Homeಅಂತರಾಷ್ಟ್ರೀಯ6 ಕೊರೊನಾ ಪ್ರಕರಣ ಪತ್ತೆ: ಇಡೀ ನಗರವನ್ನೇ ಪರೀಕ್ಷಿಸುತ್ತಿರುವ ಚೀನಾ ಆಡಳಿತ!

6 ಕೊರೊನಾ ಪ್ರಕರಣ ಪತ್ತೆ: ಇಡೀ ನಗರವನ್ನೇ ಪರೀಕ್ಷಿಸುತ್ತಿರುವ ಚೀನಾ ಆಡಳಿತ!

ಚೀನಾದ ಬಂದರು ನಗರವಾದ ಕಿಂಗ್ದಾವೊನಲ್ಲಿ ಸುಮಾರು 9 ಮಿಲಿಯನ್ (90 ಲಕ್ಷ) ಜನಸಂಖ್ಯೆಯಿದ್ದು, ಇವರೆಲ್ಲರನ್ನೂ ಕೇವಲ 5 ದಿನಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

- Advertisement -
- Advertisement -

ಕೊರೊನಾ ವೈರಸ್‌ನ ಮೂಲ ಸ್ಥಾನವಾದ ಚೀನಾದ ನಗರವೊಂದರಲ್ಲಿ ಸಣ್ಣ ಪ್ರಮಾಣದಲ್ಲಿ ಕೊರೊನಾ ರೋಗಿಗಳು ಪತ್ತೆಯಾದ ಹಿನ್ನೆಲೆಯಲ್ಲಿ 5 ದಿನಗಳಲ್ಲಿ ಇಡೀ ನಗರವನ್ನೇ ಪರೀಕ್ಷೆಗೆ ಒಳಪಡಿಸುವ ಗುರಿಯನ್ನು ಹೊಂದಿದೆ ಎಂದು ಅಲ್ಲಿನ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಚೀನಾದ ಬಂದರು ನಗರವಾದ ಕಿಂಗ್ದಾವೊನಲ್ಲಿ ಸುಮಾರು 9 ಮಿಲಿಯನ್ (90 ಲಕ್ಷ) ಜನಸಂಖ್ಯೆಯಿದ್ದು, ಇಡೀ ನಗರವನ್ನೇ ಕೇವಲ 5 ದಿನಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇಲ್ಲಿ ಭಾನುವಾರ 6 ಪ್ರಕರಣಗಳು ದೃಢಪಟ್ಟಿದ್ದರಿಂದ ತ್ವರಿತವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ನಗರದ ಪುರಸಭೆಯ ಆರೋಗ್ಯ ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 5 ಜಿಲ್ಲೆಗಳನ್ನು 3 ದಿನದಲ್ಲಿ ಮತ್ತು ಇಡೀ ನಗರವನ್ನು 5 ದಿನದಲ್ಲಿ ಇಡೀ ನಗರವನ್ನು ಪರೀಕ್ಷಿಸಿಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘನೆ: ಬಿಜೆಪಿ ಸಂಸದೆ ಕಛೇರಿ ಸೀಲ್!

