Homeಮುಖಪುಟ17ನೇ ಲೋಕಸಭೆ: ಸಂಸತ್ತಿನಲ್ಲಿ ಒಂದೇ ಒಂದು ಮಾತನ್ನಾಡದ ಕರ್ನಾಟಕದ ನಾಲ್ವರು ಸೇರಿ 6 ಮಂದಿ ಬಿಜೆಪಿ...

17ನೇ ಲೋಕಸಭೆ: ಸಂಸತ್ತಿನಲ್ಲಿ ಒಂದೇ ಒಂದು ಮಾತನ್ನಾಡದ ಕರ್ನಾಟಕದ ನಾಲ್ವರು ಸೇರಿ 6 ಮಂದಿ ಬಿಜೆಪಿ ಸಂಸದರು!

- Advertisement -
- Advertisement -

17ನೇ ಲೋಕಸಭೆಯ ಅವಧಿ ಮುಗಿದಿದೆ. 17ನೇ ಲೋಕಸಭೆಯ ಕೊನೆಯ ಅಧಿವೇಶನ ಫೆ.9 2024ರಂದು ಕೊನೆಗೊಂಡಿತ್ತು. ಲೋಕಸಭೆಯ ಈ 5 ವರ್ಷಗಳ ಅವಧಿಯಲ್ಲಿ ಕರ್ನಾಟಕದ ನಾಲ್ವರು ಸಂಸದರು ಸೇರಿ ಒಟ್ಟು 9ಮಂದಿ ಸಂಸದರು ಒಂದೇ ಒಂದು ಬಾರಿ ಮಾತನಾಡಿಲ್ಲ ಎನ್ನುವುದನ್ನು ಸಂಸತ್ತಿನ ದಾಖಲೆಗಳು ಬಹಿರಂಗಪಡಿಸಿದೆ.

ಸನ್ನಿ ಡಿಯೋಲ್, ಶತ್ರುಘ್ನ ಸಿನ್ಹಾ ಮತ್ತು ಇತರ 9 ಸಂಸದರು ಸಂಸತ್ತಿನಲ್ಲಿ ಒಂದು ಬಾರಿಯೂ ಮಾತನಾಡಿಲ್ಲ ಎನ್ನುವುದನ್ನು ದಾಖಲೆಗಳು ಬಹಿರಂಗಪಡಿಸುತ್ತದೆ. ಗುರುದಾಸ್‌ಪುರವನ್ನು ಪ್ರತಿನಿಧಿಸುವ ಬಿಜೆಪಿಯಿಂದ ಮೊದಲ ಬಾರಿಗೆ ಸಂಸದರಾಗಿರುವ ಡಿಯೋಲ್ ಅವರು ಐದು ವರ್ಷಗಳ ಅವಧಿಯಲ್ಲಿ ಕೆಲವು ವಿಚಾರಗಳನ್ನು ಲಿಖಿತವಾಗಿ  ಸಲ್ಲಿಸಿದ್ದಾರೆ. ಆದರೆ ತೃಣಮೂಲ ಕಾಂಗ್ರೆಸ್‌ಗೆ ಸೇರಿದ್ದ ಸಿನ್ಹಾ ಅವರು ಮೌಖಿಕ ಅಥವಾ ಲಿಖಿತ ಸಂವಹನದ ಮೂಲಕ ಯಾವುದೇ ವಿಚಾರವನ್ನು ಪ್ರಸ್ತಾಪಿಸಿಲ್ಲ ಎನ್ನುವುದನ್ನು ಸಂಸತ್ತಿನ ದಾಖಲೆಗಳು ಬಹಿರಂಗಪಡಿಸಿದೆ.

17ನೇ ಲೋಕಸಭೆಯ ಮೊದಲ ಅಧಿವೇಶನವು ಜೂನ್ 17, 2019ರಂದು ಪ್ರಾರಂಭವಾಗಿತ್ತು. 543 ಸಂಸದರ ಪೈಕಿ 9 ಮಂದಿ ಸಂಸದರು ಐದು ವರ್ಷಗಳ ಅವಧಿಯಲ್ಲಿ ಲೋಕಸಭೆಯಲ್ಲಿ ಯಾವುದೇ  ಚರ್ಚೆಯಲ್ಲಿ ಭಾಗವಹಿಸದೆ ದೂರ ಉಳಿದಿದ್ದಾರೆ. ಈ ಪಟ್ಟಿಯಲ್ಲಿ ಆಡಳಿತಾರೂಢ ಬಿಜೆಪಿಯ 6 ಮಂದಿ ಸಂಸದರು,  ಟಿಎಂಸಿಯ ಇಬ್ಬರು ಮತ್ತು ಬಹುಜನ ಸಮಾಜ ಪಕ್ಷದ ಓರ್ವ ಸಂಸದರು ಸೇರಿದ್ದಾರೆ.

