವುದೇ  ಚರ್ಚೆಯಲ್ಲಿ ಭಾಗವಹಿಸದೆ ದೂರ ಉಳಿದಿದ್ದಾರೆ. ಈ ಪಟ್ಟಿಯಲ್ಲಿ ಆಡಳಿತಾರೂಢ ಬಿಜೆಪಿಯ 6 ಮಂದಿ ಸಂಸದರು,  ಟಿಎಂಸಿಯ ಇಬ್ಬರು ಮತ್ತು ಬಹುಜನ ಸಮಾಜ ಪಕ್ಷದ ಓರ್ವ ಸಂಸದರು ಸೇರಿದ್ದಾರೆ.

ಅವರಲ್ಲಿ ಕರ್ನಾಟಕದ ಬಿಜಾಪುರದ ಸಂಸದ ರಮೇಶ್ ಚಂದಪ್ಪ ಜಿಗಜಿಣಗಿ, ಉತ್ತರಪ್ರದೇಶದ ಘೋಸಿಯ ಪ್ರಸ್ತುತ ಜೈಲಿನಲ್ಲಿರುವ ಸಂಸದ ಅತುಲ್ ಕುಮಾರ್ ಸಿಂಗ್, ಪಶ್ಚಿಮ ಬಂಗಾಳದ ತಮ್ಲುಕ್‌ನ ದಿಬ್ಯೇಂದು ಅಧಿಕಾರಿ, ಕರ್ನಾಟಕದ ಚಿಕ್ಕಬಳ್ಳಾಪುರದ ಬಿ.ಎನ್. ಬಚ್ಚೇಗೌಡ,  ಅಸ್ಸಾಂನ ಲಖೀಂಪುರದ ಪ್ರಧಾನ್ ಬರುವಾ,  ಪಂಜಾಬ್‌ನ ಗುರುದಾಸ್‌ಪುರದ ಸನ್ನಿ ಡಿಯೋಲ್, ಕರ್ನಾಟಕದ ಉತ್ತರಕನ್ನಡ ಜಿಲ್ಲೆಯ ಅನಂತ್ ಕುಮಾರ್ ಹೆಗ್ಡೆ, ಕರ್ನಾಟಕದ ಚಾಮರಾಜನಗರ ಜಿಲ್ಲೆಯ ವಿ ಶ್ರೀನಿವಾಸ ಪ್ರಸಾದ್ ಮತ್ತು ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದ ಸಂಸದ ಶತ್ರುಘ್ನ ಸಿನ್ಹಾ ಸೇರಿದ್ದಾರೆ.

ಈ ಒಂಬತ್ತು ಸಂಸದರಲ್ಲಿ ಆರು ಮಂದಿ ಲಿಖಿತವಾಗಿ ಪ್ರಸ್ತಾಪಗಳನ್ನು, ಪ್ರಶ್ನೆಗಳನ್ನು ನೀಡಿದ್ದರೆ, ಸಿನ್ಹಾ, ಸಿಂಗ್ ಮತ್ತು ಚಂದಪ್ಪ ಅವರು ಲಿಖಿತ ಅಥವಾ ಮೌಖಿಕ ರೂಪಗಳಲ್ಲಿ ಸದನದ ಚರ್ಚೆಯಲ್ಲಿ ಭಾಗಿಯಾಗಿಲ್ಲ ಎನ್ನುವುದನ್ನು ಸಂಸತ್ತಿನ ದಾಖಲೆಗಳು ತಿಳಿಸುತ್ತದೆ.

ವರದಿಗಳ ಪ್ರಕಾರ, ಸನ್ನಿ ಡಿಯೋಲ್ ಸೇರಿದಂತೆ ಮೊದಲ ಬಾರಿಗೆ ಸಂಸತ್ತಿಗೆ ಆಯ್ಕೆಯಾದ ಸಂಸದರಿಗೆ ಸ್ಪೀಕರ್‌ ಓಂ ಬಿರ್ಲಾ ಅವರು ಸದನದಲ್ಲಿ ಮಾತನಾಡುವಂತೆ ಉತ್ತೇಜಿಸಿದ್ದರು. ವರದಿ ಪ್ರಕರ ಎರಡು ಬಾರಿ ಸನ್ನಿ ಡಿಯೋಲ್ ಅವರಲ್ಲಿ ಸಂಸತ್ತಿನಲ್ಲಿ ಮಾತನಾಡುವಂತೆ ಸ್ಪೀಕರ್‌ ಓಂ ಬಿರ್ಲಾ ಆಗ್ರಹಿಸಿದ್ದರು. ಆದರೆ ಅವರು ಅದಕ್ಕೆ ಸರಿಯಾಗಿ ಸ್ಪಂದಿಸಿಲ್ಲ ಎನ್ನುವುದು ಸಂಸತ್ತಿನ ದಾಖಲೆಗಳು ಬಹಿರಂಗಪಡಿಸುತ್ತದೆ.

ಇದನ್ನು ಓದಿ: ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳಿಗೆ ಜಾಮೀನು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...