Homeಅಂತರಾಷ್ಟ್ರೀಯ6 ಕೊರೊನಾ ಪ್ರಕರಣ ಪತ್ತೆ: ಇಡೀ ನಗರವನ್ನೇ ಪರೀಕ್ಷಿಸುತ್ತಿರುವ ಚೀನಾ ಆಡಳಿತ!

6 ಕೊರೊನಾ ಪ್ರಕರಣ ಪತ್ತೆ: ಇಡೀ ನಗರವನ್ನೇ ಪರೀಕ್ಷಿಸುತ್ತಿರುವ ಚೀನಾ ಆಡಳಿತ!

ಚೀನಾದ ಬಂದರು ನಗರವಾದ ಕಿಂಗ್ದಾವೊನಲ್ಲಿ ಸುಮಾರು 9 ಮಿಲಿಯನ್ (90 ಲಕ್ಷ) ಜನಸಂಖ್ಯೆಯಿದ್ದು, ಇವರೆಲ್ಲರನ್ನೂ ಕೇವಲ 5 ದಿನಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

- Advertisement -
- Advertisement -

ಕೊರೊನಾ ವೈರಸ್‌ನ ಮೂಲ ಸ್ಥಾನವಾದ ಚೀನಾದ ನಗರವೊಂದರಲ್ಲಿ ಸಣ್ಣ ಪ್ರಮಾಣದಲ್ಲಿ ಕೊರೊನಾ ರೋಗಿಗಳು ಪತ್ತೆಯಾದ ಹಿನ್ನೆಲೆಯಲ್ಲಿ 5 ದಿನಗಳಲ್ಲಿ ಇಡೀ ನಗರವನ್ನೇ ಪರೀಕ್ಷೆಗೆ ಒಳಪಡಿಸುವ ಗುರಿಯನ್ನು ಹೊಂದಿದೆ ಎಂದು ಅಲ್ಲಿನ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಚೀನಾದ ಬಂದರು ನಗರವಾದ ಕಿಂಗ್ದಾವೊನಲ್ಲಿ ಸುಮಾರು 9 ಮಿಲಿಯನ್ (90 ಲಕ್ಷ) ಜನಸಂಖ್ಯೆಯಿದ್ದು, ಇಡೀ ನಗರವನ್ನೇ ಕೇವಲ 5 ದಿನಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇಲ್ಲಿ ಭಾನುವಾರ 6 ಪ್ರಕರಣಗಳು ದೃಢಪಟ್ಟಿದ್ದರಿಂದ ತ್ವರಿತವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ನಗರದ ಪುರಸಭೆಯ ಆರೋಗ್ಯ ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 5 ಜಿಲ್ಲೆಗಳನ್ನು 3 ದಿನದಲ್ಲಿ ಮತ್ತು ಇಡೀ ನಗರವನ್ನು 5 ದಿನದಲ್ಲಿ ಇಡೀ ನಗರವನ್ನು ಪರೀಕ್ಷಿಸಿಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘನೆ: ಬಿಜೆಪಿ ಸಂಸದೆ ಕಛೇರಿ ಸೀಲ್!