ಅವರಲ್ಲಿ ಕರ್ನಾಟಕದ ಬಿಜಾಪುರದ ಸಂಸದ ರಮೇಶ್ ಚಂದಪ್ಪ ಜಿಗಜಿಣಗಿ, ಉತ್ತರಪ್ರದೇಶದ ಘೋಸಿಯ ಪ್ರಸ್ತುತ ಜೈಲಿನಲ್ಲಿರುವ ಸಂಸದ ಅತುಲ್ ಕುಮಾರ್ ಸಿಂಗ್, ಪಶ್ಚಿಮ ಬಂಗಾಳದ ತಮ್ಲುಕ್‌ನ ದಿಬ್ಯೇಂದು ಅಧಿಕಾರಿ, ಕರ್ನಾಟಕದ ಚಿಕ್ಕಬಳ್ಳಾಪುರದ ಬಿ.ಎನ್. ಬಚ್ಚೇಗೌಡ,  ಅಸ್ಸಾಂನ ಲಖೀಂಪುರದ ಪ್ರಧಾನ್ ಬರುವಾ,  ಪಂಜಾಬ್‌ನ ಗುರುದಾಸ್‌ಪುರದ ಸನ್ನಿ ಡಿಯೋಲ್, ಕರ್ನಾಟಕದ ಉತ್ತರಕನ್ನಡ ಜಿಲ್ಲೆಯ ಅನಂತ್ ಕುಮಾರ್ ಹೆಗ್ಡೆ, ಕರ್ನಾಟಕದ ಚಾಮರಾಜನಗರ ಜಿಲ್ಲೆಯ ವಿ ಶ್ರೀನಿವಾಸ ಪ್ರಸಾದ್ ಮತ್ತು ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದ ಸಂಸದ ಶತ್ರುಘ್ನ ಸಿನ್ಹಾ ಸೇರಿದ್ದಾರೆ.

ಈ ಒಂಬತ್ತು ಸಂಸದರಲ್ಲಿ ಆರು ಮಂದಿ ಲಿಖಿತವಾಗಿ ಪ್ರಸ್ತಾಪಗಳನ್ನು, ಪ್ರಶ್ನೆಗಳನ್ನು ನೀಡಿದ್ದರೆ, ಸಿನ್ಹಾ, ಸಿಂಗ್ ಮತ್ತು ಚಂದಪ್ಪ ಅವರು ಲಿಖಿತ ಅಥವಾ ಮೌಖಿಕ ರೂಪಗಳಲ್ಲಿ ಸದನದ ಚರ್ಚೆಯಲ್ಲಿ ಭಾಗಿಯಾಗಿಲ್ಲ ಎನ್ನುವುದನ್ನು ಸಂಸತ್ತಿನ ದಾಖಲೆಗಳು ತಿಳಿಸುತ್ತದೆ.

ವರದಿಗಳ ಪ್ರಕಾರ, ಸನ್ನಿ ಡಿಯೋಲ್ ಸೇರಿದಂತೆ ಮೊದಲ ಬಾರಿಗೆ ಸಂಸತ್ತಿಗೆ ಆಯ್ಕೆಯಾದ ಸಂಸದರಿಗೆ ಸ್ಪೀಕರ್‌ ಓಂ ಬಿರ್ಲಾ ಅವರು ಸದನದಲ್ಲಿ ಮಾತನಾಡುವಂತೆ ಉತ್ತೇಜಿಸಿದ್ದರು. ವರದಿ ಪ್ರಕರ ಎರಡು ಬಾರಿ ಸನ್ನಿ ಡಿಯೋಲ್ ಅವರಲ್ಲಿ ಸಂಸತ್ತಿನಲ್ಲಿ ಮಾತನಾಡುವಂತೆ ಸ್ಪೀಕರ್‌ ಓಂ ಬಿರ್ಲಾ ಆಗ್ರಹಿಸಿದ್ದರು. ಆದರೆ ಅವರು ಅದಕ್ಕೆ ಸರಿಯಾಗಿ ಸ್ಪಂದಿಸಿಲ್ಲ ಎನ್ನುವುದು ಸಂಸತ್ತಿನ ದಾಖಲೆಗಳು ಬಹಿರಂಗಪಡಿಸುತ್ತದೆ.

ಇದನ್ನು ಓದಿ: ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳಿಗೆ ಜಾಮೀನು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...