Homeಅಂತರಾಷ್ಟ್ರೀಯ6 ಕೊರೊನಾ ಪ್ರಕರಣ ಪತ್ತೆ: ಇಡೀ ನಗರವನ್ನೇ ಪರೀಕ್ಷಿಸುತ್ತಿರುವ ಚೀನಾ ಆಡಳಿತ!

6 ಕೊರೊನಾ ಪ್ರಕರಣ ಪತ್ತೆ: ಇಡೀ ನಗರವನ್ನೇ ಪರೀಕ್ಷಿಸುತ್ತಿರುವ ಚೀನಾ ಆಡಳಿತ!

ಚೀನಾದ ಬಂದರು ನಗರವಾದ ಕಿಂಗ್ದಾವೊನಲ್ಲಿ ಸುಮಾರು 9 ಮಿಲಿಯನ್ (90 ಲಕ್ಷ) ಜನಸಂಖ್ಯೆಯಿದ್ದು, ಇವರೆಲ್ಲರನ್ನೂ ಕೇವಲ 5 ದಿನಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

- Advertisement -
- Advertisement -

ಕೊರೊನಾ ವೈರಸ್‌ನ ಮೂಲ ಸ್ಥಾನವಾದ ಚೀನಾದ ನಗರವೊಂದರಲ್ಲಿ ಸಣ್ಣ ಪ್ರಮಾಣದಲ್ಲಿ ಕೊರೊನಾ ರೋಗಿಗಳು ಪತ್ತೆಯಾದ ಹಿನ್ನೆಲೆಯಲ್ಲಿ 5 ದಿನಗಳಲ್ಲಿ ಇಡೀ ನಗರವನ್ನೇ ಪರೀಕ್ಷೆಗೆ ಒಳಪಡಿಸುವ ಗುರಿಯನ್ನು ಹೊಂದಿದೆ ಎಂದು ಅಲ್ಲಿನ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಚೀನಾದ ಬಂದರು ನಗರವಾದ ಕಿಂಗ್ದಾವೊನಲ್ಲಿ ಸುಮಾರು 9 ಮಿಲಿಯನ್ (90 ಲಕ್ಷ) ಜನಸಂಖ್ಯೆಯಿದ್ದು, ಇಡೀ ನಗರವನ್ನೇ ಕೇವಲ 5 ದಿನಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇಲ್ಲಿ ಭಾನುವಾರ 6 ಪ್ರಕರಣಗಳು ದೃಢಪಟ್ಟಿದ್ದರಿಂದ ತ್ವರಿತವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ನಗರದ ಪುರಸಭೆಯ ಆರೋಗ್ಯ ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 5 ಜಿಲ್ಲೆಗಳನ್ನು 3 ದಿನದಲ್ಲಿ ಮತ್ತು ಇಡೀ ನಗರವನ್ನು 5 ದಿನದಲ್ಲಿ ಇಡೀ ನಗರವನ್ನು ಪರೀಕ್ಷಿಸಿಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘನೆ: ಬಿಜೆಪಿ ಸಂಸದೆ ಕಛೇರಿ ಸೀಲ್!

