Homeಮುಖಪುಟ17ನೇ ಲೋಕಸಭೆ: ಸಂಸತ್ತಿನಲ್ಲಿ ಒಂದೇ ಒಂದು ಮಾತನ್ನಾಡದ ಕರ್ನಾಟಕದ ನಾಲ್ವರು ಸೇರಿ 6 ಮಂದಿ ಬಿಜೆಪಿ...

17ನೇ ಲೋಕಸಭೆ: ಸಂಸತ್ತಿನಲ್ಲಿ ಒಂದೇ ಒಂದು ಮಾತನ್ನಾಡದ ಕರ್ನಾಟಕದ ನಾಲ್ವರು ಸೇರಿ 6 ಮಂದಿ ಬಿಜೆಪಿ ಸಂಸದರು!

- Advertisement -
- Advertisement -

17ನೇ ಲೋಕಸಭೆಯ ಅವಧಿ ಮುಗಿದಿದೆ. 17ನೇ ಲೋಕಸಭೆಯ ಕೊನೆಯ ಅಧಿವೇಶನ ಫೆ.9 2024ರಂದು ಕೊನೆಗೊಂಡಿತ್ತು. ಲೋಕಸಭೆಯ ಈ 5 ವರ್ಷಗಳ ಅವಧಿಯಲ್ಲಿ ಕರ್ನಾಟಕದ ನಾಲ್ವರು ಸಂಸದರು ಸೇರಿ ಒಟ್ಟು 9ಮಂದಿ ಸಂಸದರು ಒಂದೇ ಒಂದು ಬಾರಿ ಮಾತನಾಡಿಲ್ಲ ಎನ್ನುವುದನ್ನು ಸಂಸತ್ತಿನ ದಾಖಲೆಗಳು ಬಹಿರಂಗಪಡಿಸಿದೆ.

ಸನ್ನಿ ಡಿಯೋಲ್, ಶತ್ರುಘ್ನ ಸಿನ್ಹಾ ಮತ್ತು ಇತರ 9 ಸಂಸದರು ಸಂಸತ್ತಿನಲ್ಲಿ ಒಂದು ಬಾರಿಯೂ ಮಾತನಾಡಿಲ್ಲ ಎನ್ನುವುದನ್ನು ದಾಖಲೆಗಳು ಬಹಿರಂಗಪಡಿಸುತ್ತದೆ. ಗುರುದಾಸ್‌ಪುರವನ್ನು ಪ್ರತಿನಿಧಿಸುವ ಬಿಜೆಪಿಯಿಂದ ಮೊದಲ ಬಾರಿಗೆ ಸಂಸದರಾಗಿರುವ ಡಿಯೋಲ್ ಅವರು ಐದು ವರ್ಷಗಳ ಅವಧಿಯಲ್ಲಿ ಕೆಲವು ವಿಚಾರಗಳನ್ನು ಲಿಖಿತವಾಗಿ  ಸಲ್ಲಿಸಿದ್ದಾರೆ. ಆದರೆ ತೃಣಮೂಲ ಕಾಂಗ್ರೆಸ್‌ಗೆ ಸೇರಿದ್ದ ಸಿನ್ಹಾ ಅವರು ಮೌಖಿಕ ಅಥವಾ ಲಿಖಿತ ಸಂವಹನದ ಮೂಲಕ ಯಾವುದೇ ವಿಚಾರವನ್ನು ಪ್ರಸ್ತಾಪಿಸಿಲ್ಲ ಎನ್ನುವುದನ್ನು ಸಂಸತ್ತಿನ ದಾಖಲೆಗಳು ಬಹಿರಂಗಪಡಿಸಿದೆ.

17ನೇ ಲೋಕಸಭೆಯ ಮೊದಲ ಅಧಿವೇಶನವು ಜೂನ್ 17, 2019ರಂದು ಪ್ರಾರಂಭವಾಗಿತ್ತು. 543 ಸಂಸದರ ಪೈಕಿ 9 ಮಂದಿ ಸಂಸದರು ಐದು ವರ್ಷಗಳ ಅವಧಿಯಲ್ಲಿ ಲೋಕಸಭೆಯಲ್ಲಿ ಯಾವುದೇ  ಚರ್ಚೆಯಲ್ಲಿ ಭಾಗವಹಿಸದೆ ದೂರ ಉಳಿದಿದ್ದಾರೆ. ಈ ಪಟ್ಟಿಯಲ್ಲಿ ಆಡಳಿತಾರೂಢ ಬಿಜೆಪಿಯ 6 ಮಂದಿ ಸಂಸದರು,  ಟಿಎಂಸಿಯ ಇಬ್ಬರು ಮತ್ತು ಬಹುಜನ ಸಮಾಜ ಪಕ್ಷದ ಓರ್ವ ಸಂಸದರು ಸೇರಿದ್ದಾರೆ.