ಲಾಕ್‌ಡೌನ್ ಮತ್ತು ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿರುವ ಹಲವು ದೇಶಗಳು ಇದರಿಂದ ಬಳಲುತ್ತಿರುವಾಗ, ಜಗತ್ತಿನಲ್ಲಿ ಮೊದಲು ವೈರಸ್ ಕಾಣಿಸಿಕೊಂಡಿದ್ದ ಚೀನಾದಲ್ಲಿ ಸಾಂಕ್ರಾಮಿಕ ರೋಗ ಗಣನೀಯವಾಗಿ ನಿಯಂತ್ರಣಕ್ಕೆ ಬಂದಿದೆ. ಇದಕ್ಕೆ ಕಾರಣ ಚೀನಾ ತನ್ನ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವುದು ಮತ್ತು ಅಲ್ಲಿನ ನಿರ್ದಿಷ್ಟ ಆರೋಗ್ಯ ಸೌಲಭ್ಯಗಳಿಂದ ಎಂದು ಹಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜೂನ್‌ನಲ್ಲಿ ಬೀಜಿಂಗ್‌ನ ದೊಡ್ಡ ದೊಡ್ಡ ಪ್ರದೇಶಗಳು ಸಾಮೂಹಿಕ ಪರೀಕ್ಷೆಗಳಿಗೆ ಒಳಪಟ್ಟಿದ್ದವು. 20 ದಶಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ನಗರಗಳು ಆಹಾರ ಮಾರುಕಟ್ಟೆಗೆ ಸಂಬಂಧಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಇನ್ನೂ ಹೆಚ್ಚಿನ ಕೊರೊನಾ ಪರಿಹಾರ ಸಾಧ್ಯವಿಲ್ಲ: ಸುಪ್ರೀಂ‌ಗೆ ಕೇಂದ್ರ ಸರ್ಕಾರ

ಕಳೆದ ವರ್ಷದ ಕೊನೆಯಲ್ಲಿ ವೈರಸ್ ಪತ್ತೆಯಾದಾಗ ಇಡೀ ದೇಶವನ್ನು ಲಾಕ್‌ಡೌನ್ ಮಾಡಿ, ಮತ್ತೆ ಪುಟಿದೇಳುವ ಮೂಲಕ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿರುವ ದೇಶವಾಗಿ ಹೊರಹೊಮ್ಮಿತ್ತು.

ದೇಶವು ಸಹಜ ಸ್ಥಿತಿಯತ್ತ ಮರಳಿದ ಪರಿಣಾಮ ಚೀನಾ ಸರ್ಕಾರವು, ಕಳೆದ ವಾರ ‘ಗೋಲ್ಡನ್ ವೀಕ್’ ರಜೆ ನೀಡಿದ್ದು, ನೂರಾರು ಮಿಲಿಯನ್ ಜನರು ಪ್ರಯಾಣ ಕೈಗೊಂಡಿದ್ದರು. ಹೆಚ್ಚುತ್ತಿರುವ ಪರೀಕ್ಷೆಗಳು ಮತ್ತು ಶೀಘ್ರ ಕೈಗೊಂಡ ಲಾಕ್‌ಡೌನ್‌ನಿಂದ ಕೊರೊನಾ ಸೋಂಕಿನ ಎರಡನೇ ಅಲೆಯನ್ನು ತಡೆಯುವಲ್ಲಿ ಚೀನಾವು ಯಶಸ್ವಿಯಾಗಿದೆ.

ಇದನ್ನೂ ಓದಿ: ಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಇನ್ನು ಈಗಾಗಲೇ ಕೊರೊನಾ ಲಸಿಕೆ ತಯಾರಿಸುವಲ್ಲಿ ಸ್ಪರ್ಧೆಯಲ್ಲಿರುವ ದೇಶಗಳ ಪೈಕಿ ಬೀಜಿಂಗ್ ಕೂಡಾ ಕೊರೊನಾ ಲಸಿಕೆಯನ್ನು ರೂಪಿಸುವ ಕೊನೆಯ ಹಂತದಲ್ಲಿ ನಿರಾಶೆಗೊಂಡಿದೆ.

ಭಾರತದಲ್ಲಿ ಹೊಸದಾಗಿ 66,732 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ದೇಶದಲ್ಲಿ ಇದುವರೆಗೂ ಒಟ್ಟು 71,20,538 ಪ್ರಕರಣಗಳು ದಾಖಲಾಗಿವೆ.


ಇದನ್ನೂ ಓದಿ: 10 ಕೋಟಿ ಜನರನ್ನು ತೀವ್ರ ಬಡತನಕ್ಕೆ ದೂಡಲಿದೆ ಕೊರೊನಾ: ವಿಶ್ವಬ್ಯಾಂಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...