ಲಾಕ್‌ಡೌನ್ ಮತ್ತು ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿರುವ ಹಲವು ದೇಶಗಳು ಇದರಿಂದ ಬಳಲುತ್ತಿರುವಾಗ, ಜಗತ್ತಿನಲ್ಲಿ ಮೊದಲು ವೈರಸ್ ಕಾಣಿಸಿಕೊಂಡಿದ್ದ ಚೀನಾದಲ್ಲಿ ಸಾಂಕ್ರಾಮಿಕ ರೋಗ ಗಣನೀಯವಾಗಿ ನಿಯಂತ್ರಣಕ್ಕೆ ಬಂದಿದೆ. ಇದಕ್ಕೆ ಕಾರಣ ಚೀನಾ ತನ್ನ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವುದು ಮತ್ತು ಅಲ್ಲಿನ ನಿರ್ದಿಷ್ಟ ಆರೋಗ್ಯ ಸೌಲಭ್ಯಗಳಿಂದ ಎಂದು ಹಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜೂನ್‌ನಲ್ಲಿ ಬೀಜಿಂಗ್‌ನ ದೊಡ್ಡ ದೊಡ್ಡ ಪ್ರದೇಶಗಳು ಸಾಮೂಹಿಕ ಪರೀಕ್ಷೆಗಳಿಗೆ ಒಳಪಟ್ಟಿದ್ದವು. 20 ದಶಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ನಗರಗಳು ಆಹಾರ ಮಾರುಕಟ್ಟೆಗೆ ಸಂಬಂಧಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಇನ್ನೂ ಹೆಚ್ಚಿನ ಕೊರೊನಾ ಪರಿಹಾರ ಸಾಧ್ಯವಿಲ್ಲ: ಸುಪ್ರೀಂ‌ಗೆ ಕೇಂದ್ರ ಸರ್ಕಾರ

ಕಳೆದ ವರ್ಷದ ಕೊನೆಯಲ್ಲಿ ವೈರಸ್ ಪತ್ತೆಯಾದಾಗ ಇಡೀ ದೇಶವನ್ನು ಲಾಕ್‌ಡೌನ್ ಮಾಡಿ, ಮತ್ತೆ ಪುಟಿದೇಳುವ ಮೂಲಕ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿರುವ ದೇಶವಾಗಿ ಹೊರಹೊಮ್ಮಿತ್ತು.

ದೇಶವು ಸಹಜ ಸ್ಥಿತಿಯತ್ತ ಮರಳಿದ ಪರಿಣಾಮ ಚೀನಾ ಸರ್ಕಾರವು, ಕಳೆದ ವಾರ ‘ಗೋಲ್ಡನ್ ವೀಕ್’ ರಜೆ ನೀಡಿದ್ದು, ನೂರಾರು ಮಿಲಿಯನ್ ಜನರು ಪ್ರಯಾಣ ಕೈಗೊಂಡಿದ್ದರು. ಹೆಚ್ಚುತ್ತಿರುವ ಪರೀಕ್ಷೆಗಳು ಮತ್ತು ಶೀಘ್ರ ಕೈಗೊಂಡ ಲಾಕ್‌ಡೌನ್‌ನಿಂದ ಕೊರೊನಾ ಸೋಂಕಿನ ಎರಡನೇ ಅಲೆಯನ್ನು ತಡೆಯುವಲ್ಲಿ ಚೀನಾವು ಯಶಸ್ವಿಯಾಗಿದೆ.

ಇದನ್ನೂ ಓದಿ: ಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಇನ್ನು ಈಗಾಗಲೇ ಕೊರೊನಾ ಲಸಿಕೆ ತಯಾರಿಸುವಲ್ಲಿ ಸ್ಪರ್ಧೆಯಲ್ಲಿರುವ ದೇಶಗಳ ಪೈಕಿ ಬೀಜಿಂಗ್ ಕೂಡಾ ಕೊರೊನಾ ಲಸಿಕೆಯನ್ನು ರೂಪಿಸುವ ಕೊನೆಯ ಹಂತದಲ್ಲಿ ನಿರಾಶೆಗೊಂಡಿದೆ.

ಭಾರತದಲ್ಲಿ ಹೊಸದಾಗಿ 66,732 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ದೇಶದಲ್ಲಿ ಇದುವರೆಗೂ ಒಟ್ಟು 71,20,538 ಪ್ರಕರಣಗಳು ದಾಖಲಾಗಿವೆ.


ಇದನ್ನೂ ಓದಿ: 10 ಕೋಟಿ ಜನರನ್ನು ತೀವ್ರ ಬಡತನಕ್ಕೆ ದೂಡಲಿದೆ ಕೊರೊನಾ: ವಿಶ್ವಬ್ಯಾಂಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...