ಲಾಕ್‌ಡೌನ್ ಮತ್ತು ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿರುವ ಹಲವು ದೇಶಗಳು ಇದರಿಂದ ಬಳಲುತ್ತಿರುವಾಗ, ಜಗತ್ತಿನಲ್ಲಿ ಮೊದಲು ವೈರಸ್ ಕಾಣಿಸಿಕೊಂಡಿದ್ದ ಚೀನಾದಲ್ಲಿ ಸಾಂಕ್ರಾಮಿಕ ರೋಗ ಗಣನೀಯವಾಗಿ ನಿಯಂತ್ರಣಕ್ಕೆ ಬಂದಿದೆ. ಇದಕ್ಕೆ ಕಾರಣ ಚೀನಾ ತನ್ನ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವುದು ಮತ್ತು ಅಲ್ಲಿನ ನಿರ್ದಿಷ್ಟ ಆರೋಗ್ಯ ಸೌಲಭ್ಯಗಳಿಂದ ಎಂದು ಹಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜೂನ್‌ನಲ್ಲಿ ಬೀಜಿಂಗ್‌ನ ದೊಡ್ಡ ದೊಡ್ಡ ಪ್ರದೇಶಗಳು ಸಾಮೂಹಿಕ ಪರೀಕ್ಷೆಗಳಿಗೆ ಒಳಪಟ್ಟಿದ್ದವು. 20 ದಶಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ನಗರಗಳು ಆಹಾರ ಮಾರುಕಟ್ಟೆಗೆ ಸಂಬಂಧಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಇನ್ನೂ ಹೆಚ್ಚಿನ ಕೊರೊನಾ ಪರಿಹಾರ ಸಾಧ್ಯವಿಲ್ಲ: ಸುಪ್ರೀಂ‌ಗೆ ಕೇಂದ್ರ ಸರ್ಕಾರ

ಕಳೆದ ವರ್ಷದ ಕೊನೆಯಲ್ಲಿ ವೈರಸ್ ಪತ್ತೆಯಾದಾಗ ಇಡೀ ದೇಶವನ್ನು ಲಾಕ್‌ಡೌನ್ ಮಾಡಿ, ಮತ್ತೆ ಪುಟಿದೇಳುವ ಮೂಲಕ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿರುವ ದೇಶವಾಗಿ ಹೊರಹೊಮ್ಮಿತ್ತು.

ದೇಶವು ಸಹಜ ಸ್ಥಿತಿಯತ್ತ ಮರಳಿದ ಪರಿಣಾಮ ಚೀನಾ ಸರ್ಕಾರವು, ಕಳೆದ ವಾರ ‘ಗೋಲ್ಡನ್ ವೀಕ್’ ರಜೆ ನೀಡಿದ್ದು, ನೂರಾರು ಮಿಲಿಯನ್ ಜನರು ಪ್ರಯಾಣ ಕೈಗೊಂಡಿದ್ದರು. ಹೆಚ್ಚುತ್ತಿರುವ ಪರೀಕ್ಷೆಗಳು ಮತ್ತು ಶೀಘ್ರ ಕೈಗೊಂಡ ಲಾಕ್‌ಡೌನ್‌ನಿಂದ ಕೊರೊನಾ ಸೋಂಕಿನ ಎರಡನೇ ಅಲೆಯನ್ನು ತಡೆಯುವಲ್ಲಿ ಚೀನಾವು ಯಶಸ್ವಿಯಾಗಿದೆ.

ಇದನ್ನೂ ಓದಿ: ಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಇನ್ನು ಈಗಾಗಲೇ ಕೊರೊನಾ ಲಸಿಕೆ ತಯಾರಿಸುವಲ್ಲಿ ಸ್ಪರ್ಧೆಯಲ್ಲಿರುವ ದೇಶಗಳ ಪೈಕಿ ಬೀಜಿಂಗ್ ಕೂಡಾ ಕೊರೊನಾ ಲಸಿಕೆಯನ್ನು ರೂಪಿಸುವ ಕೊನೆಯ ಹಂತದಲ್ಲಿ ನಿರಾಶೆಗೊಂಡಿದೆ.

ಭಾರತದಲ್ಲಿ ಹೊಸದಾಗಿ 66,732 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ದೇಶದಲ್ಲಿ ಇದುವರೆಗೂ ಒಟ್ಟು 71,20,538 ಪ್ರಕರಣಗಳು ದಾಖಲಾಗಿವೆ.


ಇದನ್ನೂ ಓದಿ: 10 ಕೋಟಿ ಜನರನ್ನು ತೀವ್ರ ಬಡತನಕ್ಕೆ ದೂಡಲಿದೆ ಕೊರೊನಾ: ವಿಶ್ವಬ್ಯಾಂಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...