HomeಮುಖಪುಟMSP ಕಾನೂನಿಗೆ ಆಗ್ರಹಿಸಿ ಸಿಂಘು ಗಡಿಯಲ್ಲಿ ರೈತರ ಉಪವಾಸ ಸತ್ಯಾಗ್ರಹ

MSP ಕಾನೂನಿಗೆ ಆಗ್ರಹಿಸಿ ಸಿಂಘು ಗಡಿಯಲ್ಲಿ ರೈತರ ಉಪವಾಸ ಸತ್ಯಾಗ್ರಹ

- Advertisement -
- Advertisement -

ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ನೀಡುವಂತೆ ಒತ್ತಾಯಿಸಿ ಹರಿಯಾಣ ಹಾಗೂ ಪಂಜಾಬಿನ 6 ರೈತರು ಭಾನುವಾರ ಸಿಂಘು ಗಡಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಡಿಸೆಂಬರ್ 7 ರವರೆಗೆ ಉಪವಾಸ ಸತ್ಯಾಗ್ರಹವನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.

ರಾಜೇಂದರ್‌ ಸಿಂಗ್‌ (ಸೋನಿಪತ್‌), ಕರ್ತಾರ್‌ ಸಿಂಗ್‌ (ಕೈತಾಲ್‌), ನರೇಶ್‌ ಸಂಗ್ವಾನ್‌ (ಅಂಬಾಲ), ಸತ್ನಾಮ್‌ ಸಿಂಗ್‌ (ಪಟಿಯಾಲ), ಬಿಕ್ರಮ್‌ ಸಿಂಗ್‌ (ಗುರ್ದಾಸ್‌ಪುರ್‌) ಮತ್ತು ಕುಲ್‌ದೀಪ್‌ ಸಿಂಗ್‌ (ಮೋಗಾ) ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತರು. ಸಿಂಘು ಗಡಿಯಲ್ಲಿ ಸತ್ಯಾಗ್ರಹ ಆರಂಭಿಸಿರುವ ಇವರು ತಮ್ಮನ್ನು ಸರಪಳಿಯಿಂದ ಬಂಧಿಸಿಕೊಂಡಿದ್ದಾರೆ.

ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರಾಜೇಂದರ್‌ ಮಾತನಾಡಿ, ನಮ್ಮ ಬಹುವರ್ಷಗಳ ಬೇಡಿಕೆಯಾದ ಎಂಎಸ್‌ಪಿಗೆ ಕೇಂದ್ರ ಸರ್ಕಾರವು ಕಾನೂನು ಭರವಸೆ ನೀಡುವವರೆಗೆ ತಮ್ಮ ಪ್ರತಿಭಟನೆಯನ್ನು  ಮುಂದುವರೆಸುವುದಾಗಿ ತಿಳಿಸಿದ್ದಾರೆ.

“ಎಂಎಸ್‌ಪಿ ಬಗ್ಗೆ ಚರ್ಚಿಸುವ ಸಲುವಾಗಿ ಕೇಂದ್ರ ಸರ್ಕಾರವು ಸಮಿತಿಯನ್ನು ರಚಿಸಿದ್ದು, ಸಂಯುಕ್ತ ಕಿಸಾನ್‌ ಮೋರ್ಚಾ ಕಡೆಯಿಂದ ಐದು ಜನರನ್ನು ಈ ಸಮಿತಿಯಲ್ಲಿರಲು ಹೆಸರು ಸೂಚಿಸುವಂತೆ ಹೇಳಿದೆ. ಇದು ಎಂಎಸ್‌ಪಿ ಮೇಲಿನ ಕಾನೂನು ಖಾತರಿಯ ನಮ್ಮ ಬೇಡಿಕೆಯನ್ನು ಹೊರಗಿಟ್ಟು  ಆಂದೋಲವನ್ನು ಹಿಂತೆಗೆದುಕೊಳ್ಳುವಂತೆ ಮಾಡುತ್ತಿರುವ ಪ್ರಯತ್ನವಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರವು ಕಾನೂನು ಭರವಸೆ ನೀಡುವವರೆಗೆ ನಾವು ನಮ್ಮ ದೇಹಗಳನ್ನು ಸರಪಳಿಯಿಂದ ಕಟ್ಟಿಕೊಂಡಿರುವುದನ್ನು ಮುಂದುವರಿಸುತ್ತೇವೆ ಎಂದು ಕುಲ್ದೀಪ್ ಹೇಳಿದ್ದಾರೆ.

ಎಂಎಸ್‌ಪಿ ಕಾನೂನು ಕುರಿತು ಸರ್ಕಾರದೊಂದಿಗೆ ಮಾತುಕತೆ ನಡೆಸಲು ರೈತರು ಐದು ಜನರ ಪಟ್ಟಿ ಅಂತಿಮಗೊಳಿಸಿದ್ದಾರೆ.  ರೈತ ಮುಖಂಡರಾದ ಗುರ್ನಮ್ ಸಿಂಗ್ ಚದುನಿ, ಬಲ್ಬೀರ್ ಸಿಂಗ್ ರಾಜೇವಾಲ್, ಯುದ್ಧವೀರ್ ಸಿಂಗ್, ಅಶೋಕ್ ಧವಳೆ ಮತ್ತು ಶಿವಕುಮಾರ್ ಕಕ್ಕಾರವರು ರೈತರನ್ನು ಪ್ರತಿನಿಧಿಸಲಿದ್ದಾರೆ ಎಂದು ಎಸ್‌ಕೆಎಂ ತನ್ನ ಸಭೆಯಲ್ಲಿ ನಿರ್ಧರಿಸಿದೆ.

ರೈತರು ಎಂಎಸ್ಪಿ, ಕೃಷಿ ಕಾನೂನುಗಳ ವಿರುದ್ಧದ ಚಳವಳಿಯ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಮತ್ತು ರೈತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದು ಸೇರಿದಂತೆ ಬಾಕಿ ಉಳಿದಿರುವ ಬೇಡಿಕೆಗಳ ಕುರಿತು ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.


ಇದನ್ನೂ ಓದಿ: ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...