ಅವರಲ್ಲಿ ಕರ್ನಾಟಕದ ಬಿಜಾಪುರದ ಸಂಸದ ರಮೇಶ್ ಚಂದಪ್ಪ ಜಿಗಜಿಣಗಿ, ಉತ್ತರಪ್ರದೇಶದ ಘೋಸಿಯ ಪ್ರಸ್ತುತ ಜೈಲಿನಲ್ಲಿರುವ ಸಂಸದ ಅತುಲ್ ಕುಮಾರ್ ಸಿಂಗ್, ಪಶ್ಚಿಮ ಬಂಗಾಳದ ತಮ್ಲುಕ್‌ನ ದಿಬ್ಯೇಂದು ಅಧಿಕಾರಿ, ಕರ್ನಾಟಕದ ಚಿಕ್ಕಬಳ್ಳಾಪುರದ ಬಿ.ಎನ್. ಬಚ್ಚೇಗೌಡ,  ಅಸ್ಸಾಂನ ಲಖೀಂಪುರದ ಪ್ರಧಾನ್ ಬರುವಾ,  ಪಂಜಾಬ್‌ನ ಗುರುದಾಸ್‌ಪುರದ ಸನ್ನಿ ಡಿಯೋಲ್, ಕರ್ನಾಟಕದ ಉತ್ತರಕನ್ನಡ ಜಿಲ್ಲೆಯ ಅನಂತ್ ಕುಮಾರ್ ಹೆಗ್ಡೆ, ಕರ್ನಾಟಕದ ಚಾಮರಾಜನಗರ ಜಿಲ್ಲೆಯ ವಿ ಶ್ರೀನಿವಾಸ ಪ್ರಸಾದ್ ಮತ್ತು ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದ ಸಂಸದ ಶತ್ರುಘ್ನ ಸಿನ್ಹಾ ಸೇರಿದ್ದಾರೆ.

ಈ ಒಂಬತ್ತು ಸಂಸದರಲ್ಲಿ ಆರು ಮಂದಿ ಲಿಖಿತವಾಗಿ ಪ್ರಸ್ತಾಪಗಳನ್ನು, ಪ್ರಶ್ನೆಗಳನ್ನು ನೀಡಿದ್ದರೆ, ಸಿನ್ಹಾ, ಸಿಂಗ್ ಮತ್ತು ಚಂದಪ್ಪ ಅವರು ಲಿಖಿತ ಅಥವಾ ಮೌಖಿಕ ರೂಪಗಳಲ್ಲಿ ಸದನದ ಚರ್ಚೆಯಲ್ಲಿ ಭಾಗಿಯಾಗಿಲ್ಲ ಎನ್ನುವುದನ್ನು ಸಂಸತ್ತಿನ ದಾಖಲೆಗಳು ತಿಳಿಸುತ್ತದೆ.

ವರದಿಗಳ ಪ್ರಕಾರ, ಸನ್ನಿ ಡಿಯೋಲ್ ಸೇರಿದಂತೆ ಮೊದಲ ಬಾರಿಗೆ ಸಂಸತ್ತಿಗೆ ಆಯ್ಕೆಯಾದ ಸಂಸದರಿಗೆ ಸ್ಪೀಕರ್‌ ಓಂ ಬಿರ್ಲಾ ಅವರು ಸದನದಲ್ಲಿ ಮಾತನಾಡುವಂತೆ ಉತ್ತೇಜಿಸಿದ್ದರು. ವರದಿ ಪ್ರಕರ ಎರಡು ಬಾರಿ ಸನ್ನಿ ಡಿಯೋಲ್ ಅವರಲ್ಲಿ ಸಂಸತ್ತಿನಲ್ಲಿ ಮಾತನಾಡುವಂತೆ ಸ್ಪೀಕರ್‌ ಓಂ ಬಿರ್ಲಾ ಆಗ್ರಹಿಸಿದ್ದರು. ಆದರೆ ಅವರು ಅದಕ್ಕೆ ಸರಿಯಾಗಿ ಸ್ಪಂದಿಸಿಲ್ಲ ಎನ್ನುವುದು ಸಂಸತ್ತಿನ ದಾಖಲೆಗಳು ಬಹಿರಂಗಪಡಿಸುತ್ತದೆ.

ಇದನ್ನು ಓದಿ: ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳಿಗೆ ಜಾಮೀನು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...